Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:3 - ಕನ್ನಡ ಸಮಕಾಲಿಕ ಅನುವಾದ

3 “ನಿನ್ನ ದೇವರು ಎಲ್ಲಿ?” ಎಂದು ಜನರು, ದಿನವೆಲ್ಲಾ ನನ್ನನ್ನು ಕೇಳುವುದರಿಂದ ಹಗಲುರಾತ್ರಿ ನನ್ನ ಕಣ್ಣೀರೇ ನನಗೆ ಆಹಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 “ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 “ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ದೇವರು ಎಲ್ಲಿ ಎಂದು ಜನರು ಯಾವಾಗಲೂ ನನ್ನನ್ನು ಗೇಲಿ ಮಾಡುವದರಿಂದ ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 “ನಿನ್ನ ದೇವರು ಎಲ್ಲಿ?” ಎಂದು ನನ್ನ ವೈರಿಗಳು ಯಾವಾಗಲೂ ಗೇಲಿಮಾಡುವುದರಿಂದ ಹಗಲಿರುಳು ಕಣ್ಣೀರೇ ನನಗೆ ಆಹಾರವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:3
16 ತಿಳಿವುಗಳ ಹೋಲಿಕೆ  

ಅವರ ದೇವರು ಎಲ್ಲಿ ಎಂದು ಇತರ ಜನಾಂಗಗಳು ಏಕೆ ಹೇಳಬೇಕು? ಚೆಲ್ಲಿರುವ ನಿಮ್ಮ ಸೇವಕರ ರಕ್ತದ ಪ್ರತಿದಂಡನೆಯು ನಮ್ಮ ಕಣ್ಣುಗಳ ಮುಂದೆ ಇತರ ಜನಾಂಗಗಳಲ್ಲಿ ಗೊತ್ತಾಗಲಿ.


“ಅವರ ದೇವರು ಎಲ್ಲಿ?” ಎಂದು ಜನಾಂಗಗಳು ಏಕೆ ಹೇಳಬೇಕು?


ಯೆಹೋವ ದೇವರ ಸಮ್ಮುಖ ಸೇವಕರಾದ ಯಾಜಕರು, ಅಂಗಳಕ್ಕೂ, ಬಲಿಪೀಠಕ್ಕೂ ನಡುವೆ ಅತ್ತು ಹೀಗೆ ಹೇಳಲಿ, “ಯೆಹೋವ ದೇವರೇ, ನಿನ್ನ ಜನರನ್ನು ಕನಿಕರಿಸು, ಜನಾಂಗಗಳು ನಿಂದಿಸುವುದಕ್ಕೆ ನಿನ್ನ ಬಾಧ್ಯತೆಯನ್ನು ದೂಷಣೆಗೆ ಗುರಿಮಾಡಬೇಡಿರಿ. ‘ಅವರ ದೇವರು ಎಲ್ಲಿ?’ ಎಂದು ಅವರು ಏಕೆ ನಿಂದಿಸಬೇಕು?”


ನಿಮ್ಮ ದುಃಖ ಬೇಸರದ ನಿಮಿತ್ತ, ಬೂದಿಯನ್ನು ರೊಟ್ಟಿಯಂತೆ ತಿಂದಿದ್ದೇನೆ; ನನ್ನ ಪಾನವನ್ನು ಕಣ್ಣೀರಿನಿಂದ ಬೆರೆಸಿದ್ದೇನೆ.


ರೋದನವೇ ನಮ್ಮ ಅನ್ನವಾಗುವಂತೆಯೂ ಅಶ್ರುಧಾರೆಯೇ ಪಾನವಾಗುವಂತೆಯೂ ಅನುಮತಿಸಿದ್ದೀರಿ.


“ನಿನ್ನ ದೇವರು ಎಲ್ಲಿ?” ಎಂದು ದಿನವೆಲ್ಲಾ ನನಗೆ ಹೇಳಿ ನನ್ನ ವೈರಿಗಳು ಅಪಹಾಸ್ಯ ಮಾಡುವುದರಿಂದ ನನ್ನ ಎಲಬುಗಳೆಲ್ಲಾ ಮುರಿದುಹೊದಂತೆ ಇವೆ.


ಆಗ ನನ್ನ ಶತ್ರು ಇದನ್ನು ನೋಡುವನು. ಅವನ ಮುಖವನ್ನು ಅವಮಾನದಿಂದ ಮುಚ್ಚಿಕೊಳ್ಳುವನು, “ನಿನ್ನ ಯೆಹೋವ ದೇವರು ಎಲ್ಲಿ?” ಎಂದು ನನ್ನನ್ನು ಜರೆದವರೇ ನಾಚಿಕೆಪಡುವರು. ಇದನ್ನು ನಾನು ಕಣ್ಣಾರೆ ಕಾಣುವೆನು. ಆ ಶತ್ರುಗಳಾದರೋ ಬೀದಿಯ ಕಸದಂತೆ ದಾರಿಹೋಕರ ತುಳಿತಕ್ಕೆ ಈಡಾಗುವರು.


ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.


“ಆತನು ಯೆಹೋವ ದೇವರ ಮೇಲೆ ಭರವಸೆಯಿಟ್ಟಿದ್ದಾನಲ್ಲಾ, ಯೆಹೋವ ದೇವರೇ ಆತನನ್ನು ಕಾಪಾಡಲಿ. ಯೆಹೋವ ದೇವರು ಆತನಲ್ಲಿ ಹರ್ಷಿಸುವುದಾದರೆ, ಅವರೇ ಆತನನ್ನು ಬಿಡಿಸಲಿ.”


“ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು ಅನೇಕರು ನನ್ನ ಬಗ್ಗೆ ಹೇಳುತ್ತಾರೆ.


ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.


“ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.


ಸಮಸ್ತ ಜನರಲ್ಲಿ ಯಾರು ನಮ್ಮ ಹಾಗೆ ಬೆಂಕಿಯೊಳಗಿಂದ ಮಾತನಾಡುವ ಜೀವವುಳ್ಳ ದೇವರ ಸ್ವರವನ್ನು ಕೇಳಿ ಬದುಕಿದರು?


ನಾನು ನಿಮ್ಮ ಶಕ್ತಿಯನ್ನೂ ನಿಮ್ಮ ಮಹಿಮೆಯನ್ನೂ ಪರಿಶುದ್ಧ ಸ್ಥಳದಲ್ಲಿ ಕಂಡಿದ್ದೇನೆ. ಹೌದು, ನಾನು ನಿಮ್ಮನ್ನೇ ದೃಷ್ಟಿಸಿದ್ದೇನೆ.


ಓ ಸೇನಾಧೀಶ್ವರ ಯೆಹೋವ ದೇವರೇ, ನನ್ನ ಅರಸರಾಗಿರುವವರೇ, ನನ್ನ ದೇವರೇ, ಗುಬ್ಬಿಯು ಮನೆಯನ್ನೂ, ಬಾನಕ್ಕಿಯು ತನ್ನ ಮರಿಗಳನ್ನಿಡುವ ಗೂಡನ್ನೂ ನಿಮ್ಮ ಬಲಿಪೀಠಗಳ ಬಳಿಯಲ್ಲಿ ದೊರಕಿತಲ್ಲಾ.


ನನ್ನ ಕೈಗಳನ್ನು ನಿಮ್ಮ ಕಡೆಗೆ ಚಾಚುತ್ತೇನೆ; ನನ್ನ ಪ್ರಾಣವು ದಾಹಗೊಂಡ ಭೂಮಿಯ ಹಾಗೆ ನಿಮಗಾಗಿ ದಾಹಗೊಂಡಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು