Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:3 - ಕನ್ನಡ ಸಮಕಾಲಿಕ ಅನುವಾದ

3 ನಾನು ನನ್ನ ಪಾಪವನ್ನು ಅರಿಕೆ ಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದು ಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಪಾಪ ನಿವೇದನೆ ಮಾಡದೆ ನಾ ಮೌನದಿಂದಿರಲು I ದಿನವೆಲ್ಲ ನರಳಿ ಸವೆದುಹೋದವು ನನ್ನೆಲುಬುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಾನು [ನನ್ನ ಪಾಪವನ್ನು] ಅರಿಕೆಮಾಡದೆ ಇದ್ದಾಗ ದಿನವೆಲ್ಲಾ ನರಳುವದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ ದಿನವೆಲ್ಲ್ಲಾ ಪಾಪದಿಂದ ನರಳಬೇಕಾಯಿತು; ವೇದನೆಯಿಂದ ನನ್ನ ಎಲುಬುಗಳೇ ಸವೆದು ಹೋಗುವಂತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:3
26 ತಿಳಿವುಗಳ ಹೋಲಿಕೆ  

ಬಲಹೀನನಾಗಿದ್ದೇನೆ, ಬಹಳ ಜಜ್ಜಿ ಹೋಗಿದ್ದೇನೆ; ನನ್ನ ಹೃದಯದ ವೇದನೆಯಿಂದ ನರಳುತ್ತಾ ಇದ್ದೇನೆ.


ನಿಮ್ಮ ಬೇಸರದ ನಿಮಿತ್ತ ನನ್ನ ಶರೀರದಲ್ಲಿ ಸ್ವಸ್ಥತೆ ಏನೂ ಇಲ್ಲ; ನನ್ನ ಪಾಪದ ನಿಮಿತ್ತ ನನ್ನ ಎಲುಬುಗಳಲ್ಲಿ ಕ್ಷೇಮವೇ ಇಲ್ಲ.


ನಾನು ಕರೆದು ಕೂಗಿದರೂ ಅವರು ನನ್ನ ಪ್ರಾರ್ಥನೆಯನ್ನು ಲಾಲಿಸುವುದಿಲ್ಲ.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?


ತಮ್ಮ ಹಾಸಿಗೆಯ ಮೇಲೆ ಗೋಳಾಡುವಾಗಲೂ, ಅವರು ತಮ್ಮ ಹೃದಯದಿಂದ ನನ್ನನ್ನು ಕೂಗಲಿಲ್ಲ. ಧಾನ್ಯ ಮತ್ತು ದ್ರಾಕ್ಷಾರಸಗಳ ನಿಮಿತ್ತ ಅವರು ತಮ್ಮ ದೇವರುಗಳಿಗೆ ಮನವಿ ಮಾಡುವಾಗ ತಮ್ಮನ್ನು ತಾವು ಗಾಯಗೊಳಿಸಿಕೊಳ್ಳುತ್ತಾರೆ, ಆದರೆ ಅವರು ನನ್ನಿಂದ ದೂರವಿರುತ್ತಾರೆ.


ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ನನ್ನ ಮೇಲಿನ ಚರ್ಮವು ಕಪ್ಪಾಗಿ ಉದುರುತ್ತಿದೆ; ನನ್ನ ಶರೀರ ಜ್ವರದಿಂದ ಬಿಸಿಯಾಗಿದೆ.


ನಾನು ಆನಂದವನ್ನೂ ಹರ್ಷವನ್ನೂ ಕೇಳುವಂತೆ ಮಾಡಿರಿ; ನೀವು ಜಜ್ಜಿದ ಎಲುಬುಗಳು ಆನಂದಪಡಲಿ.


ನನ್ನ ಮಾಂಸ, ಚರ್ಮವನ್ನು ಆತನು ಹಳೆಯದನ್ನಾಗಿ ಮಾಡಿದ್ದಾರೆ. ಅವರು ನನ್ನ ಎಲುಬುಗಳನ್ನು ಮುರಿದಿದ್ದಾರೆ.


ಯೆಹೂದವೆಂಬಾಕೆಯು ಸಂಕಟದ ನಿಮಿತ್ತವೂ, ಘೋರವಾದ ದಾಸ್ಯದ ನಿಮಿತ್ತವೂ ಸೆರೆಯಾಗಿ ಹೋದಳು. ಆಕೆಯು ಬೇರೆ ಜನಾಂಗಗಳೊಳಗೆ ವಾಸಮಾಡುವವಳಾಗಿ, ವಿಶ್ರಾಂತಿಯನ್ನು ಕಾಣಳು. ಆಕೆಯು ಇಕ್ಕಟ್ಟಿಗೆ ಸಿಕ್ಕಿಕೊಂಡಿರುವಾಗಲೇ ಆಕೆಯ ಹಿಂಸಕರೆಲ್ಲಾ ಆಕೆಯನ್ನು ಹಿಂದಟ್ಟಿ ಹಿಡಿದರು.


ನಾವೆಲ್ಲರೂ ಕರಡಿಗಳ ಹಾಗೆ ಗುರುಗುಟ್ಟುತ್ತೇವೆ. ನಾವು ಪಾರಿವಾಳಗಳಂತೆ ದುಃಖದಿಂದ ಕೊರಗುತ್ತೇವೆ. ನ್ಯಾಯಕ್ಕಾಗಿ ಕಾದುಕೊಳ್ಳುತ್ತೇವೆ. ಆದರೆ ಅದು ಸಿಕ್ಕದು, ರಕ್ಷಣೆಯಾದರೋ ಅದು ನಮಗೆ ದೂರವಾಗಿದೆ.


ನಿನ್ನ ಪುತ್ರರು ಮೂರ್ಛೆ ಹೋಗಿ, ಬಲೆಗೆ ಸಿಕ್ಕಿದ ಕಾಡು ಗೂಳಿಗಳಂತೆ, ಎಲ್ಲಾ ಬೀದಿಗಳು ಕೂಡುವ ಚೌಕಗಳಲ್ಲಿ ಅವರು ಬಿದ್ದಿದ್ದಾರೆ. ಅವರು ಯೆಹೋವ ದೇವರ ರೋಷದಿಂದಲೂ, ನಿನ್ನ ದೇವರ ಗದರಿಕೆಯಿಂದಲೂ ತುಂಬಿದ್ದಾರೆ.


ಯೆಹೋವ ದೇವರೇ, ನನ್ನನ್ನು ಕರುಣಿಸಿರಿ, ನಾನು ಬಲಹೀನನಾಗಿದ್ದೇನೆ; ಯೆಹೋವ ದೇವರೇ, ನನ್ನನ್ನು ಸ್ವಸ್ಥಮಾಡಿರಿ, ನನ್ನ ಎಲುಬುಗಳು ಬಹು ವ್ಯಥೆಗೊಳಗಾಗಿವೆ.


ರಾತ್ರಿಯಲ್ಲಿ ನನ್ನ ಎಲುಬುಗಳು ನನ್ನಲ್ಲಿ ಕೊರೆಯುತ್ತಿವೆ; ನನ್ನ ಸಂಕಟಗಳು ವಿಶ್ರಾಂತಿ ತೆಗೆದುಕೊಳ್ಳುವುದಿಲ್ಲ.


ನಿಟ್ಟುಸಿರೇ ನನ್ನ ದೈನಂದಿನ ಆಹಾರವಾಗಿದೆ; ನನ್ನ ನರಳಾಟವು ಜಲಧಾರೆಯಂತಿದೆ.


ದುಃಖದ ದಿವಸಗಳು ತೀರಿದ ತರುವಾಯ, ದಾವೀದನು ಅವಳನ್ನು ತನ್ನ ಮನೆಗೆ ಕರೆಯಕಳುಹಿಸಿದನು. ಅವಳು ಅವನಿಗೆ ಹೆಂಡತಿಯಾಗಿ ಒಬ್ಬ ಮಗನನ್ನು ಹೆತ್ತಳು. ದಾವೀದನು ಮಾಡಿದ ಈ ಕಾರ್ಯವು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದಾಗಿತ್ತು.


ಅವನ ದುರಾಶೆಯ ಅನ್ಯಾಯಕ್ಕೆ ನಾನು ಕೋಪಗೊಂಡು, ಅವನನ್ನು ಹೊಡೆದೆನು. ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾದೆನು. ಅವನು ಮೊಂಡುತನದಿಂದ ತನ್ನ ಮನಸ್ಸಿಗೆ ಬಂದ ಹಾಗೆಯೇ ನಡೆಯುತ್ತಾ ಬಂದಿದ್ದಾನೆ.


ಅವರ ಎಲುಬುಗಳನ್ನು ತೆಗೆದುಕೊಂಡು, ಅವುಗಳನ್ನು ಯಾಬೇಷಿನಲ್ಲಿರುವ ಪಿಚುಲ ವೃಕ್ಷದ ಕೆಳಗೆ ಸಮಾಧಿಮಾಡಿ, ಏಳು ದಿವಸ ಉಪವಾಸ ಮಾಡಿದರು.


ಹರ್ಷಹೃದಯವು ಒಳ್ಳೆಯ ಔಷಧ; ಆದರೆ ಕುಗ್ಗಿದ ಮನಸ್ಸು ಎಲುಬುಗಳನ್ನು ಒಣಗಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು