Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 28:4 - ಕನ್ನಡ ಸಮಕಾಲಿಕ ಅನುವಾದ

4 ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅವರ ದುಷ್ಕೃತ್ಯಗಳಿಗೂ, ಕೆಡುಕಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಕೇಡಿಗರು ಪರರಿಗೆ ಮಾಡಿದುದ ತಾವೇ ಉಣ್ಣಮಾಡು I ಅವರ ದುಷ್ಟಕಾರ್ಯಗಳಿಗೆ ತಕ್ಕುದಾದ ಶಿಕ್ಷೆ ನೀಡು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅವರು ನೆರೆಯವರಿಗೆ ಕೇಡುಗಳನ್ನು ಮಾಡುವರು. ಆದ್ದರಿಂದ ಅವರಿಗೇ ಕೇಡಾಗುವಂತೆ ಮಾಡು. ಅವರಿಗೆ ತಕ್ಕ ದಂಡನೆಯನ್ನು ಕೊಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 28:4
19 ತಿಳಿವುಗಳ ಹೋಲಿಕೆ  

ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ಆಕೆಯು ನಿಮಗೆ ಕೊಟ್ಟಿದ್ದಕ್ಕೆ ಸರಿಯಾಗಿ ಹಿಂದಕ್ಕೆ ಕೊಡಿರಿ. ಕೃತ್ಯಗಳಿಗೆ ಸರಿಯಾಗಿ ಎರಡರಷ್ಟು ಅವಳಿಗೆ ಕೊಡಿರಿ. ಆಕೆಯ ಬಟ್ಟಲಿನಿಂದಲೇ ಎರಡರಷ್ಟು ಆಕೆಗೆ ಕಲಸಿ ಕೊಡಿರಿ.


ಆದ್ದರಿಂದ, ದೇವರ ದಯೆಯನ್ನೂ ಕಾಠಿಣ್ಯವನ್ನೂ ನೋಡು. ಬಿದ್ದವರ ಕಡೆಗೆ ಅವರ ಕಾಠಿಣ್ಯವಿದೆ, ನೀನು ದೇವರ ದಯೆಯಲ್ಲಿಯೇ ಮುಂದುವರಿಯುವುದಾದರೆ ನಿನ್ನ ಮೇಲೆ ದೇವರ ದಯೆಯಿರುವುದು. ಇಲ್ಲದೆ ಹೋದರೆ, ನೀನು ಕೂಡ ಕಡಿದುಹಾಕಲಾಗುವೆ.


“ ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಆ ದಿನದಲ್ಲಿ ನಿನ್ನ ಮನಸ್ಸಿಗೆ ಕೆಲವು ಆಲೋಚನೆಗಳು ಬರುವುವು ಮತ್ತು ನೀನು ಒಂದು ಕುತಂತ್ರವನ್ನು ಮಾಡುವೆ.


ದೇವರು ನಮ್ಮ ಪಾಪಗಳಿಗೆ ಸರಿಯಾಗಿ ನಮ್ಮನ್ನು ಶಿಕ್ಷಿಸಲಿಲ್ಲ; ನಮ್ಮ ಅಧರ್ಮಗಳ ಪ್ರಕಾರ ನಮಗೆ ಮುಯ್ಯಿತೀರಿಸಲಿಲ್ಲ.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ಓ ದೇವರೇ! ಅವರನ್ನು ಅಪರಾಧಿಗಳೆಂದು ನಿರ್ಣಯಿಸಿರಿ, ಅವರು ತಮ್ಮ ಸ್ವಂತ ಕುತಂತ್ರಗಳಿಂದ ಬಿದ್ದುಹೋಗಲಿ. ಅವರ ಬಹು ಪಾಪಗಳ ನಿಮಿತ್ತ ಅವರನ್ನು ಬಹಿಷ್ಕರಿಸಿರಿ, ಏಕೆಂದರೆ ಅವರು ನಿಮಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


“ನಮ್ಮ ದುಷ್ಕಾರ್ಯ ಹಾಗೂ ನಮ್ಮ ಮಹಾ ಅಪರಾಧಕ್ಕಾಗಿ ನಮ್ಮ ಮೇಲೆ ಬಂದದ್ದೆಲ್ಲ ಬಂದ ತರುವಾಯ, ನಮ್ಮ ದೇವರಾಗಿರುವ ನೀವು ನಮ್ಮ ಪಾಪಗಳಿಗಿಂತ ಕಡಿಮೆ ಶಿಕ್ಷೆ ನೀಡಿದ್ದೀರಿ ಮತ್ತು ನಮ್ಮಲ್ಲಿ ಈ ರೀತಿಯಾಗಿ ಇಷ್ಟುಮಂದಿಯನ್ನು ಉಳಿಸಿದ್ದೀರಿ.


ಅವರ ವಂಶವನ್ನು ಭೂಲೋಕದೊಳಗಿಂದಲೂ ಅವರ ಸಂತತಿಯನ್ನು ಮಾನವರೊಳಗಿಂದಲೂ ಉಳಿಯದಿರಲಿ.


ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.


ಯೆಹೋವ ದೇವರೇ, ಅವರ ಕೈಕೆಲಸಗಳ ಪ್ರಕಾರ ಅವರಿಗೆ ಪ್ರತಿಫಲವನ್ನು ಕೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು