Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 42:9 - ಕನ್ನಡ ಸಮಕಾಲಿಕ ಅನುವಾದ

9 “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಪೀಡಿತನಾಗಿ ದುಃಖದಲ್ಲಿ ಸಾಗಬೇಕು?” ಎಂದು ನನ್ನ ಶರಣನಾದ ದೇವರಿಗೆ ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಾನು ನನ್ನ ಶರಣನಿಗೆ, “ದೇವರೇ, ಏಕೆ ನನ್ನನ್ನು ಮರೆತುಬಿಟ್ಟಿದ್ದಿ? ನಾನು ಏಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು?” ಎಂದು ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ನಾನು ನನ್ನ ಶರಣನಿಗೆ - ದೇವರೇ, ಯಾಕೆ ನನ್ನನ್ನು ಮರೆತುಬಿಟ್ಟಿ? ನಾನು ಯಾಕೆ ಶತ್ರುಬಾಧೆಯಿಂದ ದುಃಖಿಸುತ್ತಾ ವಿಕಾರಿಯಾಗಿ ಅಲೆಯಬೇಕು ಎಂದು ಮೊರೆಯಿಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ನನ್ನ ಬಂಡೆಯಾದ ದೇವರಿಗೆ, “ನೀನು ನನ್ನನ್ನು ಯಾಕೆ ಮರೆತುಬಿಟ್ಟೆ? ನನ್ನ ಶತ್ರುಗಳ ಕ್ರೂರತೆಯಿಂದ ನಾನೇಕೆ ಸಂಕಟಪಡಬೇಕು?” ಎಂದು ಕೇಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 42:9
19 ತಿಳಿವುಗಳ ಹೋಲಿಕೆ  

ನಾನು ಬಹಳವಾಗಿ ಬಾಗಿ ಕುಗ್ಗಿದ್ದೇನೆ. ದಿನವೆಲ್ಲಾ ದುಃಖದಿಂದ ನಾನು ಅಲೆಯುತ್ತಿದ್ದೇನೆ.


ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?


ಯೆಹೋವ ದೇವರು ನನ್ನ ಬಂಡೆಯೂ ನನ್ನ ಕೋಟೆಯೂ ನನ್ನ ವಿಮೋಚಕರೂ ಆಗಿದ್ದಾರೆ; ನನ್ನ ಬಂಡೆಯಾದ ದೇವರಲ್ಲಿ, ನಾನು ಭರವಸವಿಡುವೆನು ಅವರು ನನ್ನ ಗುರಾಣಿ ಮತ್ತು ನನ್ನ ರಕ್ಷಣೆಯ ಕೊಂಬು, ನನ್ನ ಉನ್ನತವಾದ ದುರ್ಗ ಆಗಿದ್ದಾರೆ.


ನನ್ನ ಮಾರ್ಗವು ಯೆಹೋವ ದೇವರಿಗೆ ಮರೆಯಾಗಿದೆ. ನನ್ನ ನ್ಯಾಯವು ನನ್ನ ದೇವರಿಂದ ದಾಟಿಹೋಯಿತಲ್ಲಾ! ಎಂದು ಯಾಕೋಬೇ ಏಕೆ ಹೇಳುತ್ತೀ? ಇಸ್ರಾಯೇಲೇ ಏಕೆ ಮಾತನಾಡುತ್ತೀ?


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಯೆಹೋವ ದೇವರೇ, ನೀವು ನನಗೆ ಸಂರಕ್ಷಿಸುವ ಬಂಡೆಯಾಗಿದ್ದೀರಿ. ನಿಮ್ಮನ್ನು ಬೇಡಿಕೊಳ್ಳುತ್ತಿದ್ದೇನೆ, ಮೌನವಾಗಿರಬೇಡಿರಿ; ನೀವು ಸುಮ್ಮನಿದ್ದರೆ ನಾನು ಸಮಾಧಿಯಲ್ಲಿದ್ದವನಿಗೆ ಸಮಾನನಾಗುವೆನು.


“ತನ್ನ ಗರ್ಭದ ಮಗನ ಮೇಲೆ ಕರುಣಿಸದೆ ಒಬ್ಬ ಸ್ತ್ರೀ ತನ್ನ ಎದೆಹಾಲನ್ನು ಕುಡಿಯುವ ಕೂಸನ್ನು ಮರೆತಾಳೇ? ಹೌದು, ಅವಳು ಮರೆಯಬಹುದು, ಆದರೂ ನಾನು ನಿನ್ನನ್ನು ಮರೆಯುವುದಿಲ್ಲ.


ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.


ಬಾಧೆಯ ದೆಸೆಯಿಂದ ನನ್ನ ಕಣ್ಣು ಮಂದವಾಗಿ ಹೋಗಿದೆ. ಯೆಹೋವ ದೇವರೇ, ದಿನವೆಲ್ಲಾ ನಿಮ್ಮನ್ನು ಕರೆಯುತ್ತೇನೆ. ನಾನು ನಿಮ್ಮ ಕಡೆಗೆ ನನ್ನ ಕೈಗಳನ್ನು ಚಾಚುತ್ತೇನೆ.


ದೇವರು ತಮ್ಮ ಬಂಡೆ ಎಂದೂ ಮಹೋನ್ನತರಾದ ದೇವರು ತಮ್ಮ ವಿಮೋಚಕರೆಂದೂ ಜ್ಞಾಪಕ ಮಾಡಿಕೊಳ್ಳುತ್ತಿದ್ದರು.


ದೇವರು ಕರುಣಿಸುವುದನ್ನು ಮರೆತು ಬಿಟ್ಟಿದ್ದಾರೋ? ತಮ್ಮ ಅಂತಃಕರಣವನ್ನು ಬೇಸರದಿಂದ ತಡೆಹಿಡಿದಿದ್ದಾರೋ?”


ಶತ್ರುವಿನ ಗರ್ಜನೆಯಿಂದಲೂ ದುಷ್ಟರ ಬೆದರಿಕೆಯಿಂದಲೂ ನರಳುತ್ತೇನೆ. ಏಕೆಂದರೆ ಅವರು ಅಪರಾಧವನ್ನು ನನ್ನ ಮೇಲೆ ಬರಮಾಡಿ, ಕೋಪದಿಂದ ನನ್ನನ್ನು ಹಗೆ ಮಾಡುತ್ತಾರೆ.


ಯೆಹೋವ ದೇವರೇ, ಎಷ್ಟರವರೆಗೆ ನನ್ನನ್ನು ಮರೆಯುವಿರಿ? ಎಂದೆಂದಿಗೂ ನನ್ನನ್ನು ಮರೆಯುವಿರೋ? ಎಷ್ಟರವರೆಗೆ ನಿಮ್ಮ ಮುಖವನ್ನು ನನ್ನಿಂದ ಮರೆಮಾಡುವಿರಿ?


ಹತ್ತು ತಂತಿವಾದ್ಯದಿಂದಲೂ ವೀಣೆಯಿಂದಲೂ ಕಿನ್ನರಿಯ ಘನಸ್ವರದಿಂದಲೂ ಬಾರಿಸುವುದು ಒಳ್ಳೆಯದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು