Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 3:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯನ್ನು ಬಡಿದು ಅವರ ಹಲ್ಲುಗಳನ್ನು ಉದುರಿಸಿಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ನನ್ನ ದೇವರೇ, ನನ್ನ ಎಲ್ಲಾ ಶತ್ರುಗಳ ದವಡೆಯ ಮೇಲೆ ಬಡಿದು ಅವರ ಹಲ್ಲುಗಳನ್ನು ಉದುರಿಸಿ ಬಿಟ್ಟವನೇ, ಎದ್ದು ಬಂದು ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ಎದ್ದೇಳು! ನನ್ನ ದೇವರೇ, ಬಂದು ನನ್ನನ್ನು ರಕ್ಷಿಸು! ನೀನು ನನ್ನ ಶತ್ರುಗಳ ದವಡೆಗೆ ಬಡಿದರೆ ಅವರ ಹಲ್ಲುಗಳು ಉದುರಿಹೋಗುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 3:7
17 ತಿಳಿವುಗಳ ಹೋಲಿಕೆ  

ಓ, ದೇವರೇ, ಅವರ ಹಲ್ಲುಗಳು ಮುರಿದು ಬೀಳಲಿ. ಯೆಹೋವ ದೇವರೇ, ಪ್ರಾಯದ ಸಿಂಹಗಳಂತಿರುವ ಅವರ ಕೋರೆಹಲ್ಲುಗಳು ನಾಶವಾಗಲಿ.


ದುಷ್ಟರ ದವಡೆಗಳನ್ನು ಮುರಿಯುತ್ತಿದ್ದೆನು; ದುಷ್ಟರ ಹಲ್ಲುಗಳೊಳಗಿಂದ ಬೇಟೆಯನ್ನು ಕಿತ್ತು ಬಿಡಿಸುತ್ತಿದ್ದೆನು.


ನನ್ನ ಮೇಲೆ ಜನರು ತಮ್ಮ ಬಾಯಿ ಕಿಸಿಯುತ್ತಾರೆ; ನಿಂದಿಸಿ ನನ್ನ ಕೆನ್ನೆಗಳನ್ನು ಬಡಿಯುತ್ತಾರೆ, ನನಗೆ ವಿರೋಧವಾಗಿ ಕೂಡಿಕೊಳ್ಳುತ್ತಾರೆ.


ಸರ್ವಶಕ್ತರಾದ ಯೆಹೋವ ದೇವರೇ, ಇಸ್ರಾಯೇಲರ ದೇವರೇ, ನೀವು ಎಲ್ಲಾ ಜನಾಂಗಗಳನ್ನು ನ್ಯಾಯತೀರಿಸುವುದಕ್ಕೆ ಎಚ್ಚರವಾಗಿರಿ. ದುಷ್ಟ ಅಪರಾಧಿಗಳಲ್ಲಿ ಯಾರಿಗೂ ದಯೆಸಿಗದಿರಲಿ.


ಯೆಹೋವ ದೇವರೇ, ಎದ್ದೇಳಿರಿ! ದೇವರೇ, ನಿಮ್ಮ ಕೈ ಎತ್ತಿರಿ. ನಿಸ್ಸಹಾಯಕರನ್ನು ಮರೆಯಬೇಡಿರಿ.


ಯೆಹೋವ ದೇವರ ಭುಜವೇ, ಎಚ್ಚರಗೊಳ್ಳು, ಎಚ್ಚರಗೊಳ್ಳು ಬಲವನ್ನು ಧರಿಸಿಕೋ. ಹಿಂದಿನ ಜನಾಂಗಗಳಲ್ಲಿ ಪೂರ್ವಕಾಲದ ದಿವಸಗಳಲ್ಲಿ ಎಚ್ಚರವಿದ್ದಂತೆಯೇ ಎಚ್ಚರವಾಗು. ರಹಬನ್ನು ಕಡಿದುಬಿಟ್ಟದ್ದೂ, ಘಟಸರ್ಪವನ್ನು ಗಾಯಪಡಿಸಿದ್ದೂ ನೀನಲ್ಲವೋ?


ಯೆಹೋವ ದೇವರೇ, ನೀವು ಕೋಪದಿಂದ ಎದ್ದೇಳಿರಿ; ನನ್ನ ವೈರಿಗಳ ಕ್ರೋಧಕ್ಕೆ ವಿರೋಧವಾಗಿ ಎಚ್ಚರಗೊಳ್ಳಿರಿ. ನನ್ನ ದೇವರೇ, ನ್ಯಾಯಕ್ಕೆ ನಿಮ್ಮ ತೀರ್ಪನ್ನು ನೀಡಲು ಎದ್ದೇಳಿರಿ.


ಯೆಹೋವ ದೇವರೇ, ನನ್ನ ಕಡೆಗೆ ಹಿಂದಿರುಗಿರಿ, ನನ್ನನ್ನು ಬಿಡುಗಡೆ ಮಾಡಿರಿ; ನಿಮ್ಮ ಒಡಂಬಡಿಕೆಯ ಪ್ರೀತಿಯ ನಿಮಿತ್ತ ನನ್ನನ್ನು ರಕ್ಷಿಸಿರಿ.


ಅವನು ತನ್ನನ್ನು ಹೊಡೆಯುವವನಿಗೆ ಕೆನ್ನೆ ಕೊಡಲಿ. ಅವನು ನಿಂದೆಯಿಂದಲೇ ತುಂಬಿರಲಿ.


ಭೂಮಿಯ ದೀನರೆಲ್ಲರನ್ನು ರಕ್ಷಿಸುವುದಕ್ಕೂ ನೀವು ಪ್ರಾರಂಭಿಸುವಾಗ ಭೂಮಿಯು ಭಯಗೊಂಡು ಮೌನವಾಯಿತು.


ಏಕೆ ನಿಮ್ಮ ಕೈಯನ್ನು, ನಿಮ್ಮ ಬಲಗೈಯನ್ನು ಸಹ ಹಿಂದೆಳೆಯುತ್ತೀರಿ? ನಿಮ್ಮ ಎದೆಯೊಳಗಿಂದ ಅದನ್ನು ಹೊರಗೆ ತೆಗೆದು ಅವರನ್ನು ದಂಡಿಸಿರಿ.


ಯೆಹೋವ ದೇವರೇ, ಏಳಿರಿ, ಹೌದು ಎದ್ದೇಳಿರಿ ಸದಾಕಾಲಕ್ಕೆ ನಮ್ಮನ್ನು ತಳ್ಳಿಬಿಡಬೇಡಿರಿ.


ನನ್ನ ದೇವರೇ, ನನ್ನ ಯೆಹೋವ ದೇವರೇ, ನನ್ನ ನ್ಯಾಯವನ್ನು ನಿರ್ಣಯಿಸಿರಿ, ನನ್ನ ವ್ಯಾಜ್ಯದ ಪರವಾಗಿ ಎದ್ದೇಳಿರಿ.


“ಬಡವರು ಹಿಂಸೆಗೆ ಒಳಗಾಗಿರುವುದರಿಂದಲೂ ಗತಿಯಿಲ್ಲದವರು ನರಳಾಡುವುದರಿಂದಲೂ ನಾನು ಈಗಲೇ ಏಳುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ. “ಪೀಡಿಸುವವರಿಂದ ನಾನು ಬಡವರನ್ನು ಕಾಪಾಡುವೆನು.”


ಮರಕ್ಕೆ, ‘ಎಚ್ಚರವಾಗು!’ ಮೂಕವಾದ ಕಲ್ಲಿಗೆ, ‘ಎದ್ದೇಳು!’ ಎಂದು ಹೇಳುವವನಿಗೆ ಕಷ್ಟ! ಅದು ಮಾರ್ಗದರ್ಶನ ನೀಡುವುದೇ? ಅದು ಬಂಗಾರ, ಬೆಳ್ಳಿಯಿಂದ ಹೊದಿಸಿದ್ದಾರೆ. ಆದರೆ ಅದರಲ್ಲಿ ಉಸಿರು ಎಷ್ಟು ಮಾತ್ರವೂ ಇಲ್ಲ.”


ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ನನಗೆ ವಿರೋಧವಾಗಿ ಇಳಿದರೂ ನನ್ನ ಹೃದಯವು ಭಯಪಡದು; ನನ್ನ ಮೇಲೆ ಯುದ್ಧ ಸೈನ್ಯವು ನಡೆದರೂ ನಾನು ಭರವಸೆಯಿಂದಿರುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು