Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:11 - ಕನ್ನಡ ಸಮಕಾಲಿಕ ಅನುವಾದ

11 ನಿಮ್ಮ ಸನ್ನಿಧಿಯಿಂದ ನನ್ನನ್ನು ಹೊರ ದೂಡಬೇಡಿರಿ; ನಿಮ್ಮ ಪರಿಶುದ್ಧಾತ್ಮರನ್ನು ನನ್ನಿಂದ ತೆಗೆಯಬೇಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ತಳ್ಳಬೇಡೆನ್ನನು ದೇವಾ, ನಿನ್ನ ಸನ್ನಿಧಿಯಿಂದ I ದೂಡಬೇಡ ನಿನ್ನ ಪವಿತ್ರಾತ್ಮನನು ನನ್ನಿಂದ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಬೇಡ; ನಿನ್ನ ಪರಿಶುದ್ಧಾತ್ಮವನ್ನು ನನ್ನಿಂದ ತೆಗೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಸನ್ನಿಧಿಯಿಂದ ನನ್ನನ್ನು ತಳ್ಳಿಬಿಡಬೇಡ! ನಿನ್ನ ಪವಿತ್ರಾತ್ಮನನ್ನು ನನ್ನಿಂದ ತೆಗೆಯಬೇಡ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:11
23 ತಿಳಿವುಗಳ ಹೋಲಿಕೆ  

ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ.


ಆದರೆ ಯೆಹೋವ ದೇವರು ಅಬ್ರಹಾಮನ, ಇಸಾಕನ, ಯಾಕೋಬನ ಸಂಗಡ ಒಡಂಬಡಿಕೆಯನ್ನು ಮಾಡಿದ್ದರಿಂದ ಇಸ್ರಾಯೇಲರಿಗೆ ಕೃಪೆತೋರಿಸಿ ಅವರ ಮೇಲೆ ಅನುಕಂಪಗೊಂಡರು. ಅವರನ್ನು ನಾಶಮಾಡಲು, ಆತನು ಅವರನ್ನು ತನ್ನಿಂದ ತೊರೆದುಬಿಡಲು ಅವರನ್ನು ತನ್ನ ಸಮ್ಮುಖದಿಂದ ಹೊರಡಿಸಲು ಮನಸ್ಸು ಮಾಡಲಿಲ್ಲ.


ಆದರೆ ದೇವರ ಆತ್ಮವು ನಿಮ್ಮಲ್ಲಿ ಇರುವುದು ನಿಜವಾಗಿದ್ದರೆ ನೀವು ಮಾಂಸಭಾವಾಧೀನರಾಗಿರದೆ ದೇವರ ಆತ್ಮನಿಗೆ ಅಧೀನರಾಗಿದ್ದೀರಿ. ಕ್ರಿಸ್ತ ಯೇಸುವಿನ ಆತ್ಮ ಇಲ್ಲದವನು ಕ್ರಿಸ್ತ ಯೇಸುವಿಗೆ ಸೇರಿದವನಲ್ಲ.


ಆಗ ಯೆಹೋವ ದೇವರು, “ನನ್ನ ಆತ್ಮವು ಮನುಷ್ಯರಲ್ಲಿ ನಿತ್ಯವಾಗಿ ಇರುವುದಿಲ್ಲ. ಏಕೆಂದರೆ ಅವರು ಮರ್ತ್ಯರೇ. ಆದರೂ ಅವರ ಆಯುಷ್ಯವು ನೂರ ಇಪ್ಪತ್ತು ವರ್ಷಗಳಾಗಿರುವುದು,” ಎಂದರು.


ತಂದೆಯು ನನ್ನ ಹೆಸರಿನಲ್ಲಿ ಕಳುಹಿಸಿಕೊಡುವ ಸಹಾಯಕ ‘ಪವಿತ್ರಾತ್ಮರು’ ಎಲ್ಲವನ್ನೂ ನಿಮಗೆ ಬೋಧಿಸಿ ನಾನು ನಿಮಗೆ ಹೇಳಿದ್ದನ್ನೆಲ್ಲಾ ನಿಮ್ಮ ನೆನಪಿಗೆ ತರುವರು.


ಹಾಗಾದರೆ ಕೆಟ್ಟವರಾದ ನೀವೇ ನಿಮ್ಮ ಮಕ್ಕಳಿಗೆ ಒಳ್ಳೆಯವುಗಳನ್ನು ಕೊಡಬಲ್ಲವರಾದರೆ, ಪರಲೋಕದಲ್ಲಿರುವ ನಿಮ್ಮ ತಂದೆಯು ಎಷ್ಟೋ ಹೆಚ್ಚಾಗಿ ತಮ್ಮನ್ನು ಬೇಡಿಕೊಳ್ಳುವವರಿಗೆ ಪವಿತ್ರಾತ್ಮರನ್ನು ದಯಪಾಲಿಸುವರಲ್ಲವೇ!” ಎಂದು ನಾನು ನಿಮಗೆ ಹೇಳುತ್ತೇನೆ ಎಂದರು.


ದೇವರೇ, ನಾನು ಮುಪ್ಪಿನವನೂ, ನೆರೆಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿಮ್ಮ ಶಕ್ತಿಯನ್ನೂ, ಮುಂದಿನ ಪೀಳಿಗೆಗೆ ನಿಮ್ಮ ಪರಾಕ್ರಮವನ್ನೂ ತಿಳಿಸುವವರೆಗೂ ನನ್ನನ್ನು ಕೈಬಿಡಬೇಡಿರಿ.


ಯೆಹೋವ ದೇವರ ಆತ್ಮರು ಸೌಲನನ್ನು ಬಿಟ್ಟುಹೋಗಲು, ದೇವರಿಂದ ಬಂದ ದುರಾತ್ಮವು ಅವನನ್ನು ಪೀಡಿಸಿತು.


ಅವನು ಗಿಬೆಯದ ಗುಡ್ಡಕ್ಕೆ ಬಂದಾಗ, ಪ್ರವಾದಿಗಳ ಗುಂಪು ಅವನೆದುರಿಗೆ ಬಂತು. ಆಗ ದೇವರ ಆತ್ಮವು ಅವನ ಮೇಲೆ ಬಂದದ್ದರಿಂದ, ಅವರಲ್ಲಿದ್ದು ಪ್ರವಾದಿಸಿದನು.


ಅವಳು, “ಸಂಸೋನನೇ, ಫಿಲಿಷ್ಟಿಯರು ನಿನ್ನ ಮೇಲೆ ಬಂದಿದ್ದಾರೆ,” ಎಂದಳು. ಅವನು ತನ್ನ ನಿದ್ರೆಯಿಂದ ಎಚ್ಚತ್ತು, “ಮೊದಲಿನಂತೆಯೇ ನಾನು ಹೊರಗೆ ಹೋಗಿ ಬಿಡುಗಡೆಯಾಗುವೆನು,” ಎಂದುಕೊಂಡನು. ಆದರೆ ಯೆಹೋವ ದೇವರು ತನ್ನನ್ನು ಬಿಟ್ಟು ಹೋಗಿದ್ದಾರೆಂದು ಅವನು ಅರಿಯಲಿಲ್ಲ.


ಅಂಥವರು ಕರ್ತ ಯೇಸುವಿನ ಸನ್ನಿಧಿಯಿಂದಲೂ ಅವರ ಮಹಿಮೆಯ ಬಲದಿಂದಲೂ ಬಹಿಷ್ಕೃತರಾಗಿ ನಿತ್ಯನಾಶದ ಶಿಕ್ಷೆಯನ್ನು ಅನುಭವಿಸುವರು.


ನನ್ನ ಮುಪ್ಪಿನ ಕಾಲದಲ್ಲಿ ನನ್ನನ್ನು ತಳ್ಳಿಬಿಡಬೇಡಿರಿ. ನನ್ನ ಶಕ್ತಿಯು ಕುಂದುತ್ತಿರುವಾಗ ನನ್ನನ್ನು ಕೈಬಿಡಬೇಡಿರಿ.


ಯೆಹೋವ ದೇವರ ಕೋಪದಿಂದ ಯೆರೂಸಲೇಮಿನ ಮತ್ತು ಯೆಹೂದದ ಮೇಲೆ ಇವೆಲ್ಲ ಉಂಟಾದವು. ಹೀಗೆ ಯೆಹೋವ ದೇವರು ಅವರನ್ನು ತಮ್ಮ ಸಮ್ಮುಖದಿಂದ ತಳ್ಳಿಬಿಟ್ಟರು. ಅನಂತರ ಚಿದ್ಕೀಯನು ಬಾಬಿಲೋನಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.


ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ.


ಅವನು ಲೇಹಿಗೆ ಬಂದಾಗ, ಫಿಲಿಷ್ಟಿಯರು ಅವನ ಎದುರಾಗಿ ಆರ್ಭಟಿಸುತ್ತಾ ಬಂದರು. ಯೆಹೋವ ದೇವರ ಆತ್ಮ ಅವನ ಮೇಲೆ ಬಲವಾಗಿ ಬಂದದ್ದರಿಂದ, ಅವನ ತೋಳುಗಳಲ್ಲಿ ಕಟ್ಟಿದ್ದ ಸೆಣಬಿನ ಹಗ್ಗಗಳು ಬೆಂಕಿಯಲ್ಲಿ ಸುಟ್ಟುಹೋದ ದಾರದ ಹಾಗೆ ಆದವು. ಅವನ ಕೈಯಲ್ಲಿ ಇದ್ದ ಕಟ್ಟುಗಳು ಬಿಚ್ಚಿಬಿದ್ದವು.


ನಿಮ್ಮ ಸಹೋದರರೆಲ್ಲರನ್ನೂ, ಎಫ್ರಾಯೀಮಿನ ಎಲ್ಲಾ ಸಂತಾನವನ್ನೂ ಹೊರಗೆ ಹಾಕಿದ ಹಾಗೆ, ನಿಮ್ಮನ್ನು ನನ್ನ ಸಮ್ಮುಖದಿಂದ ಹೊರಗೆ ಹಾಕುವೆನು.’


ನೀವು ನನ್ನ ದೇವರು, ನನ್ನ ಬಲವಾದ ಕೋಟೆಯು; ನೀವು ಏಕೆ ನನ್ನನ್ನು ತಳ್ಳಿಬಿಟ್ಟಿದ್ದೀರಿ? ಏಕೆ ನಾನು ಶತ್ರುವಿನ ಬಾಧೆಯಿಂದ ದುಃಖದಲ್ಲಿ ನಡೆದುಕೊಳ್ಳಬೇಕು?


ಇಗೋ, ನೀವು ಈ ದಿನ ನನ್ನನ್ನು ಸ್ವದೇಶದಿಂದ ಓಡಿಸುತ್ತಿದ್ದೀರಲ್ಲಾ! ನಿಮ್ಮ ಸಮ್ಮುಖದಿಂದ ನಾನು ಮರೆಯಾಗಿರಬೇಕಾಯಿತು. ಭೂಮಿಯಲ್ಲಿ ಅಲೆಮಾರಿಯಾಗಿರಬೇಕು. ಇದಲ್ಲದೆ ನನ್ನನ್ನು ಕಂಡವರು ಕೊಲ್ಲುವರು,” ಎಂದನು.


ಸತ್ತವರೊಳಗಿಂದ ಪುನರುತ್ಥಾನಗೊಂಡು ಪರಿಶುದ್ಧತೆಯ ಆತ್ಮದ ಪ್ರಕಾರ ದೇವಪುತ್ರರೆಂದು ಪ್ರಬಲವಾಗಿ ನಿರ್ಣಯಿಸಲಾದವರೂ ಆಗಿದ್ದಾರೆ. ಇವರೇ ನಮ್ಮ ಕರ್ತ ಯೇಸು ಕ್ರಿಸ್ತ.


ಯೆಹೋವ ದೇವರು, “ನಾನು ಇಸ್ರಾಯೇಲನ್ನು ತೆಗೆದುಹಾಕಿದ ಹಾಗೆ ಯೆಹೂದವನ್ನು ಸಹ ನನ್ನ ಸಮ್ಮುಖದಿಂದ ತೆಗೆದುಹಾಕುವೆನು. ಇದಲ್ಲದೆ ನಾನು ಆಯ್ದುಕೊಂಡ ಯೆರೂಸಲೇಮ್ ಪಟ್ಟಣವನ್ನೂ, ‘ನನ್ನ ಹೆಸರು ಅಲ್ಲಿರುವುದು,’ ಎಂದು ನಾನು ಹೇಳಿದ ಆಲಯವನ್ನೂ ತೆಗೆದುಬಿಡುವೆನು,” ಎಂದು ಹೇಳಿದರು.


ಇದಲ್ಲದೆ ಚೊರ್ಗಕ್ಕೂ ಎಷ್ಟಾವೋಲಿಗೂ ಮಧ್ಯದಲ್ಲಿ ದಾನನ ದಂಡಿನಲ್ಲಿ ಅವನನ್ನು ಯೆಹೋವ ದೇವರ ಆತ್ಮರು ಆಗಾಗ್ಗೆ ಪ್ರೇರೇಪಿಸುವುದಕ್ಕೆ ಪ್ರಾರಂಭಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು