Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:12 - ಕನ್ನಡ ಸಮಕಾಲಿಕ ಅನುವಾದ

12 ನಿಮ್ಮಲ್ಲಿ ಜೀವನವನ್ನು ಪ್ರೀತಿಸುವವನು ಮತ್ತು ಬಹಳ ದಿನಗಳವರೆಗೆ ಬದುಕಬೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ದೀರ್ಘಾಯುಷ್ಯವು ಬೇಕೋ? ಬಹುದಿನ ಬದುಕಿ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ದೀರ್ಘಾಯುಷ್ಯವು ಬೇಕೋ? ಬಹುದಿವಸ ಬದುಕಿ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದೀರ್ಘಾಯುಷ್ಯವು ಬೇಕೋ? ಬಹುಕಾಲ ಸುಖವನ್ನು ಅನುಭವಿಸಬೇಕೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:12
16 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವ ದೇವರನ್ನು ಪ್ರೀತಿಸಿ, ಅವರ ಮಾತನ್ನು ಕೇಳಿ, ಅವರನ್ನೇ ಹೊಂದಿಕೊಂಡಿರಿ. ಯೆಹೋವ ದೇವರು ನಿಮ್ಮ ಪಿತೃಗಳಾದ ಅಬ್ರಹಾಮನಿಗೂ, ಇಸಾಕನಿಗೂ, ಯಾಕೋಬನಿಗೂ ಕೊಡುತ್ತೇನೆಂದು ಪ್ರಮಾಣ ಮಾಡಿದ ಭೂಮಿಯಲ್ಲಿ ನೀವು ಬಹುಕಾಲ ವಾಸಮಾಡುವಿರಿ.


ನೀವೂ, ನಿಮ್ಮ ಮಕ್ಕಳೂ, ನಿಮ್ಮ ಮೊಮ್ಮಕ್ಕಳೂ ತಮ್ಮ ಜೀವನದ ದಿವಸಗಳಲ್ಲೆಲ್ಲಾ ನಿಮ್ಮ ದೇವರಾದ ಯೆಹೋವ ದೇವರಿಗೆ ಭಯಪಟ್ಟು, ಕೈಗೊಳ್ಳುವ ಹಾಗೆಯೂ, ನಿಮ್ಮ ದಿವಸಗಳು ಬಹಳವಾಗುವ ಹಾಗೆಯೂ ನಾನು ನಿಮಗೆ ಕೊಡುವ ದೇವರ ಎಲ್ಲಾ ತೀರ್ಪುಗಳನ್ನು ಮತ್ತು ಆಜ್ಞೆಗಳನ್ನು ಅನುಸರಿಸಬೇಕು.


ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.


ದೀರ್ಘಾಯುಷ್ಯದಿಂದ ಆತನನ್ನು ತೃಪ್ತಿಪಡಿಸಿ, ನನ್ನ ರಕ್ಷಣೆಯನ್ನು ಆತನಿಗೆ ತೋರಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.


ಯೆಹೋವ ದೇವರೇ, “ನಮಗೆ ಒಳ್ಳೆಯದನ್ನು ಮಾಡುವವರು ಯಾರು?” ಎಂದು ಕೇಳುವವರು ಅನೇಕರಿದ್ದಾರೆ. ನಿಮ್ಮ ಮುಖಪ್ರಕಾಶವು ನಮ್ಮ ಮೇಲೆ ಬೆಳಗಲಿ.


ಓ ದೇವರೇ, ನನ್ನ ಜೀವವು ಕೇವಲ ಉಸಿರೆಂದು ನೆನಪುಮಾಡಿಕೊಳ್ಳಿರಿ. ನನ್ನ ಕಣ್ಣು ತಿರುಗಿ ಸಂತೋಷವನ್ನು ಕಾಣುವುದಿಲ್ಲ.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಆಕಾಶದ ಕೆಳಗೆ ಮನುಷ್ಯರು ಅಲ್ಪಾಯುಷ್ಯದಲ್ಲಿ ಏನು ಮಾಡುವುದು ಹಿತ ಎಂದು ನಾನು ತಿಳಿದುಕೊಳ್ಳಲು ಬಯಸಿದೆ. ನನ್ನ ಮನಸ್ಸು ಇನ್ನೂ ಜ್ಞಾನದಿಂದಿರುವಾಗಲೇ ದ್ರಾಕ್ಷಾರಸದಿಂದ ಸಂತೋಷ ಪಡೋಣ, ಮೂರ್ಖತನವನ್ನು ಅಪ್ಪಿಕೊಳ್ಳೋಣ ಎಂದುಕೊಂಡೆ.


ಜೀವವನ್ನು ಅರಸನು ನಿಮ್ಮಿಂದ ಬೇಡಲು, ನೀವು ಆತನಿಗೆ ಯುಗಯುಗಾಂತರಗಳಿಗೂ ದೀರ್ಘಾಯುಷ್ಯವನ್ನು ಕೊಟ್ಟಿದ್ದೀರಿ.


“ಯಾಕೋಬನ ಪುತ್ರರೇ, ನೀವು ಒಟ್ಟಿಗೆ ಕೂಡಿಕೊಂಡು ಕೇಳಿರಿ, ನಿಮ್ಮ ತಂದೆ ಇಸ್ರಾಯೇಲನ ಮಾತಿಗೆ ಕಿವಿಗೊಡಿರಿ.


ಇದಲ್ಲದೆ ನಾನು ನಿಮಗೋಸ್ಕರ ಪ್ರಾರ್ಥನೆ ಮಾಡದೆ, ಯೆಹೋವ ದೇವರಿಗೆ ವಿರೋಧವಾಗಿ ಮಾಡುವ ಪಾಪವು ನನಗೆ ದೂರವಾಗಿರಲಿ. ಉತ್ತಮವಾದ, ಸರಿಯಾದ ಮಾರ್ಗವನ್ನು ನಿಮಗೆ ಬೋಧಿಸುವೆನು.


ಇಲ್ಲವಾದರೆ ನಾನು ಹೇಳುವುದನ್ನು ಕೇಳು; ಮೌನವಾಗಿರು, ಈಗ ನಾನು ನಿನಗೆ ಜ್ಞಾನವನ್ನು ಬೋಧಿಸುತ್ತೇನೆ.”


ಮಗನೇ, ನನ್ನ ಮಾತುಗಳಿಗೆ ಗಮನಕೊಡು; ನನ್ನ ನುಡಿಗಳಿಗೆ ಕಿವಿಗೊಡು.


ಆದ್ದರಿಂದ ನನ್ನ ಮಕ್ಕಳೇ, ನನಗೆ ಕಿವಿಗೊಡಿರಿ, ನನ್ನ ಮಾತುಗಳನ್ನು ಆಲಿಸಿರಿ.


ಯೆಹೋವ ದೇವರ ಭಯವೇ ಜ್ಞಾನಕ್ಕೆ ಮೂಲವು. ಪರಿಶುದ್ಧರ ಪರಿಜ್ಞಾನವೇ ತಿಳುವಳಿಕೆಯಾಗಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು