Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:1 - ಕನ್ನಡ ಸಮಕಾಲಿಕ ಅನುವಾದ

1 ಎಲ್ಲಾ ಜನರೇ, ಇದನ್ನು ಕೇಳಿರಿ; ಭೂಲೋಕದ ನಿವಾಸಿಗಳೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಸಕಲ ದೇಶಗಳ ಜನರೇ, ಕೇಳಿರಿ; ಭೂಲೋಕದ ನಿವಾಸಿಗಳೇ, ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವಜನಾಂಗಗಳೆ, ಗಮನಿಸಿರಿ I ಭೂನಿವಾಸಿಗಳೆ, ನನಗೆ ಕಿವಿಗೊಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಸಕಲ ದೇಶಗಳವರೇ, ಕೇಳಿರಿ; ಭೂಲೋಕದ ನಿವಾಸಿಗಳಿರಾ, ಕಿವಿಗೊಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಸರ್ವಜನಾಂಗಗಳೇ, ಕೇಳಿರಿ, ಭೂನಿವಾಸಿಗಳೆಲ್ಲರೇ, ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:1
22 ತಿಳಿವುಗಳ ಹೋಲಿಕೆ  

ನನ್ನ ಜನರೇ, ನನ್ನ ಬೋಧನೆಗೆ ಕಿವಿಗೊಡಿರಿ; ನನ್ನ ಬಾಯಿ ಮಾತುಗಳನ್ನು ಲಾಲಿಸಿರಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ಬಚ್ಚಿಟ್ಟಿರುವ ಮನ್ನಾವನ್ನು ಕೊಡುವೆನು. ಇದಲ್ಲದೆ ಅವರಿಗೆ ಬಿಳಿಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು. ಆ ಹೆಸರನ್ನು ಹೊಂದಿದವನಿಗೇ ಹೊರತು, ಅದು ಮತ್ತಾರಿಗೂ ತಿಳಿಯದು.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು, ಕಿವಿಯುಳ್ಳವರು ಕೇಳಲಿ. ಯಾರು ಜಯ ಹೊಂದುತ್ತಾರೋ ಅವರಿಗೆ ದೇವರ ಪರಲೋಕದಲ್ಲಿರುವ ಜೀವವೃಕ್ಷದ ಹಣ್ಣನ್ನು ತಿನ್ನಲು ಕೊಡುವೆನು.


ಆದರೆ ಇಸ್ರಾಯೇಲರು ಎಂದೂ ಸುವಾರ್ತೆಯನ್ನು ಕೇಳಲಿಲ್ಲವೋ ಎಂದು ನಾನು ಪ್ರಶ್ನಿಸುತ್ತೇನೆ? ಅವರು ನಿಶ್ಚಯವಾಗಿ ಕೇಳಿದ್ದಾರೆ. ಪವಿತ್ರ ವೇದದಲ್ಲಿ ಹೇಳಿರುವಂತೆ: “ಅವರ ಸ್ವರವು ಭೂಮಿಯ ಎಲ್ಲಾ ಕಡೆಗಳಲ್ಲಿ ಹೋಗಿರುತ್ತದೆ, ಅವರ ನುಡಿಗಳು ಲೋಕದ ಕಟ್ಟಕಡೆಯವರೆಗೂ ವ್ಯಾಪಿಸಿವೆ.”


ದೇವರು ಯೆಹೂದ್ಯರಿಗೆ ಮಾತ್ರ ದೇವರೋ? ದೇವರು ಯೆಹೂದ್ಯರಲ್ಲದವರಿಗೂ ಸಹ ದೇವರಾಗಿರುವುದಿಲ್ಲವೋ? ಹೌದು, ಯೆಹೂದ್ಯರಲ್ಲದವರಿಗೂ ಸಹ ದೇವರಾಗಿದ್ದಾರೆ.


ಕೇಳುವುದಕ್ಕೆ ಕಿವಿಯುಳ್ಳವನು ಕೇಳಿಸಿಕೊಳ್ಳಲಿ.


ಭೂಲೋಕವೆಲ್ಲಾ ಯೆಹೋವ ದೇವರಿಗೆ ಭಯಪಡಲಿ; ಭೂಲೋಕ ನಿವಾಸಿಗಳೆಲ್ಲರೂ ಅವರಿಗೆ ಭಯಭಕ್ತಿಯಿಂದಿರಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕೇಳಲು ಇಷ್ಟ ಉಳ್ಳವರು ಕೇಳಲಿ.


ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.


ಕೇಳುವುದಕ್ಕೆ ಕಿವಿಯುಳ್ಳವರು ಕೇಳಲಿ.”


ಸೂರ್ಯೋದಯವು ಮೊದಲುಗೊಂಡು ಅಸ್ತಮಾನದವರೆಗೂ, ನನ್ನ ಹೆಸರು ಎಲ್ಲಾ ಜನಾಂಗಗಳಲ್ಲಿ ಘನವಾಗಿರುವುದು. ಪ್ರತಿಯೊಂದು ಸ್ಥಳದಲ್ಲಿಯೂ ನನ್ನ ಹೆಸರಿಗೆ ಧೂಪವೂ, ಶುದ್ಧ ಕಾಣಿಕೆಯೂ ಅರ್ಪಿಸಲಾಗುವುದು. ಏಕೆಂದರೆ ನನ್ನ ಹೆಸರು ಇತರ ಜನಾಂಗಗಳಲ್ಲಿ ಘನವಾಗಿರುವುದು,” ಎಂದು ಸೇನಾಧೀಶ್ವರ ಯೆಹೋವ ದೇವರು ಹೇಳುತ್ತಾರೆ.


ಎಲ್ಲಾ ಜನಗಳೇ ಕೇಳಿರಿ, ಭೂಮಿಯೇ, ಅದರಲ್ಲಿರುವವರೆಲ್ಲರೇ, ಕಿವಿಗೊಡಿರಿ. ಸಾರ್ವಭೌಮ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದೊಳಗಿಂದ ನಿಮಗೆ ವಿರೋಧವಾಗಿ ಸಾಕ್ಷಿ ಹೇಳುವರು.


ಆತನೇ ಈಗ ಹೀಗೆನ್ನುತ್ತಾನೆ, “ನೀನು ನನ್ನ ಸೇವಕನಾಗಿ ಮಾಡಬೇಕಾದವುಗಳಲ್ಲಿ ಯಾಕೋಬಿನ ಕುಲಗಳನ್ನು ಉನ್ನತಪಡಿಸುವುದೂ, ಇಸ್ರಾಯೇಲಿನಲ್ಲಿ ರಕ್ಷಿತರಾದವರನ್ನು ತಿರುಗಿ ಬರಮಾಡುವುದೂ ಅಲ್ಪ ಕಾರ್ಯವಲ್ಲವೇ, ನನ್ನ ರಕ್ಷಣೆಯು ಭೂಲೋಕದ ಕಟ್ಟಕಡೆಯವರೆಗೆ ವ್ಯಾಪಿಸುವಂತೆ ನಿನ್ನನ್ನು ಸರ್ವಜನಾಂಗಗಳಿಗೂ ಬೆಳಕನ್ನಾಗಿ ಮಾಡುವೆನು.”


ಆಕಾಶಗಳೇ, ಕೇಳಿರಿ. ಭೂಮಿಯೇ, ಕಿವಿಗೊಡು. ಏಕೆಂದರೆ ಯೆಹೋವ ದೇವರು ಮಾತನಾಡುತ್ತಿದ್ದಾರೆ: “ನಾನು ಸಾಕಿ ಸಲಹಿದ ಮಕ್ಕಳೇ ನನಗೆ ವಿರೋಧವಾಗಿ ತಿರುಗಿಬಿದ್ದಿದ್ದಾರೆ.


ಮಕ್ಕಳೇ, ನೀವು ಬಂದು ನನ್ನ ಮಾತನ್ನು ಕೇಳಿರಿ; ನಾನು ಯೆಹೋವ ದೇವರ ಬಗ್ಗೆ ಭಯವನ್ನು ನಿಮಗೆ ಕಲಿಸುವೆನು.


ಯೆಹೋವ ದೇವರು ಮಹೋನ್ನತರೂ ನಮ್ಮ ದೇವರು ತಮ್ಮ ಪರಿಶುದ್ಧ ಪರ್ವತ ಪಟ್ಟಣದಲ್ಲಿ ಬಹಳವಾಗಿ ಸ್ತುತಿಗೆ ಪಾತ್ರರಾಗಿದ್ದಾರೆ.


ದೇವರು ನಮ್ಮ ಆಶ್ರಯವೂ ಬಲವೂ ಆಗಿದ್ದಾರೆ; ಇಕ್ಕಟ್ಟಿನಲ್ಲಿ ವಿಶೇಷ ಸಹಾಯಕರಾಗಿದ್ದಾರೆ.


ದೇವಾಧಿ ದೇವರಾದ ಯೆಹೋವ ದೇವರು ತಾವೇ ಮಾತನಾಡುತ್ತಿದ್ದಾರೆ, ಸೂರ್ಯೋದಯದಿಂದ ಅಸ್ತಮಾನದವರೆಗೂ ಇರುವ ಭೂಲೋಕದವರು ಕರೆಯುತ್ತಿದ್ದಾರೆ.


ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವುದೋ, ಹಾಗೆಯೇ ನನ್ನ ಪ್ರಾಣವು ನಿಮ್ಮನ್ನು ಬಯಸುತ್ತದೆ.


ಪ್ರವಾದಿಯಾದ ಯೆರೆಮೀಯನು ಯೆಹೂದದ ಸಮಸ್ತ ಜನರಿಗೂ, ಯೆರೂಸಲೇಮಿನ ಎಲ್ಲಾ ನಿವಾಸಿಗಳಿಗೂ ತಿಳಿಸಿದ್ದು ಏನೆಂದರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು