Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 30:7 - ಕನ್ನಡ ಸಮಕಾಲಿಕ ಅನುವಾದ

7 ಯೆಹೋವ ದೇವರೇ, ನಿಮ್ಮ ದಯೆಯಿಂದ ನನ್ನ ರಾಜ ಬೆಟ್ಟವು ಸ್ಥಿರವಾಗಿ ನಿಲ್ಲುವಂತೆ ಮಾಡಿದ್ದೀರಿ ಆದರೆ ನೀವು ನಿಮ್ಮ ಮುಖವನ್ನು ಮರೆಮಾಡಲು ನಾನು ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನೇ, ಕೃಪೆಮಾಡಿ ನಾನಿರುವ ಬೆಟ್ಟಕ್ಕೆ ಸ್ಥಿರವಾದ ಬಲವನ್ನು ಅನುಗ್ರಹಿಸಿದಿಯಲ್ಲಾ. ಆದರೂ ನೀನು ನಿನ್ನ ಮುಖವನ್ನು ಮರೆಮಾಡಿಕೊಂಡಾಗ ನಾನು ಕಳವಳಗೊಂಡು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನೇ, ನಾನು ನಿನ್ನ ಕೃಪೆಗೆ ಪಾತ್ರನಾಗಿದ್ದಾಗ ನನ್ನನ್ನು ಯಾವುದೂ ಸೋಲಿಸಲಾರದು ಎಂದುಕೊಂಡೆನು. ಆದರೆ ನೀನು ನನಗೆ ವಿಮುಖನಾದಾಗ ಭಯದಿಂದ ನಡುಗತೊಡಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 30:7
16 ತಿಳಿವುಗಳ ಹೋಲಿಕೆ  

ನೀವು ನಿಮ್ಮ ಮುಖವನ್ನು ಮರೆಮಾಡಲು, ಅವು ಹೆದರುತ್ತವೆ. ನೀವು ಅವುಗಳ ಶ್ವಾಸವನ್ನು ತೆಗೆದುಬಿಡಲು, ಸತ್ತು ಹೋಗಿ, ಮಣ್ಣುಪಾಲಾಗುತ್ತವೆ.


ಯೆಹೋವ ದೇವರೇ, ನನಗೆ ಬೇಗನೆ ಉತ್ತರಕೊಡಿರಿ; ನನ್ನ ಪ್ರಾಣವು ಕುಂದಿಹೋಗಿದೆ; ನಿಮ್ಮ ಮುಖವನ್ನು ನನಗೆ ಮರೆಮಾಡಬೇಡ; ಇಲ್ಲವಾದರೆ ಸಮಾಧಿಯಲ್ಲಿ ಇಳಿಯುವವರಿಗೆ ಸಮಾನನಾಗಿಬಿಡುತ್ತೇನೆ.


ಏಕೆಂದರೆ ಅವರ ಬಲವೂ ಮಹಿಮೆಯೂ ನೀವೇ. ನಿಮ್ಮ ಮೆಚ್ಚುಗೆಯಿಂದ ನಮ್ಮ ಬಲವೆಂಬ ಕೊಂಬು ಉನ್ನತವಾಗುವುದು.


ನನ್ನನ್ನು ಜಾರುವ ಗುಂಡಿಯೊಳಗಿಂದ ಎತ್ತಿದರು. ಕೆಸರಿನ ಮಣ್ಣಿನಿಂದ ಎಬ್ಬಿಸಿದರು. ನನ್ನ ಪಾದಗಳನ್ನು ಬಂಡೆಯ ಮೇಲೆ ನಿಲ್ಲಿಸಿ, ನನ್ನ ಹೆಜ್ಜೆಗಳನ್ನು ಸ್ಥಿರಪಡಿಸಿದರು.


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ಯೆಹೋವ ದೇವರೇ, ನೀವು ನೀತಿವಂತರನ್ನು ನಿಶ್ಚಯವಾಗಿ ಆಶೀರ್ವದಿಸಿದ್ದೀರಿ; ನೀವು ಅವರನ್ನು ನಿಮ್ಮ ಮೆಚ್ಚುಗೆಯಿಂದ ಗುರಾಣಿಯಂತೆಯೇ ಆವರಿಸಿಕೊಳ್ಳಿರಿ.


ದೇವರೇ, ನೀವು ನನಗೆ ಜೀವ ಕೊಟ್ಟಿರಿ, ನೀವು ನನಗೆ ಒಡಂಬಡಿಕೆಯ ಪ್ರೀತಿಯನ್ನೂ ತೋರಿಸಿದ್ದೀರಿ; ನಿಮ್ಮ ಪರಾಮರಿಕೆಯಿಂದ ನನ್ನ ಆತ್ಮವನ್ನು ಕಾಪಾಡಿದ್ದೀರಿ.


ಆ ದಿವಸದಲ್ಲಿ ನಾನು ಅವರ ಮೇಲೆ ಕೋಪಗೊಂಡು ಅವರನ್ನು ಬಿಟ್ಟುಬಿಟ್ಟು, ನನ್ನ ಮುಖವನ್ನು ಅವರಿಗೆ ಮರೆಮಾಡುವೆನು. ವಿರೋಧಿಗಳು ಅವರನ್ನು ನುಂಗಿಬಿಡುವರು. ಬಹಳ ಕೇಡುಗಳೂ, ಇಕ್ಕಟ್ಟುಗಳೂ ಅವರಿಗೆ ಸಂಭವಿಸುವುದು. ಆ ದಿವಸದಲ್ಲಿ ಅವರು, ‘ನಮ್ಮ ದೇವರು ನಮ್ಮ ಮಧ್ಯದಲ್ಲಿ ಇಲ್ಲದ ಕಾರಣ ನಮಗೆ ಕೇಡುಗಳು,’ ಎಂದು ಹೇಳುವರು.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ಇದಕ್ಕೆ ಕಾರಣ ನೀವು ಗಮನ ಕೊಡದಿರುವುದೇ. ನೀವು ನನಗೆ ಲಕ್ಷ್ಯಕೊಡುತ್ತಾಯಿಲ್ಲ.


ನಮ್ಮ ಪಿತೃಗಳು ತಮ್ಮ ಖಡ್ಗದಿಂದ ದೇಶವನ್ನು ಸ್ವಾಧೀನಪಡಿಸಿಕೊಳ್ಳಲಿಲ್ಲ; ಅವರ ತೋಳು ಅವರಿಗೆ ಜಯ ತರಲಿಲ್ಲ; ಆದರೆ ನಿಮ್ಮ ಬಲಗೈಯೂ ನಿಮ್ಮ ತೋಳೂ ನಿಮ್ಮ ಮುಖದ ಪ್ರಕಾಶವೇ ಅವರಿಗೆ ಜಯವನ್ನು ತಂದಿತು. ಏಕೆಂದರೆ ಅವರನ್ನು ನೀವು ಪ್ರೀತಿಸಿದಿರಿ.


ಯೆಹೋವ ದೇವರೇ, ನೀವು ದೂರದಲ್ಲಿ ನಿಂತುಕೊಳ್ಳುವುದು ಏಕೆ? ಇಕ್ಕಟ್ಟಿನ ಕಾಲಗಳಲ್ಲಿ ನೀವು ಮರೆಯಾಗಿರುವುದೂ ಏಕೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು