Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 46:9 - ಕನ್ನಡ ಸಮಕಾಲಿಕ ಅನುವಾದ

9 ದೇವರು ಯುದ್ಧಗಳನ್ನು ಭೂಮಿಯ ಅಂತ್ಯದವರೆಗೆ ನಿಲ್ಲಿಸುತ್ತಾರೆ. ಬಿಲ್ಲನ್ನೂ ಭಲ್ಲೆಯನ್ನೂ ಮುರಿದು ಹಾಕಿದ್ದಾರೆ. ರಥಗಳನ್ನು ಬೆಂಕಿಯಿಂದ ಸುಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಜಗದೆಲ್ಲೆಡೆ ಕದನ ಕಾಳಗ ನಿಲ್ಲಿಸಿಹನು I ಬಿಲ್ಲು ಭಲ್ಲೆಗಳನು ಮುರಿದು ಹಾಕಿದನು I ರಥಗಳನು ಬೆಂಕಿಯಿಂದ ಸುಟ್ಟುಹಾಕಿದನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ನಿಲ್ಲಿಸಿಬಿಟ್ಟಿದ್ದಾನೆ; ಬಿಲ್ಲುಗಳನ್ನೂ ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಇಡೀ ಪ್ರಪಂಚದಲ್ಲಿ ಆತನು ಯುದ್ಧವನ್ನು ನಿಲ್ಲಿಸುವನು; ಬಿಲ್ಲುಗಳನ್ನೂ ಗುರಾಣಿಗಳನ್ನೂ ಮುರಿದುಹಾಕುವನು; ಗುರಾಣಿಗಳನ್ನು ಬೆಂಕಿಯಿಂದ ಸುಟ್ಟುಹಾಕುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 46:9
13 ತಿಳಿವುಗಳ ಹೋಲಿಕೆ  

ಅವರು ಅನೇಕ ಜನಾಂಗಗಳ ಮಧ್ಯದಲ್ಲಿ ನ್ಯಾಯತೀರಿಸಿ, ಅನೇಕ ಪ್ರಜೆಗಳನ್ನು ಗದರಿಸುವರು. ಅವರು ತಮ್ಮ ಖಡ್ಗಗಳನ್ನು ನೇಗಿಲಿನ ಗುಳಗಳನ್ನಾಗಿಯೂ ಬರ್ಜಿಗಳನ್ನು ಕುಡುಗೋಲುಗಳನ್ನಾಗಿಯೂ ಮಾಡುವರು. ಜನಾಂಗಕ್ಕೆ ವಿರೋಧವಾಗಿ ಜನಾಂಗವು ಖಡ್ಗವನ್ನು ಪ್ರಯೋಗಿಸುವುದಿಲ್ಲ, ಇನ್ನು ಮೇಲೆ ಯುದ್ಧಾಭ್ಯಾಸದ ಅಗತ್ಯ ಇರುವುದೇ ಇಲ್ಲ.


ಯೆಹೋವ ದೇವರು ಹೀಗೆ ಘೋಷಿಸುತ್ತಾರೆ: “ಆ ದಿವಸದಲ್ಲಿ, ನಾನು ನಿನ್ನ ಮಧ್ಯದೊಳಗಿರುವ ನಿನ್ನ ಕುದುರೆಗಳನ್ನು ಕಡಿದುಬಿಟ್ಟು ನಿನ್ನ ರಥಗಳನ್ನು ನಾಶಮಾಡುವೆನು.


ಬಲಾತ್ಕಾರವೂ, ನಿನ್ನ ದೇಶದೊಳಗೆ ಹಾಳಾದದ್ದೂ, ನಾಶವೂ, ನಿನ್ನ ಮೇರೆಗಳಲ್ಲಿ ಕೇಳಿಬರುವುದಿಲ್ಲ. ನಿನ್ನ ಗೋಡೆಗಳಿಗೆ ರಕ್ಷಣೆ ಎಂದೂ, ನಿನ್ನ ಬಾಗಿಲುಗಳಿಗೆ ಸ್ತೋತ್ರವೆಂದೂ ಹೆಸರಿಡುವೆ.


ನನ್ನ ಪರಿಶುದ್ಧ ಪರ್ವತದಲ್ಲಿ ಯಾರೂ ಕೇಡುಮಾಡುವುದಿಲ್ಲ, ಯಾರೂ ಹಾಳುಮಾಡುವುದಿಲ್ಲ. ಏಕೆಂದರೆ ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


“ಪರಾಕ್ರಮಶಾಲಿಗಳ ಬಿಲ್ಲುಗಳು ಮುರಿದು ಬಿದ್ದಿವೆ, ಎಡವಿದವರು ಬಲದಿಂದ ನಡುಕಟ್ಟಿ ನಿಂತಿದ್ದಾರೆ.


ಯೆಹೋಶುವನು ಯೆಹೋವ ದೇವರ ಅಪ್ಪಣೆಯ ಪ್ರಕಾರವೇ ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದುಬಿಟ್ಟು, ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟನು.


ನಾನು ನಿನ್ನ ಎಡಗೈಯಿಂದ ನಿನ್ನ ಬಿಲ್ಲನ್ನು ಹೊಡೆಯುವೆನು ಮತ್ತು ನಿನ್ನ ಬಲಗೈಯಿಂದ ನಿನ್ನ ಬಾಣಗಳನ್ನು ಉದುರಿ ಬೀಳುವಂತೆ ಮಾಡುವೆನು.


ಆಗ ಯೆಹೋವ ದೇವರು ಯೆಹೋಶುವನಿಗೆ, “ಅವರಿಗೆ ಭಯಪಡಬೇಡ, ಏಕೆಂದರೆ ನಾಳೆ ಇಷ್ಟು ಹೊತ್ತಿಗೆ ಅವರೆಲ್ಲರೂ ಸಂಹಾರವಾಗುವಂತೆ ಇಸ್ರಾಯೇಲರಿಗೆ ಒಪ್ಪಿಸಿಕೊಡುವೆನು. ನೀನು ಅವರ ಕುದುರೆಗಳ ಹಿಂಗಾಲಿನ ನರವನ್ನು ಕೊಯ್ದು ಅವರ ರಥಗಳನ್ನು ಬೆಂಕಿಯಿಂದ ಸುಟ್ಟುಬಿಡಬೇಕು,” ಎಂದರು.


ಬನ್ನಿರಿ, ದೇವರ ಕಾರ್ಯಗಳನ್ನು ನೋಡಿರಿ. ಮಾನವರ ಪರವಾಗಿ ಮಾಡಿರುವ ದೇವರ ಕಾರ್ಯಗಳು ಅತಿಶಯವಾಗಿವೆ.


ಏಕೆಂದರೆ ಸೇನಾಧೀಶ್ವರ ಯೆಹೋವ ದೇವರೆಂಬ ಕರ್ತ ಆಗಿರುವವರು, ಎಲ್ಲಾ ದೇಶದ ಮಧ್ಯದಲ್ಲಿ ತಿಳಿಸಿದ ವಿನಾಶವನ್ನು ಉಂಟುಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು