Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವುದಕ್ಕೆ ಅವಕಾಶಕೊಡದೆ, ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿನಗೆನ್ನ ವಂದನೆ ಪ್ರಭು, ನನ್ನನುದ್ಧರಿಸಿದೆ I ಶತ್ರುಗಳೆನ್ನ ಕುರಿತು ಹಿಗ್ಗದಂತೆ ಮಾಡಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನೇ, ನನ್ನ ಶತ್ರುಗಳು ಸಂತೋಷಿಸುವದಕ್ಕೆ ಅವಕಾಶಕೊಡದೆ ನನ್ನನ್ನು ಉದ್ಧರಿಸಿದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನೇ, ನನ್ನನ್ನು ಇಕ್ಕಟ್ಟುಗಳಿಂದ ಮೇಲೆತ್ತಿದವನು ನೀನೇ; ಶತ್ರುಗಳಿಗೆ ಸೋತುಹೋಗಿ ಅವರ ಹಾಸ್ಯಕ್ಕೆ ಗುರಿಯಾಗದಂತೆ ಮಾಡಿದವನು ನೀನೇ; ಆದ್ದರಿಂದ ನಿನ್ನನ್ನು ಕೊಂಡಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:1
24 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕದ ಅರಸರನ್ನು ಸ್ತುತಿಸಿ, ಹೆಚ್ಚಿಸಿ ಘನಪಡಿಸುತ್ತೇನೆ. ಅವರ ಕ್ರಿಯೆಗಳೆಲ್ಲಾ ಸತ್ಯವೇ. ಅವರ ಮಾರ್ಗಗಳು ನ್ಯಾಯವೇ. ಗರ್ವದಲ್ಲಿ ನಡೆಯುವವರನ್ನು ಅವರೇ ತಗ್ಗಿಸಬಲ್ಲರು.


ಯೆಹೋವ ದೇವರೇ, ದುಷ್ಟರಿಗೆ ಅವರ ಇಷ್ಟಾರ್ಥವನ್ನು ಕೊಡಬೇಡಿರಿ; ಅವರು ಉನ್ನತಕ್ಕೇರುವ ಹಾಗೆ ಅವರ ಯುಕ್ತಿಯನ್ನು ಪೂರೈಸಬೇಡಿರಿ.”


“ನಾನು ಅವನನ್ನು ಸೋಲಿಸಿದ್ದೇನೆ,” ಎಂದು ನನ್ನ ಶತ್ರು ಹೇಳದಿರಲಿ, ನಾನು ಬೀಳುವಾಗ ನನ್ನ ಶತ್ರುಗಳು ಆನಂದಿಸದಿರಲಿ.


ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.


ದಾರಿಯಲ್ಲಿ ಹೋಗುವವರೆಲ್ಲರೂ ನಿನ್ನ ವಿಷಯದಲ್ಲಿ ತಮ್ಮ ಕೈಗಳನ್ನು ತಟ್ಟುತ್ತಾರೆ. ಅವರು ಯೆರೂಸಲೇಮಿನ ಪುತ್ರಿಯ ವಿಷಯದಲ್ಲಿ ಸಿಳ್ಳುಹಾಕಿ, ತಲೆಯಾಡಿಸಿ ಆ ಮನುಷ್ಯರು ಕರೆಯುತ್ತಿದ್ದ ಸೌಂದರ್ಯದ ಸಂಪೂರ್ಣತೆಯೂ, ಸರ್ವಭೂಮಿಯ ಸಂತೋಷವೂ ಆಗಿರುವ ನಗರಿಯು ಇದೆಯೋ?


ಅರಸರಾಗಿರುವ ನನ್ನ ದೇವರೇ, ನಿಮ್ಮನ್ನು ಘನಪಡಿಸುವೆನು; ನಿಮ್ಮ ಹೆಸರನ್ನು ಎಂದೆಂದಿಗೂ ಸ್ತುತಿಸುವೆನು.


ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


ನನ್ನ ಶತ್ರು ನನ್ನ ಮೇಲೆ ಜಯ ಹೊಂದದೆ ಇರುವುದರಿಂದಲೇ, ನೀವು ನನ್ನನ್ನು ಮೆಚ್ಚಿದ್ದೀರಿ ಎಂದು ನಾನು ತಿಳಿದುಕೊಳ್ಳುವೆ.


ನಿಮ್ಮ ಜನರನ್ನು ರಕ್ಷಿಸಿರಿ; ನಿಮ್ಮ ವಾರಸುದಾರರನ್ನು ಆಶೀರ್ವದಿಸಿರಿ; ನೀವು ಅವರ ಕುರುಬ ಆಗಿದ್ದು; ಅವರನ್ನು ಯಾವಾಗಲೂ ಮುನ್ನಡೆಸಿರಿ.


ಈಗ ನನ್ನ ತಲೆಯು ನನ್ನ ಸುತ್ತಲಿರುವ ನನ್ನ ಶತ್ರುಗಳ ಮೇಲೆ ಎತ್ತಲಾಗಿರುವುದು, ಆದ್ದರಿಂದ ದೇವರ ಗುಡಾರದಲ್ಲಿ ಉತ್ಸಾಹದಿಂದ ಬಲಿಗಳನ್ನು ಅರ್ಪಿಸುವೆನು; ಯೆಹೋವ ದೇವರಿಗೆ ಹಾಡಿ ಕೊಂಡಾಡುವೆನು.


ಆದರೆ ಲೇವಿಯರನ್ನೂ, ಬೆನ್ಯಾಮೀನರನ್ನೂ ಅವರಲ್ಲಿ ಎಣಿಸಲಿಲ್ಲ. ಏಕೆಂದರೆ ಅರಸನ ಮಾತು ಯೋವಾಬನಿಗೆ ಅಸಹ್ಯಕರವಾಗಿತ್ತು.


ಆಗ ದಾವೀದನು ಯೆಹೋವ ದೇವರಿಗೆ ಅಲ್ಲಿ ಬಲಿಪೀಠವನ್ನು ಕಟ್ಟಿಸಿ, ಅದರ ಮೇಲೆ ದಹನಬಲಿಗಳನ್ನೂ, ಸಮಾಧಾನದ ಬಲಿಗಳನ್ನೂ ಅರ್ಪಿಸಿದನು. ಹೀಗೆ ಯೆಹೋವ ದೇವರು ದೇಶಕ್ಕೋಸ್ಕರ ಬಿನ್ನಹವನ್ನು ಕೇಳಿದ್ದರಿಂದ, ಇಸ್ರಾಯೇಲಿನ ಕಡೆಯಿಂದ ಆ ವ್ಯಾಧಿಯು ನಿಂತುಹೋಯಿತು.


ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.


ಮತ್ತು ಅಧಿಕಾರಿಗಳು ಅವರಿಗೆ ಹೀಗೆ ಹೇಳಬೇಕು, “ನಿಮ್ಮಲ್ಲಿ ಯಾವನಾದರು ಹೊಸ ಮನೆಯನ್ನು ಕಟ್ಟಿ, ಗೃಹ ಪ್ರತಿಷ್ಠೆ ಇನ್ನು ಮಾಡದಿದ್ದರೆ, ಅವನು ತನ್ನ ಮನೆಗೆ ಹೋಗಲಿ. ಯುದ್ಧದಲ್ಲಿ ಸತ್ತರೆ ಬೇರೊಬ್ಬನು ಆ ಮನೆಯನ್ನು ಸೇರಿಕೊಂಡಾನು.


ನಾವು ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.


ನನ್ನ ದೇವರಿಗೆ ಮೊರೆಯಿಟ್ಟೆನು, ನನ್ನ ನಾಲಿಗೆಯಲ್ಲಿ ದೇವರ ಸ್ತೋತ್ರವಿತ್ತು.


ದಾವೀದನು ಯೆರೂಸಲೇಮಿನಲ್ಲಿರುವ ತನ್ನ ಮನೆಗೆ ಬಂದನು. ಅರಸನು ಮನೆಯಲ್ಲಿ ಕಾಯಲು ಇಟ್ಟ ಉಪಪತ್ನಿಗಳಾದ ಹತ್ತು ಮಂದಿ ಸ್ತ್ರೀಯರನ್ನು ತೆಗೆದುಕೊಂಡು, ಅವರನ್ನು ಒಂದು ಕಾವಲಿನಲ್ಲಿರಿಸಿ ಸಾಕುತ್ತಿದ್ದನು. ಅವರಿಗೆ ಅನ್ನವಸ್ತ್ರ ಕೊಡುತ್ತಿದ್ದನು. ಅವರ ಸಂಪರ್ಕ ಮಾಡಲಿಲ್ಲ. ಹಾಗೆಯೇ ಅವರು ಸಾಯುವ ದಿವಸದವರೆಗೂ ವಿಧವೆಯರಂತೆ ಇದ್ದು ಕಾವಲಲ್ಲಿರಬೇಕಾಯಿತು.


ಸೊಲೊಮೋನನು ಯೆಹೋವ ದೇವರಿಗೆ ಸಮಾಧಾನದ ಬಲಿಗಳಾಗಿ 22,000 ಹೋರಿಗಳನ್ನೂ, 1,20,000 ಕುರಿಗಳನ್ನೂ ಅರ್ಪಿಸಿದನು. ಹೀಗೆಯೇ ಅರಸನೂ, ಇಸ್ರಾಯೇಲಿನ ಸಮಸ್ತ ಜನರೂ ಯೆಹೋವ ದೇವರ ಆಲಯವನ್ನು ಪ್ರತಿಷ್ಠೆ ಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು