Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 47:5 - ಕನ್ನಡ ಸಮಕಾಲಿಕ ಅನುವಾದ

5 ದೇವರು ಜಯಘೋಷದಿಂದ ಉನ್ನತರಾಗಿದ್ದಾರೆ. ಯೆಹೋವ ದೇವರು ತುತೂರಿಯ ಧ್ವನಿಯೊಡನೆ ಸಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏರಿದನು ಪ್ರಭು ಜಯಜಯಕಾರದೊಂದಿಗೆ I ಆರೋಹಣವಾದನು ತುತೂರಿನಾದ ಜೊತೆಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತೂರಿಯ ಧ್ವನಿಯೊಡನೆ ಆರೋಹಣಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೆಹೋವನು ಆನಂದಘೋಷದೊಡನೆಯೂ ತುತ್ತೂರಿಗಳ ಧ್ವನಿಯೊಡನೆಯೂ ಸಿಂಹಾಸನಾರೂಢನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 47:5
26 ತಿಳಿವುಗಳ ಹೋಲಿಕೆ  

ಪೂರ್ವದ ಆಕಾಶಗಳಲ್ಲಿ ಸವಾರಿ ಮಾಡುವ ದೇವರಿಗೆ ಹಾಡಿರಿ. ದೇವರ ಸ್ವರವು ಗುಡುಗಿನಂತೆ ಇರುವುದು.


ಏಕೆಂದರೆ ಕರ್ತ ಯೇಸು ತಾವೇ ಆಜ್ಞಾಘೋಷದೊಡನೆಯೂ ಪ್ರಧಾನ ದೇವದೂತನ ಧ್ವನಿಯೊಡನೆಯೂ ದೇವರ ತುತೂರಿಯೊಡನೆಯೂ ಪರಲೋಕದಿಂದ ಇಳಿದು ಬರುವರು. ಆಗ ಕ್ರಿಸ್ತ ಯೇಸುವಿನಲ್ಲಿ ಸತ್ತವರು ಮೊದಲು ಎದ್ದು ಬರುವರು.


ಆದರೆ ಒಂದು ಕ್ಷಣದಲ್ಲೇ, ರೆಪ್ಪೆ ಬಡಿಯುವಷ್ಟರಲ್ಲಿ, ಕಡೇ ತುತೂರಿಯು ಊದಲಾಗುವುದು. ತುತೂರಿ ಧ್ವನಿಯಾಗುವಾಗ, ಸತ್ತವರು ಅಮರತ್ವಪಡೆದು ಎಬ್ಬಿಸಲಾಗುವರು, ನಾವು ರೂಪಾಂತರವಾಗುವೆವು.


ತುತೂರಿಯ ಶಬ್ದದಿಂದ ದೇವರನ್ನು ಸ್ತುತಿಸಿರಿ, ಕಿನ್ನರಿಯಿಂದಲೂ, ವೀಣೆಯಿಂದಲೂ, ಅವರನ್ನು ಸ್ತುತಿಸಿರಿ.


ಆಗ ಯೆಹೋವ ದೇವರು ಪ್ರತಿಕ್ರಿಯೆಯನ್ನು ಪ್ರಕಟಿಸಿದರು. ದ್ರಾಕ್ಷಾರಸದಿಂದ ಆರ್ಭಟಿಸುವ ಪರಾಕ್ರಮಶಾಲಿಯ ಹಾಗೆ ಸಂರಕ್ಷಿಸಲಾದರು.


ಈ ಪ್ರಕಾರ ದಾವೀದನೂ, ಇಸ್ರಾಯೇಲರೆಲ್ಲರೂ ಯೆಹೋವ ದೇವರ ಮಂಜೂಷವನ್ನು ಆರ್ಭಟದಿಂದಲೂ, ತುತೂರಿಯ ಶಬ್ದದಿಂದಲೂ ಬರಮಾಡಿದರು.


ಅವರು ಟಗರು ಕೊಂಬುಗಳ ತುತೂರಿಗಳಿಂದ ದೀರ್ಘಧ್ವನಿಗೈಯುವಾಗ, ಆ ತುತೂರಿಯ ಧ್ವನಿಯನ್ನು ಕೇಳುವ ಜನರೆಲ್ಲರೂ ಮಹಾ ರಭಸದಿಂದ ಆರ್ಭಟಿಸಬೇಕು. ಆಗ ಆ ಪಟ್ಟಣದ ಗೋಡೆಯು ನೆಲಸಮವಾಗಿ ಬಿದ್ದುಹೋಗುವುದು. ಜನರಲ್ಲಿ ಪ್ರತಿಯೊಬ್ಬನು ತನ್ನ ಮುಂದೆ ನೇರವಾಗಿ ಒಳಗೆ ನುಗ್ಗಿಹೋಗಬಹುದು,” ಎಂದು ಹೇಳಿದರು.


“ಯೆಹೋವ ದೇವರು ಯಾಕೋಬನಲ್ಲಿ ಆಪತ್ತನ್ನು ಕಾಣಲಿಲ್ಲ. ಇಸ್ರಾಯೇಲಿನಲ್ಲಿ ವಿಪತ್ತನ್ನು ನೋಡಲಿಲ್ಲ. ಅವರ ದೇವರಾದ ಯೆಹೋವ ದೇವರು ಅವರ ಸಂಗಡ ಇದ್ದಾರೆ. ಅರಸನ ಜಯಧ್ವನಿಯು ಅವರಲ್ಲಿ ಉಂಟು.


ಏಳನೆಯ ದೇವದೂತನು ತುತೂರಿಯನ್ನು ಊದಿದನು. ಆಗ ಪರಲೋಕದಲ್ಲಿ ಮಹಾ ಧ್ವನಿಗಳುಂಟಾಗಿ, ಹೀಗೆ ಹೇಳಿದವು: “ಲೋಕದ ರಾಜ್ಯವು ನಮ್ಮ ದೇವರ ಮತ್ತು ಅವರಿಗೆ ಸೇರಿದ ಕ್ರಿಸ್ತ ಯೇಸುವಿನ ರಾಜ್ಯವಾಯಿತು, ಈ ಕ್ರಿಸ್ತ ಯೇಸುವೇ ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವರು.”


ಎಲ್ಲಾ ಪ್ರಶ್ನೆಗಳಿಂದ ಹೆಚ್ಚಾಗಿ ದೈವ ಭಕ್ತಿಯ ರಹಸ್ಯವು ದೊಡ್ಡದಾದದ್ದು ಅದು ಯಾವುದೆಂದರೆ: “ದೇವರು ಮನುಷ್ಯ ರೂಪದಲ್ಲಿ ಪ್ರತ್ಯಕ್ಷರಾದರು. ಆತ್ಮದಲ್ಲಿ ರುಜುಪಡಿಸಲಾದರು. ದೂತರಿಗೆ ಕಾಣಿಸಿಕೊಂಡರು, ಯೆಹೂದ್ಯರಲ್ಲದವರಿಗೆ ಸಾರಲಾದರು, ಲೋಕದಲ್ಲಿ ನಂಬಲಾದರು, ಮಹಿಮೆಗೆ ಒಯ್ಯಲಾದರು!”


ತುತೂರಿಗಳಿಂದಲೂ, ಹೌದು, ಟಗರಿನ ಕೊಂಬಿನಿಂದಲೂ ಯೆಹೋವ ರಾಜರ ಮುಂದೆ ಆನಂದಘೋಷ ಮಾಡಿರಿ.


ಅಮಾವಾಸ್ಯೆಯಲ್ಲಿಯೂ ಉತ್ಸವ ದಿವಸವಾಗಿರುವ ಪೂರ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.


ಅದರ ಸಂಗಡ ತುತೂರಿ ಊದಲು, ತಾಳ ಬಾರಿಸಲು, ದೇವರ ಗೀತವಾದ್ಯಗಳೂ ಸಹಿತವಾಗಿ ಹೇಮಾನನೂ, ಯೆದುತೂನನೂ ಮೇಲ್ವಿಚಾರಕರಾಗಿದ್ದರು. ಯೆದುತೂನನ ಪುತ್ರರು ದ್ವಾರಪಾಲಕರಾಗಿದ್ದರು.


ಹೀಗೆ ಇಸ್ರಾಯೇಲರೆಲ್ಲರೂ ಯೆಹೋವ ದೇವರ ಒಡಂಬಡಿಕೆಯ ಮಂಜೂಷವನ್ನು ಆರ್ಭಟದಿಂದಲೂ, ಕೊಂಬಿನ ಶಬ್ದದಿಂದಲೂ, ತುತೂರಿಗಳಿಂದಲೂ, ತಾಳಗಳಿಂದಲೂ ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಾ ತೆಗೆದುಕೊಂಡು ಬಂದರು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ನಾನು ಅವರಿಗೆ ಪ್ರಮಾಣಮಾಡಿ ಈಜಿಪ್ಟ್ ದೇಶದಿಂದ ಹೊರಗೆ ತಂದು, ಅವರಿಗೋಸ್ಕರ ನಾನೇ ನೋಡಿಕೊಂಡಂಥ ಹಾಲೂ ಜೇನೂ ಹರಿಯುವ ಕೀರ್ತಿಯುಳ್ಳ ದೇಶಕ್ಕೆ ಅವರನ್ನು ಆ ದಿವಸದಲ್ಲಿ ಕರೆತಂದೆನು.


ಯೆಹೋವ ದೇವರು ಯಾಕೋಬಿನ ಅಹಂಕಾರದ ಮೇಲೆ ಆಣೆ ಇಟ್ಟುಕೊಂಡು ಹೇಳುವುದೇನೆಂದರೆ: “ನಿಶ್ಚಯವಾಗಿಯೂ ನಾನು ಎಂದೆಂದಿಗೂ ಅವರ ಯಾವ ಕ್ರಿಯೆಗಳನ್ನೂ ಮರೆಯುವುದಿಲ್ಲ.


“ಇಗೋ, ನಾನು ನಿಮ್ಮ ಸಂತತಿಯನ್ನು ಗದರಿಸುವೆನು. ನಿಮ್ಮ ಮುಖಗಳ ಮೇಲೆ, ನಿಮ್ಮ ಹಬ್ಬ ಬಲಿಗಳ ಸಗಣಿ ಬಳಿಯುವೆನು. ಅದರೊಂದಿಗೆ ನೀವು ಒಯ್ಯಲಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು