Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:21 - ಕನ್ನಡ ಸಮಕಾಲಿಕ ಅನುವಾದ

21 ಕೇಡು ದುಷ್ಟನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಶಿಕ್ಷೆಗೆ ಒಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವುದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ದುರ್ಜನರೆಲ್ಲರೂ ತುತ್ತಾಗುವರು ತಮ್ಮ ಕೇಡಿಗೆ I ಸಜ್ಜನರ ಶತ್ರುಗಳು ಗುರಿಯಾಗುವರು ದಂಡನೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ದುಷ್ಟನ ಕೆಡುಕು ಅವನನ್ನೇ ಕೊಲ್ಲುವದು; ನೀತಿವಂತನನ್ನು ದ್ವೇಷಿಸುವವರು ಅಪರಾಧಿಗಳೆಂದು ಎಣಿಸಲ್ಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದುಷ್ಟರಾದರೋ ಆಪತ್ತುಗಳಿಂದ ಸಾಯುವರು. ನೀತಿವಂತರ ವೈರಿಗಳು ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:21
22 ತಿಳಿವುಗಳ ಹೋಲಿಕೆ  

ವೈರಿಯ ಅಪರಾಧವು ಅವರ ಮೇಲೆಯೇ ತಿರುಗಿ ಬೀಳಲಿ; ಅವರ ಕೇಡಿನಲ್ಲಿ ಅವರನ್ನು ಸಂಹರಿಸುವನು; ನಮ್ಮ ದೇವರಾದ ಯೆಹೋವ ದೇವರು ಅವರನ್ನು ಸಂಹರಿಸಿ ಬಿಡುವನು.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ಏಕೆಂದರೆ ನೀತಿವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡು ಬಂದಾಗ ಬೀಳುವನು.


ಅವನ ಮುಂದೆ ಅವನ ವೈರಿಗಳನ್ನು ಓಡಿಸಿಬಿಡುವೆನು; ಅವನ ವಿರೋಧಿಗಳನ್ನು ದಂಡಿಸುವೆನು.


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ನಿಮ್ಮನ್ನು ಸಂಕಟ ಪಡಿಸುವವರಿಗೆ ದೇವರು ಪ್ರತಿಯಾಗಿ ಸಂಕಟವನ್ನೂ ಮತ್ತು


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಆಹಾ! ಆಹಾ!” ಎಂದು ನನ್ನನ್ನು ಹಾಸ್ಯಮಾಡುವವರು ತಮ್ಮ ನಾಚಿಕೆಯಿಂದಲೇ ವಿಸ್ಮಯಗೊಳ್ಳಲಿ.


ಆದಕಾರಣ ಅವನು ತನ್ನ ಆಯುಧಗಳನ್ನು ಹೊರುವವನಿಗೆ, “ಈ ಸುನ್ನತಿ ಇಲ್ಲದವರು ಬಂದು ನನ್ನನ್ನು ಅವಮಾನ ಮಾಡದ ಹಾಗೆ ನೀನು ನಿನ್ನ ಖಡ್ಗವನ್ನು ಹಿರಿದು, ನನ್ನನ್ನು ತಿವಿ,” ಎಂದನು. ಆದರೆ ಅವನ ಆಯುಧ ಹೊರುವವನು ಬಹು ಭಯಪಟ್ಟದ್ದರಿಂದ ಹಾಗೆ ಮಾಡದೆ ಹೋದನು. ಆಗ ಸೌಲನು ತನ್ನ ಖಡ್ಗವನ್ನು ತೆಗೆದುಕೊಂಡು ಅದರ ಮೇಲೆ ಬಿದ್ದನು.


ಲೋಕವು ನಿಮ್ಮನ್ನು ದ್ವೇಷಿಸಲಾರದು. ಲೋಕದ ಕ್ರಿಯೆಗಳು ಕೆಟ್ಟವುಗಳಾಗಿವೆ ಎಂದು ಅದರ ವಿಷಯದಲ್ಲಿ ನಾನು ಸಾಕ್ಷಿ ಹೇಳುವುದರಿಂದ, ಅದು ನನ್ನನ್ನು ದ್ವೇಷಿಸುತ್ತದೆ.


ಇಸ್ರಾಯೇಲಿನ ಅರಸನ ಶವವನ್ನು ಸಮಾರ್ಯಕ್ಕೆ ತಂದು ಅಲ್ಲಿ ಸಮಾಧಿಮಾಡಿದರು.


ಆಗ ಇಸ್ರಾಯೇಲಿನ ಅರಸನು ಯೆಹೋಷಾಫಾಟನಿಗೆ, “ನಾವು ಯೆಹೋವ ದೇವರನ್ನು ವಿಚಾರಿಸುವ ಹಾಗೆ ಇಮ್ಲನ ಮಗ ಮೀಕಾಯನೆಂಬ ಇನ್ನೊಬ್ಬನಿದ್ದಾನೆ. ಆದರೆ ನಾನು ಅವನನ್ನು ದ್ವೇಷ ಮಾಡುತ್ತೇನೆ. ಏಕೆಂದರೆ ಅವನು ನನ್ನನ್ನು ಕುರಿತು ಒಳ್ಳೆಯದನ್ನಲ್ಲ ಯಾವಾಗಲೂ ಕೆಟ್ಟದ್ದನ್ನು ಪ್ರವಾದಿಸುತ್ತಾನೆ,” ಎಂದನು. ಅದಕ್ಕೆ ಯೆಹೋಷಾಫಾಟನು, “ಅರಸನು ಹಾಗೆ ಅನ್ನದಿರಲಿ,” ಎಂದನು.


ನಿನ್ನ ದೇವರಾದ ಯೆಹೋವ ದೇವರ ಹೆಸರನ್ನು ದುರುಪಯೋಗಮಾಡಬಾರದು. ಏಕೆಂದರೆ ಯೆಹೋವ ದೇವರು ತಮ್ಮ ಹೆಸರನ್ನು ದುರುಪಯೋಗಮಾಡುವವರನ್ನು ಶಿಕ್ಷಿಸದೆ ಬಿಡುವುದಿಲ್ಲ.


“ಒಂದೇ ಮನೆಯಲ್ಲಿ ಅದನ್ನು ತಿನ್ನಬೇಕು. ಆ ಮಾಂಸದಲ್ಲಿ ಸ್ವಲ್ಪ ಅಂಶವನ್ನಾದರೂ ಮನೆಯ ಹೊರಗೆ ತೆಗೆದುಕೊಂಡು ಹೋಗಬಾರದು. ಪಶುವಿನ ಎಲುಬುಗಳಲ್ಲಿ ಒಂದನ್ನಾದರೂ ಮುರಿಯಬಾರದು.


ಅವರು ಬಗ್ಗಿ ಬೀಳುತ್ತಾರೆ, ನಾವಾದರೋ ಎದ್ದು ಸ್ಥಿರವಾಗಿ ನಿಲ್ಲುವೆವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು