Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:4 - ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:4
30 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.


ನಿಶ್ಚಯವಾಗಿ ಶುಭವೂ ಪ್ರೀತಿಯೂ ನನ್ನ ಜೀವಮಾನವೆಲ್ಲಾ ನನ್ನನ್ನು ಹಿಂಬಾಲಿಸುತ್ತವೆ; ನಾನು ಯೆಹೋವ ದೇವರ ಮನೆಯಲ್ಲಿ ಸದಾಕಾಲವೂ ವಾಸಿಸುವೆನು.


ನೀವು ಆಯ್ದುಕೊಂಡು ನಿಮ್ಮ ಬಳಿಗೆ ಬರಮಾಡಿಕೊಳ್ಳುವವನು ಧನ್ಯನು. ಏಕೆಂದರೆ ನಿಮ್ಮ ಅಂಗಳಗಳಲ್ಲಿ ಅವನು ವಾಸವಾಗಿರುವನು. ನಿಮ್ಮ ಪರಿಶುದ್ಧ ಮಂದಿರವಾದ ನಿಮ್ಮ ಆಲಯದ ಒಳ್ಳೆಯ ಸಂಗತಿಗಳಿಂದ ನಮಗೆ ತೃಪ್ತಿಯಾಗಲಿ.


ನಿಮ್ಮ ಆಲಯದಲ್ಲಿ ವಾಸವಾಗಿರುವವರು ಧನ್ಯರು; ನಿಮ್ಮನ್ನು ಅವರು ಯಾವಾಗಲೂ ಸ್ತುತಿಸುವರು.


ಏಕೆಂದರೆ ನಿಮ್ಮ ಆಲಯದ ಅಂಗಳಗಳಲ್ಲಿ ಕಳೆದ ಒಂದು ದಿನವು ಬೇರೆ ಸಹಸ್ರ ದಿನಗಳಿಗಿಂತ ಉತ್ತಮವಾಗಿದೆ. ದುಷ್ಟರ ಗುಡಾರಗಳಲ್ಲಿ ವಾಸಿಸುವುದಕ್ಕಿಂತ ನನ್ನ ದೇವರ ಆಲಯದ ಬಾಗಿಲು ಕಾಯುವವನಾಗಿರುವುದೇ ಲೇಸು.


ಆದರೆ ಬೇಕಾದದ್ದು ಕೆಲವೇ, ಅವಶ್ಯವಾಗಿರುವುದು. ಮರಿಯಳು ಆ ಉತ್ತಮ ಭಾಗವನ್ನೇ ಆರಿಸಿಕೊಂಡಿದ್ದಾಳೆ ಅದು ಆಕೆಯಿಂದ ಯಾರೂ ತೆಗೆಯಲಾಗುವುದಿಲ್ಲ,” ಎಂದು ಹೇಳಿದರು.


ನಿಮ್ಮ ಬಗ್ಗೆ ನನ್ನ ಹೃದಯವು ಹೀಗೆ ಹೇಳುತ್ತದೆ: “ದೇವರ ಮುಖವನ್ನು ಹುಡುಕು,” ಆದ್ದರಿಂದ ಯೆಹೋವ ದೇವರೇ, ನಿಮ್ಮ ಮುಖವನ್ನೇ ಹುಡುಕುತ್ತಿರುವೆನು.


ನೀವು ಮೊದಲು ದೇವರ ರಾಜ್ಯವನ್ನೂ ಅದರ ನೀತಿಯನ್ನೂ ಹುಡುಕಿರಿ. ಆಗ ಇವುಗಳ ಕೂಡ ಅವೆಲ್ಲವೂ ನಿಮಗೆ ದೊರಕುವವು.


ನನ್ನನ್ನು ಹುಡುಕುವಿರಿ. ಪೂರ್ಣಹೃದಯದಿಂದ ನನ್ನನ್ನು ಹುಡುಕುವಾಗ, ನನ್ನನ್ನು ಕಂಡುಕೊಳ್ಳುವಿರಿ.


ಪ್ರಿಯರೇ, ನಾನಂತೂ ಆ ಗುರಿಯನ್ನು ತಲುಪಿದ್ದೇನೆಂದು ಭಾವಿಸಿಕೊಂಡಿಲ್ಲ. ಆದರೆ ಒಂದು ಸಂಗತಿ, ನಾನು ಹಿಂದಿನ ವಿಷಯಗಳನ್ನು ಮರೆತುಬಿಟ್ಟು, ಮುಂದಿನ ವಿಷಯಗಳನ್ನು ಮಾತ್ರ ಲಕ್ಷ್ಯವನ್ನಾಗಿ ಮಾಡಿಕೊಂಡು ಅದನ್ನೇ ಪಡೆದುಕೊಳ್ಳುವುದಕ್ಕಾಗಿ ಓಡುತ್ತಿದ್ದೇನೆ.


ನಂಬಿಕೆಯಿಲ್ಲದೆ ದೇವರನ್ನು ಮೆಚ್ಚಿಸುವುದು ಅಸಾಧ್ಯ. ಏಕೆಂದರೆ ದೇವರ ಬಳಿಗೆ ಬರುವವರು, ದೇವರು ಇದ್ದಾರೆಂತಲೂ ತಮ್ಮನ್ನು ಜಾಗ್ರತೆಯಿಂದ ಹುಡುಕುವವರಿಗೆ ಪ್ರತಿಫಲವನ್ನು ಕೊಡುತ್ತಾರೆಂತಲೂ ನಂಬಬೇಕು.


ನಮ್ಮ ದೇವರಾದ ಯೆಹೋವ ದೇವರ ಮೆಚ್ಚುಗೆಯು ನಮ್ಮ ಮೇಲೆ ಇರಲಿ. ನಮ್ಮ ಕೈಗಳ ಕೆಲಸವನ್ನು ಸ್ಥಿರಪಡಿಸಿರಿ. ಹೌದು, ನಮ್ಮ ಕೈಗಳ ಕೆಲಸವನ್ನು ಸ್ಥಾಪಿಸಿರಿ.


ಹಾಗೆಯೇ, ನಾವು ಮುಸುಕಿಲ್ಲದ ನಮ್ಮ ಮುಖದಲ್ಲಿ ಕರ್ತದೇವರ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಹೀಗೆ ನಾವು ಮಹಿಮೆಯಿಂದ ಅಧಿಕ ಮಹಿಮೆಗೆ ಸಾಗಿ ಅವರ ಸಾರೂಪ್ಯಕ್ಕೆ ಅನುಸಾರವಾಗಿ ನಾವು ರೂಪಾಂತರವಾಗುತ್ತಿದ್ದೇವೆ. ಈ ರೂಪಾಂತರವು ದೇವರಾತ್ಮನಾಗಿರುವ ಕರ್ತನಿಂದಲೇ.


ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು.


ಆದ್ದರಿಂದ ನಾನು ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದುಕೊಂಡು, ಪ್ರಾರ್ಥನೆಗಳಿಂದ ಮತ್ತು ವಿಜ್ಞಾಪನೆಗಳಿಂದ ಕರ್ತರಾದ ದೇವರ ಕಡೆಗೆ ನನ್ನ ಮುಖವನ್ನು ತಿರುಗಿಸಿದೆನು.


ಪರಿಪೂರ್ಣ ಸೌಂದರ್ಯದ ಚೀಯೋನಿನಿಂದ ದೇವರು ಪ್ರಕಾಶಿಸುತ್ತಿದ್ದಾರೆ.


ನಿರಾಶರಾಗದೆ ಯಾವಾಗಲೂ ಪ್ರಾರ್ಥಿಸಬೇಕೆಂದು ಯೇಸು ತಮ್ಮ ಶಿಷ್ಯರಿಗೆ ಒಂದು ಸಾಮ್ಯವನ್ನು ಹೇಳಿದರು.


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದು ಆಜ್ಞಾಪಿಸಿದ ದೇವರು ತಾವೇ, ತಮ್ಮ ಪ್ರಕಾಶವನ್ನು ನಮ್ಮ ಹೃದಯದ ಮೇಲೆ ಬೆಳಗಿಸಿದ್ದಾರೆ. ಹೀಗೆ ಕ್ರಿಸ್ತ ಯೇಸುವಿನ ಮುಖದಲ್ಲಿ ಪ್ರತಿಬಿಂಬಿಸುತ್ತಿರುವ ದೇವರ ಮಹಿಮೆಯ ತಿಳುವಳಿಕೆಯನ್ನು ನಮ್ಮಲ್ಲಿ ಉದಯಿಸುವಂತಾಗಿದೆ.


“ಇಕ್ಕಟ್ಟಾದ ಬಾಗಿಲಿನಿಂದ ಒಳಗೆ ಪ್ರವೇಶಿಸುವುದಕ್ಕೆ ಪ್ರಯಾಸಪಡಿರಿ, ಅನೇಕರು ಒಳಗೆ ಪ್ರವೇಶಿಸುವುದಕ್ಕೆ ಪ್ರಯತ್ನಿಸಿದರೂ ಆಗುವುದಿಲ್ಲ ಎಂದು ನಾನು ನಿಮಗೆ ಹೇಳುತ್ತೇನೆ.


ನಿಜವಾಗಿಯೂ ಕಷ್ಟದಲ್ಲಿರುವ ವಿಧವೆಯು ದೇವರ ಮೇಲೆ ನಿರೀಕ್ಷೆಯನ್ನಿಟ್ಟು ಹಗಲು ಇರುಳು ವಿಜ್ಞಾಪನೆಗಳಲ್ಲಿಯೂ ಪ್ರಾರ್ಥನೆಗಳಲ್ಲಿಯೂ ನೆಲೆಗೊಂಡಿರುವಳು.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ನನ್ನ ಕೈಗಳನ್ನು ನಿರ್ಮಲವಾಗಿ ತೊಳೆದುಕೊಂಡು, ಯೆಹೋವ ದೇವರೇ, ನಿಮ್ಮ ಬಲಿಪೀಠವನ್ನು ಸುತ್ತುತ್ತಾ,


ದಾವೀದನ ದಿವಸಗಳಲ್ಲಿ ವರ್ಷದಿಂದ ವರ್ಷಕ್ಕೆ ಮೂರು ವರ್ಷ ಬರ ಉಂಟಾಗಿತ್ತು. ಆಗ ದಾವೀದನು ಯೆಹೋವ ದೇವರನ್ನು ವಿಚಾರಿಸಿದನು. ಆಗ ಯೆಹೋವ ದೇವರು, “ಸೌಲನು ಗಿಬ್ಯೋನ್ಯರನ್ನು ಕೊಂದುಹಾಕಿದ್ದರಿಂದ ಅವನಿಗೋಸ್ಕರವೂ ರಕ್ತಾಪರಾಧವುಳ್ಳ ಅವನ ಮನೆಗೋಸ್ಕರವೂ ಈ ಬರ ಬಂದಿದೆ,” ಎಂದು ಹೇಳಿದರು.


ಹರಕೆಮಾಡಿ, “ಸೇನಾಧೀಶ್ವರ ಯೆಹೋವ ದೇವರೇ, ನೀವು ನಿಶ್ಚಯವಾಗಿ ನಿಮ್ಮ ದಾಸಿಯ ದೀನತೆಯನ್ನು ಕಂಡು, ನಿಮ್ಮ ದಾಸಿಯನ್ನು ಮರೆಯದೆ, ನನ್ನನ್ನು ನೆನಸಿ, ನಿಮ್ಮ ದಾಸಿಗೆ ಗಂಡು ಮಗುವನ್ನು ಕೊಟ್ಟರೆ, ಅವನು ಬದುಕುವ ಸಕಲ ದಿವಸಗಳಲ್ಲಿ ಅವನನ್ನು ಯೆಹೋವ ದೇವರಿಗೆ ಒಪ್ಪಿಸಿಕೊಡುವೆನು. ಅವನ ತಲೆಯ ಮೇಲೆ ಕ್ಷೌರಿಕನ ಕತ್ತಿ ಬೀಳುವುದಿಲ್ಲ,” ಎಂದಳು.


ದಾವೀದನು ಯೆಹೋವ ದೇವರಿಗೆ, “ನಾನು ಆ ದಂಡಿನ ಹಿಂದೆ ಬೆನ್ನಟ್ಟಲೋ? ಅವರು ನನಗೆ ವಶವಾಗುವರೋ?” ಎಂದು ಕೇಳಿದನು. ಅದಕ್ಕೆ ಯೆಹೋವ ದೇವರು, “ಬೆನ್ನಟ್ಟು, ಅವರು ನಿನ್ನ ವಶವಾಗುವರು; ನೀನು ನಿನ್ನವರನ್ನು ಬಿಡಿಸಿಕೊಂಡು ಬರುವೆ,” ಎಂದರು.


ಇವನು ಅವನಿಗೋಸ್ಕರ ಯೆಹೋವ ದೇವರನ್ನು ಕೇಳಿ ಅವನಿಗೆ ಆಹಾರವನ್ನು ಕೊಟ್ಟು, ಫಿಲಿಷ್ಟಿಯನಾದ ಗೊಲ್ಯಾತನ ಖಡ್ಗವನ್ನು ಅವನಿಗೆ ಕೊಟ್ಟನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು