Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:11 - ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:11
22 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನನ್ನ ವಿರೋಧಿಗಳ ನಿಮಿತ್ತ ನಿಮ್ಮ ನೀತಿಯಲ್ಲಿ ನನ್ನನ್ನು ನಡೆಸಿರಿ; ನಿಮ್ಮ ಮಾರ್ಗವನ್ನು ನನ್ನ ಮುಂದೆ ನೇರವಾಗಿ ಮಾಡಿರಿ.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ. ಆಗ, ನಿಮ್ಮ ಸತ್ಯದಲ್ಲಿ ನಡೆದುಕೊಳ್ಳುವೆನು; ನಿಮ್ಮ ಹೆಸರಿಗೆ ಭಯಪಡುವಂತೆ ನನಗೆ ವಿಭಾಗವಿಲ್ಲದೆ ಹೃದಯವನ್ನು ದಯಪಾಲಿಸಿರಿ.


ನನ್ನ ಪಾದವು ಸಮ ನೆಲದಲ್ಲಿ ನಿಂತಿದೆ; ನಾನು ಮಹಾಸಭೆಯಲ್ಲಿ ಯೆಹೋವ ದೇವರನ್ನು ಸ್ತುತಿಸುವೆನು.


ನನ್ನ ಪೂರ್ಣಹೃದಯದಿಂದ ನಿಮ್ಮನ್ನು ಹುಡುಕಿದ್ದೇನೆ; ನಿಮ್ಮ ಆಜ್ಞೆಗಳಿಂದ ನಾನು ತಪ್ಪಿಹೋಗದಂತೆ ಮಾಡಿರಿ.


ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.


ಅಲ್ಲಿ ರಾಜಮಾರ್ಗ ಇರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನು ಅದರ ಮೇಲೆ ಹಾದು ಹೋಗನು. ಆದರೆ ಅದು ದೇವಜನರಿಗಾಗಿ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿ ತಪ್ಪನು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ದೀನರನ್ನು ನ್ಯಾಯ ಮಾರ್ಗದಲ್ಲಿ ನಡೆಸಿ, ದೀನರಿಗೆ ತಮ್ಮ ಮಾರ್ಗವನ್ನು ಬೋಧಿಸುತ್ತಾರೆ.


ಅವರು ಯೇಸುವನ್ನು ಹೊಂಚಿ ನೋಡುತ್ತಾ, ಮಾತಿನಲ್ಲಿ ಅವರನ್ನು ಸಿಕ್ಕಿಸುವಂತೆ ಅಧಿಪತಿಗೂ ಅಧಿಕಾರಕ್ಕೂ ಒಪ್ಪಿಸಿಕೊಡಲು, ನೀತಿವಂತರೆಂದು ನಟಿಸುವ ಗೂಢಚಾರರನ್ನು ಕಳುಹಿಸಿದರು.


ವಿವೇಚಿಸುವವನಿಗೆ ನನ್ನ ಎಲ್ಲ ಮಾತುಗಳು ನೇರವಾಗಿರುವುದು. ತಿಳುವಳಿಕೆ ಉಳ್ಳವನಿಗೆ ಅವು ಪ್ರಾಮಾಣಿಕವಾಗಿಯೂ ಇರುವುದು.


ಯಾವನು ಯೆಹೋವ ದೇವರಿಗೆ ಭಯಪಡುವನೋ, ಅಂಥವನಿಗೆ ಅವರು ಆಯ್ದುಕೊಳ್ಳತಕ್ಕ ಮಾರ್ಗವನ್ನು ಬೋಧಿಸುವರು.


ಸೋಮಾರಿಯ ಮಾರ್ಗವು ಮುಳ್ಳಿನ ಬೇಲಿಯಂತೆ ಇದೆ. ಆದರೆ ಯಥಾರ್ಥವಂತನ ಮಾರ್ಗವು ರಾಜಮಾರ್ಗ.


ನನ್ನ ಕೆಡುಕನ್ನು ಬಯಸುವವರು ಕೇಡನ್ನು ಅನುಭವಿಸಲಿ. ನಿಮ್ಮ ನಂಬಿಗಸ್ತಿಕೆಯಿಂದ ನೀವು ಅವರನ್ನು ದಂಡಿಸಿರಿ.


ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.


ನನ್ನಲ್ಲಿ ಕೇಡಿನ ಮಾರ್ಗವಿದೆಯೋ ಎಂದು ನೋಡಿರಿ, ನನ್ನನ್ನು ನಿತ್ಯ ಮಾರ್ಗದಲ್ಲಿ ನಡೆಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು