Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 31:7 - ಕನ್ನಡ ಸಮಕಾಲಿಕ ಅನುವಾದ

7 ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಉಲ್ಲಾಸಿಸಿ ಸಂತೋಷ ಪಡುವೆನು; ಏಕೆಂದರೆ ನೀವು ನನ್ನ ಕಷ್ಟಗಳನ್ನು ಲಕ್ಷ್ಯಕ್ಕೆ ತಂದು, ನನ್ನ ಪ್ರಾಣದ ಸಂಕಟಗಳನ್ನು ಅರಿತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವುದನ್ನು ನೋಡಿ, ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಹರ್ಷಾನಂದಗೊಳ್ಳುವೆ ನೆನೆದು ನಿನ್ನ ಅನಂತ ಪ್ರೀತಿಯನು I ಈಕ್ಷಿಸಿದೆ ನೀ ಭಕ್ತನ ದೀನತೆಯನು, ಲಕ್ಷಿಸಿದೆ ಬಾಧೆಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಕೃಪೆಯಲ್ಲಿ ಸಂತೋಷಿಸಿ ಉಲ್ಲಾಸದಿಂದಿರುವೆನು; ನಾನು ಕುಗ್ಗಿಹೋಗಿರುವದನ್ನು ನೋಡಿ ನನ್ನ ಬಾಧೆಗಳನ್ನು ನೀನು ಲಕ್ಷ್ಯಕ್ಕೆ ತೆಗೆದುಕೊಂಡಿಯಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ದೇವರೇ, ನಿನ್ನ ಕರುಣೆಯು ನನ್ನನ್ನು ಉಲ್ಲಾಸಗೊಳಿಸುವುದು. ನನ್ನ ಸಂಕಟವನ್ನು ನೀನು ನೋಡಿರುವೆ; ನನಗಿರುವ ಆಪತ್ತುಗಳು ನಿನಗೆ ತಿಳಿದಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 31:7
23 ತಿಳಿವುಗಳ ಹೋಲಿಕೆ  

ಆಕಾಶವೇ, ಹರ್ಷಧ್ವನಿ ಮಾಡು; ಭೂಮಿಯೇ, ಉಲ್ಲಾಸಪಡು! ಪರ್ವತಗಳೇ, ಹರ್ಷಧ್ವನಿಗೈಯಿರಿ! ಏಕೆಂದರೆ ಯೆಹೋವ ದೇವರು ತನ್ನ ಜನರನ್ನು ಆಧರಿಸಿ, ಶ್ರಮೆಪಟ್ಟ ತನ್ನವರನ್ನು ಕರುಣಿಸುವನು.


ಅವರಿಗೆ ಬಂದ ಎಲ್ಲಾ ಇಕ್ಕಟ್ಟಿನಲ್ಲಿ ಆತನಿಗೆ ಇಕ್ಕಟ್ಟಾಯಿತು. ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು. ತನ್ನ ಪ್ರೀತಿಯಲ್ಲಿಯೂ, ತನ್ನ ಕನಿಕರದಲ್ಲಿಯೂ ಆತನೇ ಅವರನ್ನು ವಿಮೋಚಿಸಿದನು. ಪೂರ್ವಕಾಲದ ದಿವಸಗಳಲ್ಲೆಲ್ಲಾ ಅವರನ್ನು ಎತ್ತಿಕೊಂಡು ಹೊತ್ತುಕೊಂಡನು.


ನನ್ನ ಕಷ್ಟವನ್ನು ನೋಡಿ ನನ್ನನ್ನು ಬಿಡಿಸಿರಿ; ಏಕೆಂದರೆ ನಿಮ್ಮ ನಿಯಮವನ್ನು ನಾನು ಮರೆತಿಲ್ಲ.


ಆದರೂ ದೇವರ ಸ್ಥಿರವಾದ ಅಸ್ತಿವಾರವು ನಿಲ್ಲುತ್ತದೆ. ಅದರ ಮೇಲೆ, “ತನ್ನವರು ಯಾರಾರೆಂಬುದನ್ನು ಕರ್ತದೇವರು ತಿಳಿದಿದ್ದಾರೆ!” ಎಂತಲೂ, “ಕರ್ತದೇವರ ಹೆಸರನ್ನು ಅರಿಕೆಮಾಡುವವರೆಲ್ಲರೂ ದುಷ್ಟತನವನ್ನು ಬಿಟ್ಟುಬಿಡಬೇಕು!” ಎಂತಲೂ ಮುದ್ರೆ ಉಂಟು.


ಈಗಲಾದರೋ ನೀವು ದೇವರನ್ನು ಅರಿತುಕೊಂಡಿದ್ದೀರಿ. ನಿಜವಾಗಿ ಹೇಳಬೇಕಾದರೆ, ದೇವರು ನಿಮ್ಮನ್ನು ಅರಿತುಕೊಂಡಿದ್ದಾರೆ. ಹೀಗಿರಲಾಗಿ ನೀವು ಬಲಹೀನವಾದ ದರಿದ್ರ ಮೂಲಪಾಠಗಳಿಗೆ ಪುನಃ ಗುಲಾಮರಾಗಬೇಕೆಂದು ಅಪೇಕ್ಷಿಸಿ, ಅವುಗಳಿಗೆ ನೀವು ತಿರುಗಿಕೊಳ್ಳುವುದು ಹೇಗೆ?


ಅಬ್ರಹಾಮನು ನಮ್ಮನ್ನು ತಿಳಿಯದಿದ್ದರೂ, ಇಸ್ರಾಯೇಲನು ನಮ್ಮನ್ನು ಗುರುತಿಸದಿದ್ದರೂ ಯೆಹೋವ ದೇವರಾದ ನೀವೇ ನಮ್ಮ ತಂದೆಯೂ, ನಮ್ಮ ವಿಮೋಚಕರೂ ಆಗಿದ್ದೀರಿ. ನಿಮ್ಮ ಹೆಸರು ಸದಾಕಾಲವೂ ಇದೆ


ವಿಶ್ರಮಿಸಿಕೊಳ್ಳುವುದೂ ಇಲ್ಲ.


ನೀನು ಜಲರಾಶಿಯನ್ನು ದಾಟಿಹೋಗುವಾಗ, ನಾನು ನಿನ್ನೊಂದಿಗಿರುವೆನು; ನದಿಗಳನ್ನು ನೀನು ದಾಟುವಾಗ, ಅವು ನಿನ್ನನ್ನು ಮುಳುಗಿಸುವುದಿಲ್ಲ; ಬೆಂಕಿಯಲ್ಲಿ ನಡೆಯುವಾಗ, ನೀನು ಸುಟ್ಟುಹೋಗುವುದಿಲ್ಲ; ಜ್ವಾಲೆಯು ನಿನ್ನನ್ನು ದಹಿಸದು.


ನನ್ನ ಆತ್ಮವು ನನ್ನಲ್ಲಿ ಕುಂದಿ ಹೋದಾಗ, ದೇವರೇ ನೀವು ನನ್ನ ದಾರಿಯನ್ನು ಕಾಯುತ್ತೀರಿ; ನಾನು ನಡೆಯುವ ದಾರಿಯಲ್ಲಿ ವೈರಿಗಳು ಗುಪ್ತವಾಗಿ ನನಗೆ ಉರುಲನ್ನು ಒಡ್ಡಿದ್ದಾರೆ.


ಅನೇಕ ಕಠಿಣವಾದ ಇಕ್ಕಟ್ಟುಗಳನ್ನು ನೋಡ ಮಾಡಿದ ನನ್ನನ್ನು ನೀವು ತಿರುಗಿ ಬದುಕಿಸಿದ್ದೀರಿ. ಭೂಮಿಯ ಅಧೋಭಾಗದಿಂದ ಪುನಃ ನನ್ನನ್ನು ಮೇಲಕ್ಕೆ ಎತ್ತುವಿರಿ.


ನಾನಾದರೋ ನಿಮ್ಮ ಒಡಂಬಡಿಕೆಯ ಪ್ರೀತಿಯಲ್ಲಿ ಭರವಸೆ ಇಟ್ಟಿದ್ದೇನೆ. ನಿಮ್ಮ ರಕ್ಷಣೆಯಲ್ಲಿ ನನ್ನ ಹೃದಯವು ಉಲ್ಲಾಸಪಡುವುದು.


ಯೆಹೋವ ದೇವರೇ, ನನ್ನ ವೈರಿಗಳು ನನ್ನನ್ನು ಹಿಂಸಿಸುವುದನ್ನು ನೋಡಿರಿ. ನನ್ನನ್ನು ಕರುಣಿಸಿ, ಮರಣ ದ್ವಾರದಿಂದ ನನ್ನನ್ನು ಮೇಲಕ್ಕೆತ್ತಿರಿ.


ಯೆಹೋವ ದೇವರು ನೀತಿವಂತರ ಮಾರ್ಗವನ್ನು ಅರಿತಿದ್ದಾರೆ; ಆದರೆ ದುಷ್ಟರ ಮಾರ್ಗವು ನಾಶಕ್ಕೆ ನಡೆಸುವುದು.


ಆದರೆ ದೇವರು ನಾನು ಹೋಗುವ ಮಾರ್ಗವನ್ನು ತಿಳಿದಿದ್ದಾರೆ; ದೇವರು ನನ್ನನ್ನು ಪರೀಕ್ಷಿಸಿದಾಗ, ನಾನು ಚೊಕ್ಕ ಬಂಗಾರವಾಗಿ ಹೊರಗೆ ಬರುವೆನು.


“ಆದಕಾರಣ ನಮ್ಮ ದೇವರೇ, ಪ್ರೀತಿಯ ಒಡಂಬಡಿಕೆಯನ್ನು ಕೈಗೊಳ್ಳುವಂಥ ಮಹಾ ಪರಾಕ್ರಮವುಳ್ಳ ಭಯಭಕ್ತಿಗೆ ಕಾರಣರಾದ ದೇವರೇ, ಅಸ್ಸೀರಿಯದ ಅರಸರ ಕಾಲ ಮೊದಲ್ಗೊಂಡು ಇಂದಿನವರೆಗೆ ನಮ್ಮ ಮೇಲೆಯೂ, ನಮ್ಮ ಅರಸರ ಮೇಲೆಯೂ, ನಮ್ಮ ಪ್ರಧಾನರ ಮೇಲೆಯೂ, ನಮ್ಮ ಯಾಜಕರ ಮೇಲೆಯೂ, ನಮ್ಮ ಪ್ರವಾದಿಗಳ ಮೇಲೆಯೂ, ನಮ್ಮ ಪಿತೃಗಳ ಮೇಲೆಯೂ, ನಿಮ್ಮ ಸಮಸ್ತ ಜನರ ಮೇಲೆಯೂ ಬಂದ ಇವೆಲ್ಲಾ ಕಷ್ಟಸಂಕಟಗಳು ನಿಮಗೆ ಅಲ್ಪವಾಗಿ ಕಾಣದಿರಲಿ.


ಹರ್ಷಧ್ವನಿ, ಉಲ್ಲಾಸ, ಕೋಲಾಹಲ, ವಧೂವರರ ಸ್ವರ ಮತ್ತು ಹಾಡುತ್ತಾ ಕೃತಜ್ಞತಾ ಬಲಿಯನ್ನು ಯೆಹೋವ ದೇವರ ಆಲಯಕ್ಕೆ ತರುವವರ ಸ್ವರ ಹೀಗೆ ಹೇಳುವವು, “ ‘ “ಸೇನಾಧೀಶ್ವರ ಯೆಹೋವ ದೇವರಿಗೆ ಕೃತಜ್ಞತಾ ಸ್ತೋತ್ರಮಾಡಿರಿ, ಏಕೆಂದರೆ ಯೆಹೋವ ದೇವರು ಒಳ್ಳೆಯವರು. ಆತನ ಪ್ರೀತಿ ಶಾಶ್ವತವಾಗಿರುತ್ತದೆ.” ಏಕೆಂದರೆ ನಾನು ಈ ದೇಶದ ಸಮೃದ್ಧಿಯನ್ನು ಮೊದಲಿನಂತೆ ಪುನಃಸ್ಥಾಪಿಸುವೆನು,’ ಎಂದು ಯೆಹೋವ ದೇವರು ಹೇಳುತ್ತಾರೆ.


ಬೆಳಿಗ್ಗೆ ನಿಮ್ಮ ಒಡಂಬಡಿಕೆಯ ಪ್ರೀತಿಯಿಂದ ನಮ್ಮನ್ನು ತೃಪ್ತಿಪಡಿಸಿರಿ. ಆಗ ನಮ್ಮ ದಿನಗಳೆಲ್ಲಾ ಉತ್ಸಾಹ ಧ್ವನಿಗೈದು ನಿಮ್ಮಲ್ಲಿ ಸಂತೋಷಪಡುವೆವು.


ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.


ದೇವರೇ, ನೀವಾದರೋ ಬಾಧೆಪಡುವವರ ಕಷ್ಟಗಳನ್ನು ನೋಡಿದ್ದೀರಿ; ಅವರ ಸಂಕಟವನ್ನು ಪರಿಗಣಿಸಿ, ನೀವೇ ನೋಡಿಕೊಳ್ಳಿರಿ. ಗತಿಯಿಲ್ಲದವರು ತಮ್ಮನ್ನು ನಿಮಗೇ ಒಪ್ಪಿಸಿಕೊಡುತ್ತಾರೆ; ನೀವೇ ದಿಕ್ಕಿಲ್ಲದವರಿಗೆ ಸಹಾಯ ಮಾಡುವವರು.


ನೀವು ಕುಂಬಾರನ ಮಣ್ಣಿನಂತೆ ನನ್ನನ್ನು ರೂಪಿಸಿದ್ದೀರಿ ಎಂದು ಜ್ಞಾಪಕಮಾಡಿಕೊಳ್ಳಿರಿ. ಈಗ ನೀವೇ ನನ್ನನ್ನು ಮಣ್ಣಿಗೆ ಸೇರಿಸುವಿರೋ?


ಆದರೆ ದೇವರನ್ನು ಪ್ರೀತಿಸುವವರನ್ನು ದೇವರು ತಿಳಿದುಕೊಂಡಿರುತ್ತಾರೆ.


ಯೆಹೋವ ದೇವರೇ, ನಮಗೆ ಏನು ಸಂಭವಿಸಿದೆ ಎಂದು ಜ್ಞಾಪಕಮಾಡಿಕೊಳ್ಳಿರಿ. ಪರಿಗಣಿಸಿ, ನಮ್ಮ ನಿಂದೆಯನ್ನು ನೋಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು