Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 37:25 - ಕನ್ನಡ ಸಮಕಾಲಿಕ ಅನುವಾದ

25 ನಾನು ಬಾಲಕನಾಗಿದ್ದೆನು, ಈಗ ಮುದುಕನಾಗಿದ್ದೇನೆ; ಆದರೆ ನೀತಿವಂತನು ಕೈಬಿಟ್ಟಿರುವುದನ್ನಾಗಲಿ ಅವನ ಸಂತತಿಯು ರೊಟ್ಟಿಗಾಗಿ ಭಿಕ್ಷೆ ಬೇಡುವುದನ್ನಾಗಲಿ ಎಂದೂ ನಾನು ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಸಜ್ಜನ ದಿಕ್ಕಿಲ್ಲದಿರುವುದನು, ಅವನ ಸಂತತಿ ಭಿಕ್ಷೆ ಬೇಡುವುದನು I ನಾ ಕಾಣೆನು, ವೃದ್ಧ ನಾನೆಂದೂ ಕಾಣೆನು, ಬಾಲ್ಯದಿಂದ ಕಾಣೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವದನ್ನಾಗಲಿ ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವದನ್ನಾಗಲಿ ನೋಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ. ನೀತಿವಂತರನ್ನು ದೇವರು ತೊರೆದುಬಿಟ್ಟದ್ದನ್ನಾಗಲಿ ಅವನ ಮಕ್ಕಳು ಆಹಾರಕ್ಕಾಗಿ ಬೇಡುವುದನ್ನಾಗಲಿ ನಾನೆಂದೂ ಕಾಣಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 37:25
22 ತಿಳಿವುಗಳ ಹೋಲಿಕೆ  

ಹಣದಾಶೆಯಿಂದ ನಿಮ್ಮ ಜೀವನ ದೂರವಾಗಿರಲಿ, ನಿಮಗಿರುವವುಗಳಲ್ಲಿ ತೃಪ್ತರಾಗಿರಿ. ಏಕೆಂದರೆ ದೇವರು ಹೀಗೆ ಹೇಳಿದ್ದಾರೆ, “ನಾನು ನಿನ್ನನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ!”


ಏಕೆಂದರೆ ಯೆಹೋವ ದೇವರು ನ್ಯಾಯವನ್ನು ಪ್ರೀತಿಸುತ್ತಾರೆ; ತಮ್ಮ ನಂಬಿಗಸ್ತ ಜನರನ್ನು ತೊರೆದುಬಿಡರು. ನೀತಿವಂತರು ಸದಾಕಾಲಕವೂ ಸುರಕ್ಷಿತರಾಗಿರುವರು; ಆದರೆ ದುಷ್ಟರ ಸಂತತಿಯು ಅಳಿದುಹೋಗುವುದು.


ಅವರ ಸಂತತಿಯು ಭೂಮಿಯಲ್ಲಿ ಪರಾಕ್ರಮಶಾಲಿಯಾಗಿರುವುದು; ಯಥಾರ್ಥರ ಸಂತತಿಯು ಆಶೀರ್ವಾದ ಹೊಂದುವುದು.


ಅಂಥವರು ಜೀವಮಾನವೆಲ್ಲಾ ಸಫಲರಾಗಿರುವರು. ಅಂಥವರ ಸಂತಾನವು ದೇಶವನ್ನು ಸ್ವಾಧೀನ ಮಾಡಿಕೊಳ್ಳುವುದು.


ಏಕೆಂದರೆ ಯೆಹೋವ ದೇವರು ತಮ್ಮ ಮಹತ್ತಾದ ಹೆಸರಿಗೋಸ್ಕರ ತಮ್ಮ ಜನರನ್ನು ಕೈಬಿಡುವುದಿಲ್ಲ. ನಿಮ್ಮನ್ನು ತಮ್ಮ ಜನರಾಗಿ ಮಾಡಿಕೊಳ್ಳಲು ಇಚ್ಛೈಸಿದ್ದಾರಲ್ಲಾ?


ಹಿಂಸೆಗೆ ಒಳಪಟ್ಟರೂ ಕೈಬಿಟ್ಟವವರಲ್ಲ, ದಬ್ಬಿದವರಾದಾಗ್ಯೂ ನಾಶವಾಗಲಿಲ್ಲ.


ಯೆಹೋವ ದೇವರು ತಮ್ಮ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ತಮ್ಮ ಬಾಧ್ಯತೆಯಾಗಿರುವವರನ್ನು ಎಂದೂ ಮರೆಯುವುದಿಲ್ಲ.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ನೀನು ಜೀವಿಸುವ ದಿವಸಗಳಲ್ಲೆಲ್ಲಾ ಒಬ್ಬನೂ ನಿನ್ನ ಮುಂದೆ ನಿಲ್ಲನು. ನಾನು ಮೋಶೆಯ ಸಂಗಡ ಇದ್ದ ಹಾಗೆಯೇ ನಿನ್ನ ಸಂಗಡ ಇರುವೆನು. ನಾನು ನಿನ್ನನ್ನು ಮರೆಯುವುದಿಲ್ಲ, ನಿನ್ನನ್ನು ತೊರೆಯುವುದಿಲ್ಲ.


ಇದಲ್ಲದೆ ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನು. ಈ ನನ್ನ ಒಡಂಬಡಿಕೆಯನ್ನು ನಿನಗೋಸ್ಕರವೂ ನಿನ್ನ ತರುವಾಯ ಬರುವ ನಿನ್ನ ಸಂತತಿಗೋಸ್ಕರವೂ ತಲತಲಾಂತರದವರೆಗೂ ನಿತ್ಯವಾದ ಒಡಂಬಡಿಕೆಯಾಗಿ ಸ್ಥಾಪಿಸುವೆನು.


ಒಳ್ಳೆಯವನು ಮೊಮ್ಮಕ್ಕಳಿಗೆ ಆಸ್ತಿಯನ್ನು ಬಿಟ್ಟುಬಿಡುವನು; ಆದರೆ ಪಾಪಿಯ ಸಂಪತ್ತು ನೀತಿವಂತರಿಗಾಗಿ ಸಂಗ್ರಹವಾಗಿದೆ.


ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


ಕೈಸರೈಯದಿಂದ ಕೆಲವು ಶಿಷ್ಯರು ನಮ್ಮೊಂದಿಗೆ ಬಂದು, ಮ್ನಾಸೋನ ಎಂಬುವನ ಮನೆಗೆ ನಾವು ಇಳಿದುಕೊಳ್ಳುವಂತೆ ಕರೆದುಕೊಂಡು ಹೋದರು. ಅವನು ಸೈಪ್ರಸ್ ದಿಂದ ಬಂದ ಪ್ರಥಮ ಶಿಷ್ಯರಲ್ಲಿ ಒಬ್ಬನಾಗಿದ್ದನು.


ಅವನು ಆಹಾರ ಎಲ್ಲಿ ಎಂದು ರಣಹದ್ದಿನ ಹಾಗೆ ಅಲೆಯುತ್ತಾನೆ; ಕತ್ತಲೆಯ ದಿನ ತನ್ನ ಕೈ ಹತ್ತಿರ ಸಿದ್ಧವಾಗಿದೆ ಎಂದು ತಿಳಿದಿದ್ದಾನೆ.


ಅವರ ಮಕ್ಕಳೂ ಸಹ ಅವರ ಕಣ್ಣೆದುರಿಗೆ ಹತರಾಗುವರು. ಅವರ ಮನೆಗಳು ಸೂರೆಮಾಡಲಾಗುವುದು. ಅವರ ಹೆಂಡತಿಯರು ಅತ್ಯಾಚಾರಕ್ಕೆ ಈಡಾಗುವರು.


ಅವರು ಆಹಾರಕ್ಕಾಗಿ ಅಲೆದಾಡುವರು. ತೃಪ್ತಿಯಾಗದಿದ್ದರೆ ಗೊಣಗುಟ್ಟುವರು.


ಅವನ ಮಕ್ಕಳು ಅಲೆದು ಅಲೆದು ಭಿಕ್ಷೆಬೇಡಲಿ, ತಮ್ಮ ಹಾಳು ಮನೆಯಿಂದ ಹೊರಟು ಹೋಗಲಿ.


“ನೆನಪುಮಾಡಿಕೋ, ನಿರಪರಾಧಿಯಾಗಿ ನಾಶವಾದವನು ಯಾವನು? ನೀತಿವಂತರು ಅಳಿದು ಹೋದದ್ದು ಎಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು