Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:20 - ಕನ್ನಡ ಸಮಕಾಲಿಕ ಅನುವಾದ

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ನೀವು ಅವರನ್ನು ನಿಮ್ಮ ಸಾನಿಧ್ಯದಲ್ಲಿಯೇ ಮರೆಮಾಡುತ್ತೀರಿ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ನಿಮ್ಮ ನಿವಾಸದಲ್ಲಿ ಅಡಗಿಸುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗುಪ್ತಸ್ಥಳದಲ್ಲಿ ಅಡಗಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಪಾರುಮಾಡುವುದವರನು ನಿನ್ನ ಸಾನ್ನಿಧ್ಯ ಸೆರಗು, ಜನರೊಳಸಂಚಿನಿಂದ I ದೂರವಿಡುವುದವರನು ನಿನ್ನಾಸರೆಯು, ವ್ಯಾಜ್ಯಮಾಡುವ ಜಿಹ್ವೆಯಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಮನುಷ್ಯರ ಒಳಸಂಚುಗಳಿಂದ ಹಾನಿ ಉಂಟಾಗದಂತೆ ಅವರನ್ನು ನಿನ್ನ ಸಾನ್ನಿಧ್ಯದಲ್ಲಿಯೇ ಮರೆಮಾಡುತ್ತೀ; ವಿವಾದಿಸುವ ನಾಲಿಗೆಗಳಿಂದ ಕೇಡಾಗದಂತೆ ಅವರನ್ನು ಗೋಪ್ಯಸ್ಥಳದಲ್ಲಿ ಅಡಗಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನೀತಿವಂತರಿಗೆ ಕೇಡುಮಾಡಲು ಕೆಡುಕರು ಒಟ್ಟಾಗಿ ಸೇರಿದ್ದಾರೆ. ನೀನಾದರೋ ನೀತಿವಂತರನ್ನು ಮರೆಮಾಡಿ ಕಾಪಾಡುವೆ; ಅವರನ್ನು ನಿನ್ನ ಆಶ್ರಯಸ್ಥ್ಥಾನದಲ್ಲಿ ಅಡಗಿಸಿಡುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:20
27 ತಿಳಿವುಗಳ ಹೋಲಿಕೆ  

ಕೇಡಿನ ಸಮಯದಲ್ಲಿ ಯೆಹೋವ ದೇವರು ನನ್ನನ್ನು ತಮ್ಮ ಗುಡಾರದಲ್ಲಿ ಬಚ್ಚಿಡುವರು. ತಮ್ಮ ಪರಿಶುದ್ಧ ಗುಡಾರದಲ್ಲಿ ನನ್ನನ್ನು ಮರೆಮಾಡುವರು. ಎತ್ತರವಾದ ಬಂಡೆಯ ಮೇಲೆ ನನ್ನನ್ನು ನಿಲ್ಲಿಸುವರು.


ನೀವು ನನಗೆ ಮರೆಮಾಡುವ ಸ್ಥಳವಾಗಿರುವಿರಿ; ಇಕ್ಕಟ್ಟಿನಿಂದ ನನ್ನನ್ನು ಕಾಯುತ್ತೀರಿ; ವಿಮೋಚನಾ ಧ್ವನಿಗಳಿಂದ ನೀವು ನನ್ನನ್ನು ಸುತ್ತುವರಿಯುತ್ತೀರಿ.


ನೀನು ನಾಲಿಗೆಯೆಂಬ ಚಾಟಿಹೊಡೆತಕ್ಕೆ ಮರೆಯಾಗಿರುವೆ; ನಾಶ ಬಂದಾಗ ನೀನು ಭಯಪಡುವುದಿಲ್ಲ.


ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


ತಮ್ಮ ನಾಲಿಗೆಗಳನ್ನು ಹಾವಿನ ಹಾಗೆ ಹದಮಾಡುತ್ತಾರೆ; ಸರ್ಪಗಳ ವಿಷವು ಅವರ ತುಟಿಗಳ ಕೆಳಗಿದೆ.


ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ ಇರುವ ಮನುಷ್ಯನು ಧನ್ಯನು.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಎಲ್ಲಾ ದೇವರುಗಳಿಗಿಂತ ಯೆಹೋವ ದೇವರೇ ದೊಡ್ಡವರೆಂದು ಈಗ ನಾನು ತಿಳಿದುಕೊಂಡಿದ್ದೇನೆ. ಏಕೆಂದರೆ ಈಜಿಪ್ಟಿನವರು ಗರ್ವಪಟ್ಟಿದ್ದರಿಂದ ಯೆಹೋವ ದೇವರು ಅವರನ್ನು ತಗ್ಗಿಸಿದರು,” ಎಂದನು.


ಆದರೆ ದೇವರು ನಮಗೆ ಹೆಚ್ಚಾದ ಕೃಪೆಯನ್ನು ಕೊಡುತ್ತಾರೆ. ಆದ್ದರಿಂದ ಈ ಕಾರಣಕ್ಕಾಗಿ, ಪವಿತ್ರ ವೇದವು: “ದೇವರು ಅಹಂಕಾರಿಗಳನ್ನು ಎದುರಿಸುತ್ತಾರೆ. ದೀನರಿಗಾದರೋ ಕೃಪೆಯನ್ನು ಕೊಡುತ್ತಾರೆ,” ಎಂದು ಹೇಳುತ್ತದೆ.


ಅಂಥವರು ಅಹಂಕಾರಿಯೂ ವಿವೇಕರಹಿತನಾಗಿದ್ದಾರೆ. ಅವರು ಹೊಟ್ಟೆಕಿಚ್ಚು, ಜಗಳ, ದೂಷಣೆ, ದುಸ್ಸಂಶಯಪಡುವ ಭ್ರಾಂತರಾಗಿ ಸತ್ಯವನ್ನು ಬಿಟ್ಟು, ಕುತರ್ಕ ವಾಗ್ವಾದಗಳನ್ನು ಮಾಡುವವರಾಗಿದ್ದಾರೆ.


ಗರ್ವಿಷ್ಠರ ಪಾದ ನನಗೆ ವಿರೋಧವಾಗಿ ಬಾರದೇ ಇರಲಿ; ದುಷ್ಟರ ಕೈ ನನ್ನನ್ನು ತೆಗೆದು ಹಾಕದಿರಲಿ.


ನಾನು ಬಂದಾಗ ಒಂದು ವೇಳೆ ನೀವು ನನ್ನ ಮನಸ್ಸಿನ ತೋರಿಕೆಯ ಪ್ರಕಾರ ಇರುವುದಿಲ್ಲವೋ ಏನೋ? ನಾನು ನಿಮ್ಮ ಇಷ್ಟದ ಪ್ರಕಾರ ತೋರದೆ ಇರಬಹುದು. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ಕೋಪ, ಭೇದಗಳು, ಚಾಡಿ ಹೇಳುವುದು, ಹರಟೆ ಹೊಡೆಯುವುದು, ಉಬ್ಬಿಕೊಳ್ಳುವುದು, ಕಲಹ ಎಬ್ಬಿಸುವುದು, ಇವುಗಳು ಕಾಣಬರುವುದೋ ಎಂಬ ಭಯ ನನಗೆ ಉಂಟು.


ಪಕ್ಷತನ ಕುಡಿಕತನಗಳಲ್ಲಾಗಲಿ, ಕಾಮವಿಲಾಸ ನಿರ್ಲಜ್ಯ ಕೃತ್ಯಗಳಲ್ಲಾಗಲಿ, ಮತ್ಸರಗಳಲ್ಲಾಗಲಿ ನಿರತರಾಗಿರದೆ ಹಗಲಿನಲ್ಲಿರುವವರಂತೆ ಸಭ್ಯತೆಯಿಂದ ನಡೆದುಕೊಳ್ಳೋಣ.


ರಭಸ ಪ್ರವಾಹ ನಮ್ಮನ್ನು ಕೊಚ್ಚಿಕೊಂಡು ಹೋಗಿಬಿಡುತ್ತಿತ್ತು.


ವಿಗ್ರಹಾರಾಧನೆ, ಮಾಟ, ಹಗೆತನ, ಜಗಳ, ಹೊಟ್ಟೆಕಿಚ್ಚು, ಸಿಟ್ಟು, ಸ್ವಾರ್ಥತ್ವ, ವಿರೋಧತ್ವ, ಭಿನ್ನತೆ,


ದೇವರೇ, ಅಹಂಕಾರಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಬಲಾತ್ಕಾರಿಗಳ ಗುಂಪು ನನ್ನ ಪ್ರಾಣವನ್ನು ಹುಡುಕುತ್ತದೆ. ಅವರು ನಿಮ್ಮನ್ನು ಗೌರವಿಸುವವರಲ್ಲ.


ಯೆಹೋವ ದೇವರು ಬೇಸರಗೊಂಡು, ನೀವು ನಿಮ್ಮ ಮಾರ್ಗದಲ್ಲಿ ನಾಶವಾಗದಂತೆ ಅವರ ಮಗನನ್ನು ಮುದ್ದಿಸಿರಿ. ಏಕೆಂದರೆ ದೇವರ ರೋಷವು ಕ್ಷಣಮಾತ್ರದಲ್ಲಿ ಜ್ವಾಲಿಸುವುದು. ದೇವರ ಆಶ್ರಯ ಪಡೆಯುವವರೆಲ್ಲಾ ಧನ್ಯರು.


ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನಿಮ್ಮ ಆಲಯದ ಸಮೃದ್ಧಿಯಿಂದ ಅವರು ಸಂತೃಪ್ತಿ ಹೊಂದುವರು; ನಿಮ್ಮ ಹರ್ಷ ನದಿಯಿಂದ ಅವರಿಗೆ ಕುಡಿಯಲು ಕೊಡುವಿರಿ.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ಯೆಹೋವ ದೇವರು, ಅನುಕಂಪವೂ ದಯೆಯೂ ದೀರ್ಘಶಾಂತಿಯೂ ಪೂರ್ಣ ಪ್ರೀತಿಯೂ ಉಳ್ಳವರಾಗಿದ್ದಾರೆ.


ಏಕೆಂದರೆ, ಭೂಮಿಯ ಮೇಲೆ ಆಕಾಶವು ಎಷ್ಟು ಉನ್ನತವೋ, ದೇವರ ಪ್ರೀತಿಯು ತಮಗೆ ಭಯಪಡುವವರ ಮೇಲೆ ಅಷ್ಟು ಮಹೋನ್ನತವಾಗಿದೆ;


ನಿಮ್ಮ ಪ್ರೀತಿಗೆ ಅನುಸಾರವಾಗಿ ನಿಮ್ಮ ಸೇವಕನೊಂದಿಗೆ ವ್ಯವಹರಿಸಿ, ನಿಮ್ಮ ತೀರ್ಪುಗಳನ್ನು ನನಗೆ ಬೋಧಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು