Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 32:5 - ಕನ್ನಡ ಸಮಕಾಲಿಕ ಅನುವಾದ

5 ನನ್ನ ಪಾಪವನ್ನು ನಿಮಗೆ ತಿಳಿಸಿ, ನನ್ನ ಅನ್ಯಾಯವನ್ನು ಮರೆಮಾಡದೆ, “ನನ್ನ ಉಲ್ಲಂಘನೆಗಳನ್ನು ಯೆಹೋವ ದೇವರಿಗೆ ಅರಿಕೆ ಮಾಡುವೆನು,” ಎಂದು ಹೇಳಿದೆನು; ಆಗ, ನೀವು ನನ್ನ ಪಾಪದ ಅಪರಾಧವನ್ನು ಪರಿಹರಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹೀಗಿರುವಲ್ಲಿ ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಪಾಪಗಳ ಅಪರಾಧವನ್ನು ಪರಿಹರಿಸಿಬಿಟ್ಟಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಗ ನಾ ನಿವೇದಿಸಿದೆ ನಿನಗೆ ನನ್ನ ಪಾಪವನು I ಮರೆಮಾಡಲಿಲ್ಲ ನಿನ್ನಿಂದ ನನ್ನ ದ್ರೋಹವನು II “ಪ್ರಭು ಮುಂದೆ ನನ್ನ ತಪ್ಪುಗಳನ್ನೊಪ್ಪಿಕೊಳ್ವೆ” ಎಂದೆನು I ಆಗ ನೀ ಪರಿಹರಿಸಿದೆ ನನ್ನ ಪಾಪದೋಷವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 [ಹೀಗಿರುವಲ್ಲಿ] ಯೆಹೋವನ ಸನ್ನಿಧಿಯಲ್ಲಿ ನನ್ನ ದ್ರೋಹವನ್ನು ಒಪ್ಪಿಕೊಳ್ಳುವೆನು ಅಂದುಕೊಂಡು ನನ್ನ ಪಾಪವನ್ನು ಮರೆಮಾಡದೆ ನಿನಗೆ ನನ್ನ ದೋಷವನ್ನು ತಿಳಿಸಿದೆನು. ನೀನು ನನ್ನ ಅಪರಾಧಪಾಪಗಳನ್ನು ಪರಿಹರಿಸಿಬಿಟ್ಟಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಗ ನಾನು ನನ್ನ ಪಾಪಗಳನ್ನೆಲ್ಲ ಯೆಹೋವನಿಗೆ ಅರಿಕೆಮಾಡಲು ನಿರ್ಧರಿಸಿದೆನು. ಯೆಹೋವನೇ, ನಾನು ನನ್ನ ಪಾಪಗಳನ್ನು ಅರಿಕೆಮಾಡಿಕೊಂಡಾಗ, ನನ್ನ ಯಾವ ದೋಷವನ್ನೂ ನಿನಗೆ ಮರೆಮಾಡಲಿಲ್ಲ. ನೀನು ನನ್ನ ಪಾಪಗಳನ್ನು ಕ್ಷಮಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 32:5
37 ತಿಳಿವುಗಳ ಹೋಲಿಕೆ  

ತನ್ನ ಪಾಪಗಳನ್ನು ಮುಚ್ಚಿಕೊಳ್ಳುವವನಿಗೆ ಏಳಿಗೆ ಆಗುವುದಿಲ್ಲ. ಆದರೆ ಪಾಪಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರಕುವುದು.


ಆಗ ದಾವೀದನು ನಾತಾನನಿಗೆ, “ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದೇನೆ,” ಎಂದನು. ನಾತಾನನು ದಾವೀದನಿಗೆ, “ನೀನು ಸಾಯದ ಹಾಗೆ ಯೆಹೋವ ದೇವರು ನಿನ್ನ ಪಾಪವನ್ನು ಪರಿಹರಿಸಿದರು.


ನನ್ನ ಅಕ್ರಮವನ್ನು ಅರಿಕೆ ಮಾಡುವೆನು; ನನ್ನ ಪಾಪಕ್ಕೋಸ್ಕರ ದುಃಖಪಡುವೆನು.


ಅವರು ಕರೆಯುವುದಕ್ಕಿಂತ ಮುಂಚೆ ನಾನು ಉತ್ತರಕೊಡುವೆನು. ಅವರು ಇನ್ನೂ ಮಾತನಾಡುತ್ತಿರುವಾಗಲೇ ನಾನು ಕೇಳುವೆನು.


ಬನ್ನಿರಿ, ನಾವು ಯೆಹೋವ ದೇವರ ಕಡೆಗೆ ತಿರುಗಿಕೊಳ್ಳೋಣ. ಅವರು ನಮ್ಮನ್ನು ಗಾಯಗೊಳಿಸಿದ್ದಾರೆ, ಅವರೇ ನಮ್ಮನ್ನು ಸ್ವಸ್ಥ ಮಾಡುವರು. ಅವರು ಹೊಡೆದಿದ್ದಾನೆ, ಅವರೇ ನಮ್ಮನ್ನು ಕಟ್ಟುವರು.


ಅವನು ಜನರ ಮುಂದೆ ಹಾಡುತ್ತಾ ಹೀಗೆ ಹೇಳುವನು: ‘ನಾನು ಪಾಪಮಾಡಿದೆ, ನ್ಯಾಯವನ್ನು ಬಿಟ್ಟು ನಡೆದೆ. ಆದರೂ ದೇವರು ನನ್ನ ಪಾಪಕ್ಕೆ ತಕ್ಕಂತೆ ದಂಡಿಸಲಿಲ್ಲ. ದೇವರು ಮುಯ್ಯಿತೀರಿಸಲಿಲ್ಲ,


ದಾವೀದನು ಜನರನ್ನು ಲೆಕ್ಕಿಸಿದ ತರುವಾಯ ಅವನ ಮನಸ್ಸಾಕ್ಷಿ ಹಂಗಿಸತೊಡಗಿತು. ಆದ್ದರಿಂದ ದಾವೀದನು ಯೆಹೋವ ದೇವರಿಗೆ, “ನಾನು ಈ ಕಾರ್ಯವನ್ನು ಮಾಡಿದ್ದರಿಂದ ಮಹಾಪಾಪ ಮಾಡಿದೆನು. ಯೆಹೋವ ದೇವರೇ, ದಯಮಾಡಿ ನಿಮ್ಮ ಸೇವಕನ ಅಕ್ರಮವನ್ನು ಪರಿಹರಿಸಿರಿ; ಏಕೆಂದರೆ ನಾನು ಇದರಲ್ಲಿ ಬಹಳ ಬುದ್ಧಿಹೀನನಾಗಿ ನಡೆದೆನು,” ಎಂದನು.


ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ, ಅವರು ನಮ್ಮ ಅತಿಕ್ರಮಗಳನ್ನು ನಮ್ಮಿಂದ ಅಷ್ಟು ದೂರ ಮಾಡಿದ್ದಾರೆ.


ಅವರ ಕೋಪವು ಕ್ಷಣಮಾತ್ರವೇ; ಆದರೆ ಅವರ ದಯೆಯು ಜೀವಮಾನವೆಲ್ಲಾ ಇರುತ್ತದೆ; ರಾತ್ರಿಯಲ್ಲಿ ದುಃಖ ಬಂದಿದ್ದರೂ; ಬೆಳಿಗ್ಗೆ ಆನಂದವು ಬರುವುದು.


ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.


ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.


ದೇವರು ನಿಮ್ಮ ಪಾಪಗಳನ್ನೆಲ್ಲಾ ಕ್ಷಮಿಸುತ್ತಾರೆ. ನಿಮ್ಮ ರೋಗಗಳನ್ನೆಲ್ಲಾ ವಾಸಿಮಾಡುತ್ತಾರೆ.


ಆದರೆ ನೀವು ಯೆಹೋವ ದೇವರೇ, ಅನುಕಂಪವೂ ದಯೆಯೂ ಉಳ್ಳ ದೇವರು ಮತ್ತು ದೀರ್ಘಶಾಂತರೂ ಪ್ರೀತಿಯಲ್ಲಿ ಸಮೃದ್ಧಿವಂತನೂ ಸತ್ಯತೆಯುಳ್ಳವರೂ ಆಗಿದ್ದೀರಿ.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ನೀನು ಯೆಹೋವ ದೇವರ ದೃಷ್ಟಿಗೆ ಈ ಕೆಟ್ಟ ಕಾರ್ಯವನ್ನು ಮಾಡುವಂತೆ ಅವರ ವಾಕ್ಯವನ್ನು ತಿರಸ್ಕರಿಸಿದ್ದೇನು? ನೀನು ಹಿತ್ತಿಯನಾದ ಊರೀಯನನ್ನು ಖಡ್ಗದಿಂದ ಹೊಡೆದು ಹಾಕಿ, ಅವನ ಹೆಂಡತಿಯನ್ನು ನಿನ್ನ ಹೆಂಡತಿಯಾಗಿ ತೆಗೆದುಕೊಂಡೆ. ಇದಲ್ಲದೆ ಅವನನ್ನು ಅಮ್ಮೋನಿಯರ ಖಡ್ಗದಿಂದ ಕೊಂದು ಹಾಕಿಸಿದೆ.


ಆಗ ಯೆಹೋಶುವನು ಆಕಾನನಿಗೆ, “ನನ್ನ ಮಗನೇ, ನೀನು ಈಗ ಇಸ್ರಾಯೇಲಿನ ದೇವರಾದ ಯೆಹೋವ ದೇವರನ್ನು ಘನಪಡಿಸಿ, ಅವರಿಗೆ ಸ್ತೋತ್ರ ಸಲ್ಲಿಸು. ಏನು ಮಾಡಿದೆಯೋ ಅದನ್ನು ನನಗೆ ತಿಳಿಸು, ನನಗೆ ಮರೆಮಾಡಬೇಡ,” ಎಂದನು.


ನಿನ್ನ ದೇವರಾದ ಯೆಹೋವ ದೇವರಿಗೆ ವಿರೋಧವಾಗಿ ದ್ರೋಹ ಮಾಡಿ, ಒಂದೊಂದು ಹಸುರು ಮರದ ಕೆಳಗೆ ನಿನ್ನ ಮಾರ್ಗಗಳನ್ನು ಅನ್ಯ ದೇವರುಗಳಿಗೆ ಚದರಿಸಿ, ನನ್ನ ಶಬ್ದಕ್ಕೆ ಕಿವಿಗೊಡಲಿಲ್ಲವೆಂಬ ನಿನ್ನ ಅಕ್ರಮವನ್ನು ಮಾತ್ರ ಅರಿಕೆ ಮಾಡು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಆದರೂ ನೀನು, ‘ನಾನು ನಿರಪರಾಧಿಯಾಗಿರುವ ಕಾರಣ ನಿಶ್ಚಯವಾಗಿ ದೇವರ ಕೋಪವು ನನ್ನನ್ನು ಬಿಟ್ಟು ತಿರುಗುವುದು,’ ಎಂದು ಹೇಳುತ್ತೀ. ನೀನು, ‘ನಾನು ಪಾಪಮಾಡಲಿಲ್ಲ’ ಎಂದು ಹೇಳುವುದರಿಂದ ಇಗೋ, ನಾನು ನಿನಗೆ ನ್ಯಾಯತೀರಿಸುವೆನು.


“ಇದಲ್ಲದೆ ನೀನು, ‘ನಾನು ಅಶುದ್ಧನಲ್ಲ, ಬಾಳನನ್ನು ಹಿಂಬಾಲಿಸಲಿಲ್ಲ,’ ಎಂದು ಹೇಳುವುದು ಹೇಗೆ? ತಗ್ಗಿನಲ್ಲಿ ನಿನ್ನ ಮಾರ್ಗವನ್ನು ನೋಡು. ನೀನು ಮಾಡಿದ್ದನ್ನು ತಿಳಿದುಕೋ. ನೀನು ತೀವ್ರವಾಗಿ ಸಂಚಾರ ಮಾಡುವ ಹೆಣ್ಣು ಒಂಟೆಯೇ.


“ಜಾರಸ್ತ್ರೀಯ ನಡತೆಯು ಹೀಗಿದೆ: ಅವಳು ತಿಂದು, ತನ್ನ ಬಾಯನ್ನು ಒರೆಸಿಕೊಂಡು ‘ನಾನು ಯಾವುದೇ ತಪ್ಪು ಮಾಡಿಲ್ಲ,’ ಎಂದು ಹೇಳುತ್ತಾಳೆ.


“ಮನುಷ್ಯನು ದೇವರಿಂದ ಕದ್ದುಕೊಳ್ಳಲು ಸಾಧ್ಯವೇ? ಆದರೂ ನೀವು ನನ್ನಿಂದ ಕಳ್ಳತನ ಮಾಡಿದ್ದೀರಿ. “ಆದರೆ ನೀವು, ‘ಯಾವುದರಲ್ಲಿ ನಿನ್ನದನ್ನು ಕಳ್ಳತನ ಮಾಡಿದ್ದೇವೆ?’ ಎಂದು ಕೇಳುತ್ತೀರಿ. “ದಶಮಭಾಗ ಮತ್ತು ಅರ್ಪಣೆಗಳಲ್ಲಿಯೇ!


ನಾನು ಹೃದಯದಲ್ಲಿ ನನ್ನ ಅಪರಾಧ ಪ್ರಜ್ಞೆಯನ್ನು ಅಡಗಿಸಿ, ಮಾನವರಂತೆ ನನ್ನ ದ್ರೋಹವನ್ನು ಮುಚ್ಚಿಕೊಳ್ಳಲಿಲ್ಲ.


ಯೇಸು ಅವರಿಗೆ, “ನೀವು ಮನುಷ್ಯರ ಮುಂದೆ ನೀತಿಕರಿಸಿಕೊಳ್ಳುವವರು, ಆದರೆ ದೇವರು ನಿಮ್ಮ ಹೃದಯಗಳನ್ನು ತಿಳಿದಿದ್ದಾರೆ. ಮನುಷ್ಯರಲ್ಲಿ ಶ್ರೇಷ್ಠವೆಂದು ಎಣಿಸಿಕೊಳ್ಳುವಂಥದ್ದು ದೇವರ ದೃಷ್ಟಿಯಲ್ಲಿ ಅದು ಅಸಹ್ಯವಾಗಿದೆ.


ಯೆಹೋವ ದೇವರು ಮುಂದುವರೆಸಿ, ‘ಎಫ್ರಾಯೀಮನು ನನಗೆ ಪ್ರಿಯ ಪುತ್ರನಲ್ಲವೇ? ಅವನು ನನಗೆ ಹರ್ಷಗೊಂಡಿರುವ ನನ್ನ ಮಗುವಲ್ಲವೋ? ನಾನು ಅವನಿಗೆ ವಿರೋಧವಾಗಿ ಆಗಾಗ ಮಾತಾಡಿದ್ದರೂ, ಅವನನ್ನು ಇನ್ನು ಬಹಳವಾಗಿ ಜ್ಞಾಪಕ ಮಾಡುತ್ತೇನೆ. ಆದ್ದರಿಂದ ಅವನಿಗೋಸ್ಕರ ನನ್ನ ಹೃದಯ ಮರುಗುತ್ತದಲ್ಲಾ ಅವನನ್ನು ಕನಿಕರಿಸುವೆನು,’ ” ಎಂದು ಯೆಹೋವ ದೇವರು ಹೇಳುತ್ತಾರೆ.


ಅವನು ಇವುಗಳೊಂದರಲ್ಲಿ ಅಪರಾಧಿಯಾಗಿದ್ದು, ತಾನು ಅದರಲ್ಲಿ ಪಾಪಮಾಡಿದ್ದೇನೆಂದು ಅರಿಕೆ ಮಾಡುವುದಾದರೆ,


ದಾವೀದನು ಜನರನ್ನು ಹೊಡೆಯುವ ದೂತನನ್ನು ನೋಡಿದಾಗ, ಅವನು ಯೆಹೋವ ದೇವರಿಗೆ, “ಇಗೋ, ನಾನೇ ಪಾಪಮಾಡಿದೆನು. ಕುರುಬನಂತಿರುವ ನಾನೇ ಕೆಟ್ಟದ್ದನ್ನು ಮಾಡಿದೆನು. ಆದರೆ ಕುರಿಗಳಂತಿರುವ ಇವರು ಮಾಡಿದ್ದೇನು? ನಿಮ್ಮ ಹಸ್ತವು ನನಗೆ ವಿರೋಧವಾಗಿಯೂ ನನ್ನ ಕುಟುಂಬದ ವಿರೋಧವಾಗಿಯೂ ಇರಲಿ ಎಂದು ನಾನು ಬೇಡುತ್ತೇನೆ,” ಎಂದನು.


ನಿಮ್ಮ ಜನರು ನಿಮಗೆ ವಿರೋಧವಾಗಿ ಮಾಡಿದ ಪಾಪಗಳನ್ನೂ, ಅವರ ಸಮಸ್ತ ದ್ರೋಹಗಳನ್ನೂ ಕ್ಷಮಿಸಿರಿ; ಅವರನ್ನು ಸೆರೆಯಾಗಿ ಒಯ್ಯುವವರು ಅವರನ್ನು ಕರುಣಿಸುವಂತೆ ನೀವು ಸಹ ಅವರನ್ನು ಕರುಣಿಸಿರಿ.


ನಿಮ್ಮ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಒಬ್ಬ ಮನುಷ್ಯನಾದರೂ ತಾನು ಅನುಭವಿಸುತ್ತಿರುವ ಉಪದ್ರವ ದುಃಖಗಳ ನಿಮಿತ್ತವಾಗಿ ಈ ಮಂದಿರದ ಕಡೆಗೆ ತನ್ನ ಕೈಗಳನ್ನು ಚಾಚಿ, ಯಾವ ಪ್ರಾರ್ಥನೆಯನ್ನಾದರೂ, ವಿಜ್ಞಾಪನೆಯನ್ನಾದರೂ ಮಾಡಿದರೆ,


ಆದ್ದರಿಂದ ನೀವು ನಿಮ್ಮ ಪಿತೃಗಳ ದೇವರಾಗಿರುವ ಯೆಹೋವ ದೇವರ ಮುಂದೆ ನಿಮ್ಮ ಪಾಪಗಳನ್ನು ಅರಿಕೆಮಾಡಿ, ಅವರ ಚಿತ್ತದ ಪ್ರಕಾರಮಾಡಿ, ಈ ದೇಶದ ಜನರಿಂದಲೂ, ಅನ್ಯ ಸ್ತ್ರೀಯರಿಂದಲೂ ನಿಮ್ಮನ್ನು ಪ್ರತ್ಯೇಕಿಸಿಕೊಳ್ಳಿರಿ,” ಎಂದನು.


ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.


ನನ್ನ ಬಾಧೆಯನ್ನೂ ವ್ಯಥೆಯನ್ನೂ ನೋಡಿರಿ; ನನ್ನ ಪಾಪಗಳನ್ನೆಲ್ಲಾ ತೆಗೆದುಹಾಕಿರಿ.


ನನ್ನ ಶತ್ರುಗಳು ಬಲಗೊಂಡಿದ್ದಾರೆ. ನನ್ನನ್ನು ವಿನಾಕಾರಣವಾಗಿ ದ್ವೇಷಿಸುವವರು ಹೆಚ್ಚಿದ್ದಾರೆ.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು