Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 45:4 - ಕನ್ನಡ ಸಮಕಾಲಿಕ ಅನುವಾದ

4 ನೀವು ಸತ್ಯತೆ ದೀನತ್ವ ಹಾಗು ನೀತಿಗೋಸ್ಕರ ನಿಮ್ಮ ಘನತೆಯಿಂದ ಜಯದ ಸವಾರಿ ಮಾಡಿರಿ. ನಿಮ್ಮ ಬಲಗೈ ಮಹಾಕೃತ್ಯಗಳನ್ನು ಪ್ರಕಾಶಪಡಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸತ್ಯತೆ, ದೈನ್ಯ, ನೀತಿಗಳನ್ನು ಸ್ಥಾಪಿಸುವುದಕ್ಕಾಗಿ ಸಕಲ ವೈಭವದೊಡನೆ ವಾಹನರೂಢನಾಗಿ, ವಿಜಯೋತ್ಸವದೊಡನೆ ಹೊರಡು. ನಿನ್ನ ಬಲಗೈ ಭಯಂಕರ ಕೃತ್ಯಗಳನ್ನು ನಡೆಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೊರಡು ಒಡ್ಡೋಲಗದಿಂದ ವಾಹನಾರೂಢನಾಗಿ I ತೆರಳು ಭುಜಬಲದಿ ಮಹತ್ಕಾರ್ಯವೆಸಗುವವನಾಗಿ I ಹೆಣಗು ಸತ್ಯಕ್ಕಾಗಿ, ನ್ಯಾಯನೀತಿಪರನಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸತ್ಯತೆದೈನ್ಯನೀತಿಗಳನ್ನು ಸ್ಥಾಪಿಸುವದಕ್ಕಾಗಿ ಆಡಂಬರದಿಂದ ವಾಹನಾರೂಢನಾಗಿ ವಿಜಯೋತ್ಸವದೊಡನೆ ಹೊರಡೋಣವಾಗಲಿ. ನಿನ್ನ ಭುಜವೀರ್ಯದಿಂದ ಭಯಂಕರಕೃತ್ಯಗಳು ನಡೆಯುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀನು ವೈಭವಯುತವಾಗಿ ಕಾಣುತ್ತಿರುವೆ! ಒಳ್ಳೆಯದಕ್ಕಾಗಿಯೂ ನ್ಯಾಯಕ್ಕಾಗಿಯೂ ಹೋರಾಡಿ ಗೆಲ್ಲು. ಶಕ್ತಿಯುತವಾದ ನಿನ್ನ ಬಲತೋಳಿನಿಂದ ಮಹತ್ಕಾರ್ಯಗಳನ್ನು ಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 45:4
26 ತಿಳಿವುಗಳ ಹೋಲಿಕೆ  

ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ನಾನು ನೋಡಲು, ಇಗೋ ಒಂದು ಬಿಳಿ ಕುದುರೆ ಕಾಣಿಸಿತು. ಅದರ ಸವಾರಿ ಮಾಡುವವನು ಒಂದು ಬಿಲ್ಲನ್ನು ಹಿಡಿದಿದ್ದನು. ಅವನಿಗೆ ಒಂದು ಕಿರೀಟವು ಕೊಡಲಾಗಿತ್ತು. ಅವನು ಜಯಿಸುವವನಾಗಿ ಜಯಿಸುವುದಕ್ಕೊಸ್ಕರ ಹೊರಟನು.


ನಾನು ಸಾತ್ವಿಕನೂ ದೀನ ಹೃದಯದವನೂ ಆಗಿರುವುದರಿಂದ ನೀವು ನನ್ನ ನೊಗವನ್ನು ನಿಮ್ಮ ಮೇಲೆ ತೆಗೆದುಕೊಂಡು ನನ್ನಿಂದ ಕಲಿತುಕೊಳ್ಳಿರಿ. ಆಗ ನಿಮ್ಮ ಆತ್ಮಗಳಿಗೆ ವಿಶ್ರಾಂತಿಯನ್ನು ಕಂಡುಕೊಳ್ಳುವಿರಿ.


ಚೀಯೋನ್ ಪುತ್ರಿಯೇ, ಮಹಾ ಉಲ್ಲಾಸಪಡು. ಯೆರೂಸಲೇಮಿನ ಪುತ್ರಿಯೇ ಆರ್ಭಟಿಸು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ. ಆತನು ನೀತಿವಂತನಾಗಿಯೂ ಜಯಹೊಂದಿದವನಾಗಿಯೂ, ದೀನನಾಗಿಯೂ ಕತ್ತೆಯ ಮೇಲೆ ಹೌದು, ಕತ್ತೆಮರಿಯ ಮೇಲೆ ಕೂತುಕೊಂಡು ಬರುತ್ತಾನೆ.


ರಾಷ್ಟ್ರಗಳು ಕೋಪಗೊಂಡವು, ನಿಮ್ಮ ರೋಷವು ಈಗ ಬಂದಿದೆ. ಸತ್ತವರು ತೀರ್ಪು ಹೊಂದುವ ಸಮಯ ಬಂದಿದೆ. ನೀವು ನಿಮ್ಮ ಸೇವಕರಾದ ಪ್ರವಾದಿಗಳಿಗೂ ದೇವಜನರಿಗೂ ನಿಮ್ಮ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು, ಲೋಕ ನಾಶಕರನ್ನು ದಂಡಿಸುವಿರಿ.”


ಕೊನೆಯದಾಗಿ ಪ್ರಿಯರೇ, ಕರ್ತ ಯೇಸುವಿನ ವಾಕ್ಯವು ನಿಮ್ಮಲ್ಲಿ ಹಬ್ಬಿದಂತೆ ಎಲ್ಲ ಕಡೆಗಳಲ್ಲಿಯೂ ಅತಿವೇಗದಿಂದ ಹಬ್ಬಿ ಹರಡುವಂತೆ ನಮಗಾಗಿ ಬೇಡಿಕೊಳ್ಳಿರಿ.


ಈ ಕಾರಣಕ್ಕಾಗಿಯೇ ನಂಬುವವರಾದ ನಿಮ್ಮಲ್ಲಿ ಕಾರ್ಯಸಾಧಿಸುವ ದೇವರ ವಾಕ್ಯವನ್ನು ನಮ್ಮಿಂದ ನೀವು ಕೇಳಿದಾಗ ಅದನ್ನು ಮನುಷ್ಯರ ವಾಕ್ಯವೆಂದೆಣಿಸದೆ, ನಿಜವಾಗಿಯೂ ದೇವರ ವಾಕ್ಯವೆಂದೇ ತಿಳಿದು ಅಂಗೀಕರಿಸಿದ್ದಕ್ಕಾಗಿ ನಾವಂತೂ ಎಡೆಬಿಡದೆ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇವೆ.


ಏಕೆಂದರೆ ನಮ್ಮ ಸುವಾರ್ತೆಯು ನಿಮಗೆ ಬರೀ ಮಾತಾಗಿ ಬಾರದೆ, ಶಕ್ತಿಯಲ್ಲಿಯೂ ಪವಿತ್ರಾತ್ಮ ದೇವರ ಸನ್ನಿಧಿಯಲ್ಲಿಯೂ ಬಹು ನಿಶ್ಚಯದಲ್ಲಿಯೂ ಬಂತೆಂಬುದನ್ನು ತಿಳಿದಿದ್ದೇವೆ. ನಾವು ನಿಮ್ಮಲ್ಲಿದ್ದುಕೊಂಡು ನಿಮಗೋಸ್ಕರ ಮಾಡಿದ ಜೀವನ ಎಂಥದ್ದೆಂದು ನೀವೇ ಬಲ್ಲಿರಿ.


ನಾನು ನಿಮ್ಮ ಬಳಿಯಲ್ಲಿ ಮುಖಾಮುಖಿಯಾಗಿ ಮಾತನಾಡುವಾಗ, “ಮೃದುವಾಗಿಯೂ” ನಿಮ್ಮಿಂದ ದೂರವಿರುವಾಗ “ಕಠಿಣನಾಗಿಯೂ ವರ್ತಿಸುವವನು” ಎಂತಲೂ ನೀವು ತಿಳಿದಿದ್ದೀರಿ. ಅಂಥ ಪೌಲನೆಂಬ, ನಾನು ಕ್ರಿಸ್ತ ಯೇಸುವಿನ ದೀನತ್ವದಿಂದಲೂ ಸಾತ್ವಿಕತೆಯಿಂದಲೂ ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ:


ಯೇಸು ಅವನಿಗೆ, “ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ. ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರಲಾರರು.


ಏಕೆಂದರೆ ನಿಯಮವು ಮೋಶೆಯ ಮೂಲಕ ಕೊಡಲಾಯಿತು. ಕೃಪೆಯೂ ಸತ್ಯವೂ ಕ್ರಿಸ್ತ ಯೇಸುವಿನ ಮೂಲಕ ಬಂದವು.


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


ನಿಮ್ಮ ಭಕ್ತರಿಗೆ ಧ್ವಜವನ್ನು ನಿಲ್ಲಿಸಿದ್ದೀರಿ. ಶತ್ರುಗಳ ಬಿಲ್ಲಿನ ವಿರುದ್ಧ ಹಾರಿಸಬಹುದಾದ ಧ್ವಜವನ್ನೇ ನೀಡಿದ್ದೀರಿ.


ಕಬ್ಬಿಣದ ಗದೆಯಿಂದ ನೀನು ಅವರನ್ನು ದಂಡಿಸಿ, ಮಣ್ಣಿನ ಮಡಕೆಯಂತೆ ಚೂರುಚೂರಾಗಿ ಅವರನ್ನು ಒಡೆದುಹಾಕುವೆ.”


ಯಾರ ಹೆಸರು ಜೀವ ಪುಸ್ತಕದಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವರನ್ನು ಬೆಂಕಿಯ ಕೆರೆಗೆ ದೊಬ್ಬಲಾಯಿತು.


ನೀತಿಯೇ ಅವರಿಗೆ ನಡುಕಟ್ಟು, ನಂಬಿಗಸ್ತಿಕೆಯೇ ಅವರ ಸೊಂಟದ ಪಟ್ಟಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು