Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:1 - ಕನ್ನಡ ಸಮಕಾಲಿಕ ಅನುವಾದ

1 ಯಾರ ಉಲ್ಲಂಘನೆಗಳು ಕ್ಷಮಿಸಲಾಗಿವೆಯೋ, ಯಾರ ಪಾಪಗಳು ಮುಚ್ಚಲಾಗಿವೆಯೋ ಅವರೇ ಧನ್ಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯಾರ ದ್ರೋಹವು ಪರಿಹಾರವಾಗಿದೆಯೋ, ಯಾರ ಪಾಪವು ಕ್ಷಮಿಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಯಾರ ಪಾಪ ಪರಿಹಾರವಾಗಿದೆಯೋ I ಯಾರ ದ್ರೋಹ ವಿಮೋಚನೆಯಾಗಿದೆಯೋ - ಅವರೇ ಧನ್ಯರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯಾವನ ದ್ರೋಹವು ಪರಿಹಾರವಾಗಿದೆಯೋ ಯಾವನ ಪಾಪವು ಕ್ಷವಿುಸಲ್ಪಟ್ಟಿದೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯಾವನ ಪಾಪಗಳು ಕ್ಷಮಿಸಲ್ಪಟ್ಟಿವೆಯೋ ಯಾವನ ದ್ರೋಹಗಳು ಅಳಿಸಲ್ಪಟ್ಟಿವೆಯೋ ಅವನೇ ಧನ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:1
27 ತಿಳಿವುಗಳ ಹೋಲಿಕೆ  

ನಾನು ನಿನ್ನ ದ್ರೋಹಗಳನ್ನು ಮೋಡದಂತೆ ಅಳಿಸಿಬಿಟ್ಟಿದ್ದೇನೆ. ನಿನ್ನ ಪಾಪಗಳನ್ನು ಮುಂಜಾನೆಯ ಮಂಜಿನಂತೆ ಹಾರಿಸಿದ್ದೇನೆ. ನನ್ನ ಕಡೆಗೆ ತಿರುಗಿಕೋ. ಏಕೆಂದರೆ ನಾನು ನಿನ್ನನ್ನು ವಿಮೋಚಿಸಿದ್ದೇನೆ.”


ನಿಮ್ಮ ಜನರ ಅಕ್ರಮವನ್ನು ಪರಿಹರಿಸಿದ್ದೀರಿ. ಅವರ ಪಾಪವನ್ನೆಲ್ಲಾ ಮುಚ್ಚಿದ್ದೀರಿ.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡವರು ಧನ್ಯರು. ಹೀಗೆ ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ದ್ವಾರಗಳ ಮೂಲಕ ಆ ಪಟ್ಟಣದೊಳಕ್ಕೆ ಸೇರುವರು.


“ಈಗ ಬನ್ನಿರಿ, ನಾವು ಒಟ್ಟಾಗಿ ವಾದಿಸೋಣ,” ಎಂದು ಯೆಹೋವ ದೇವರು ಹೇಳುತ್ತಾರೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ ಹಿಮದಂತೆ ಬೆಳ್ಳಗಾಗುವುವು. ರಕ್ತದಂತೆ ಕಡುಕೆಂಪಾಗಿದ್ದರೂ ಉಣ್ಣೆಯಂತೆ ಆಗುವುವು.


ಯೆಹೋವ ದೇವರನ್ನು ತನ್ನ ಭರವಸೆಯಾಗಿ ಮಾಡಿಕೊಂಡು ಅಹಂಕಾರಿಗಳನ್ನು ಗೌರವಿಸದೆಯೂ ಇಲ್ಲವೆ ಸುಳ್ಳಿನ ಕಡೆಗೆ ತಿರುಗಿಕೊಳ್ಳದೆಯೂ ಇರುವ ಮನುಷ್ಯನು ಧನ್ಯನು.


ನ್ಯಾಯವನ್ನು ಕಾಪಾಡಿಕೊಂಡು ಯಾವಾಗಲೂ ಸರಿಯಾದವುಗಳನ್ನು ಪಾಲಿಸುವವರು ಧನ್ಯರು.


ಅದಕ್ಕೆ ಯೇಸು, “ಅದಕ್ಕಿಂತಲೂ ದೇವರ ವಾಕ್ಯವನ್ನು ಕೇಳಿ, ಅದನ್ನು ಅನುಸರಿಸುವವರು ಹೆಚ್ಚು ಭಾಗ್ಯವಂತರು,” ಎಂದರು.


“ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಯೇಸು ಅವನಿಗೆ, “ಯೋನನ ಮಗ ಸೀಮೋನನೇ, ನೀನು ಧನ್ಯನು. ಏಕೆಂದರೆ ಇದನ್ನು ಪ್ರಕಟಿಸಿದ್ದು ಮಾನವರಲ್ಲ. ಪರಲೋಕದಲ್ಲಿರುವ ನನ್ನ ತಂದೆಯೇ ಇದನ್ನು ನಿನಗೆ ಪ್ರಕಟಿಸಿದರು.


ಯೆಹೋವ ದೇವರಿಗೆ ಭಯಪಟ್ಟು ಅವರ ಮಾರ್ಗಗಳಲ್ಲಿ ನಡೆದುಕೊಳ್ಳುವ ಪ್ರತಿಯೊಬ್ಬನು ಧನ್ಯನು.


ನಿಮ್ಮ ಉತ್ಸಾಹ ಧ್ವನಿಯನ್ನು ಕೇಳಿದ ಜನರು ಧನ್ಯರು. ಯೆಹೋವ ದೇವರೇ, ನಿಮ್ಮ ಸನ್ನಿಧಿಯ ಬೆಳಕಿನಲ್ಲಿ ನಡೆಯುವವರು ಧನ್ಯರು.


ಸೇನಾಧೀಶ್ವರ ಯೆಹೋವ ದೇವರೇ, ನಿಮ್ಮಲ್ಲಿ ಭರವಸವಿಡುವವನೇ ಭಾಗ್ಯವಂತನು.


ಬಲಿಷ್ಠನೇ, ನೀನು ಕೆಟ್ಟತನದಲ್ಲಿ ಹೆಚ್ಚಳ ಪಡುವುದೇಕೆ? ದೇವರ ದೃಷ್ಟಿಯಲ್ಲಿ ಅಪಕೀರ್ತಿಯಾದವನೇ, ದೇವರ ಅನಂತ ಕೃಪೆಯು ಯಾವಾಗಲೂ ಇರುವದು.


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ದೇವರೇ, ನನ್ನ ಪ್ರಾರ್ಥನೆಗೆ ಕಿವಿಗೊಡಿರಿ, ನನ್ನ ವಿಜ್ಞಾಪನೆಗೆ ನಿಮ್ಮನ್ನು ಮರೆಮಾಡಿಕೊಳ್ಳಬೇಡಿರಿ.


ಅವರು ಕಟ್ಟುವವರ ಮುಂದೆ ನಿಮ್ಮನ್ನು ಕೆಣಕಿದ್ದರಿಂದ ನೀವು ಅವರ ಅಪರಾಧವನ್ನು ಮುಚ್ಚಬೇಡಿರಿ. ನಿಮ್ಮ ಮುಂದೆ ಇರುವ ಅವರ ಪಾಪಗಳನ್ನು ಅಳಿಸಿಬಿಡಬೇಡಿರಿ ಎಂದು ನಾನು ಪ್ರಾರ್ಥಿಸಿದೆ.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು