Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:1 - ಕನ್ನಡ ಸಮಕಾಲಿಕ ಅನುವಾದ

1 ನನ್ನ ನೀತಿಯಾಗಿರುವ ದೇವರೇ, ನಾನು ಕರೆಯುವಾಗ ನನಗೆ ಸದುತ್ತರವನ್ನು ಕೊಡಿರಿ. ನನ್ನ ಸಂಕಟದಿಂದ ನನಗೆ ನೆಮ್ಮದಿಯನ್ನು ನೀಡಿರಿ; ನನ್ನನ್ನು ಕರುಣಿಸಿ, ನನ್ನ ಪ್ರಾರ್ಥನೆಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸತ್ಯಸ್ವರೂಪನಾದ ದೇವಾ, ಭಕ್ತನ ಮೊರೆಗೆ ಸದುತ್ತರ ಪಾಲಿಸೊ I ಆಪತ್ತಿನಲ್ಲಿ ಆಶ್ರಯವಿತ್ತ ದೇವಾ, ಎನ್ನ ಪ್ರಾರ್ಥನೆಯ ಆಲಿಸೊ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಇಕ್ಕಟ್ಟಿನಿಂದ ಬಿಡಿಸಿ ಇಂಬಾದ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಅಂಗೀಕರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀತಿಸ್ವರೂಪನಾದ ದೇವರೇ, ನನ್ನ ಪ್ರಾರ್ಥನೆಗೆ ಉತ್ತರಿಸು! ನನ್ನ ಮೊರೆಗೆ ಕಿವಿಗೊಟ್ಟು ನನ್ನನ್ನು ಕರುಣಿಸು! ಇಕ್ಕಟ್ಟುಗಳಿಂದ ನನ್ನನ್ನು ಬಿಡಿಸಿ ಸುರಕ್ಷಿತ ಸ್ಥಳದಲ್ಲಿ ಸೇರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:1
35 ತಿಳಿವುಗಳ ಹೋಲಿಕೆ  

ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನಿಮ್ಮ ನಾಮವನ್ನು ಪ್ರೀತಿಸುವವರಿಗೆ ನೀವು ಯಾವಾಗಲೂ ಮಾಡುವಂತೆ, ನೀವು ನನ್ನ ಕಡೆಗೆ ತಿರುಗಿಕೊಂಡು, ನನ್ನನ್ನು ಕರುಣಿಸಿರಿ.


ನೀವು ನನ್ನ ಕಡೆಗೆ ತಿರುಗಿ ನನ್ನನ್ನು ಕರುಣಿಸಿರಿ; ನಾನು ಒಬ್ಬಂಟಿಗನಾಗಿಯೂ ಬಾಧೆಪಡುವವನಾಗಿಯೂ ಇದ್ದೇನೆ.


ಆತನ ದಿನಗಳಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು. ಇಸ್ರಾಯೇಲರು ನೆಮ್ಮದಿಯಿಂದ ವಾಸಿಸುವರು. ಯೆಹೋವ ಚಿದ್ಕೇನು ಎಂದರೆ, ಯೆಹೋವ ದೇವರೇ ನಮ್ಮ ಸದ್ಧರ್ಮ ಎಂಬ ಹೆಸರು ಅವರಿಗಿರುವುದು.


ನನ್ನ ದೇವರೇ, ನೀವು ನನಗೆ ಉತ್ತರ ಕೊಡುವುದರಿಂದ ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ; ನೀವು ನಿಮ್ಮ ಕಿವಿಯನ್ನು ನನ್ನ ಕಡೆ ತಿರುಗಿಸಿ, ನನ್ನ ಪ್ರಾರ್ಥನೆಯನ್ನು ಆಲಿಸಿರಿ.


ಸಾರ್ವಭೌಮ ಯೆಹೋವ ದೇವರು ನನ್ನ ಬಲವು. ಅವರು ನನ್ನ ಕಾಲುಗಳನ್ನು ಜಿಂಕೆಯ ಕಾಲುಗಳ ಹಾಗೆ ಮಾಡಿ, ನನ್ನ, ಉನ್ನತ ಸ್ಥಳಗಳಲ್ಲಿ ನನ್ನನ್ನು ನಡೆಯುವಂತೆ ಮಾಡುತ್ತಾನೆ. ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ತೆಗೆದದ್ದು; ನನ್ನ ತಂತಿವಾದ್ಯದೊಡನೆ ಹಾಡತಕ್ಕದ್ದು.


ಯೆಹೋವ ದೇವರಲ್ಲಿ ಮಾತ್ರ ನೀತಿಯೂ ಬಲವೂ ಉಂಟೆಂದು ಮನುಷ್ಯರೂ ಸಹ ಅವರ ಬಳಿಗೆ ಬರುವರು.” ಆತನ ಮೇಲೆ ಉರಿಗೊಂಡವರೆಲ್ಲರೂ ನಾಚಿಕೆಗೆ ಈಡಾಗುವರು, ಎಂದು ಒಬ್ಬನು ನಿಶ್ಚಯವಾಗಿ ಹೇಳುತ್ತಾನೆ.


ನಿಮ್ಮ ಸೇವಕನನ್ನು ನ್ಯಾಯವಿಚಾರಣೆಗೆ ಗುರಿಮಾಡಬೇಡಿರಿ, ಏಕೆಂದರೆ ಜೀವಿಸುವರಲ್ಲಿ ಒಬ್ಬರೂ ನಿಮ್ಮ ಮುಂದೆ ನೀತಿವಂತರಲ್ಲ.


ದೇವರೇ ನನ್ನನ್ನು ಕರುಣಿಸಿರಿ, ನನ್ನನ್ನು ಕರುಣಿಸಿರಿ. ನನ್ನ ಪ್ರಾಣವು ನಿಮ್ಮನ್ನು ಆಶ್ರಯಿಸಿಕೊಂಡಿದೆ; ಆಪತ್ತುಗಳು ದಾಟುವವರೆಗೂ ನಿಮ್ಮ ರೆಕ್ಕೆಗಳ ನೆರಳನ್ನೇ ನಾನು ಆಶ್ರಯಿಸಿಕೊಳ್ಳುತ್ತೇನೆ.


ನನ್ನ ಹೃದಯವು ಸೊಗಸಾದ ವಿಷಯದಿಂದ ಮಿಡಿಯುತ್ತಿದೆ. ಮಹಾರಾಜನನ್ನು ಕುರಿತು ನಾನು ರಚಿಸುವೆನು ಗೀತಾಂಜಲಿ. ನನ್ನ ನಾಲಿಗೆಯು ನಿಪುಣ ಬರಹಗಾರನ ಲೇಖನಿಯಂತೆ ಸಿದ್ಧವಾಗಿದೆ.


ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?


ಇದಲ್ಲದೆ ದಾವೀದನು, “ನನ್ನನ್ನು ಸಿಂಹದ ಕೈಗೂ, ಕರಡಿಯ ಕೈಗೂ ತಪ್ಪಿಸಿಬಿಟ್ಟ ಯೆಹೋವ ದೇವರು, ಈ ಫಿಲಿಷ್ಟಿಯನ ಕೈಗೂ ನನ್ನನ್ನು ತಪ್ಪಿಸಿಬಿಡುವರು,” ಎಂದನು. ಆಗ ಸೌಲನು ದಾವೀದನಿಗೆ, “ನೀನು ಹೋಗು, ಯೆಹೋವ ದೇವರು ನಿನ್ನ ಸಂಗಡ ಇರಲಿ,” ಎಂದನು.


ಪ್ರಿಯರೇ, ನಾವು ಏಷ್ಯಾ ಪ್ರಾಂತದಲ್ಲಿ ಅನುಭವಿಸಿದ ಕಷ್ಟ ಸಂಕಟಗಳ ಬಗ್ಗೆ ನೀವು ತಿಳಿಯಬೇಕೆಂದು ಬಯಸುತ್ತೇವೆ. ನಾವು ಸಹಿಸುವುದಕ್ಕೆ ಬಹುಕಷ್ಟಕರವಾದ ಒತ್ತಡಗಳು ನಮಗೆ ಬಂದೊದಗಿದಾಗ, ಅವು ನಮ್ಮ ಪ್ರಾಣಕ್ಕೂ ಅಪಾಯಕಾರಿ ಎಂದೆನಿಸಿತು.


ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.


ಯೆಹೂದ ಪ್ರದೇಶದಲ್ಲಿ ದೇವರು ಸುಪ್ರಸಿದ್ಧರಾಗಿದ್ದಾರೆ. ಇಸ್ರಾಯೇಲಿನಲ್ಲಿ ದೇವರ ಹೆಸರು ಪ್ರಖ್ಯಾತವಾಗಿದೆ.


ದೇವರು ನಮ್ಮ ಮೇಲೆ ಕರುಣೆಯಿಟ್ಟು, ನಮ್ಮನ್ನು ಆಶೀರ್ವದಿಸಲಿ. ದೇವರು ತಮ್ಮ ಮುಖವನ್ನು ನಮ್ಮ ಮೇಲೆ ಪ್ರಕಾಶಿಸಮಾಡಲಿ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಶತ್ರುವಿನ ಕೈಯಲ್ಲಿ ನನ್ನನ್ನು ಒಪ್ಪಿಸಿ ಬಿಡಲಿಲ್ಲ; ನನ್ನ ಪಾದಗಳನ್ನು ವಿಶಾಲವಾದ ಸ್ಥಳದಲ್ಲಿ ನಿಲ್ಲಿಸಿದ್ದೀರಿ.


ಇಂಥವರೇ ಯೆಹೋವ ದೇವರಿಂದ ಆಶೀರ್ವಾದವನ್ನು ಹೊಂದುವರು. ತಮ್ಮ ರಕ್ಷಕ ಆಗಿರುವ ದೇವರಿಂದಲೇ ನಿರ್ದೋಷಿಯಾಗುವರು.


ಏಕೆಂದರೆ ಯೆಹೋವ ದೇವರು ನೀತಿಯುಳ್ಳವರು. ಅವರು ನ್ಯಾಯವನ್ನು ಪ್ರೀತಿಸುತ್ತಾರೆ; ಯಥಾರ್ಥರು ಅವರ ಮುಖವನ್ನು ದೃಷ್ಟಿಸುವರು.


ಯೆಹೋವ ದೇವರೇ, ನಿಜವಾಗಿ ನಾನು ನಿಮ್ಮ ಸೇವಕನು; ಹೌದು, ನನ್ನ ತಾಯಿ ನಿಮಗೆ ಸೇವೆಮಾಡಿದಂತೆ ನಾನು ಸಹ ನಿಮ್ಮ ಸೇವಕನು; ನೀವು ನನ್ನ ಬಂಧನಗಳಿಂದ ನನ್ನನ್ನು ಬಿಡಿಸಿದ್ದೀರಿ.


ಯೆಹೋವ ದೇವರು ಸರಳ ಹೃದಯದವರನ್ನು ಕಾಪಾಡುತ್ತಾರೆ; ನಾನು ಕೊರತೆಯಲ್ಲಿದ್ದಾಗ, ಅವರು ನನ್ನನ್ನು ರಕ್ಷಿಸಿದರು.


ದೇವರೇ ಕರುಣಿಸು, ಏಕೆಂದರೆ ಮನುಷ್ಯರು ನನ್ನನ್ನು ಬೆನ್ನಟ್ಟುತ್ತಿದ್ದಾರೆ. ದಿನವೆಲ್ಲಾ ವಿರೋಧಿಸುತ್ತಾ ನನ್ನನ್ನು ಬಾಧಿಸುತ್ತಿದ್ದಾರೆ.


ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.


ಯೆಹೋವ ದೇವರೇ, ನೀವು ಬೇಸರದಿಂದ ನನ್ನನ್ನು ಗದರಿಸಬೇಡಿರಿ, ರೋಷದಿಂದಲೂ ನನ್ನನ್ನು ದಂಡಿಸಬೇಡಿರಿ.


“ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು