Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 49:6 - ಕನ್ನಡ ಸಮಕಾಲಿಕ ಅನುವಾದ

6 ಅವರು ತಮ್ಮ ಸಂಪತ್ತಿನಲ್ಲಿ ಭರವಸೆಯಿಟ್ಟು, ತಮ್ಮ ಅಧಿಕ ಐಶ್ವರ್ಯಗಳಲ್ಲಿ ಜಂಭಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಗರ್ವದಿಂದ ಉಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಅವರ ಭರವಸೆ ಸಿರಿಸಂಪತ್ತಿನಲಿ I ಅವರ ಹಿರಿಮೆ ಅಧಿಕಾಸ್ತಿಪಾಸ್ತಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವರು ತಮ್ಮ ಐಶ್ವರ್ಯವನ್ನೇ ನಂಬಿದ್ದಾರೆ; ತಾವು ಬಹಳ ಆಸ್ತಿವಂತರೆಂದು ಉಬ್ಬಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಅವರು ತಮ್ಮ ಸ್ವಂತ ಬಲದಲ್ಲಿಯೂ ಐಶ್ವರ್ಯದಲ್ಲಿಯೂ ಭರವಸೆಯಿಟ್ಟಿದ್ದಾರೆ; ಅವರು ಬುದ್ಧಿಹೀನರಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 49:6
17 ತಿಳಿವುಗಳ ಹೋಲಿಕೆ  

ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು.


ಯೆಹೋವ ದೇವರು ಹೀಗೆ ಹೇಳುತ್ತಾರೆ: “ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳ ಪಡದಿರಲಿ. ಬಲಿಷ್ಠನು ತನ್ನ ಬಲದಲ್ಲಿ ಹೆಚ್ಚಳ ಪಡದಿರಲಿ. ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳ ಪಡದಿರಲಿ.


“ಇಗೋ, ದೇವರನ್ನು ತನ್ನ ಬಲವನ್ನಾಗಿ ಮಾಡಿಕೊಳ್ಳದೆ, ತನ್ನ ಅಧಿಕ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡು ಇತರರನ್ನು ನಾಶಮಾಡಿದ ಮನುಷ್ಯನು ಇವನೇ!”


ಶಿಷ್ಯರು ಯೇಸುವಿನ ಮಾತುಗಳಿಗೆ ಬೆರಗಾದರು. ಆದರೆ ಯೇಸು ತಿರುಗಿ ಅವರಿಗೆ, “ಮಕ್ಕಳೇ, ದೇವರ ರಾಜ್ಯವನ್ನು ಪ್ರವೇಶಿಸುವುದು ಬಹಳ ಕಷ್ಟ.


ಅಲ್ಲದೆ, ನಾನು ನನ್ನ ಪ್ರಾಣಕ್ಕೆ, “ಪ್ರಾಣವೇ ಅನೇಕ ವರ್ಷಗಳಿಗಾಗಿ ನಿನಗೆ ಬಹಳ ಸರಕು ಇಡಲಾಗಿದೆ. ವಿಶ್ರಮಿಸಿಕೋ; ತಿನ್ನು, ಕುಡಿ ಮತ್ತು ಆನಂದವಾಗಿರು ಎಂದು ಹೇಳಿಕೊಳ್ಳುತ್ತೇನೆ,” ’ ಎಂದುಕೊಂಡನು.


ಎಫ್ರಾಯೀಮು ಹೆಚ್ಚಳ ಪಡುತ್ತಾ ಹೀಗೆಂದು ಹೇಳುತ್ತದೆ, “ನಾನು ಐಶ್ವರ್ಯವಂತನಾದೆನು, ನಾನು ಆಸ್ತಿಯನ್ನು ಕಂಡುಕೊಂಡೆನು. ನನ್ನ ಐಶ್ವರ್ಯದಿಂದಾಗಿ ಅವರು ನನ್ನಲ್ಲಿ ಯಾವ ಅಪರಾಧ ಅಥವಾ ಪಾಪವನ್ನು ಕಾಣುವುದಿಲ್ಲ.”


ಕಣ್ಣು ಮಿಟುಕಿಸುವುದರಲ್ಲಿ ಐಶ್ವರ್ಯ ಕಣ್ಮರೆಯಾಗುತ್ತದೆ. ಅದು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುವುದು.


ತನ್ನ ಐಶ್ವರ್ಯದಲ್ಲಿ ಭರವಸೆ ಇಡುವವನು ಬಿದ್ದುಹೋಗುವನು, ಆದರೆ ನೀತಿವಂತರು ಹಸಿರೆಲೆಯ ಹಾಗೆ ಚಿಗುರುವರು.


ಐಶ್ವರ್ಯವಂತರಿಗೆ ಸಂಪತ್ತೇ ಅವರ ಬಲವಾದ ಕೋಟೆ; ಆದರೆ, ಬಡತನವೇ ಬಡವರ ನಾಶನಕ್ಕೆ ಕಾರಣ.


ಅನ್ಯಾಯದ ಸುಲಿಗೆಯಲ್ಲಿ ಭರವಸೆ ಇಡಬೇಡಿರಿ. ಸೂರೆಮಾಡಿದ್ದರಲ್ಲಿ ಗರ್ವಪಡಬೇಡಿರಿ. ಆಸ್ತಿಯು ಹೆಚ್ಚಾದರೆ ಅದರ ಮೇಲೆ ಮನಸ್ಸಿಡಬೇಡಿರಿ.


ಹಾಮಾನನು ತನ್ನ ಐಶ್ವರ್ಯದ ಘನವನ್ನೂ, ತನ್ನ ಮಕ್ಕಳ ಹೆಚ್ಚಳವನ್ನೂ, ಅರಸನು ತನ್ನನ್ನು ಹೆಚ್ಚಿಸಿದ್ದನ್ನೂ, ಅರಸನ ಪ್ರಭುಗಳ ಹಾಗೂ ಸೇವಕರ ಮೇಲೆ ಎತ್ತಿದ್ದನ್ನೂ ಹೀಗೆ ಎಲ್ಲವನ್ನೂ ಅವರಿಗೆ ವಿವರವಾಗಿ ಹೇಳಿದನು.


ಶತ್ರುಗಳು ನನ್ನ ಮಾತುಗಳನ್ನು ಸದಾ ಅಪಾರ್ಥ ಮಾಡಿಕೊಳ್ಳುತ್ತಾರೆ. ನನಗೆ ವಿರೋಧವಾಗಿರುವ ಅವರ ಆಲೋಚನೆಗಳೆಲ್ಲಾ ಕೇಡಿಗಾಗಿವೆ.


ಅಪರಾಧದಿಂದ ಅವರು ತಪ್ಪಿಸಿಕೊಂಡಾರೋ? ದೇವರೇ ಜನರನ್ನು ಕಠಿಣವಾಗಿ ದಂಡಿಸಿರಿ.


ಅವರಿಗೆ ಅಶುಭದ ಸುದ್ದಿಯ ಭಯ ಇರುವುದಿಲ್ಲ; ಅವರ ಹೃದಯವು ಯೆಹೋವ ದೇವರಲ್ಲಿ ಭರವಸವಿಟ್ಟು ಸ್ಥಿರವಾಗಿರುವುದು.


ಅವರ ಹೃದಯವು ಸುರಕ್ಷಿತವಾಗಿರುವುದು. ಅವರು ತಮ್ಮ ವೈರಿಗಳಿಗಾಗುವ ಶಿಕ್ಷೆಯನ್ನು ನೋಡುವರು, ಭಯಪಡರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು