Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ನನ್ನ ಬೆಳಕೂ ನನ್ನ ರಕ್ಷಣೆಯೂ ಆಗಿದ್ದಾರೆ. ನಾನು ಯಾರಿಗೂ ಭಯಪಡೆನು? ಯೆಹೋವ ದೇವರು ನನ್ನ ಜೀವದ ಭದ್ರಾಶ್ರಯವಾಗಿದ್ದಾರೆ. ನಾನು ಯಾರಿಗೂ ಹೆದರೆನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ನನಗೆ ಬೆಳಕೂ, ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೆನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನನಗೆ ಬೆಳಕು, ನನಗೆ ರಕ್ಷೆ, ಪ್ರಭುವೆ I ನಾನಾರಿಗೂ ಅಳುಕೆನು II ನನ್ನ ಬಾಳಿಗಾಧಾರ ಪ್ರಭುವೆ I ನಾನಾರಿಗೂ ಅಂಜೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ನನಗೆ ಬೆಳಕೂ ರಕ್ಷಕನೂ ಆಗಿದ್ದಾನೆ; ನಾನು ಯಾರಿಗೆ ಭಯಪಟ್ಟೇನು? ಯೆಹೋವನು ನನ್ನ ಪ್ರಾಣದ ಆಧಾರವು; ನಾನು ಯಾರಿಗೆ ಹೆದರೇನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನೀನೇ ನನಗೆ ಬೆಳಕೂ ರಕ್ಷಕನೂ ಆಗಿರುವೆ. ನಾನು ಯಾರಿಗೂ ಭಯಪಡಬೇಕಿಲ್ಲ! ಯೆಹೋವನೇ, ನನ್ನ ಪ್ರಾಣಕ್ಕೆ ಆಶ್ರಯಸ್ಥಾನವೂ ನೀನೇ. ಆದ್ದರಿಂದ ನಾನು ಯಾರಿಗೂ ಹೆದರುವುದಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:1
45 ತಿಳಿವುಗಳ ಹೋಲಿಕೆ  

ಆದ್ದರಿಂದ, “ಕರ್ತದೇವರು ನನ್ನ ಸಹಾಯಕರು, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?” ಎಂದು ನಾವು ಧೈರ್ಯವಾಗಿ ಹೇಳುವೆವು.


ಯೆಹೋವ ದೇವರು ನನ್ನ ಪರವಾಗಿದ್ದಾರೆ, ನಾನು ಭಯಪಡೆನು. ಮನುಷ್ಯನು ನನಗೆ ಏನು ಮಾಡಬಲ್ಲನು?


“ಯೆಹೋವ ದೇವರು ನನ್ನ ಬಲವೂ ಕೀರ್ತನೆಯೂ ಆಗಿದ್ದಾರೆ; ಅವರು ನನ್ನ ರಕ್ಷಣೆಯಾದರು; ಅವರು ನನ್ನ ದೇವರು, ಅವರನ್ನು ಕೊಂಡಾಡುವೆನು; ಅವರು ನನ್ನ ತಂದೆಯ ದೇವರು, ನಾನು ಅವರನ್ನು ಘನಪಡಿಸುವೆನು.


ಅದಕ್ಕೆ ಕರ್ತ ಯೇಸು, “ನನ್ನ ಕೃಪೆಯೇ ನಿನಗೆ ಸಾಕು. ನನ್ನ ಶಕ್ತಿಯು ಬಲಹೀನತೆಯಲ್ಲಿಯೇ ಪರಿಪೂರ್ಣವಾಗುವುದು,” ಎಂದು ನನಗೆ ಹೇಳಿದರು. ಆದ್ದರಿಂದ ಕ್ರಿಸ್ತ ಯೇಸುವಿನ ಶಕ್ತಿಯು ನನ್ನ ಮೇಲೆ ನೆಲೆಯಾಗಿರಬೇಕೆಂದು, ಬಹಳ ಆನಂದದಿಂದ ನನ್ನ ಬಲಹೀನತೆಯಲ್ಲಿಯೇ ಹೆಚ್ಚಳ ಪಡುವೆನು.


ಯೆಹೋವ ದೇವರು ಸೂರ್ಯನಂತೆ ಪ್ರಕಾಶಿಸುವವವರೂ ಗುರಾಣಿಯೂ ಆಗಿದ್ದಾರೆ. ಯೆಹೋವ ದೇವರು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾರೆ. ನಿಷ್ಕಳಂಕವಾಗಿ ನಡೆದುಕೊಳ್ಳುವವರಿಗೆ ಅವರು ಒಳ್ಳೆಯದನ್ನು ಮಾಡಲು ಹಿಂದೆಗೆಯುವುದಿಲ್ಲ.


ಹಾಗಾದರೆ, ಈ ವಿಷಯಗಳಲ್ಲಿ ನಾವು ಏನು ಹೇಳೋಣ? ದೇವರು ನಮ್ಮ ಪರವಾಗಿ ಇದ್ದರೆ ನಮ್ಮನ್ನು ವಿರೋಧಿಸುವವರು ಯಾರು?


ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, “ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವರು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ. ಅವರು ಜೀವದ ಬೆಳಕನ್ನು ಹೊಂದಿರುವರು,” ಎಂದು ಹೇಳಿದರು.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


ನಾನು ಯೆಹೋವ ದೇವರಲ್ಲಿ ಬಹಳವಾಗಿ ಸಂತೋಷಿಸುವೆನು. ನನ್ನ ಪ್ರಾಣವು ನನ್ನ ದೇವರಲ್ಲಿ ಉಲ್ಲಾಸಪಡುವುದು. ವರನು ಸೌಂದರ್ಯವಾಗಿ ತನ್ನನ್ನು ಶೃಂಗರಿಸುವ ಹಾಗೆಯೂ, ವಧುವು ಆಭರಣಗಳಿಂದ ತನ್ನನ್ನು ಅಲಂಕರಿಸುವ ಹಾಗೆಯೂ, ಅವನು ರಕ್ಷಣೆಯ ವಸ್ತ್ರಗಳನ್ನು ನನಗೆ ತೊಡಿಸಿದ್ದಾನೆ. ನೀತಿಯ ನಿಲುವಂಗಿಯನ್ನು ನನಗೆ ಧರಿಸುವಂತೆ ಮಾಡಿದ್ದಾನೆ.


ದೇವರೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಯೆಹೋವ ದೇವರೇ, ನೀವು ನನ್ನ ದೀಪವನ್ನು ಬೆಳಗಿಸಿರಿ. ನನ್ನ ದೇವರು ನನ್ನ ಕತ್ತಲೆಯನ್ನು ಬೆಳಕನ್ನಾಗಿ ಮಾರ್ಪಡಿಸುವರು.


ದೇವರ ದೀಪವು ನನ್ನ ತಲೆಯ ಮೇಲೆ ಬೆಳಗುತ್ತಿತ್ತು; ನಾನು ದೇವರ ಬೆಳಕಿನಿಂದ ಕತ್ತಲಲ್ಲಿ ನಡೆಯುತ್ತಿದ್ದೆ.


ನನಗೆ ಶಕ್ತಿನೀಡುವ ಕ್ರಿಸ್ತ ಯೇಸುವಿನ ಮೂಲಕ ನಾನು ಎಲ್ಲವನ್ನೂ ಮಾಡಲು ಶಕ್ತನಾಗಿದ್ದೇನೆ.


ನಿಮಗೆ ಕೃತಜ್ಞತಾವಂದನೆ ಸಲ್ಲಿಸುವೆನು; ಏಕೆಂದರೆ ನನಗೆ ನೀವು ಉತ್ತರಕೊಟ್ಟು, ನನಗೆ ರಕ್ಷಣೆಯಾದಿರಿ.


ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.


ಪಟ್ಟಣವನ್ನು ಬೆಳಗಿಸಲು ಸೂರ್ಯನಾಗಲಿ, ಚಂದ್ರನಾಗಲಿ ಅವಶ್ಯವಿಲ್ಲ. ಏಕೆಂದರೆ ದೇವರ ಮಹಿಮೆಯೇ ಅದಕ್ಕೆ ಬೆಳಕಾಗಿತ್ತು. ಕುರಿಮರಿಯಾದಾತನೇ ಅದರ ದೀಪವು.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಆದರೆ ನನ್ನ ನಾಮದಲ್ಲಿ ಭಯಭಕ್ತಿಯಿಟ್ಟಿರುವ ನಿಮಗೆ, ನೀತಿ ಸೂರ್ಯನು ತಮ್ಮ ಕಿರಣಗಳಿಂದ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು. ನೀವು ಹೊರಟು ಕೊಟ್ಟಿಗೆಯಿಂದ ಹೊರಬಂದ ಕರುಗಳ ಹಾಗೆ ಕುಣಿದಾಡುವಿರಿ.


ಯಾಕೋಬಿನ ಮನೆತನದವರೇ ಬನ್ನಿರಿ, ಯೆಹೋವ ದೇವರ ಬೆಳಕಿನಲ್ಲಿ ನಡೆಯೋಣ.


ಯೆಹೋವ ದೇವರು ಜೀವಿಸುವ ದೇವರು! ನನ್ನ ಆಶ್ರಯವಾಗಿರುವ ದೇವರಿಗೆ ಸ್ತೋತ್ರವಾಗಲಿ. ನನ್ನ ರಕ್ಷಕರಾದ ದೇವರು ಮಹಿಮೆ ಹೊಂದಲಿ.


ಇನ್ನು ರಾತ್ರಿ ಇರುವುದಿಲ್ಲ. ದೀಪದ ಬೆಳಕೂ ಸೂರ್ಯನ ಬೆಳಕೂ ಅವಶ್ಯವಿಲ್ಲ. ಕರ್ತದೇವರೇ ಅವರಿಗೆ ಬೆಳಕನ್ನು ಕೊಡುವರು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ನಿಜ ಬೆಳಕು ಲೋಕಕ್ಕೆ ಬರುವುದಾಗಿತ್ತು. ಆ ಬೆಳಕೇ ಪ್ರತಿ ಮಾನವನಿಗೂ ಬೆಳಕನ್ನು ನೀಡುವುದಾಗಿತ್ತು.


ಅವರು ಮಹಾಧ್ವನಿಯಿಂದ ಹೀಗೆ ಕೂಗಿದರು: “ಸಿಂಹಾಸನದಲ್ಲಿ ಕೂತಿರುವ ನಮ್ಮ ದೇವರಿಗೂ, ಕುರಿಮರಿ ಆಗಿರುವವರಿಗೂ, ರಕ್ಷಣೆಯು ಸೇರತಕ್ಕದ್ದಾಗಿದೆ.”


ನನ್ನ ಕಣ್ಣುಗಳು ನಿಮ್ಮ ರಕ್ಷಣೆಯನ್ನು ಕಂಡವು,


ಯೆಹೋವ ದೇವರಲ್ಲಿ ನಾನು ಆಶ್ರಯಿಸಿದ್ದೇನೆ. ಹಾಗಾದರೆ, “ಒಂದು ಪಕ್ಷಿಯಂತೆ ನಿನ್ನ ಪರ್ವತಕ್ಕೆ ಹಾರಿ ಹೋಗು,” ಎಂದು ನೀವು ನನಗೆ ಹೇಗೆ ಹೇಳುವಿರಿ?


ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು. ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.


ಮಾನವರೆಲ್ಲರೂ ದೇವರ ರಕ್ಷಣೆಯನ್ನು ಕಾಣುವರು.’ ”


ಆಗ ಯೇಸು ಅವರಿಗೆ, “ಅಲ್ಪವಿಶ್ವಾಸವುಳ್ಳವರೇ, ನೀವು ಏಕೆ ಭಯಪಡುತ್ತೀರಿ?” ಎಂದು ಹೇಳಿ, ಎದ್ದು ಬಿರುಗಾಳಿಯನ್ನೂ ಸರೋವರವನ್ನೂ ಗದರಿಸಿದರು. ಆಗ ಎಲ್ಲವೂ ಪ್ರಶಾಂತವಾಯಿತು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?


ನೀವು ಅವರಿಗೆ ಭಯಪಡಬೇಡಿರಿ. ನಿಮ್ಮ ದೇವರಾದ ಯೆಹೋವ ದೇವರು ಫರೋಹನಿಗೂ, ಎಲ್ಲಾ ಈಜಿಪ್ಟಿನವರಿಗೂ ಮಾಡಿದ್ದನ್ನು


ಅವರಿಗೆ ಹೆದರಬೇಡಿರಿ. ಏಕೆಂದರೆ ನಿಮ್ಮ ದೇವರಾದ ಯೆಹೋವ ದೇವರು ಭಯಭಕ್ತಿಗೆ ಯೋಗ್ಯರಾದ ಮಹಾ ದೇವರಾಗಿ ನಿಮ್ಮ ಮಧ್ಯದಲ್ಲಿದ್ದಾರೆ.


ನಿಮ್ಮ ಸಹಾಯದಿಂದ ವೈರಿಸೇನೆಯ ವಿರುದ್ಧ ಹೋಗುವೆನು, ನನ್ನ ದೇವರೊಂದಿಗೆ ಕೋಟೆಗೋಡೆಯನ್ನೂ ಹಾರುವೆನು.


ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು