Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:5 - ಕನ್ನಡ ಸಮಕಾಲಿಕ ಅನುವಾದ

5 ಕೇಡಿನ ದಿವಸಗಳಲ್ಲಿ ನನಗೆ ಒಳಸಂಚು ಮಾಡುವವರ ಅಕ್ರಮವು ನನ್ನನ್ನು ಸುತ್ತಿಕೊಳ್ಳುವಾಗ ನಾನು ಏಕೆ ಭಯಪಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕೇಡಿನ ದಿನಗಳಲ್ಲಿ ಏಕೆ ಭಯಪಡಬೇಕು? ಶತ್ರುಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಏಕೆ ಹೆದರಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಆಪತ್ಕಾಲದಲಿ ನಾನೇಕೆ ಭಯಪಡಬೇಕು? I ದ್ವೇಷಿಗಳ ದಾಳಿಗೆ ನಾನೇಕೆ ಹೆದರಬೇಕು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಆಪತ್ತಿನಲ್ಲಿ ಯಾಕೆ ಭಯಪಡಬೇಕು? ದ್ವೇಷಿಗಳು ಮೋಸದಿಂದ ಸುತ್ತಿಕೊಂಡಿರುವಾಗ ನಾನು ಹೆದರುವದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆಪತ್ತು ಬಂದಾಗ ನಾನೇಕೆ ಭಯಪಡಬೇಕು? ದುಷ್ಟರು ನನ್ನನ್ನು ಆವರಿಸಿ ಮೋಸದಿಂದ ಹಿಡಿಯಲು ಪ್ರಯತ್ನಿಸುವಾಗ ನಾನೇಕೆ ಭಯಪಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:5
19 ತಿಳಿವುಗಳ ಹೋಲಿಕೆ  

‘ಪೌಲನೇ, ಭಯಪಡಬೇಡ. ನೀನು ಕೈಸರನ ಮುಂದೆ ನಿಲ್ಲಬೇಕು. ಇಗೋ, ದೇವರು ನಿನ್ನೊಂದಿಗೆ ಪ್ರಯಾಣ ಮಾಡುತ್ತಿರುವವರ ಪ್ರಾಣಗಳನ್ನು ನಿನಗೆ ಉಳಿಸಿಕೊಟ್ಟಿದ್ದಾರೆ,’ ಎಂದನು.


ನಿಮ್ಮ ವಿರೋಧಿಗಳಿಗೆ ಯಾವ ವಿಷಯದಲ್ಲಿಯೂ ಅಂಜದೆ ಧೈರ್ಯದಿಂದಿರಿ. ನೀವು ಧೈರ್ಯದಿಂದಿರುವುದು, ಅವರ ವಿನಾಶಕ್ಕೂ, ನಿಮ್ಮ ರಕ್ಷಣೆಗೂ ದೇವರಿಂದಾದ ಸೂಚನೆಯಾಗಿದೆ.


ಈ ದಿನಗಳು ಕೆಟ್ಟವುಗಳಾಗಿರುವುದರಿಂದ, ಸರ್ವ ಸದಾವಕಾಶಗಳನ್ನೂ ಸದ್ವಿನಿಯೋಗಿಸಿಕೊಳ್ಳಿರಿ.


ಆದ್ದರಿಂದ ಆ ಕಾಲದಲ್ಲಿ ಬುದ್ಧಿವಂತನು ಮೌನವಾಗಿರುವನು, ಏಕೆಂದರೆ ಅದು ಕೆಟ್ಟ ಕಾಲವಾಗಿದೆ.


ಆದರೆ ನಾನು ಅವರ ಕೆಟ್ಟತನವನ್ನೆಲ್ಲಾ ಜ್ಞಾಪಕ ಮಾಡುತ್ತೇನೆಂದು ಅವರು ತಮ್ಮ ಹೃದಯಗಳಲ್ಲಿ ನೆನೆಸಿಕೊಳ್ಳುವುದಿಲ್ಲ. ಈಗ ಅವರ ಪಾಪಗಳು ಅವರನ್ನು ಸುತ್ತಿಕೊಂಡಿವೆ. ಅವು ನನ್ನ ಮುಖದ ಮುಂದೆ ಇವೆ.


ಇಕ್ಕಟ್ಟಿನ ಸಮಯದಲ್ಲಿ ನೀನು ಬಳಲಿ ಹೋದರೆ, ನಿನ್ನ ಬಲವು ಕೊಂಚವಾಗಿದೆ.


ದುಷ್ಟನನ್ನು ಅವನ ಸ್ವಂತ ದ್ರೋಹಗಳೇ ಹಿಡಿಯುತ್ತವೆ; ತನ್ನ ಪಾಪಗಳ ಪಾಶಗಳೇ ಅವನನ್ನು ಬಂಧಿಸುತ್ತದೆ.


ಏಕೆಂದರೆ, ನನ್ನ ಅಕ್ರಮಗಳು ನನ್ನ ತಲೆಯ ಮೇಲೆ ಏರಿ ಹೋಗಿವೆ; ದೋಷ ಭಾವನೆಯ ಹೊರೆಯು ನನಗೆ ಬಹುಭಾರವಾಗಿವೆ.


ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.


ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.


ಆದ್ದರಿಂದ ಯೆಹೋವ ದೇವರ ಮುಖದ ಮುಂದೆ ನನ್ನ ರಕ್ತವು ನೆಲದ ಮೇಲೆ ಬೀಳದಿರಲಿ. ಒಬ್ಬನು ಬೆಟ್ಟಗಳಲ್ಲಿ ಕೌಜುಗವನ್ನು ಬೇಟೆಯಾಡುವಂತೆ, ಇಸ್ರಾಯೇಲಿನ ಅರಸನು ಒಂದು ನೊಣವನ್ನು ಹುಡುಕಲು ಹೊರಟನು,” ಎಂದನು.


ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.


ಆಗ ಅವನು ಪದ್ಯರೂಪವಾಗಿ ಹೇಳಿದ್ದೇನೆಂದರೆ: “ಬಾಲಾಕನು ನನ್ನನ್ನು ಅರಾಮಿನಿಂದಲೂ, ಮೋವಾಬಿನ ಅರಸನು ಪೂರ್ವ ಪರ್ವತಗಳಿಂದಲೂ ಕರೆಯಿಸಿ, ‘ನನಗೋಸ್ಕರ ಯಾಕೋಬನನ್ನು ಶಪಿಸಿ ಬಾ, ಇಸ್ರಾಯೇಲನ್ನು ಎದುರಿಸುವುದಕ್ಕೆ ಬಾ,’ ಎಂದು ನನಗೆ ಹೇಳಿದ್ದಾನೆ.


ನಾನು ಸಾಮ್ಯವನ್ನು ಹೇಳಲು ನನ್ನ ಬಾಯಿ ತೆರೆಯುವೆನು. ಪೂರ್ವದಿಂದಿರುವ ಗುಪ್ತವಾದವುಗಳನ್ನು ನುಡಿಯುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು