Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 38:20 - ಕನ್ನಡ ಸಮಕಾಲಿಕ ಅನುವಾದ

20 ನನ್ನ ಶತ್ರುಗಳು ಒಳ್ಳೆಯದಕ್ಕೆ ಬದಲಾಗಿ ಕೇಡನ್ನು ಸಲ್ಲಿಸುತ್ತಿದ್ದಾರೆ. ನಾನು ಒಳ್ಳೆಯದನ್ನು ಹಿಂದಟ್ಟುವ ಕಾರಣ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ನಾನು ಒಳ್ಳೆಯದನ್ನು ಅನುಸರಿಸುವುದರಿಂದ, ನನ್ನ ಎದುರಾಳಿಗಳು ಉಪಕಾರಕ್ಕೆ ಪ್ರತಿಯಾಗಿ ಅಪಕಾರವನ್ನೇ ಸಲ್ಲಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಉಪಕಾರಕ್ಕೆ ಪ್ರತಿಯಾಗಿ ಅಪಕಾರ ಸಲ್ಲಿಸುವವರು ಒಳ್ಳೆಯದನ್ನು ಅನುಸರಿಸುವ ನನ್ನನ್ನು ಎದುರಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಾನು ಉಪಕಾರವನ್ನು ಮಾಡಿದ್ದರೂ ನನ್ನ ವೈರಿಗಳು ನನಗೆ ಅಪಕಾರವನ್ನೇ ಮಾಡುವರು. ನಾನು ಒಳ್ಳೆಯದನ್ನು ಮಾಡಬೇಕೆಂದರೂ ಅವರು ನನ್ನನ್ನು ವಿರೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 38:20
18 ತಿಳಿವುಗಳ ಹೋಲಿಕೆ  

ನನ್ನ ಉಪಕಾರಕ್ಕೆ ಬದಲಾಗಿ ನನಗೆ ಕೇಡನ್ನು ಮಾಡಿ ನನ್ನನ್ನು ದುಃಖದಲ್ಲಿರುವವರಂತೆ ಬಿಟ್ಟುಬಿಟ್ಟಿದ್ದರೆ


ಕೆಡುಕನಾಗಿದ್ದ ತನ್ನ ತಮ್ಮನನ್ನು ಕೊಂದುಹಾಕಿದ ಕಾಯಿನನಂತೆ ಅಲ್ಲ. ಅವನು ಯಾವ ಕಾರಣದಿಂದ ತಮ್ಮನನ್ನು ಕೊಂದುಹಾಕಿದನು? ತನ್ನ ಕೃತ್ಯಗಳು ಕೆಟ್ಟವುಗಳೂ ತನ್ನ ತಮ್ಮನ ಕೃತ್ಯಗಳು ನೀತಿಯುಳ್ಳವುಗಳೂ ಆಗಿದ್ದುದರಿಂದಲೇ ಅಲ್ಲವೇ?


ಒಳ್ಳೆಯದಕ್ಕೆ ಬದಲಾಗಿ ಕೆಟ್ಟದ್ದನ್ನು ಸಲ್ಲಿಸಬಹುದೇ? ಏಕೆಂದರೆ, ಅವರು ನನ್ನ ಪ್ರಾಣಕ್ಕೆ ಕುಳಿಯನ್ನು ಅಗೆದಿದ್ದಾರೆ. ಅವರಿಗೋಸ್ಕರ ಒಳ್ಳೆಯದನ್ನು ಮಾತಾಡುವುದಕ್ಕೂ, ನಿನ್ನ ಉಗ್ರವನ್ನು ಅವರಿಂದ ತಿರುಗಿಸುವುದಕ್ಕೂ ನಾನು ನಿನ್ನ ಮುಂದೆ ನಿಂತದ್ದನ್ನು ಜ್ಞಾಪಕಮಾಡಿಕೋ.


ನೀವು ಒಳ್ಳೆಯದನ್ನು ಅನುಸರಿಸಲು ಆಸಕ್ತರಾಗಿದ್ದರೆ ನಿಮಗೆ ಕೇಡು ಮಾಡುವವರು ಯಾರಿದ್ದಾರೆ?


ಅದಕ್ಕೆ ಯೇಸು ಅವರಿಗೆ, “ನನ್ನ ತಂದೆಯಿಂದ ಅನೇಕ ಒಳ್ಳೆಯ ಕಾರ್ಯಗಳನ್ನು ನಾನು ನಿಮಗೆ ತೋರಿಸಿದ್ದೇನೆ. ಅವುಗಳಲ್ಲಿ ಯಾವ ಕಾರ್ಯಕ್ಕಾಗಿ ನೀವು ನನ್ನ ಮೇಲೆ ಕಲ್ಲೆಸೆಯಬೇಕೆಂದಿದ್ದೀರಿ?” ಎಂದು ಕೇಳಿದರು.


ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,


ಅಷ್ಟರಲ್ಲಿ ದಾವೀದನು ತನ್ನ ಜನರಿಗೆ, “ಅಡವಿಯಲ್ಲಿದ್ದ ಇವನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ನಾನು ಕಾಪಾಡಿದ್ದು ವ್ಯರ್ಥವಾಯಿತು. ಅವನು ನಾನು ಮಾಡಿದ ಉಪಕಾರಕ್ಕೆ ಅಪಕಾರ ಮಾಡಿದ್ದಾನೆ.


ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು.


ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು.


ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು.


ನೀತಿಯ ನಿಮಿತ್ತವಾಗಿ ಹಿಂಸೆಗೊಳಗಾಗುವವರು ಧನ್ಯರು, ಪರಲೋಕ ರಾಜ್ಯವು ಅವರದು.


ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.


ನಿಷ್ಕಾರಣವಾಗಿರುವ ನನ್ನ ಶತ್ರುಗಳು ನನ್ನ ಮೇಲೆ ಸುಳ್ಳಾಗಿ ಸಂತೋಷಪಡದೆ ಇರಲಿ; ನನ್ನನ್ನು ಕಾರಣವಿಲ್ಲದೆ ದ್ವೇಷಿಸುವವರು ಕಣ್ಣು ಸನ್ನೆ ಮಾಡದೆ ಇರಲಿ.


ನಿಮ್ಮ ಹೆಸರನ್ನು ಕೊಂಡಾಡುವ ಹಾಗೆ ನನ್ನ ಸೆರೆಯಿಂದ ನನ್ನನ್ನು ಬಿಡಿಸಿರಿ; ಆಗ ನೀವು ನನಗೆ ಮಾಡಿದ ಉಪಕಾರವನ್ನು ಕಂಡು ನೀತಿವಂತರು ನನ್ನ ಹತ್ತಿರ ಸೇರಿಬರುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು