Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 50:15 - ಕನ್ನಡ ಸಮಕಾಲಿಕ ಅನುವಾದ

15 ಇಕ್ಕಟ್ಟಿನ ದಿವಸದಲ್ಲಿ ನನ್ನನ್ನು ಕರೆಯಿರಿ, ನಾನು ನಿಮ್ಮನ್ನು ಬಿಡಿಸುವೆನು, ನೀವು ನನ್ನನ್ನು ಘನಪಡಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ, ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ; ಬಿಡಿಸುವೆನು; ಆಗ ನನ್ನನ್ನು ಕೊಂಡಾಡುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದೇವರು ಹೀಗೆನ್ನುತ್ತಾನೆ: “ಆಪತ್ಕಾಲಗಳಲ್ಲಿ ನನಗೆ ಮೊರೆಯಿಡಿರಿ! ನಾನು ನಿಮಗೆ ಸಹಾಯ ಮಾಡುವೆನು, ಆಗ ನೀವು ನನ್ನನ್ನು ಸನ್ಮಾನಿಸುವಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 50:15
32 ತಿಳಿವುಗಳ ಹೋಲಿಕೆ  

ಆಗ ಅವರು ಸಹ ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆಯಿಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಹೊರಗೆ ಬರಮಾಡಿದನು.


ಆತನು ನನ್ನನ್ನು ಕರೆಯುವನು ನಾನು ಆತನಿಗೆ ಉತ್ತರಕೊಡುವೆನು. ಇಕ್ಕಟ್ಟಿನಲ್ಲಿ ನಾನು ಆತನ ಸಂಗಡ ಇದ್ದು, ಆತನನ್ನು ಘನಪಡಿಸುವೆನು.


ಆಗ ಅವರು ಸಹ ಇಕ್ಕಟ್ಟಿನಲ್ಲಿ ಅವರು ಯೆಹೋವ ದೇವರಿಗೆ ಕೂಗಿದರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ರಕ್ಷಿಸಿದರು.


ಈ ಮೂರನೆಯ ಪಾಲನ್ನು ನಾನು ಬೆಂಕಿಯಲ್ಲಿ ಹಾಕಿ, ಬೆಳ್ಳಿಯನ್ನು ಶುದ್ಧ ಮಾಡುವಂತೆ ಶುದ್ಧಮಾಡುವೆನು. ಬಂಗಾರವನ್ನು ಶೋಧಿಸುವ ಪ್ರಕಾರ ಅವರನ್ನು ಶೋಧಿಸುವೆನು. ಅವರು ನನ್ನ ಹೆಸರನ್ನು ಕರೆಯುವರು. ನಾನು ಅವರಿಗೆ ಉತ್ತರಕೊಡುವೆನು. ನಾನು, ‘ಇವರು ನನ್ನ ಜನರೆಂದು ಹೇಳುವೆನು,’ ‘ಯೆಹೋವ ದೇವರು ನಮ್ಮ ದೇವರು’ ಎಂದು ಅವರು ಹೇಳುವರು,” ಎಂದು ಹೇಳುತ್ತೇನೆ.


ಇಕ್ಕಟ್ಟಿನಲ್ಲಿ ನೀವು ಕರೆಮಾಡಿದಿರಿ, ಆಗ ನಾನು ನಿಮ್ಮನ್ನು ವಿಮೋಚಿಸಿದೆನು. ಗುಡುಗಿನ ಮರೆಯಲ್ಲಿ ನಿನಗೆ ಉತ್ತರಕೊಟ್ಟೆನು. ಮೆರೀಬಾ ನೀರಿನ ಹತ್ತಿರ ನಿಮ್ಮನ್ನು ಪರೀಕ್ಷಿಸಿದೆನು.


ನಿಮ್ಮಲ್ಲಿ ಯಾವನಾದರೂ ಬಾಧೆಪಡುವವನು ಇದ್ದಾನೋ? ಅವನು ಪ್ರಾರ್ಥಿಸಲಿ. ನಿಮ್ಮಲ್ಲಿ ಯಾವನಾದರೂ ಸಂತೋಷ ಪಡುವವನಿದ್ದಾನೋ? ಅವನು ಕೀರ್ತನೆಗಳನ್ನು ಹಾಡಲಿ.


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ನೀನು ದೇವರಿಗೆ ಪ್ರಾರ್ಥನೆಮಾಡುವೆ, ನಿನ್ನ ಪ್ರಾರ್ಥನೆಯನ್ನು ದೇವರು ಕೇಳುವರು; ನೀನು ಮಾಡಿದ ಹರಕೆಗಳನ್ನು ಸಲ್ಲಿಸುವೆ.


ಸುಮಾರು ಮಧ್ಯರಾತ್ರಿಯಲ್ಲಿ ಪೌಲ, ಸೀಲರು ಪ್ರಾರ್ಥನೆ ಮಾಡುವವರಾಗಿ ಸ್ತುತಿಗೀತೆಯಿಂದ ದೇವರಿಗೆ ಸ್ತೋತ್ರ ಮಾಡುತ್ತಿದ್ದರು. ಸೆರೆಮನೆಯಲ್ಲಿ ಇತರ ಕೈದಿಗಳು ಅದನ್ನು ಆಲಿಸುತ್ತಿದ್ದರು.


ಅದೇ ರೀತಿಯಲ್ಲಿ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ; ಹೀಗಾದರೆ ಜನರು ನಿಮ್ಮ ಸತ್ಕ್ರಿಯೆಗಳನ್ನು ಕಂಡು ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವರು.


ನೀವು ಬಹಳ ಫಲಕೊಡುವುದರಿಂದಲೇ ನನ್ನ ಶಿಷ್ಯರಾಗಿರುವಿರಿ, ಇದರಿಂದ ನನ್ನ ತಂದೆಗೆ ಮಹಿಮೆಯಾಗುವುದು.


ನನ್ನ ಇಕ್ಕಟ್ಟಿನ ದಿವಸದಲ್ಲಿ ಯೆಹೋವ ದೇವರನ್ನು ಹುಡುಕಿದೆನು. ನಾನು ರಾತ್ರಿಯೆಲ್ಲಾ ಬೇಸರವಿಲ್ಲದೆ ಕೈಚಾಚಿದೆ. ನನ್ನ ಮನಸ್ಸಿಗೆ ಶಾಂತಿ ಇರಲಿಲ್ಲ.


ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.


ನೀವು ಕ್ರಿಸ್ತ ಯೇಸುವಿನ ಹೆಸರಿನ ನಿಮಿತ್ತ ನಿಂದೆಗೆ ಗುರಿಯಾದರೆ, ಧನ್ಯರು. ಏಕೆಂದರೆ, ಮಹಿಮೆಯ ಆತ್ಮರೂ, ದೇವರೂ ನಿಮ್ಮಲ್ಲಿ ವಾಸಿಸುತ್ತಾರೆ.


ಯಾರು ಧನ್ಯವಾದದ ಬಲಿಯನ್ನು ಅರ್ಪಿಸುವರೋ ಅವರೇ ನನ್ನನ್ನು ಘನಪಡಿಸುವರು. ತಮ್ಮ ನಡವಳಿಕೆಯನ್ನು ಕ್ರಮಪಡಿಸಿಕೊಳ್ಳುವವರಿಗೆ ನನ್ನ ರಕ್ಷಣೆಯನ್ನು ತೋರಿಸುವೆನು.”


ಒಬ್ಬನು ಬೋಧಿಸುವವನಾದರೆ ದೇವರ ವಾಕ್ಯವನ್ನು ನುಡಿಯುವವನಾಗಿ ಬೋಧಿಸಲಿ. ಒಬ್ಬನು ಸೇವೆ ಮಾಡುವವನಾದರೆ ದೇವರಿಂದ ಶಕ್ತಿಯನ್ನು ಹೊಂದಿದವನಾಗಿ ಮಾಡಲಿ. ಇದರಿಂದ ಎಲ್ಲದರಲ್ಲಿ ಕ್ರಿಸ್ತ ಯೇಸುವಿನ ಮೂಲಕ ದೇವರಿಗೆ ಮಹಿಮೆಯೂ ಸ್ತೋತ್ರವೂ ಅಧಿಪತ್ಯವೂ ಯುಗಯುಗಾಂತರಗಳಲ್ಲಿ ಇರಲಿ. ಆಮೆನ್.


ಆಗ ದೇವರು ಲೇಹಿಯಲ್ಲಿ ಟೊಳ್ಳಾದ ಸ್ಥಳವನ್ನು ಸೀಳಿಬಿಟ್ಟರು. ಅದರೊಳಗಿಂದ ನೀರು ಹೊರಟು ಬಂತು. ಸಂಸೋನನು ಆ ನೀರನ್ನು ಕುಡಿದದ್ದರಿಂದ ಅವನ ಬಲ ತಿರುಗಿಬಂದು, ಅವನು ಚೇತರಿಸಿಕೊಂಡನು. ಆದ್ದರಿಂದ ಏನ್ ಹಕ್ಕೋರೇ ಎಂದು ಅದಕ್ಕೆ ಹೆಸರಾಯಿತು. ಈ ದಿವಸದವರೆಗೂ ಅದು ಲೇಹಿಯಲ್ಲಿ ಇದೆ.


ಆಗ ಹಿಜ್ಕೀಯನು ತನ್ನ ಮುಖವನ್ನು ಗೋಡೆಯ ಕಡೆಗೆ ತಿರುಗಿಸಿ,


‘ನಿಮ್ಮ ಹೆಸರು ಈ ಆಲಯದಲ್ಲಿರುವುದರಿಂದ ಖಡ್ಗವೂ ನ್ಯಾಯತೀರಿಸುವ ಶಿಕ್ಷೆಯೂ, ಘೋರವ್ಯಾಧಿಯೂ ಬರವೇನಾದರೂ ನಮ್ಮ ಮೇಲೆ ಬಂದರೆ, ನಾವು ಈ ಆಲಯದ ಮುಂದೆಯೂ, ನಿಮ್ಮ ಸಮ್ಮುಖದಲ್ಲಿಯೂ ನಿಂತು, ನಮ್ಮ ಇಕ್ಕಟ್ಟಿನಲ್ಲಿ ನಿಮ್ಮನ್ನು ಕೂಗುವಾಗ, ನೀವು ಕೇಳಿ ರಕ್ಷಿಸುವಿರಿ,’ ಎಂದು ಹೇಳಲಿಲ್ಲವೇ?


ಓ ಮಾನವ, ನೀನು ಎಲ್ಲಿಯತನಕ ನನ್ನ ಮಹಿಮೆಯನ್ನು ಅವಮಾನಕ್ಕೆ ಗುರಿಪಡಿಸುವಿ? ನೀನು ಎಲ್ಲಿಯತನಕ ವ್ಯರ್ಥವಾದದ್ದನ್ನು ಪ್ರೀತಿಸಿ, ಸುಳ್ಳನ್ನು ಹುಡುಕುವಿ?


ದೇವರನ್ನು ದೃಷ್ಟಿಸಿದವರು ಪ್ರಕಾಶ ಹೊಂದಿದರು; ಅಂಥವರ ಮುಖಗಳು ನಾಚಿಕೆಯಿಂದ ಕುಂದಿಹೋಗುವುದಿಲ್ಲ.


ದೇವರಿಗೆ ಭಯಪಡುವವರ ಸುತ್ತಲೂ ಯೆಹೋವ ದೇವರ ದೂತನು ಇಳಿದುಕೊಂಡು ಅವರನ್ನು ಕಾಪಾಡುತ್ತಾನೆ.


ನಾನು ವ್ಯಥೆಪಡುತ್ತಿರುವಾಗ, ದೇವರನ್ನು ಜ್ಞಾಪಕಮಾಡಿಕೊಂಡೆನು. ನಾನು ಚಿಂತಿಸುವುದರಿಂದ ನನ್ನ ಆತ್ಮವು ಬಳಲಿ ಹೋಯಿತು.


ಯೆಹೋವ ದೇವರೇ, ನೀವು ಒಳ್ಳೆಯವರೂ ಕ್ಷಮಿಸುವುದಕ್ಕೆ ಸಿದ್ಧರೂ ಆಗಿದ್ದೀರಿ. ನಿಮ್ಮನ್ನು ಬೇಡುವವರೆಲ್ಲರಿಗೆ ಪ್ರೀತಿಯಲ್ಲಿ ಸಮೃದ್ಧಿವಂತರೂ ಆಗಿರುವಿರಿ.


ನನ್ನ ಇಕ್ಕಟ್ಟಿನ ದಿವಸದಲ್ಲಿ ನಿಮ್ಮನ್ನು ಕರೆಯುವೆನು. ನೀವು ನನಗೆ ಉತ್ತರ ಕೊಡುವಿರಿ.


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ಆದರೆ ಆ ದಿವಸದಲ್ಲಿ ನಾನು ನಿನ್ನನ್ನು ಬಿಡುಗಡೆ ಮಾಡುವೆನೆಂದು ಯೆಹೋವ ದೇವರು ಹೇಳುತ್ತಾರೆ. ನೀನು ಹೆದರಿಕೊಳ್ಳುವ ಮನುಷ್ಯರ ಕೈಯಲ್ಲಿ ಒಪ್ಪಿಸಲಾಗುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು