Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:11 - ಕನ್ನಡ ಸಮಕಾಲಿಕ ಅನುವಾದ

11 ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ, ಉಲ್ಲಾಸಪಡಿರಿ; ಯಥಾರ್ಥ ಹೃದಯ ಉಳ್ಳವರೇ, ಜಯಗೀತೆ ಹಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹ ಧ್ವನಿಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಜ್ಜನರೇ ಸಂತೋಷಿಸಿರಿ, ಉಲ್ಲಾಸಿಸಿರಿ ಪ್ರಭುವಿನಲಿ I ಯಥಾರ್ಥಚಿತ್ತರೇ, ಜಯಕಾರಮಾಡಿ ಆತನ ವಿಷಯದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತರೇ, ಯೆಹೋವನಲ್ಲಿ ಸಂತೋಷಿಸುತ್ತಾ ಉಲ್ಲಾಸವಾಗಿರ್ರಿ; ಯಥಾರ್ಥಚಿತ್ತರೇ, ಆತನ ವಿಷಯದಲ್ಲಿ ಉತ್ಸಾಹಧ್ವನಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನೀತಿವಂತರೇ, ಹರ್ಷಿಸಿರಿ; ಯೆಹೋವನಲ್ಲಿ ಆನಂದಿಸಿರಿ. ಶುದ್ಧಹೃದಯವುಳ್ಳವರೇ, ಉಲ್ಲಾಸಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:11
18 ತಿಳಿವುಗಳ ಹೋಲಿಕೆ  

ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.


ಯಾವಾಗಲೂ ಕರ್ತ ದೇವರಲ್ಲಿ ಆನಂದಿಸಿರಿ, ಆನಂದಪಡಿರಿ ಎಂದು ಮತ್ತೆ ಹೇಳುತ್ತೇನೆ.


ನೀತಿವಂತರೇ, ಯೆಹೋವ ದೇವರಲ್ಲಿ ಸಂತೋಷಿಸಿರಿ; ದೇವರ ಪರಿಶುದ್ಧ ನಾಮವನ್ನು ಕೊಂಡಾಡಿರಿ.


ಯೆಹೋವ ದೇವರು ಆಳಿಕೆ ಮಾಡುತ್ತಾರೆ; ಭೂಮಿಯು ಉಲ್ಲಾಸಪಡಲಿ; ದ್ವೀಪಗಳ ಸಮೂಹವು ಸಂತೋಷಪಡಲಿ.


ಆದರೆ ನಿಮ್ಮನ್ನು ಆಶ್ರಯಿಸುವವರೆಲ್ಲರು ಆನಂದಿಸಲಿ; ಅವರು ಸದಾ ನಿಮ್ಮ ಆನಂದ ಗಾನವನ್ನು ಹಾಡಲಿ. ನಿಮ್ಮ ಹೆಸರನ್ನು ಪ್ರೀತಿಸುವವರು ನಿಮ್ಮಲ್ಲಿ ಆನಂದಿಸುವಂತೆ ಅವರನ್ನು ನಿಮ್ಮ ಸಂರಕ್ಷಣೆಯಿಂದ ಆವರಿಸಿಕೊಳ್ಳಿರಿ.


ಆದರೆ ನೀತಿವಂತರು ಸಂತೋಷಿಸಲಿ. ದೇವರ ಮುಂದೆ ಉಲ್ಲಾಸಪಡಲಿ. ಹೌದು, ಅವರು ಹರ್ಷಾನಂದರಾಗಲಿ.


ನೀತಿವಂತರೇ, ಯೆಹೋವ ದೇವರಿಗಾಗಿ ಸಂತೋಷದಿಂದ ಹಾಡಿರಿ; ಯಥಾರ್ಥರು ಅವರನ್ನು ಕೊಂಡಾಡುವುದು ಯೋಗ್ಯವಾಗಿದೆ.


ನೀವೂ, ನಿಮ್ಮ ಗಂಡು ಹೆಣ್ಣು ಮಕ್ಕಳೂ, ದಾಸದಾಸಿಯರೂ ನಿಮ್ಮೊಡನೆ ಸ್ವಾಸ್ತ್ಯವನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರೂ, ನಿಮ್ಮ ದೇವರಾದ ಯೆಹೋವ ದೇವರ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಏಕೆಂದರೆ ದೇವರನ್ನು ಪವಿತ್ರಾತ್ಮರಿಂದ ಆರಾಧಿಸಿ ಕ್ರಿಸ್ತ ಯೇಸುವನ್ನು ಮಹಿಮೆಪಡಿಸುತ್ತಾ ಹರ್ಷಗೊಳ್ಳುವವರೂ ಮಾಂಸದಲ್ಲಿ ಭರವಸೆಯಿಡದ ನಾವೇ ಸುನ್ನತಿಯಾಗಿದ್ದೇವೆ.


ಕಡೆಯದಾಗಿ ನನ್ನ ಪ್ರಿಯರೇ, ಕರ್ತನಲ್ಲಿ ಆನಂದಿಸಿರಿ. ಬರೆದದ್ದನ್ನೇ ನಿಮಗೆ ಬರೆಯುವುದರಲ್ಲಿ ನನಗೆ ಬೇಸರವಿಲ್ಲ, ಅದು ನಿಮಗೆ ಸುರಕ್ಷಿತವೇ.


ಇಷ್ಟು ಮಾತ್ರವೇ ಅಲ್ಲ, ಈಗ ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕ ನಾವು ದೇವರೊಂದಿಗೆ ಮಿತ್ರರಾಗಿ, ಯೇಸುವಿನ ಮೂಲಕವೇ ದೇವರಲ್ಲಿ ಉಲ್ಲಾಸ ಪಡುತ್ತೇವೆ.


“ಪರಾಕ್ರಮದ ಬೆಟ್ಟವೇ, ನೀನ್ಯಾರು? ಜೆರುಬ್ಬಾಬೆಲನ ಮುಂದೆ ಬಯಲಾಗುವೆ. ಅವನು ಕಲಶದ ಕಲ್ಲನ್ನು ಸ್ಥಾಪಿಸಿ, ‘ದೇವರು ಇದನ್ನು ಆಶೀರ್ವದಿಸಲಿ! ದೇವರು ಇದನ್ನು ಆಶೀರ್ವದಿಸಲಿ!’ ಎಂದು ಘೋಷಿಸುವನು.”


ಯೆಹೋವ ದೇವರೇ, ಒಳ್ಳೆಯವರಿಗೂ, ಯಥಾರ್ಥ ಹೃದಯವುಳ್ಳವರಿಗೂ ಒಳ್ಳೆಯದನ್ನು ಮಾಡುತ್ತಾರೆ.


ಯೆಹೋವ ದೇವರು ಯಾರ ಅನ್ಯಾಯವನ್ನು ಎಣಿಸುವುದಿಲ್ಲವೋ, ಯಾರ ಆತ್ಮದಲ್ಲಿ ವಂಚನೆ ಇರುವುದಿಲ್ಲವೋ ಆ ಮನುಷ್ಯನು ಧನ್ಯನು.


ಮಹೋನ್ನತರಾದ ದೇವರು ನನ್ನ ಗುರಾಣಿಯಾಗಿದ್ದಾರೆ, ಅವರು ಯಥಾರ್ಥ ಹೃದಯವುಳ್ಳವರನ್ನು ರಕ್ಷಿಸುತ್ತಾರೆ.


ಹನ್ನಳು ಪ್ರಾರ್ಥಿಸಿ ಹೇಳಿದ್ದೇನೆಂದರೆ, “ನನ್ನ ಹೃದಯವು ಯೆಹೋವ ದೇವರಲ್ಲಿ ಸಂತೋಷಿಸಿತು. ನನ್ನ ಕೊಂಬು ಯೆಹೋವ ದೇವರಲ್ಲಿ ಉನ್ನತವಾಯಿತು. ನನ್ನ ಶತ್ರುಗಳ ಮುಂದೆ ನನ್ನ ಬಾಯಿ ಹೆಚ್ಚಳಪಟ್ಟಿತು. ಏಕೆಂದರೆ ನಾನು ನಿಮ್ಮ ರಕ್ಷಣೆಯಲ್ಲಿ ಹರ್ಷಿಸುತ್ತೇನೆ.


ಸಮಸ್ತ ಭೂನಿವಾಸಿಗಳೇ, ಯೆಹೋವ ದೇವರಿಗೆ ಆನಂದಘೋಷ ಮಾಡಿರಿ. ಉತ್ಸಾಹಧ್ವನಿ ಮಾಡಿ ಸಂಗೀತದಿಂದ ಸ್ತುತಿಹಾಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು