Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 5:9 - ಕನ್ನಡ ಸಮಕಾಲಿಕ ಅನುವಾದ

9 ಅವರ ಬಾಯಿಯಲ್ಲಿ ಯಥಾರ್ಥ ಮಾತು ಒಂದೂ ಇಲ್ಲ; ಅವರ ಹೃದಯವು ನಾಶನದಿಂದ ತುಂಬಿದೆ. ಅವರ ಗಂಟಲು ತೆರೆದ ಸಮಾಧಿಯೇ; ತಮ್ಮ ನಾಲಿಗೆಯಿಂದ ಮುಖಸ್ತುತಿ ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತನಾಡಿದರೂ, ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಅವರ ಬಾಯಲ್ಲಿ ಯಥಾರ್ಥತ್ವವಿಲ್ಲ; ಅವರು ನಾಲಿಗೆಯಿಂದ ಸವಿಮಾತಾಡಿದರೂ ಅವರ ಹೃದಯವು ನಾಶಕರವಾದ ಗುಂಡಿ, ಅವರ ಗಂಟಲು ತೆರೆದಿರುವ ಸಮಾಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಅವರ ಮಾತುಗಳಲ್ಲಿ ಸತ್ಯವೆಂಬುದೇ ಇಲ್ಲ. ಅವರ ಬಾಯಿಗಳು ಸವಿಮಾತುಗಳನ್ನಾಡಿದರೂ ಅವರ ಹೃದಯಗಳು ನಾಶಕರವಾದ ಗುಂಡಿಯಾಗಿವೆ. ಅವರ ಗಂಟಲು ತೆರೆದ ಸಮಾಧಿಗಳಂತಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 5:9
25 ತಿಳಿವುಗಳ ಹೋಲಿಕೆ  

“ಅವರ ಗಂಟಲುಗಳು ತೆರೆದ ಸಮಾಧಿಗಳು. ಅವರ ನಾಲಿಗೆಯು ವಂಚನೆಯನ್ನು ನುಡಿಯುತ್ತದೆ.” “ಅವರ ತುಟಿಗಳಲ್ಲಿ ಹಾವಿನ ವಿಷವಿದೆ.”


ಅವರು ನನ್ನನ್ನು ಉನ್ನತ ಸ್ಥಾನದಿಂದ ದಬ್ಬುವುದಕ್ಕೆ ಆಲೋಚಿಸುತ್ತಿದ್ದಾರೆ. ಅವರು ಸುಳ್ಳನ್ನು ಇಷ್ಟಪಡುತ್ತಾರೆ; ತಮ್ಮ ಬಾಯಿಂದ ಆಶೀರ್ವದಿಸಿ, ಹೃದಯದಲ್ಲಿ ಶಪಿಸುತ್ತಾರೆ.


ಅದರ ಐಶ್ವರ್ಯವಂತರು ಬಲಾತ್ಕಾರದಿಂದ ತುಂಬಿದ್ದಾರೆ. ಅದರ ನಿವಾಸಿಗಳು ಸುಳ್ಳುಗಳನ್ನು ಹೇಳುವವರಾಗಿದ್ದಾರೆ. ಅವರ ನಾಲಿಗೆ ಅವರ ಬಾಯಿಯಲ್ಲಿ ಕಪಟವುಳ್ಳದ್ದೇ.


ತನ್ನ ನೆರೆಯವನನ್ನು ಸುಮ್ಮನೇ ಹೊಗಳುತ್ತಿರುವವನು, ನೆರೆಯವನ ಕಾಲಿಗೆ ಬಲೆಯನ್ನು ಒಡ್ಡುತ್ತಾನೆ.


ಆದರೂ ಅಂತರಂಗದಲ್ಲಿ ನೀವು ಯಥಾರ್ಥವನ್ನು ಬಯಸುತ್ತೀರಿ. ನೀವು ಹೃದಯದ ಆಂತರ್ಯದಲ್ಲಿ ನನಗೆ ಜ್ಞಾನವನ್ನು ಬೋಧಿಸಿದ್ದೀರಿ.


“ನಿಮಗೆ ಕಷ್ಟ, ಏಕೆಂದರೆ ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ, ಅವುಗಳ ಮೇಲೆ ನಡೆದಾಡುವ ಮನುಷ್ಯರು ಅವುಗಳನ್ನು ಅರಿಯರು,” ಎಂದು ಹೇಳಿದರು.


ಮೋಸ ಮಾಡುವವನೇ, ಹದವಾದ ಕ್ಷೌರ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡನ್ನು ಕಲ್ಪಿಸುತ್ತದೆ.


ಹೃದಯವು ಎಲ್ಲಾದಕ್ಕಿಂತ ವಂಚನೆಯುಳ್ಳದ್ದಾಗಿಯೂ ಗುಣಪಡಿಸಲು ಅಸಾಧ್ಯವಾದದ್ದೂ ಆಗಿದೆ. ಅದನ್ನು ತಿಳಿಯುವವನ್ಯಾರು?


ಯೆರೂಸಲೇಮೇ, ನಿನಗೆ ರಕ್ಷಣೆಯಾಗುವ ಹಾಗೆ ನಿನ್ನ ಹೃದಯದ ಕೆಟ್ಟತನವನ್ನು ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರವರೆಗೆ ನಿನ್ನಲ್ಲಿ ತಂಗುವುವು.


ಅವರು ಅನ್ಯಾಯಗಳನ್ನು ಕಲ್ಪಿಸಿ, “ನಾವು ಒಳ್ಳೇ ಉಪಾಯವನ್ನು ಮಾಡಿದ್ದೇವೆ,” ಅಂದುಕೊಳ್ಳುತ್ತಾರೆ. ನಿಶ್ಚಯವಾಗಿ ಮಾನವರ ಆಂತರ್ಯವೂ ಹೃದಯವೂ ಕುಯುಕ್ತಿಯಿಂದ ಕೂಡಿದೆ.


ಸಾಮಾನ್ಯ ಜನರು ಬರೀ ಉಸಿರೇ, ಉನ್ನತ ಜನರು ಬರೀ ಸುಳ್ಳೇ. ತಕ್ಕಡಿಯಲ್ಲಿ ತೂಗಿದರೆ ಅವರೇನೂ ಇಲ್ಲ, ಎಲ್ಲರೂ ಬರೀ ಉಸಿರೇ.


ನಾವು ಎಂದಿಗೂ ನಿಮ್ಮನ್ನು ಹೊಗಳಿ ಮಾತನಾಡಲಿಲ್ಲ, ಕೌಶಲ್ಯವನ್ನು ಪ್ರಯೋಗಿಸಿ ಹಣದಾಸೆಯನ್ನು ಮರೆಮಾಡುವವರು ಆಗಿರಲಿಲ್ಲ ಎಂಬುದನ್ನು ನೀವು ತಿಳಿದಿರುವಿರಿ. ಇದಕ್ಕೆ ದೇವರೇ ಸಾಕ್ಷಿ.


ಆಗ ಕರ್ತದೇವರು ಅವನಿಗೆ, “ಫರಿಸಾಯರಾದ ನೀವು, ಪಾತ್ರೆಯ ಮತ್ತು ತಟ್ಟೆಯ ಹೊರಭಾಗವನ್ನು ಶುಚಿಮಾಡುತ್ತೀರಿ, ಆದರೆ ನಿಮ್ಮ ಒಳಭಾಗವು ಸುಲಿಗೆಯಿಂದಲೂ ಕೆಟ್ಟತನದಿಂದಲೂ ತುಂಬಿರುತ್ತದೆ.


ಆಗ ನಾವು ನಮ್ಮ ದೇವರ ಮುಂದೆ ನಮ್ಮನ್ನು ತಗ್ಗಿಸಿಕೊಳ್ಳುವುದಕ್ಕೂ, ನಮಗೂ ನಮ್ಮ ಮಕ್ಕಳಿಗೂ, ನಮ್ಮ ಎಲ್ಲಾ ಸ್ಥಿತಿಗೂ ಅವರಿಂದ ಸರಿಯಾದ ಮಾರ್ಗವನ್ನು ಹುಡುಕುವುದಕ್ಕೂ, ನಾನು ಅಲ್ಲಿ ಅಹಾವ ನದಿಯ ಬಳಿಯಲ್ಲಿ ಉಪವಾಸವನ್ನು ಮಾಡಲು ಪ್ರಕಟಿಸಿದೆನು.


ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.


ನೀವು ನನಗಿರುವ ನಿಂದೆ, ನಾಚಿಕೆ ಹಾಗೂ ನನ್ನ ಅವಮಾನವನ್ನೂ ತಿಳಿದಿದ್ದೀರಿ. ನನ್ನ ವೈರಿಗಳೆಲ್ಲರು ನಿಮ್ಮ ಮುಂದೆ ಇದ್ದಾರೆ.


ನೀತಿವಂತನ ಮಾರ್ಗವು ಸಮಾನವಾಗಿದೆ. ನೀನು ಅತ್ಯಧಿಕವಾದ ಯಥಾರ್ಥವಂತನು, ನೀತಿವಂತನ ದಾರಿಯನ್ನು ಸರಿಪಡಿಸಿ ಸಮಮಾಡುತ್ತಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು