Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:17 - ಕನ್ನಡ ಸಮಕಾಲಿಕ ಅನುವಾದ

17 ಯೆಹೋವ ದೇವರೇ, ನಾನು ನಾಚಿಕೆಪಡದಂತೆ ಮಾಡಿರಿ; ನಾನು ನಿಮಗೆ ಮೊರೆಯಿಟ್ಟಿದ್ದೇನೆ; ದುಷ್ಟರು ನಾಚಿಕೆಪಡಲಿ; ಅವರು ಸಮಾಧಿ ಸೇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನ್ನನ್ನು ನಿರಾಶೆಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನಗೆ ಮೊರೆಯಿಡುವೆ, ನನಗಾಗದಿರಲಿ ಹೇ ಪ್ರಭು, ಮಾನಭಂಗ I ದುರುಳರಿಗಾಗಲೀ ಆಶಾಭಂಗ, ಮೂಕರಾಗವರು ಸೇರಲಿ ನರಕ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಯೆಹೋವನೇ, ಮೊರೆಯಿಟ್ಟಿದ್ದೇನೆ; ನನಗೆ ಆಶಾಭಂಗಪಡಿಸಬೇಡ. ದುಷ್ಟರಿಗೇ ಆಶಾಭಂಗವಾಗಲಿ; ಅವರು ಸ್ತಬ್ಧರಾಗಿ ಪಾತಾಳಕ್ಕೆ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೆಹೋವನೇ, ನಾನು ನಿನ್ನಲ್ಲಿ ಪ್ರಾರ್ಥಿಸಿದೆನು. ಆದ್ದರಿಂದ ನಾನು ನಿರಾಶನಾಗುವುದಿಲ್ಲ. ಕೆಡುಕರಾದರೋ ನಿರಾಶರಾಗುವರು. ಅವರು ಮೌನವಾಗಿ ಸಮಾಧಿಗೆ ಹೋಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:17
25 ತಿಳಿವುಗಳ ಹೋಲಿಕೆ  

ಆದರೆ ಯೆಹೋವ ದೇವರು ಭಯಂಕರವಾದ ಪರಾಕ್ರಮಶಾಲಿಯ ಹಾಗೆ ನನ್ನ ಸಂಗಡ ಇದ್ದಾರೆ. ಆದ್ದರಿಂದ ನನ್ನನ್ನು ಹಿಂಸಿಸುವವರು ಎಡವುವರು, ಗೆಲ್ಲುವುದಿಲ್ಲ. ಅನುಕೂಲವಾಗದೆ ಇದ್ದುದರಿಂದ ಅವರು ಬಹಳವಾಗಿ ನಾಚಿಕೆಪಡುವರು. ಅವರ ಅವಮಾನವು ಎಂದಿಗೂ ಮರೆಯದ ಅವಮಾನವಾಗಿರುವುದು.


ಸತ್ತವರೂ ಮೌನಲೋಕವನ್ನು ಇಳಿದವರೆಲ್ಲರೂ ಯೆಹೋವ ದೇವರನ್ನು ಸ್ತುತಿಸುವುದಿಲ್ಲ.


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.


ಯೆಹೋವ ದೇವರು ನನಗೆ ಸಹಾಯ ಕೊಡದಿದ್ದರೆ, ನಾನು ಬೇಗನೇ ಮರಣದ ಮೌನದಲ್ಲಿ ವಾಸಿಸುತ್ತಿದ್ದೆನು.


ನನ್ನ ನಾಲಿಗೆಯು ಸಹ ದಿನವೆಲ್ಲಾ ನಿಮ್ಮ ನೀತಿಯನ್ನು ಮಾತನಾಡುವುದು, ಏಕೆಂದರೆ ನನಗೆ ಕೇಡು ಬಗೆಯುವವರು ನಾಚಿಕೊಂಡು ತಲೆ ತಗ್ಗಿಸಿದ್ದಾರೆ.


ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.


ಅವರು ತಮ್ಮ ಪರಿಶುದ್ಧರ ಪಾದಗಳನ್ನು ಕಾಯುವರು. ಆದರೆ ದುಷ್ಟರು ಕತ್ತಲಲ್ಲಿ ಮೌನವಾಗಿರುವರು. “ತನ್ನ ಶಕ್ತಿಯಿಂದ ಒಬ್ಬನೂ ಜಯಿಸನು.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಯೆಹೋವ ದೇವರೇ, ನಿಮ್ಮನ್ನೇ ಆಶ್ರಯಿಸಿಕೊಂಡಿದ್ದೇನೆ; ನಾನು ಎಂದಿಗೂ ನಾಚಿಕೆಪಡದಂತೆ ಮಾಡಿರಿ; ನಿಮ್ಮ ನೀತಿಯಲ್ಲಿ ನನ್ನನ್ನು ವಿಮೋಚಿಸಿರಿ.


ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.


ಧಾನ್ಯವೂ ಹೊಸ ದ್ರಾಕ್ಷಾರಸವೂ ಸುಗ್ಗಿಕಾಲದಲ್ಲಿ ಸಮೃದ್ಧಿಯಾದಾಗ ಇರುವುದಕ್ಕಿಂತಲೂ ಅಧಿಕವಾದ ಆನಂದವನ್ನು ನೀವು ನನ್ನ ಹೃದಯದಲ್ಲಿ ಇಟ್ಟಿದ್ದೀರಿ.


ಸರ್ವಶಕ್ತ ದೇವರಾಗಿರುವ ಯೆಹೋವ ದೇವರೇ, ಎಷ್ಟರವರೆಗೆ ನಿಮ್ಮ ಜನರ ಪ್ರಾರ್ಥನೆಗೆ ವಿರೋಧವಾಗಿ ಬೇಸರಗೊಳ್ಳುವಿರಿ?


ನೀವು ದ್ರಾಕ್ಷಾಲತೆಯನ್ನು ಈಜಿಪ್ಟಿನಿಂದ ತಂದು, ಜನಾಂಗಗಳನ್ನು ಹೊರಡಿಸಿ ಅದನ್ನು ನೆಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು