Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:11 - ಕನ್ನಡ ಸಮಕಾಲಿಕ ಅನುವಾದ

11 ನನ್ನ ವೈರಿಗಳೆಲ್ಲರ ನಿಮಿತ್ತವಾಗಿ ನನ್ನ ನೆರೆಯವರಿಗೆ ನಾನು ನಿಂದೆಯೂ, ಮಿತ್ರರಿಗೆ ಹೆದರಿಕೆಯೂ ಆಗಿದ್ದೇನೆ; ದಾರಿಯಲ್ಲಿ ನನ್ನನ್ನು ಕಂಡವರು ನನ್ನನ್ನು ಬಿಟ್ಟು ಓಡಿಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಶತ್ರುಗಳ ದೂಷಣೆಗೆ ಗುರಿಯಾದೆ, ನೆರೆಯವರಿಗೆ ನಿಂದಾಸ್ಪದನಾದೆ I ಮಿತ್ರರೂ ಬೆದರುವಂತಾದೆ; ದಾರಿಹೋಕರು ದೂರವಾಗುವಂತಾದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನನ್ನ ಎಲ್ಲಾ ಹಿಂಸಕರ ದೆಸೆಯಿಂದ ದೂಷಣೆಗೆ ಗುರಿಯಾದೆನು; ವಿಶೇಷವಾಗಿ ನೆರೆಯವರು ನನ್ನನ್ನು ನಿಂದಿಸುತ್ತಾರೆ. ನನ್ನ ಪರಿಚಿತರಿಗೆ ನನ್ನಲ್ಲಿ ಭೀತಿಯುಂಟಾಯಿತು; ನನ್ನನ್ನು ದಾರಿಯಲ್ಲಿ ಕಂಡವರೆಲ್ಲರು ಓರೆಯಾಗಿ ಹೋಗುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ವೈರಿಗಳು ನನ್ನನ್ನು ಕೀಳಾಗಿ ಕಾಣುತ್ತಿದ್ದಾರೆ; ನನ್ನ ನೆರೆಹೊರೆಯವರೂ ನನ್ನನ್ನು ನಿಂದಿಸುವರು; ನನ್ನ ಸಂಬಂಧಿಕರೂ ನನ್ನ ವಿಷಯದಲ್ಲಿ ಭಯಪಡುವರು; ನನ್ನನ್ನು ದಾರಿಯಲ್ಲಿ ಕಂಡರೂ ಕಾಣದಂತೆ ಹೊರಟುಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:11
24 ತಿಳಿವುಗಳ ಹೋಲಿಕೆ  

ನನ್ನ ಪ್ರಿಯರೂ, ನನ್ನ ಸ್ನೇಹಿತರೂ ನನ್ನ ಬಾಧೆಗೆ ಓರೆಯಾಗಿ ನಿಲ್ಲುತ್ತಾರೆ; ನನ್ನ ನೆರೆಯವರು ದೂರದಲ್ಲಿ ನಿಂತಿದ್ದಾರೆ.


ನನ್ನ ಪರಿಚಿತರನ್ನು ನನ್ನಿಂದ ದೂರಮಾಡಿದ್ದೀರಿ. ನಾನು ಅವರಿಗೆ ಬೇಡವಾಗಿದ್ದೇನೆ. ನಾನು ಬಂಧಿತನಾಗಿದ್ದೇನೆ, ಹೊರಗೆ ಬರಲಾರೆನು.


ಆದರೆ ಪವಿತ್ರ ವೇದದ ಪ್ರವಾದನೆಗಳು ನೆರವೇರುವಂತೆ ಇದೆಲ್ಲಾ ಆಯಿತು,” ಎಂದು ಹೇಳಿದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ನನ್ನ ಆಪ್ತಮಿತ್ರರನ್ನು ದೂರ ಮಾಡಿದಿರಿ. ಅಂಧಕಾರವೇ ನನ್ನ ಪರಿಚಯವು.


ಮನಃಪೂರ್ವಕವಾಗಿ ತಿರಸ್ಕೃತನಾದವನೂ ಜನಾಂಗಕ್ಕೆ ಅಸಹ್ಯನೂ, ಅಧಿಕಾರಿಗಳ ಸೇವಕನಿಗೆ ಇಸ್ರಾಯೇಲಿನ ವಿಮೋಚಕನೂ ಮತ್ತು ಅವನ ಪರಿಶುದ್ಧನಾದ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಯೆಹೋವ ದೇವರ ನಂಬಿಗಸ್ತಿಕೆಯನ್ನೂ, ನೀನು ಆಯ್ದುಕೊಂಡ ಇಸ್ರಾಯೇಲಿನ ಪರಿಶುದ್ಧನನ್ನೂ ಕಂಡು ಅರಸರು ಎದ್ದು ನಿಲ್ಲುತ್ತಾರೆ, ಅಧಿಪತಿಗಳು ಸಹ ಆರಾಧಿಸುವರು.”


ಹೀಗೆ ಅವರು ತಮ್ಮ ನಾಲಿಗೆಯಿಂದ ತಾವೇ ಎಡವಿ ಬೀಳುವಂತೆ ಮಾಡಿಕೊಳ್ಳುವರು. ಅವರನ್ನು ಕಾಣುವವರೆಲ್ಲರೂ ತಲೆಯಾಡಿಸಿ ಅಣಕಿಸುವರು.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಆದ್ದರಿಂದ ನಾವು ಯೇಸು ಹೇಗೆ ನಿಂದನೆಯನ್ನು ಹೊತ್ತುಕೊಂಡರೋ ಹಾಗೆ ಹೊತ್ತು ಪಾಳೆಯದ ಆಚೆ ಅವರ ಬಳಿಗೆ ಹೊರಟು ಹೋಗೋಣ.


ಇನ್ನೂ ಬೇರೆ ಕೆಲವರು ಅಪಹಾಸ್ಯ, ಕೊರಡೆಯ ಪೆಟ್ಟು ತಿಂದು ಬೇಡಿ ಸೆರೆವಾಸವನ್ನು ಸಹ ಅನುಭವಿಸಿದರು,


ನಾನು ಮೊದಲನೆಯ ಸಾರಿ ಪ್ರತಿವಾದ ಮಾಡಿದಾಗ ಯಾರೂ ನನ್ನೊಂದಿಗೆ ನಿಲ್ಲಲಿಲ್ಲ. ಎಲ್ಲರೂ ನನ್ನನ್ನು ಕೈಬಿಟ್ಟರು. ಇದು ಅವರ ಲೆಕ್ಕಕ್ಕೆ ಸೇರಿಸಲಾಗದೆ ಇರಲಿ.


“ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,” ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ.


ಆಗ ಶಿಷ್ಯರೆಲ್ಲರೂ ಯೇಸುವನ್ನು ಬಿಟ್ಟು ಓಡಿಹೋದರು.


ಅದಕ್ಕೆ ಅವನು, “ಆ ಮನುಷ್ಯನನ್ನು ನಾನು ಅರಿಯೆನು,” ಎಂದು ಶಪಿಸಿಕೊಳ್ಳುವುದಕ್ಕೂ ಆಣೆಯಿಟ್ಟುಕೊಳ್ಳುವುದಕ್ಕೂ ಪ್ರಾರಂಭಿಸಿದನು. ಕೂಡಲೇ ಹುಂಜ ಕೂಗಿತು.


ಏಕೆಂದರೆ ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ. ಮಗಳು ತನ್ನ ತಾಯಿಗೂ, ಸೊಸೆಗೂ ಆಕೆಯ ಅತ್ತೆಗೂ ವಿರೋಧವಾಗಿ ಏಳುತ್ತಾರೆ. ಒಬ್ಬ ಮನುಷ್ಯನಿಗೆ ಅವನ ಮನೆಯವರೇ ವೈರಿಗಳಾಗುವರು.


ಏಕೆಂದರೆ, ನಿನ್ನ ಸಹೋದರರೂ, ನಿನ್ನ ತಂದೆಯ ಮನೆತನದವರೂ ನಿನಗೆ ವಂಚನೆ ಮಾಡಿದ್ದಾರೆ. ಹೌದು, ಇವರೇ ನಿನಗೆ ವಿರೋಧವಾಗಿ ಬಂದು ಜೋರಾಗಿ ಕೂಗಿದ್ದಾರೆ. ಅವರು ನಿನಗೆ ಒಳ್ಳೆಯ ಮಾತುಗಳನ್ನು ಹೇಳಿದರೂ, ಅವರನ್ನು ನಂಬಬೇಡ.


ಆದರೆ ನಾನು ಹುಳದಂಥವನೇ ಹೊರತು ಮನುಷ್ಯನಲ್ಲ; ನಾನು ಮನುಷ್ಯರಿಂದ ನಿಂದೆ ಹಾಗು ತಿರಸ್ಕಾರಕ್ಕೆ ಗುರಿಯಾಗಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು