Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 34:7 - ಕನ್ನಡ ಸಮಕಾಲಿಕ ಅನುವಾದ

7 ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು, ಆತನ ದೂತನು ದಂಡಿಳಿಸಿ, ಕಾವಲಾಗಿದ್ದು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಭಯಭಕುತಿಯುಳ್ಳವರ ಸುತ್ತಲು ಕಾವಲಿದ್ದು I ಕಾಯುವನು ಪ್ರಭುವಿನ ದೂತನೆ ಬಂದಿಳಿದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೋವನ ಭಯಭಕ್ತಿಯುಳ್ಳವರ ಸುತ್ತಲು ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೋವನ ಭಕ್ತರ ಸುತ್ತಲೂ ಆತನ ದೂತನು ದಂಡಿಳಿಸಿ ಕಾವಲಾಗಿದ್ದು ಕಾಪಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 34:7
14 ತಿಳಿವುಗಳ ಹೋಲಿಕೆ  

ಏಕೆಂದರೆ ನಿನ್ನ ಎಲ್ಲಾ ಮಾರ್ಗಗಳಲ್ಲಿ ನಿನ್ನನ್ನು ಕಾಪಾಡುವುದಕ್ಕೆ ದೇವರು ತಮ್ಮ ದೂತರಿಗೆ ನಿನ್ನ ವಿಷಯವಾಗಿ ಆಜ್ಞಾಪಿಸುವರು.


ನನ್ನ ದೇವರು ತಮ್ಮ ದೂತನನ್ನು ಕಳುಹಿಸಿ, ನನಗೆ ಯಾವ ಹಾನಿಯೂ ಆಗದಂತೆ ಸಿಂಹಗಳ ಬಾಯಿಗಳನ್ನು ಮುಚ್ಚಿಹಾಕಿದ್ದಾರೆ. ಏಕೆಂದರೆ ಅವರ ಮುಂದೆ ನಾನು ಯಥಾರ್ಥನೆಂದು ಗೋಚರವಾಗಿದ್ದೇನೆ. ಅರಸನೇ, ನಿನ್ನ ಮುಂದೆಯೂ ಸಹ ನಾನು ಯಾರಿಗೂ ತಪ್ಪನ್ನು ಮಾಡಲಿಲ್ಲ,” ಎಂದು ಹೇಳಿದನು.


ಈ ದೇವದೂತರೆಲ್ಲರೂ ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲಾದ ಸೇವೆಯ ಆತ್ಮಗಳು ಅಲ್ಲವೇ?


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


ಆಗ ಎಲೀಷನು, “ಯೆಹೋವ ದೇವರೇ, ನೀವು ದಯಮಾಡಿ ಇವನು ಕಾಣುವ ಹಾಗೆ ಇವನ ಕಣ್ಣುಗಳನ್ನು ತೆರೆಯಿರಿ,” ಎಂದು ಪ್ರಾರ್ಥಿಸಿದನು. ಯೆಹೋವ ದೇವರು ಆ ಯುವ ಸೇವಕನ ಕಣ್ಣುಗಳನ್ನು ತೆರೆದಾಗ, ಎಲೀಷನ ಸುತ್ತಲೂ ಬೆಟ್ಟದಲ್ಲಿ ಬೆಂಕಿಯ ರಥಗಳೂ, ಕುದುರೆಗಳೂ ತುಂಬಿರುವುದನ್ನು ಅವನು ಕಂಡನು.


“ಚಿಕ್ಕವರಲ್ಲಿ ಒಬ್ಬನನ್ನಾದರೂ ನೀವು ಹೀನೈಸದಂತೆ ನೋಡಿಕೊಳ್ಳಿರಿ. ಪರಲೋಕದಲ್ಲಿರುವ ಅವರ ದೂತರು ಪರಲೋಕದ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಿದ್ದಾರೆ.


ಹೋಗುತ್ತಾ ಬರುತ್ತಾ ಇರುವವನ ನಿಮಿತ್ತವೂ, ಸೈನ್ಯದ ನಿಮಿತ್ತವೂ ನನ್ನ ಆಲಯದ ಹತ್ತಿರ ಪಾಳೆಯ ಮಾಡುತ್ತೇನೆ. ಇನ್ನು ಮೇಲೆ ಉಪದ್ರವ ಕೊಡುವವನು, ಅವರ ಮೇಲೆ ಹಾದು ಹೋಗುವುದಿಲ್ಲ. ಏಕೆಂದರೆ ಈಗ ನನ್ನ ಕಣ್ಣುಗಳಿಂದ ನೋಡುತ್ತಿದ್ದೇನೆ.


“ಒಂದು ದಿನ ಆ ಭಿಕ್ಷುಕನು ಸತ್ತುಹೋದನು. ದೇವದೂತರು ಅವನನ್ನು ಅಬ್ರಹಾಮನ ಬಳಿಗೆ ತೆಗೆದುಕೊಂಡು ಹೋದರು. ಧನವಂತನು ಸಹ ಸತ್ತುಹೋದನು. ಅವನಿಗೆ ಶವಸಂಸ್ಕಾರವಾಯಿತು.


“ಯಾವ ವಿಧವೆಯನ್ನು, ದಿಕ್ಕಿಲ್ಲದ ಮಗುವನ್ನು ಬಾಧಿಸಬೇಡಿರಿ.


ಇಲ್ಲವೆ ಅವನ ಮೇಲೆ ಬಡ್ಡಿ ಹೊರಿಸಬೇಡ. ನಿಮ್ಮ ನೆರೆಯವನ ಮೇಲಂಗಿಯನ್ನು ಅಡವು ಇಟ್ಟುಕೊಂಡಿದ್ದರೆ, ಸೂರ್ಯನು ಮುಳುಗುವುದರೊಳಗಾಗಿ ಅವನಿಗೆ ಹಿಂದಕ್ಕೆ ಕೊಡಬೇಕು.


ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”


ನಾನು ಕರೆದಾಗ ನೀವು ನನಗೆ ಉತ್ತರಕೊಟ್ಟಿರುವಿರಿ. ನನ್ನ ಪ್ರಾಣಕ್ಕೆ ಬಲವನ್ನು ಕೊಟ್ಟು, ನನ್ನನ್ನು ಬಲಪಡಿಸಿದ್ದೀರಿ.


ನೀವು ನನ್ನ ಹಿಂದೆಯೂ, ಮುಂದೆಯೂ ಆವರಿಸಿಕೊಂಡು, ನಿಮ್ಮ ಕೈಯನ್ನು ನನ್ನ ಮೇಲೆ ಇಟ್ಟಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು