Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 51:4 - ಕನ್ನಡ ಸಮಕಾಲಿಕ ಅನುವಾದ

4 ನಿಮಗೇ ನಿಮಗೊಬ್ಬರಿಗೆ ಮಾತ್ರ ವಿರೋಧವಾಗಿ ನಾನು ಪಾಪಮಾಡಿ, ನಿಮ್ಮ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವುದ್ದನ್ನೇ ಮಾಡಿದ್ದೇನೆ. ಹೀಗೆ ನೀವು ನ್ಯಾಯತೀರಿಸುವಾಗ ನೀತಿವಂತರಾಗಿಯೂ ನೀವು ತೀರ್ಪು ನಿರ್ಣಯಿಸುವಾಗ ನ್ಯಾಯವಂತರಾಗಿಯೂ ಇರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಿನಗೇ, ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವುದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ, ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಿನಗೇ ಕೇವಲ ನಿನಗೇ ತಪ್ಪುಮಾಡಿದ್ದೇನೆ; ನಿನ್ನ ದೃಷ್ಟಿಗೆ ಕೆಟ್ಟದ್ದಾಗಿರುವದನ್ನೇ ಮಾಡಿದ್ದೇನೆ. ನಿನ್ನ ನಿರ್ಣಯ ನ್ಯಾಯವಾಗಿಯೂ ನಿನ್ನ ತೀರ್ಪು ನಿಷ್ಕಳಂಕವಾಗಿಯೂ ಇರುತ್ತದಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಿನ್ನ ದೃಷ್ಟಿಗೆ ಕೆಟ್ಟದ್ದಾಗಿದ್ದನ್ನೇ ಮಾಡಿದ್ದೇನೆ. ಹೌದು, ನಾನು ಪಾಪ ಮಾಡಿದ್ದು ನಿನಗೇ. ನಾನು ತಪ್ಪಿತಸ್ಥನೆಂತಲೂ ನೀನು ನೀತಿವಂತನೆಂತಲೂ ಜನರಿಗೆ ಗೊತ್ತಾಗಲೆಂದೇ ಇವುಗಳನ್ನು ಅರಿಕೆಮಾಡಿಕೊಳ್ಳುತ್ತಿದ್ದೇನೆ. ನಿನ್ನ ತೀರ್ಪುಗಳು ನ್ಯಾಯಬದ್ಧವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 51:4
23 ತಿಳಿವುಗಳ ಹೋಲಿಕೆ  

“ಆದರೂ ಮಗನು ತಂದೆಗೆ, ‘ಅಪ್ಪಾ, ನಾನು ಪರಲೋಕಕ್ಕೆ ವಿರೋಧವಾಗಿಯೂ ನಿಮ್ಮ ಮುಂದೆಯೂ ಪಾಪಮಾಡಿದ್ದೇನೆ. ಇನ್ನೆಂದಿಗೂ ನಾನು ನಿಮ್ಮ ಮಗನೆಂದು ಕರೆಯಿಸಿಕೊಳ್ಳಲು ಯೋಗ್ಯನಲ್ಲ,’ ಎಂದನು.


ಎಂದಿಗೂ ಹಾಗೆ ಆಗದಿರಲಿ. ಆದರೆ ಪ್ರತಿ ಮನುಷ್ಯನು ಸುಳ್ಳುಗಾರನಾದರೂ ದೇವರು ಸತ್ಯವಂತರೇ. ಪವಿತ್ರ ವೇದದಲ್ಲಿ ಹೀಗೆ ಬರೆದಿದೆ: “ನೀನು ನಿನ್ನ ಮಾತುಗಳಲ್ಲಿಯೇ ನೀತಿವಂತನೆಂದು ನಿರ್ಣಯಿಸಲಾಗುವೆ. ನಿನ್ನ ಮೇಲೆ ತೀರ್ಪು ಮಾಡುವಾಗ ನೀನು ಜಯಿಸಬೇಕು.”


ಈ ಮನೆಯಲ್ಲಿ ನನಗಿಂತ ದೊಡ್ಡವನಾರೂ ಇಲ್ಲ. ನೀನು ಅವನ ಹೆಂಡತಿಯಾಗಿರುವುದರಿಂದ, ನಿನ್ನನ್ನು ಹೊರತುಪಡಿಸಿ ನನಗೆ ಮತ್ತೇನೂ ಮರೆಮಾಡಲಿಲ್ಲ. ಹಾಗಿರುವಲ್ಲಿ ನಾನು ಈ ಮಹಾ ದುಷ್ಕೃತ್ಯ ಮಾಡಿ, ದೇವರಿಗೆ ವಿರೋಧವಾಗಿ ಪಾಪ ಮಾಡುವುದು ಹೇಗೆ?” ಎಂದನು.


ಅದಕ್ಕೆ ದೇವರು ಕನಸಿನಲ್ಲಿ ಅವನಿಗೆ, “ಹೌದು, ನೀನು ಇದನ್ನು ಯಥಾರ್ಥವಾದ ಹೃದಯದಿಂದಲೇ ಮಾಡಿದ್ದೀಯೆ ಎಂದು ನನಗೂ ತಿಳಿದಿದೆ. ಆದ್ದರಿಂದ ನೀನು ನನಗೆ ವಿರೋಧವಾಗಿ ಪಾಪಮಾಡದಂತೆ ನಾನು ನಿನ್ನನ್ನು ತಡೆದು, ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಆಗ ಜಲಾಶಯದ ಜಲಗಳ ದೂತನು: “ನೀವು ಇದ್ದವರೂ, ಇರುವವರೂ ಆಗಿರುವ ಪರಿಶುದ್ಧರು. ನೀವು ನೀತಿವಂತರಾಗಿದ್ದೀರಿ. ಏಕೆಂದರೆ, ನೀವು ಇವುಗಳಿಗೆ ನ್ಯಾಯತೀರಿಸುವಿರಿ.


ನೀವು ಪಕ್ಷಪಾತಿಗಳಾಗಿದ್ದರೆ ಪಾಪಮಾಡುವವರಾಗಿದ್ದೀರಿ. ಮಾತ್ರವಲ್ಲದೆ ಮೋಶೆಯ ನಿಯಮದ ಪ್ರಕಾರ ಅಪರಾಧಿಗಳೆಂದು ನಿರ್ಣಯ ಹೊಂದುತ್ತೀರಿ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


ಏಕೆಂದರೆ ದೇವರು ನೇಮಿಸಿದ ಒಬ್ಬರ ಮುಖಾಂತರ ಇಡೀ ಜಗತ್ತಿಗೆ ನೀತಿಗನುಸಾರವಾಗಿ ನ್ಯಾಯತೀರ್ಪು ಮಾಡುವ ಒಂದು ದಿನವನ್ನು ನೇಮಕ ಮಾಡಿದ್ದಾರೆ. ಇದನ್ನು ಎಲ್ಲರಿಗೂ ಖಚಿತ ಪಡಿಸಲೆಂದೇ ಆ ಒಬ್ಬರನ್ನು ಸತ್ತವರೊಳಗಿಂದ ಜೀವಂತವಾಗಿ ಎಬ್ಬಿಸಿದ್ದಾರೆ.”


ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು.


ಮತ್ತು ದೇವರು ನ್ಯಾಯಾಧಿಪತಿಯಾಗಿದ್ದಾರೆ. ಆಕಾಶಗಳು ದೇವರ ನೀತಿಯನ್ನು ಪ್ರಕಟಿಸುತ್ತವೆ.


ತಮ್ಮ ಜನರಿಗೆ ನ್ಯಾಯತೀರಿಸುವುದಕ್ಕೆ ಭೂಮಿ ಆಕಾಶಗಳನ್ನೂ ಹೀಗೆಂದು ಕರೆಯುತ್ತಿದ್ದಾರೆ:


ಇದಲ್ಲದೆ ಮನಸ್ಸೆಯು ತನ್ನ ಸ್ವಂತ ಮಗನನ್ನು ಬೆಂಕಿಯಲ್ಲಿ ಬಲಿಯಾಗಿ ಅರ್ಪಿಸಿದನು. ಮೇಘ ಮಂತ್ರಗಳನ್ನೂ, ಸರ್ಪಮಂತ್ರಗಳನ್ನು ಮಾಡಿದನು. ಕಣಿಹೇಳುವವರನ್ನೂ, ಮಾಂತ್ರಿಕರನ್ನೂ ವಿಚಾರಿಸಿದನು. ಯೆಹೋವ ದೇವರ ದೃಷ್ಟಿಯಲ್ಲಿ ಅತ್ಯಂತ ಕೆಟ್ಟತನವನ್ನು ಮಾಡಿ ಅವರಿಗೆ ಕೋಪವನ್ನು ಎಬ್ಬಿಸಿದನು.


ಕಣಿಗಳನ್ನೂ, ಶಕುನಗಳನ್ನೂ ಬಳಸಿ, ಯೆಹೋವ ದೇವರಿಗೆ ಕೋಪ ಬರುವಂತೆ ದೇವರ ಸಮ್ಮುಖದಲ್ಲಿ ಕೆಟ್ಟದ್ದನ್ನು ಮಾಡಲು ತಮ್ಮನ್ನು ಮಾರಿಬಿಟ್ಟರು.


ಅವನು ನಿಶ್ಚಯವಾಗಿ ಯೆಹೋವ ದೇವರ ವಿರುದ್ಧವಾಗಿ ಅಪರಾಧ ಮಾಡಿದ್ದಾನೆ, ಅದಕ್ಕಾಗಿ ಇದು ಪ್ರಾಯಶ್ಚಿತ್ತ ಬಲಿಯಾಗಿದೆ,” ಎಂದರು.


“ಯಾರಾದರೂ ಮನುಷ್ಯರ ರಕ್ತವನ್ನು ಸುರಿಸುತ್ತಾರೋ, ಅವರ ರಕ್ತವನ್ನು ಮನುಷ್ಯರೇ ಸುರಿಸುವರು. ಏಕೆಂದರೆ ದೇವರು ತಮ್ಮ ಸ್ವರೂಪದಲ್ಲಿಯೇ ಮನುಷ್ಯರನ್ನು ಸೃಷ್ಟಿಸಿದರು.


ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ.


ಏಕೆಂದರೆ, “ವ್ಯಭಿಚಾರ ಮಾಡಬಾರದು,” ಎಂದು ಹೇಳಿದ ದೇವರೇ, “ನರಹತ್ಯೆ ಮಾಡಬಾರದು,” ಎಂತಲೂ ಹೇಳಿದರು. ಆದಕಾರಣ ನೀನು ವ್ಯಭಿಚಾರ ಮಾಡದೆ ಇದ್ದರೂ ನರಹತ್ಯೆ ಮಾಡಿದರೆ ನಿಯಮವನ್ನು ಮೀರಿದವನಾದೆ.


ಆದರೆ ಯೆಹೂದನ ಜೇಷ್ಠಪುತ್ರ ಏರನು ಯೆಹೋವ ದೇವರ ದೃಷ್ಟಿಯಲ್ಲಿ ದುಷ್ಟನಾಗಿದ್ದುದರಿಂದ, ಯೆಹೋವ ದೇವರು ಅವನನ್ನು ಸಾವಿಗೀಡುಮಾಡಿದರು.


“ನಾನಾಗಿ ನಾನೇ, ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು