Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 43:1 - ಕನ್ನಡ ಸಮಕಾಲಿಕ ಅನುವಾದ

1 ದೇವರೇ, ನನ್ನನ್ನು ನಿರ್ದೋಷಿ ಎಂದು ನಿರ್ಣಯಿಸಿರಿ, ಭಕ್ತಿಹೀನ ಜನತೆಯ ವಿರೋಧವಾಗಿ ನನ್ನ ನ್ಯಾಯವನ್ನು ವಾದಿಸಿರಿ. ಮೋಸವೂ ಅನ್ಯಾಯವೂ ಉಳ್ಳ ಮನುಷ್ಯನಿಂದ ನನ್ನನ್ನು ತಪ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದೇವರೇ, ನ್ಯಾಯವನ್ನು ತೀರಿಸು; ನನಗೋಸ್ಕರ ವ್ಯಾಜ್ಯವನ್ನು ನಡೆಸಿ ಭಕ್ತಿ ಇಲ್ಲದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ನಿರ್ಣಯಿಸು ನನ್ನ ನ್ಯಾಯವನು ಓ ದೇವಾ I ವಾದಿಸು ಆ ಭಕ್ತಿಹೀನ ಜನತೆಯ ವಿರುದ್ಧ I ಬಿಡಿಸೆನ್ನನು ವಂಚಕರಿಂದ, ಅಧರ್ಮಿಗಳಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದೇವರೇ, ನ್ಯಾಯವನ್ನು ನಿರ್ಣಯಿಸು; ನನಗೋಸ್ಕರ ವ್ಯಾಜ್ಯವನ್ನು ನಡಿಸಿ ನಿರ್ದಯವಾದ ಜನಾಂಗದಿಂದ ತಪ್ಪಿಸು, ದುರಾಚಾರಿಗಳಾದ ಮೋಸಗಾರರಿಂದ ನನ್ನನ್ನು ಬಿಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ದೇವರೇ, ನನ್ನನ್ನು ನಿರಪರಾಧಿಯೆಂದು ತೀರ್ಪು ನೀಡು. ವ್ಯಾಜ್ಯದಲ್ಲಿ ನನ್ನ ಪರವಾಗಿಯೂ ಅನ್ಯ ಜನಾಂಗಗಳಿಗೆ ವಿರೋಧವಾಗಿಯೂ ವಾದಿಸು. ಸುಳ್ಳುಗಾರರಿಂದಲೂ ಕೆಡುಕರಿಂದಲೂ ನನ್ನನ್ನು ರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 43:1
21 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನನ್ನ ಸಂಗಡ ವ್ಯಾಜ್ಯ ಮಾಡುವವರ ಸಂಗಡ ವ್ಯಾಜ್ಯ ಮಾಡಿರಿ; ನನಗೆ ವಿರೋಧವಾಗಿ ಯುದ್ಧ ಮಾಡುವವರ ಸಂಗಡ ಯುದ್ಧಮಾಡಿರಿ.


ಯೆಹೋವ ದೇವರೇ, ನನ್ನನ್ನು ನಿರ್ದೋಷನನ್ನಾಗಿ ನಿರ್ಣಯಿಸಿರಿ, ನಾನು ದೋಷವಿಲ್ಲದ ಜೀವನ ನಡೆಸಿದ್ದೇನೆ; ನಾನು ಯೆಹೋವ ದೇವರಲ್ಲಿ ಕದಲದೆ ಭರವಸೆ ಇಟ್ಟಿದ್ದೇನೆ.


ಯೆಹೋವ ದೇವರು ಜನಗಳಿಗೆ ನ್ಯಾಯತೀರಿಸಲಿ. ಮಹೋನ್ನತರಾದ ಯೆಹೋವ ದೇವರೇ, ನನ್ನ ನೀತಿಯ ಪ್ರಕಾರವೂ, ಯಥಾರ್ಥತೆಯ ಪ್ರಕಾರವೂ ನನಗೆ ನ್ಯಾಯತೀರಿಸಿರಿ.


ಯೆಹೋವ ದೇವರೇ, ನನ್ನ ದೇವರೇ, ನಿಮ್ಮ ನೀತಿಯ ಪ್ರಕಾರ ನನಗೆ ನ್ಯಾಯತೀರಿಸಿರಿ; ಅವರು ನನ್ನ ವಿರುದ್ಧ ಸಂತೋಷಪಡದೆ ಇರಲಿ.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ನನ್ನ ದೇವರೇ, ದುಷ್ಟನ ಕೈಗೂ ಅನ್ಯಾಯ ಮಾಡುವವನ ಮತ್ತು ಕ್ರೂರನ ಕೈಗೂ ನನ್ನನ್ನು ಸಿಕ್ಕಿಸದಿರಿ.


ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.


ನಾನು ಯೆಹೋವ ದೇವರಿಗೆ ವಿರೋಧವಾಗಿ ಪಾಪಮಾಡಿದ್ದರಿಂದ ಅವರು ನನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡೆಸುವ ತನಕ ಅವರ ಕೋಪವನ್ನು ತಾಳುವೆನು. ಆತನು ನನ್ನನ್ನು ಬೆಳಕಿಗೆ ತರುವನು. ಆತನ ನೀತಿಯನ್ನು ನೋಡುವೆನು.


ಬೈಯ್ಯುವವರನ್ನು ಅವರು ಪ್ರತಿಯಾಗಿ ಬೈಯಲಿಲ್ಲ. ಅವರು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ ನ್ಯಾಯವಾಗಿ ತೀರ್ಪುಮಾಡುವ ತಂದೆಗೆ ತಮ್ಮನ್ನು ಒಪ್ಪಿಸಿದರು.


ನನ್ನ ಮನಸ್ಸಾಕ್ಷಿಯು ಶುದ್ಧವಾಗಿದೆ. ಆದರೆ ಅದು ನನ್ನನ್ನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯತೀರಿಸುವವರು ಕರ್ತದೇವರೇ,


ಏಕೆಂದರೆ ಅವನ ವಿಮೋಚಕನು ಬಲಶಾಲಿಯಾಗಿದ್ದಾನೆ; ಅವರ ವ್ಯಾಜ್ಯಕ್ಕಾಗಿ ಆತನು ವಾದಿಸುವನು.


ಏಕೆಂದರೆ ಯೆಹೋವ ದೇವರು ಅವರ ವ್ಯಾಜ್ಯವನ್ನು ನಡೆಸಿ, ಸೂರೆ ಮಾಡಿದವರ ಪ್ರಾಣವನ್ನು ಸೂರೆ ಮಾಡುವರು.


ಆದರೆ ದೇವರು ನ್ಯಾಯತೀರಿಸುವವರಾಗಿದ್ದಾರೆ. ದೇವರು ಒಬ್ಬನನ್ನು ತಗ್ಗಿಸುತ್ತಾರೆ, ಒಬ್ಬನನ್ನು ಎತ್ತುತ್ತಾರೆ.


ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಆ ಹೊತ್ತು ಅಲ್ಲಿ ದೊಡ್ಡ ಸಂಹಾರವಾಯಿತು. ಇಪ್ಪತ್ತು ಸಾವಿರ ಸೈನಿಕರು ಸತ್ತರು. ಅಲ್ಲಿನ ಯುದ್ಧವು ಸುತ್ತಣ ಪ್ರದೇಶಗಳಲ್ಲಿ ಹಬ್ಬಿಕೊಂಡಿತು. ಆ ದಿನ ಸೈನಿಕರಲ್ಲಿ ಖಡ್ಗದಿಂದ ಹತರಾದವರಿಗಿಂತ ಕಾಡಿನಲ್ಲಿ ಹತರಾದವರೇ ಹೆಚ್ಚಾಗಿದ್ದರು.


ರಾಷ್ಟ್ರಗಳು ನಿಮ್ಮ ಸುತ್ತಲು ಬಂದು ಸೇರಲಿ, ಉನ್ನತದಿಂದ ನೀವು ಅವರ ಮೇಲೆ ಸಿಂಹಾಸನದಲ್ಲಿದ್ದು ಆಳಿರಿ.


ದುಷ್ಟರ ಕೆಟ್ಟತನವು ಅಂತ್ಯವಾಗುವಂತೆಯೂ ನೀತಿವಂತರ ಭದ್ರತೆಯು ನಿಶ್ಚಯವಾಗುವಂತೆಯೂ ಮಾಡಿರಿ. ನೀತಿಯುಳ್ಳ ದೇವರೇ, ನೀವು ಹೃದಯವನ್ನೂ ಮನಸ್ಸನ್ನೂ ಪರಿಶೋಧಿಸುವವರಾಗಿದ್ದೀರಿ.


ಗರ್ವಿಗಳು ನನಗೆ ವಿರೋಧವಾಗಿ ಎದ್ದಿದ್ದಾರೆ. ಕ್ರೂರಿಗಳು ನನ್ನ ಪ್ರಾಣವನ್ನು ತೆಗೆಯಬೇಕೆಂದಿದ್ದಾರೆ. ಅವರು ದೇವರನ್ನು ಲಕ್ಷಿಸುವದೇ ಇಲ್ಲ.


ಗರ್ವಿಷ್ಠರು ನನಗೆ ಉರುಲನ್ನೂ, ಪಾಶಗಳನ್ನೂ ರಹಸ್ಯವಾಗಿ ಇಟ್ಟಿದ್ದಾರೆ; ಬಲೆಯನ್ನು ದಾರಿಯ ಅಂಚಿನಲ್ಲಿ ಹಾಸಿದ್ದಾರೆ; ನನಗೆ ಬೋನಿಟ್ಟಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು