Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 41:9 - ಕನ್ನಡ ಸಮಕಾಲಿಕ ಅನುವಾದ

9 ನನ್ನ ರೊಟ್ಟಿಯನ್ನು ತಿಂದವನೂ ನಾನು ನಂಬಿದ್ದವನೂ ಆಗಿರುವ ನನ್ನ ಆಪ್ತ ಸ್ನೇಹಿತನು ಸಹ ನನಗೆ ವಿರೋಧವಾಗಿ ತನ್ನ ಕಾಲನ್ನು ಎತ್ತಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ನನ್ನಾಪ್ತಮಿತ್ರನು, ನನ್ನ ನಂಬಿಕೆಗೆ ಪಾತ್ರನು I ನನ್ನೊಡನೆ ಉಂಡವನು, ನನಗೆರಡು ಬಗೆದಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ಯಾವನನ್ನು ನಂಬಿದ್ದೆನೋ ಯಾವನು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ ಅಂಥ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಆಪ್ತಸ್ನೇಹಿತನೊಂದಿಗೆ ಊಟಮಾಡುತ್ತಿದ್ದೆನು; ಅವನಲ್ಲಿ ಭರವಸವಿಟ್ಟಿದ್ದೆನು, ಆದರೆ ಈಗ ಅವನೇ ನನಗೆ ವಿರೋಧವಾಗಿ ಎದ್ದಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 41:9
13 ತಿಳಿವುಗಳ ಹೋಲಿಕೆ  

“ನಾನು ನಿಮ್ಮೆಲ್ಲರನ್ನು ಕುರಿತು ಮಾತನಾಡುತ್ತಿಲ್ಲ. ನಾನು ಆರಿಸಿಕೊಂಡವರನ್ನು ನಾನು ಬಲ್ಲೆನು. ಆದರೆ ‘ನನ್ನ ಸಂಗಡ ರೊಟ್ಟಿಯನ್ನು ತಿಂದವನೇ, ನನಗೆ ದ್ರೋಹ ಬಗೆದನು,’ ಎಂಬ ಪವಿತ್ರ ವಾಕ್ಯವು ನೆರವೇರಬೇಕಾಗಿದೆ.


ಅದಕ್ಕೆ ಯೇಸು ಉತ್ತರವಾಗಿ, “ನನ್ನ ಸಂಗಡ ಪಾತ್ರೆಯಲ್ಲಿ ಕೈ ಅದ್ದಿದವನೇ ನನಗೆ ದ್ರೋಹ ಮಾಡುವನು.


ಏಕೆಂದರೆ ಅನೇಕರ ಚಾಡಿಯನ್ನು ಕೇಳಿದೆನು. “ಸುತ್ತಲೂ ಭಯವಿದೆ. ಅವನನ್ನು ಖಂಡಿಸಿರಿ! ಅವನನ್ನು ಖಂಡಿಸೋಣ!” ನನ್ನ ಆಪ್ತರೆಲ್ಲರೂ ನಾನು ಕುಂಟುವುದನ್ನು ನೋಡಿಕೊಳ್ಳುತ್ತಾ ಒಂದು ವೇಳೆ ಅವನು ಮೋಸಗೊಂಡಾನು. “ಆಗ ನಾವು ಅವನನ್ನು ಗೆದ್ದು, ಅವನಲ್ಲಿ ಮುಯ್ಯಿಗೆ ಮುಯ್ಯಿ ತೀರಿಸಿಕೊಳ್ಳುವೆವು ಅನ್ನುತ್ತಾರೆ.”


ನನ್ನ ಆಪ್ತ ಸ್ನೇಹಿತರೆಲ್ಲಾ ನನ್ನನ್ನು ಕಂಡು ಅಸಹ್ಯಪಡುತ್ತಾರೆ; ನಾನು ಪ್ರೀತಿ ಮಾಡಿದವರೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ನಿನ್ನ ಸಂಗಡ ಒಡಂಬಟ್ಟ ಮನುಷ್ಯರೆಲ್ಲರು ನಿನ್ನನ್ನು ಮೇರೆಯವರೆಗೂ ತಂದಿದ್ದಾರೆ. ನಿನ್ನ ಸಂಗಡ ಸಮಾಧಾನವಾಗಿದ್ದ ಮನುಷ್ಯರು ನಿನ್ನನ್ನು ಮೋಸಮಾಡಿ ನಿನ್ನ ಮೇಲೆ ಜಯ ಹೊಂದಿದ್ದಾರೆ. ನಿನ್ನ ರೊಟ್ಟಿಯನ್ನು ತಿನ್ನುವವರು ನಿನ್ನ ಕೆಳಗೆ ಬೋನು ಇಟ್ಟಿದ್ದಾರೆ. ಆದರೆ ನೀನು ಅದನ್ನು ತಿಳಿದುಕೊಳ್ಳಲಾರೆ.


ನೆರೆಯವನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸೆ ಇಡಬೇಡಿರಿ; ನಿನ್ನ ಎದೆಯಲ್ಲಿ ಮಲಗುವವಳಿಗೆ ನಿನ್ನ ಬಾಯಿಯ ಬಾಗಿಲುಗಳನ್ನು ಕಾಯಿ.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


“ದೇವರು ನನ್ನ ಕುಟುಂಬದವರನ್ನು ನನ್ನಿಂದ ಅಗಲಿಸಿದ್ದಾರೆ; ನನ್ನ ಪರಿಚಿತರೆಲ್ಲರೂ ನನ್ನನ್ನು ತೊರೆದಿದ್ದಾರೆ.


ಯೆಶುರೂನು ಎಂಬ ಇಸ್ರಾಯೇಲರು ಕೊಬ್ಬಿ ಹೋದರು. ಅವರು ಹೊಟ್ಟೆ ತುಂಬ ಚೆನ್ನಾಗಿ ತಿಂದು ದಪ್ಪವಾದರು. ಅವರು ತಮ್ಮನ್ನು ಸೃಷ್ಟಿಮಾಡಿದ ದೇವರನ್ನು ಬಿಟ್ಟು, ತಮ್ಮ ರಕ್ಷಣೆಯ ಬಂಡೆಯನ್ನು ಅಲಕ್ಷ್ಯ ಮಾಡಿದರು.


ನಾನು ಕೆಟ್ಟ ಕಾರ್ಯವನ್ನು ನನ್ನ ಕಣ್ಣುಗಳ ಮುಂದೆ ಒಪ್ಪಿಗೆಯಿಂದ ನೋಡುವುದಿಲ್ಲ. ಅವಿಶ್ವಾಸಿಗಳು ಮಾಡುವುದನ್ನು ದ್ವೇಷಿಸುವೆನು; ಅದರಲ್ಲಿ ನಾನು ಭಾಗವಹಿಸುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು