Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:4 - ಕನ್ನಡ ಸಮಕಾಲಿಕ ಅನುವಾದ

4 ನಾನು ಯೆಹೋವ ದೇವರನ್ನು ಹುಡುಕಿದೆನು; ಆಗ ಅವರು ನನಗೆ ಉತ್ತರಕೊಟ್ಟು, ಸಕಲ ಭೀತಿಗಳಿಂದ ನನ್ನನ್ನು ಬಿಡಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು, ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬೇಡಿಕೊಳ್ಳಲು ಕೊಟ್ಟನಾತ ಸದುತ್ತರವನು I ಭಯಭೀತಿಯಿಂದೆನ್ನನು ಮುಕ್ತನಾಗಿಸಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳಲು ಆತನು ಸದುತ್ತರವನ್ನು ಕೊಟ್ಟು ಎಲ್ಲಾ ಭೀತಿಯಿಂದ ನನ್ನನ್ನು ತಪ್ಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಯೆಹೋವನ ಸನ್ನಿಧಿಯಲ್ಲಿ ಮೊರೆಯಿಟ್ಟಾಗ ಆತನು ನನಗೆ ಸಹಾಯಮಾಡಿದನು. ನನ್ನನ್ನು ಎಲ್ಲಾ ಭೀತಿಗಳಿಂದ ಬಿಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:4
20 ತಿಳಿವುಗಳ ಹೋಲಿಕೆ  

ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


“ಬೇಡಿಕೊಳ್ಳಿರಿ, ನಿಮಗೆ ಕೊಡಲಾಗುವುದು; ಹುಡುಕಿರಿ, ನಿಮಗೆ ಸಿಗುವುದು; ತಟ್ಟಿರಿ, ನಿಮಗೆ ಬಾಗಿಲು ತೆರೆಯಲಾಗುವುದು.


ನಾನು ಭಯಪಡುವ ಸಮಯದಲ್ಲಿ ನಿಮ್ಮಲ್ಲಿ ಭರವಸೆ ಇಡುವೆನು.


ದೇವರು ನಮಗೆ ಕೊಟ್ಟಿರುವ ಆತ್ಮವು ಶಕ್ತಿ, ಪ್ರೀತಿ ಹಾಗೂ ಸ್ವಶಿಸ್ತು ಆತ್ಮವೇ ಹೊರತು ಭಯದ ಆತ್ಮವಲ್ಲ.


ಅವನು ಹೀಗೆ ಹೇಳಿದನು: “ನಾನು ನನ್ನ ವ್ಯಥೆಯಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟೆನು. ಅವರು ನನ್ನ ಕೂಗನ್ನು ಕೇಳಿದರು. ಪಾತಾಳದ ಗರ್ಭದೊಳಗಿಂದ ಸಹಾಯಕ್ಕಾಗಿ ನಾನು ಕೂಗಿದೆನು, ಆಗ ನನ್ನ ಕರೆಯನ್ನು ನೀವು ಕೇಳಿದಿರಿ.


ನಿಜವಾಗಿಯೂ ದೇವರೇ ನನಗೆ ರಕ್ಷಣೆಯು, ನಾನು ಭರವಸವಿಡುವೆನು ಮತ್ತು ಭಯಪಡೆನು. ಕರ್ತರಾದ ಯೆಹೋವ ದೇವರೇ ನನ್ನ ಬಲವೂ ನನ್ನ ಕೀರ್ತನೆಯೂ, ಅವರೇ ನನಗೆ ರಕ್ಷಣೆಯೂ ಆಗಿದ್ದಾರೆ.”


“ನಾನು ನಿಮ್ಮ ಕಣ್ಣುಗಳ ಎದುರಿನಿಂದ ತೆಗೆದು ಹಾಕಲಾಗಿದ್ದೇನೆ” ಎಂದು ನನ್ನ ಗಾಬರಿಯಲ್ಲಿ ಹೇಳಿದೆನು; ಆದರೂ ನಾನು ಸಹಾಯಕ್ಕಾಗಿ ನಿಮಗೆ ಮೊರೆಯಿಡಲು ನೀವು ಕರುಣೆಗಾಗಿ ಕೂಗಿದ್ದನ್ನು ಕೇಳಿದ್ದೀರಿ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


“ಕೇಳಿಕೊಳ್ಳಿರಿ ನಿಮಗೆ ಕೊಡಲಾಗುವುದು; ಹುಡುಕಿರಿ ನಿಮಗೆ ಸಿಗುವುದು; ತಟ್ಟಿರಿ ನಿಮಗೆ ಬಾಗಿಲು ತೆರೆಯಲಾಗುವುದು.


ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.


ಆದ್ದರಿಂದ ಭೂಮಿಯು ಕಂಪಿಸಿದರೂ ಬೆಟ್ಟಗಳು ಸಮುದ್ರದಲ್ಲಿ ಮುಳುಗಿದರೂ,


ಅವನು ಆಸನನ್ನು ಎದುರುಗೊಳ್ಳಲು ಹೊರಟುಬಂದು, ಅವನಿಗೆ, “ಆಸನೇ, ಯೆಹೂದ ಮತ್ತು ಬೆನ್ಯಾಮೀನ್ ಗೋತ್ರದವರೇ, ನನ್ನ ಮಾತನ್ನು ಕೇಳಿರಿ. ನೀವು ಯೆಹೋವ ದೇವರ ಸಂಗಡ ಇರುವವರೆಗೂ, ಅವರು ನಿಮ್ಮ ಸಂಗಡ ಇರುವರು. ನೀವು ಅವರನ್ನು ಹುಡುಕಿದರೆ ಅವರು ನಿಮಗೆ ಸಿಕ್ಕುವರು. ಆದರೆ ನೀವು ಅವರನ್ನು ಬಿಟ್ಟುಬಿಟ್ಟರೆ ಅವರು ನಿಮ್ಮನ್ನು ಬಿಟ್ಟುಬಿಡುವರು


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ನನ್ನ ನೀತಿಯಲ್ಲಿ ಸಂತೋಷಪಡುವವರು ಉತ್ಸಾಹಧ್ವನಿ ಮಾಡಿ, ಆನಂದಪಡಲಿ; “ಹೌದು, ತಮ್ಮ ಸೇವಕನ ಅಭಿವೃದ್ಧಿಯಲ್ಲಿ ಸಂತೋಷಪಡುವ ಯೆಹೋವ ದೇವರು ಮಹಿಮೆಪಡಲಿ,” ಎಂದು ಅವರು ಯಾವಾಗಲೂ ಹೇಳಲಿ.


ನಾನು ಬಡವನೂ ಅಗತ್ಯದಲ್ಲಿರುವವನೂ ಆಗಿದ್ದೇನೆ; ಆದರೂ ಯೆಹೋವ ದೇವರು ನನ್ನ ಹಿತಚಿಂತಕರಾಗಿದ್ದಾರೆ. ನನ್ನ ದೇವರೇ ನೀವೇ ನನ್ನ ಸಹಾಯವೂ ನನ್ನ ವಿಮೋಚಕರೂ ಆಗಿದ್ದೀರಿ, ನೀವು ತಡಮಾಡಬೇಡಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು