Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 36:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ಹೃದಯದಲ್ಲಿ ದೇವರಿಂದ ಬಂದ ಸಂದೇಶವು ದುಷ್ಟರ ಪಾಪದ ಬಗ್ಗೆ ಹೀಗಿರುತ್ತದೆ: ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವುದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಜಿನುಗುಟ್ಟುತಿಹುದು ಪಾಪವು ದುಷ್ಟನ ಮನದಲಿ I ದೇವ ಭಯವೇ ಇಲ್ಲ ಅವನ ಕಣ್ಣೆದುರಿನಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಪಾಪವು ದುಷ್ಟನ ಮನಸ್ಸಿನೊಳಗೆ ನುಡಿಯುತ್ತಿರುವದರಿಂದ ಅವನ ಕಣ್ಣೆದುರಿಗೆ ದೇವರ ಭಯವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದುಷ್ಟನು ಪಾಪದಿಂದ ಪ್ರಭಾವಿತನಾಗಿ, “ನಾನು ದೇವರಿಗೆ ಭಯಪಡುವುದೂ ಇಲ್ಲ ಆತನನ್ನು ಗೌರವಿಸುವುದೂ ಇಲ್ಲ” ಎಂದುಕೊಳ್ಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 36:1
22 ತಿಳಿವುಗಳ ಹೋಲಿಕೆ  

“ಅವರ ದೃಷ್ಟಿಯಲ್ಲಿ ದೇವರ ಭಯವೇ ಇಲ್ಲ.”


ಪ್ರೀತಿ ಮತ್ತು ಸತ್ಯತೆಗಳಿಂದ ಪಾಪಕ್ಕೆ ಪ್ರಾಯಶ್ಚಿತ್ತವಾಗುತ್ತದೆ. ಯೆಹೋವ ದೇವರ ಭಯದ ಮೂಲಕ ಮನುಷ್ಯರು ಕೆಟ್ಟದ್ದರಿಂದ ತೊಲಗುತ್ತಾರೆ.


ನನ್ನ ಬಲವಾಗಿರುವ ಯೆಹೋವ ದೇವರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ.


ಇದು ಕ್ರಿಸ್ತ ಯೇಸುವಿನ ಪ್ರಕಟನೆ. ಶೀಘ್ರವೇ ಸಂಭವಿಸಲಿಕ್ಕಿರುವ ಸಂಗತಿಗಳನ್ನು ತಮ್ಮ ದಾಸರಿಗೆ ತೋರಿಸುವುದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದರು. ಇದಲ್ಲದೆ ದೇವರು ತಮ್ಮ ದೇವದೂತನನ್ನು ಕಳುಹಿಸಿ, ಅವನ ಮುಖಾಂತರ ಆ ಸಂಗತಿಗಳನ್ನು ತಮ್ಮ ದಾಸನಾದ ಯೋಹಾನನಿಗೆ ತಿಳಿಸಿದರು.


ಕ್ರಿಸ್ತ ಯೇಸುವಿನ ದಾಸನೂ ಯಾಕೋಬನ ಸಹೋದರನೂ ಆಗಿರುವ ಯೂದನು, ತಂದೆಯಾದ ದೇವರಿಗೆ ಪ್ರಿಯರಾದವವರಿಗೂ ಕ್ರಿಸ್ತ ಯೇಸು ಸುರಕ್ಷತೆಯನ್ನೂ ಅವರ ಕರೆಯುವಿಕೆಯನ್ನೂ ಹೊಂದಿದವರಿಗೆ ಬರೆಯುವ ಪತ್ರ:


ಕ್ರಿಸ್ತ ಯೇಸುವಿನ ದಾಸನೂ ಅಪೊಸ್ತಲನೂ ಆಗಿರುವ ಸೀಮೋನ ಪೇತ್ರನು, ನಮ್ಮ ದೇವರ ಮತ್ತು ರಕ್ಷಕ ಆಗಿರುವ ಕ್ರಿಸ್ತ ಯೇಸುವಿನ ನೀತಿಯ ಮೂಲಕ ನಮ್ಮಂತೆಯೇ ಅಮೂಲ್ಯವಾದ ನಂಬಿಕೆಯನ್ನು ಹೊಂದಿದವರಿಗೆ ಬರೆಯುವುದು:


ತಾವು ದೇವರನ್ನು ತಿಳಿದವರೆಂದು ಅವರು ವಾದಿಸುತ್ತಾರೆ. ಆದರೆ ತಮ್ಮ ಕೃತ್ಯಗಳಿಂದ ದೇವರನ್ನೇ ಅಲ್ಲಗಳೆಯುವರಾಗಿದ್ದಾರೆ. ಅವರು ಅಸಹ್ಯರೂ ಅವಿಧೇಯರೂ ಯಾವ ಸತ್ಕಾರ್ಯಗಳನ್ನು ಮಾಡುವುದಕ್ಕೆ ಅಯೋಗ್ಯರಾಗಿದ್ದಾರೆ.


ದೇವರು ಆಯ್ದುಕೊಂಡವರ ನಂಬಿಕೆಗನುಸಾರವೂ ಭಕ್ತಿಗನುಸಾರವಾದ ಸತ್ಯದ ತಿಳುವಳಿಕೆಗನುಸಾರವೂ ದೇವರ ಸೇವಕನೂ ಕ್ರಿಸ್ತ ಯೇಸುವಿನ ಅಪೊಸ್ತಲನೂ ಆಗಿರುವ ಪೌಲನೆಂಬ ನನಗೆ


ಕರ್ತ ಯೇಸುವಿನ ದಾಸನು ಜಗಳವಾಡದೆ ಎಲ್ಲರ ವಿಷಯದಲ್ಲಿ ದಯೆಯುಳ್ಳವನೂ ಬೋಧಿಸುವುದರಲ್ಲಿ ಪ್ರವೀಣನೂ ಸಹನೆಯುಳ್ಳವನೂ ಆಗಿರಬೇಕು.


ಈಗ ನಾವು ಎಲ್ಲಾ ವಿಷಯವನ್ನೂ ಕೇಳಿ ಮುಗಿಯಿತು. ದೇವರಿಗೆ ಭಯಪಡು ಮತ್ತು ದೇವರ ಆಜ್ಞೆಗಳನ್ನು ಪಾಲಿಸು. ಇದೇ ಮನುಷ್ಯನ ಪ್ರಮುಖ ಕರ್ತವ್ಯ.


ಚಿಕ್ಕ ಮಕ್ಕಳಾದರೋ ತಮ್ಮ ಕ್ರಿಯೆಗಳಿಂದಲೇ, ತಾವು ಶುದ್ಧರೋ ಯಥಾರ್ಥರೋ ಎಂಬುದನ್ನು ತೋರ್ಪಡಿಸಿಕೊಳ್ಳುತ್ತಾರೆ.


ಕೆಟ್ಟದ್ದನ್ನು ಹಗೆ ಮಾಡುವುದೇ ಯೆಹೋವ ದೇವರ ಭಯವಾಗಿದೆ; ಗರ್ವ, ಅಹಂಕಾರ, ಕೆಟ್ಟನಡವಳಿಕೆ, ವಕ್ರ ಭಾಷಣಗಳನ್ನು ನಾನು ಹಗೆಮಾಡುತ್ತೇನೆ.


ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು, ನನ್ನ ವೈರಿಗಳೆಲ್ಲರೂ ನಾಶವಾಗಲಿ, ನಾನು ನಿಮ್ಮ ಸೇವಕನಾಗಿದ್ದೇನೆ.


ಯೆಹೋವ ದೇವರನ್ನು ಸ್ತುತಿಸಿರಿ. ಯೆಹೋವ ದೇವರಿಗೆ ಭಯಪಟ್ಟು ಅವರ ಆಜ್ಞೆಗಳಲ್ಲಿ ಬಹಳವಾಗಿ ಸಂತೋಷಿಸುವವರು ಧನ್ಯರು.


ಯೆಹೋವ ದೇವರೇ, ತಲತಲಾಂತರಗಳಲ್ಲಿ ನೀವು ನಮ್ಮ ವಾಸಸ್ಥಾನವಾಗಿದ್ದೀರಿ.


ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು.


ದೇವರಿಗೂ ಕರ್ತ ಆಗಿರುವ ಯೇಸು ಕ್ರಿಸ್ತರಿಗೂ ದಾಸನಾಗಿರುವ ಯಾಕೋಬನು, ವಿವಿಧ ದೇಶಗಳಲ್ಲಿ ಚದರಿರುವ ಇಸ್ರಾಯೇಲರ ಹನ್ನೆರಡು ಗೋತ್ರದವರಿಗೆ ಬರೆಯುವುದು: ನಿಮಗೆ ಶುಭವಾಗಲಿ.


ಅದಕ್ಕೆ ಅಬ್ರಹಾಮನು, “ಈ ಸ್ಥಳದಲ್ಲಿ ಖಂಡಿತವಾಗಿ ದೇವರ ಭಯವು ಇಲ್ಲವೆಂದೂ ನನ್ನ ಹೆಂಡತಿಗಾಗಿ ಅವರು ನನ್ನನ್ನು ಕೊಲ್ಲುವರೆಂದೂ ನಾನು ನೆನಸಿದೆನು.


ಸೌಲನು ತನ್ನ ಸೇವಕರಿಗೆ, “ನೀವು ದಾವೀದನ ಸಂಗಡ ಅಂತರಂಗವಾಗಿ ಮಾತನಾಡಿ, ಇಗೋ, ಅರಸನು ನಿನ್ನ ಮೇಲೆ ಪ್ರೀತಿಯುಳ್ಳವನಾಗಿದ್ದಾನೆ; ಈಗ ನೀನು ಅರಸನಿಗೆ ಅಳಿಯನಾಗೆಂದು, ಹೇಳಿರಿ,” ಎಂದು ಆಜ್ಞಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು