Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 4:8 - ಕನ್ನಡ ಸಮಕಾಲಿಕ ಅನುವಾದ

8 ಸಮಾಧಾನವಾಗಿ ಮಲಗಿ ನಿದ್ರೆ ಮಾಡುವೆನು, ಏಕೆಂದರೆ ಯೆಹೋವ ದೇವರೇ, ನೀವೊಬ್ಬರೇ ನನ್ನನ್ನು ಸುರಕ್ಷಿತವಾಗಿ ವಾಸಿಸುವಂತೆ ಮಾಡುತ್ತೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಮಲಗಿ ನಿದ್ರಿಸುವೆನು ನಾ ನಿಶ್ಚಿಂತನಾಗಿ I ಪ್ರಭು ನೀ ಕಾಯುವೆ ಎನ್ನ ಸುರಕ್ಷಿತನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ನಾನು ನಿರ್ಭಯವಾಗಿರುವದರಿಂದ ಮಲಗಿಕೊಂಡು ಕೂಡಲೆ ನಿದ್ದೆ ಮಾಡುವೆನು; ಯಾಕಂದರೆ ಯೆಹೋವನೇ, ನಾನು ಯಾವ ಅಪಾಯವೂ ಇಲ್ಲದೆ ಸುರಕ್ಷಿತನಾಗಿರುವಂತೆ ನೀನು ಕಾಪಾಡುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನಾನು ಹಾಸಿಗೆಯ ಮೇಲೆ ಸಮಾಧಾನದಿಂದ ನಿದ್ರಿಸುವೆನು. ಯಾಕೆಂದರೆ, ಯೆಹೋವನೇ, ನನ್ನನ್ನು ಕಾಪಾಡುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 4:8
16 ತಿಳಿವುಗಳ ಹೋಲಿಕೆ  

ನೀನು ಮಲಗುವಾಗ ನಿನಗೆ ಹೆದರಿಕೆ ಇರುವುದಿಲ್ಲ; ನೀನು ಮಲಗಿದಾಗ ನಿದ್ರೆಯು ಸುಖವಾಗಿರುವುದು.


ನಾನು ಮಲಗಿ ನಿದ್ರಿಸುವೆನು; ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.


ನಾವು ಎಚ್ಚರವಾಗಿದ್ದರೂ ನಿದ್ರೆಯಲ್ಲಿದ್ದರೂ ತಮ್ಮ ಜೊತೆಯಲ್ಲಿಯೇ ನಾವು ಜೀವಿಸಬೇಕೆಂದು ಅವರು ನಮಗಾಗಿ ಸತ್ತರು.


ಆದರೆ ನೀವು ಯೊರ್ದನ್ ನದಿಯನ್ನು ದಾಟಿದ ಮೇಲೆ ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ದೇಶದಲ್ಲಿ ವಾಸಮಾಡುವಾಗ, ದೇವರು ಸುತ್ತಲಿರುವ ಎಲ್ಲಾ ಶತ್ರುಗಳಿಂದ ನಿಮ್ಮನ್ನು ತಪ್ಪಿಸಿ, ನೀವು ಸುರಕ್ಷಿತವಾಗಿ ವಾಸಿಸುವಂತೆ ಮಾಡುವರು.


ಕಣ ತುಳಿಸುವ ಕೆಲಸವು ದ್ರಾಕ್ಷಿ ಬೆಳೆಯುವವರೆಗೂ ದ್ರಾಕ್ಷಿ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿಯನ್ನು ತಿಂದು, ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ.


ಆ ದಿವಸದಲ್ಲಿ, ಅವರಿಗೋಸ್ಕರ ಅಡವಿಯ ಮೃಗಗಳ, ಆಕಾಶದ ಪಕ್ಷಿಗಳ ಮತ್ತು ಭೂಮಿಯ ಕ್ರಿಮಿಗಳ ಸಂಗಡ ಒಡಂಬಡಿಕೆ ಮಾಡುವೆನು. ನಾನು ಬಿಲ್ಲನ್ನೂ, ಖಡ್ಗವನ್ನೂ ಯುದ್ಧವನ್ನೂ ದೇಶದೊಳಗಿಂದ ಮುರಿದುಹಾಕಿ, ಅವರೆಲ್ಲರೂ ಸುರಕ್ಷಿತರಾಗಿ ಮಲಗುವಂತೆ ಮಾಡುವೆನು.


ಪರಲೋಕದಿಂದ ಒಂದು ಧ್ವನಿಯು ನನಗೆ, “ಇಂದಿನಿಂದ ಕರ್ತರಲ್ಲಿ ವಿಶ್ವಾಸವುಳ್ಳವರು ಧನ್ಯರು ಎಂಬುದಾಗಿ ಬರೆ!” ಎಂದು ಹೇಳಿತು. ಅದಕ್ಕೆ ಪವಿತ್ರಾತ್ಮ ದೇವರು, “ಹೌದು, ಅವರ ಪ್ರಯಾಸಗಳು ತೀರಿದವು ಅವರಿಗೆ ವಿಶ್ರಾಂತಿಯಾಗುವುದು, ಅವರ ಕೃತ್ಯಗಳು ಅವರನ್ನು ಹಿಂಬಾಲಿಸುತ್ತವೆ!” ಎಂದು ಹೇಳುತ್ತಾರೆ.


“ ‘ಅವರ ಸಂಗಡ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ದುಷ್ಟಮೃಗಗಳನ್ನು ದೇಶದೊಳಗೆ ಇಲ್ಲದಂತೆ ಮಾಡುವೆನು. ಆದ್ದರಿಂದ ಅವರು ನಿರ್ಭಯವಾಗಿ ಮರುಭೂಮಿಯಲ್ಲಿ ವಾಸಿಸಿ ಅಡವಿಗಳಲ್ಲಿ ಮಲಗುವರು.


ಜೀವಮಾರ್ಗವನ್ನು ನನಗೆ ತಿಳಿಯಪಡಿಸುವಿರಿ. ನಿಮ್ಮ ಸನ್ನಿಧಿಯಲ್ಲಿ ಪರಿಪೂರ್ಣ ಸಂತೋಷವಿದೆ; ನಿಮ್ಮ ಬಲಗಡೆಯಲ್ಲಿ ನಿತ್ಯಾನಂದವೂ ಇರುತ್ತದೆ.


ಕತ್ತಲೆಯಲ್ಲಿ ನಡೆಯುವ ಈ ಜನರಿಗೆ ಮಹಾ ಬೆಳಕು ಕಾಣಿಸಿತು, ಮರಣದ ನೆರಳಿನ ದೇಶದಲ್ಲಿ ವಾಸಿಸುವವರ ಮೇಲೆ ಬೆಳಕು ಉದಯಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು