Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:1 - ಕನ್ನಡ ಸಮಕಾಲಿಕ ಅನುವಾದ

1 “ದೇವರು ಇಲ್ಲಾ,” ಎಂದು ಮೂರ್ಖರು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ. ಅವರು ಕೆಟ್ಟು ಹೋದವರು ಅವರ ಮಾರ್ಗಗಳು ಅಸಹ್ಯಕರ. ಅವರಲ್ಲಿ ಒಳ್ಳೆಯದನ್ನು ಮಾಡುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ದುರ್ಮತಿಗಳು, “ದೇವರಿಲ್ಲ” ಎಂದು ತಮ್ಮ ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟವರು; ಅಸಹ್ಯವಾದ ಅಕ್ರಮಗಳನ್ನು ನಡೆಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಮನದಲಿ “ದೇವನಿಲ್ಲ” ಎನ್ನುವವರು ದುರ್ಮತಿಗಳು I ಹೇಯಕೃತ್ಯವೆಸಗುವವರು ಆ ಭ್ರಷ್ಟಾಚಾರಿಗಳು I ಒಳಿತನ್ನು ಮಾಡುವವರಾರೂ ಇಲ್ಲ ಅವರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ದುರ್ಮತಿಗಳು - ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುತ್ತಾರೆ; ಅವರು ಕೆಟ್ಟುಹೋದವರು; ಹೇಯಕೃತ್ಯಗಳನ್ನು ನಡಿಸುತ್ತಾರೆ; ಅವರಲ್ಲಿ ಒಳ್ಳೆಯದನ್ನು ಮಾಡುವವರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಮೂಢರು ದೇವರಿಲ್ಲವೆಂದು ಮನಸ್ಸಿನಲ್ಲಿ ಅಂದುಕೊಳ್ಳುವರು. ಅವರು ಕೆಟ್ಟುಹೋಗಿದ್ದಾರೆ; ದುಷ್ಕೃತ್ಯಗಳನ್ನು ನಡೆಸುವವರಾಗಿದ್ದಾರೆ. ಅವರು ಒಳ್ಳೆಯದನ್ನು ಮಾಡುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:1
24 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ಗರ್ವದಲ್ಲಿ ದೇವರನ್ನು ಹುಡುಕುವುದಿಲ್ಲ; ಅವನ ಎಲ್ಲ ಯೋಚನೆಗಳಲ್ಲಿಯೂ ದೇವರಿಗೆ ಸ್ಥಳವೇ ಇಲ್ಲ.


ಇದಲ್ಲದೆ, ದೇವರನ್ನು ಒಪ್ಪಿಕೊಳ್ಳಲು ಅವರಿಗೆ ಇಷ್ಟವಿಲ್ಲದ್ದರಿಂದ ಅಲ್ಲದ ಕೃತ್ಯಗಳನ್ನು ನಡೆಸುವವರಾಗುವಂತೆ ದೇವರು ಅನಾಚಾರದ ಮನಸ್ಸಿಗೆ ಅವರನ್ನು ಒಪ್ಪಿಸಿದರು.


“ಆದರೆ ದೇವರು ಅವನಿಗೆ, ‘ಬುದ್ಧಿಹೀನನೇ! ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ತೆಗೆದುಕೊಳ್ಳಲಾಗುವುದು. ಆಗ ನಿನಗಾಗಿ ಸಿದ್ಧಮಾಡಿಟ್ಟಿರುವುದೆಲ್ಲ ಯಾರ ಪಾಲಾಗುವುದು?’ ಎಂದು ಹೇಳಿದರು.


ಹಾಗಿರುವಾಗ, ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು, ದೇವರ ದೃಷ್ಟಿಯಲ್ಲಿ ಎಷ್ಟು ಅಲ್ಪನೂ ಅಶುದ್ಧನೂ ಆಗಿದ್ದಾನಲ್ಲವೇ?


ಇದಲ್ಲದೆ ಪೂಜಾಸ್ಥಳಗಳಲ್ಲಿ ಪುರುಷಗಾಮಿಗಳಿದ್ದರು. ಅವರು ಇಸ್ರಾಯೇಲರ ಮುಂದೆ ಯೆಹೋವ ದೇವರು ಹೊರಡಿಸಿದ ಜನಾಂಗಗಳ ಸಕಲ ಅಸಹ್ಯ ಕಾರ್ಯಗಳನ್ನು ಮಾಡುತ್ತಾ ಇದ್ದರು.


ದೇವರನ್ನು ಅರಿಯದ ಜನರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಸಾಕಷ್ಟು ಮಾಡಿದ್ದೀರಿ. ಆಗ ನೀವು ಅಶ್ಲೀಲತೆ, ದುರಾಶೆಗಳು, ಕುಡುಕತನ, ಅಮಲೇರುವಿಕೆ, ದುಂದು ಔತಣಗಳು, ಅಸಹ್ಯವಾದ ವಿಗ್ರಹಾರಾಧನೆಗಳು ಇವುಗಳನ್ನು ಮಾಡುತ್ತಿದ್ದೀರಿ.


ಆ ಅವಿಧೇಯರು ಗುಟ್ಟಾಗಿ ಮಾಡುವ ಕೃತ್ಯಗಳನ್ನು ಹೇಳುವುದಕ್ಕೂ ಅವಮಾನಕರವಾಗಿವೆ.


ಆದರೆ ನಾನು ನಿಮಗೆ ಹೇಳುವುದೇನೆಂದರೆ: ತನ್ನ ಸಹೋದರನ ಮೇಲೆ ಕೋಪಿಸಿಕೊಳ್ಳುವ ಪ್ರತೀ ಮನುಷ್ಯನು ನ್ಯಾಯತೀರ್ಪಿಗೆ ಗುರಿಯಾಗುವನು. ಮಾತ್ರವಲ್ಲದೆ, ಯಾವನಾದರೂ ತನ್ನ ಸಹೋದರನನ್ನು ‘ಬುದ್ಧಿ ಇಲ್ಲದವನೇ’ ಎಂದರೂ ನ್ಯಾಯಸಭೆಯ ವಿಚಾರಣೆಗೆ ಒಳಗಾಗುವನು. ಯಾರನ್ನಾದರೂ, ‘ಮೂರ್ಖಾ,’ ಎನ್ನುವವನು ಅಗ್ನಿನರಕಕ್ಕೆ ಗುರಿಯಾಗುವನು.


ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಅವನು ತನ್ನ ಹೃದಯದಲ್ಲಿ ಹೀಗೆ ಹೇಳುವನು, “ಯಾವುದೂ ಎಂದೂ ನನ್ನನ್ನು ಕದಲಿಸುವುದಿಲ್ಲ.” ಅವನು ಹೀಗೆ ಶಪಥ ಮಾಡುವನು, “ಯಾರೂ ಎಂದಿಗೂ ನನಗೆ ಕೇಡುಮಾಡಲಾರರು.”


ಅಶುದ್ಧತೆಯಿಂದ ಶುದ್ಧವಾದದ್ದನ್ನು ತರುವವನು ಯಾರು? ಯಾರೂ ತರಲಾರರು!


ಆದರೆ ಯಾರೊಬ್ಬಾಮನು ತನ್ನ ಮನಸ್ಸಿನಲ್ಲಿ, “ಈಗ ರಾಜ್ಯವು ದಾವೀದನ ಮನೆಯವರಿಗೆ ಹಿಂದಿರುಗುವುದು ಏನೋ,


ಅವರು ತಮ್ಮ ದೇವರುಗಳನ್ನು ಪೂಜಿಸುವಾಗ ಯೆಹೋವ ದೇವರಿಗೆ ಅಸಹ್ಯವಾದ ಅನೇಕ ಸಂಗತಿಗಳನ್ನು ಮಾಡುತ್ತಾರೆ. ಅಂದರೆ, ಅವರು ತಮ್ಮ ಗಂಡು ಮಕ್ಕಳನ್ನು, ಹೆಣ್ಣು ಮಕ್ಕಳನ್ನು ತಮ್ಮ ದೇವರುಗಳಿಗೆ ಬಲಿಯಾಗಿ ಬೆಂಕಿಯಲ್ಲಿ ಸುಡುತ್ತಾರೆ. ಆದ್ದರಿಂದ ನೀವು ನಿಮ್ಮ ಯೆಹೋವ ದೇವರನ್ನು ಆ ರೀತಿಯಲ್ಲಿ ಆರಾಧಿಸಬಾರದು.


ಏಕೆಂದರೆ ದೇವರನ್ನು ಅವರು ತಿಳಿದಿದ್ದರೂ ದೇವರೆಂದು ಮಹಿಮೆ ಪಡಿಸಲಿಲ್ಲ, ದೇವರ ಉಪಕಾರ ಸ್ಮರಿಸಲಿಲ್ಲ. ಆದರೆ ಅವರು ತಮ್ಮ ವಿಚಾರಗಳಲ್ಲಿ ವ್ಯರ್ಥರಾದರು. ವಿವೇಕವಿಲ್ಲದ ಅವರ ಹೃದಯವು ಕತ್ತಲಾಯಿತು.


ಸಮಾರ್ಯವೆಂಬಾಕೆಯು ನೀನು ಮಾಡಿದ ಪಾಪಗಳಲ್ಲಿ ಅರ್ಧವನ್ನೂ ಮಾಡಲಿಲ್ಲ. ನೀನು ನಿನ್ನ ಅಕ್ಕತಂಗಿಯರಿಗಿಂತಲೂ ಅತ್ಯಧಿಕವಾದ ಅಸಹ್ಯವಾದ ಕಾರ್ಯಗಳನ್ನು ಮಾಡಿದೆ. ನೀನು ಮಾಡಿದ ಲೆಕ್ಕವಿಲ್ಲದಷ್ಟು ದುರಾಚಾರಗಳಿಂದ ಅವರನ್ನು ನೀತಿವಂತರೆಂದು ತೋರ್ಪಡಿಸಿದೆ.


ಆದರೂ ನೀನು ಅವರ ಮಾರ್ಗಗಳಲ್ಲಿ ನಡೆಯಲಿಲ್ಲ. ಅವರ ಅಸಹ್ಯಗಳ ಹಾಗೆ ಮಾಡಲಿಲ್ಲ. ಅವರ ದುರ್ನಡತೆಯು ಅತ್ಯಲ್ಪವೆಂದು ಸದಾ ಅವರಿಗಿಂತ ಬಹಳ ಕೆಟ್ಟವಳಾಗಿ ನಡೆದುಕೊಂಡೆ.


ಇದನ್ನು ಬುದ್ಧಿಹೀನ ಮನುಷ್ಯನು ತಿಳಿದುಕೊಳ್ಳನು. ಮೂರ್ಖನು ಇದನ್ನು ಗ್ರಹಿಸನು.


ನನ್ನನ್ನು ರಕ್ಷಿಸುವ ದೇವರಾದ ಯೆಹೋವ ದೇವರೇ, ಹಗಲಿರುಳು ನಿಮ್ಮ ಮುಂದೆ ಮೊರೆಯಿಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು