Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 53:5 - ಕನ್ನಡ ಸಮಕಾಲಿಕ ಅನುವಾದ

5 ಭಯವಿಲ್ಲದಿರುವಲ್ಲಿ ಅವರು ಭಯಭ್ರಾಂತರಾದರು; ಏಕೆಂದರೆ ನಿಮಗೆ ವಿರೋಧವಾಗಿ ದಂಡು ಇಳಿಸುವವರನ್ನು ದೇವರು ಚದರಿಸಿಬಿಟ್ಟಿದ್ದಾರೆ. ನೀವು ಅವರನ್ನು ನಾಚಿಕೆಪಡಿಸಿದ್ದೀರಿ. ಏಕೆಂದರೆ ದೇವರು ಅವರನ್ನು ತಿರಸ್ಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಭಯಪಡುವುದಕ್ಕೆ ಕಾರಣವಿಲ್ಲದಿದ್ದರೂ, ಅವರು ಪಕ್ಕನೆ ಭಯಭ್ರಾಂತರಾದರು; ದುಷ್ಟರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ಅವರು ಅವಮಾನಕ್ಕೊಳಗಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ದಿಗ್ಭ್ರಾಂತರಾಗುವರಿದೋ ಹಿಂದೆಂದು ಇಲ್ಲದಂತೆ ದುರುಳರು I ದೇವರಿಂದ ತಿರಸ್ಕೃತವಾದ ಅವರು ಪರಾಜಿತರಾಗುವರು I ದಿಕ್ಕುಪಾಲಾಗುವುವು ನಿಮ್ಮ ಮೇಲೆ ಬಿದ್ದವರ ಮೂಳೆಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಭಯಪಡುವದಕ್ಕೆ ಕಾರಣವಿಲ್ಲದಿದ್ದರೂ ಅವರು ಫಕ್ಕನೆ ಭಯಭ್ರಾಂತರಾದರು; ನಿಮಗೆ ಮುತ್ತಿಗೆಹಾಕಿದವರನ್ನು ದೇವರು ಸಂಹರಿಸಿ ಅವರ ಎಲುಬುಗಳನ್ನು ಚದರಿಸಿಬಿಟ್ಟನಲ್ಲಾ. ದೇವರು ಅವರನ್ನು ಕೈಬಿಟ್ಟದ್ದರಿಂದ ನೀವು ಅವರನ್ನು ಅಪಜಯಪಡಿಸಿದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ದುಷ್ಟರು ಹಿಂದೆಂದೂ ಭಯಗೊಂಡಿಲ್ಲದ ರೀತಿಯಲ್ಲಿ ಭಯಭ್ರಾಂತರಾಗುವರು! ಅವರು ಇಸ್ರೇಲರ ಶತ್ರುಗಳು. ದೇವರು ಅವರನ್ನು ತಿರಸ್ಕರಿಸಿದ್ದಾನೆ. ಆದ್ದರಿಂದ ದೇವಜನರು ಅವರನ್ನು ಸೋಲಿಸುವರು, ದೇವರು ಆ ದುಷ್ಟರ ಎಲುಬುಗಳನ್ನು ಚದರಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 53:5
22 ತಿಳಿವುಗಳ ಹೋಲಿಕೆ  

ಹಿಂದಟ್ಟುವವನು ಇಲ್ಲದಿದ್ದರೂ ದುಷ್ಟನು ಓಡಿಹೋಗುತ್ತಾನೆ. ಆದರೆ ಸಿಂಹದ ಹಾಗೆ ನೀತಿವಂತರು ಧೈರ್ಯದಿಂದ ಇರುತ್ತಾರೆ.


“ ‘ನಿಮ್ಮಲ್ಲಿ ಯಾರು ಉಳಿದು ಶತ್ರುಗಳ ದೇಶದಲ್ಲಿ ಇರುವರೋ, ಅವರ ಹೃದಯದಲ್ಲಿ ಭೀತಿಯನ್ನು ಹುಟ್ಟಿಸುವೆನು. ಬಡಿದಾಡುವ ಎಲೆಯ ಶಬ್ದವು ಅವರನ್ನು ಓಡಿಸುವುದು. ಖಡ್ಗಕ್ಕೆ ಓಡಿ ಹೋದ ಹಾಗೆ ಓಡಿಹೋಗುವರು.


ನಾನು ನಿಮಗೆ ವಿಮುಖನಾಗಿರುವೆನು. ಆದ್ದರಿಂದ ನೀವು ನಿಮ್ಮ ವೈರಿಗಳಿಂದ ಸೋತುಹೋಗುವಿರಿ. ನಿಮ್ಮ ವೈರಿಗಳು ನಿಮ್ಮ ಮೇಲೆ ದೊರೆತನ ಮಾಡುವರು. ಓಡಿಸುವವನು ಯಾರೂ ಇಲ್ಲದಿರುವಾಗಲೂ ಓಡಿಹೋಗುವಿರಿ.


ಇಸ್ರಾಯೇಲರ ಹೆಣಗಳನ್ನು ದೇವತಾ ವಿಗ್ರಹಗಳ ಮುಂದೆ ಹಾಕುವೆನು. ನಿಮ್ಮ ಬಲಿಪೀಠಗಳ ಸುತ್ತಲೂ ನಿಮ್ಮ ಎಲುಬುಗಳನ್ನು ಎರಚಿ ಬಿಡುವೆನು.


ಹೊಲಸಾದ ಬೆಳ್ಳಿ ಎಂದು ಅವರಿಗೆ ಹೆಸರಾಗುವುದು; ಏಕೆಂದರೆ, ಯೆಹೋವ ದೇವರು ಅವರನ್ನು ತಳ್ಳಿದ್ದಾರೆ.”


ಅವರು ಹೀಗೆ ಹೇಳುವರು, “ಒಬ್ಬನು ಹೊಲವನ್ನು ಉತ್ತು, ಹೆಂಟೆಗಳನ್ನು ಒಡೆದು ಚದರಿಸುವ ಪ್ರಕಾರವೇ ನಮ್ಮ ಎಲುಬುಗಳು ಪಾತಾಳ ದ್ವಾರದಲ್ಲಿ ಎರಚಲಾಗುವುದು.”


ಆಗ ಪಾಳೆಯಲ್ಲಿಯ ಹೊಲದಲ್ಲಿ ಇದ್ದ ಸಕಲ ಜನರಲ್ಲಿಯೂ ಭಯದಿಂದ ನಡುಕ ಉಂಟಾಯಿತು. ಠಾಣ್ಯದವರೂ, ಕೊಳ್ಳೆಗಾರರೂ ಹೆದರಿಕೊಂಡರು. ಇದಲ್ಲದೆ, ದೇವರು ಭೂಕಂಪವನ್ನುಂಟುಮಾಡಿದರು. ಹೀಗೆ ಅಲ್ಲಿ ದೊಡ್ಡ ಕಳವಳವಾಯಿತು.


ಅವರು ನಿದ್ದೆಯಿಂದ ಎಚ್ಚರಗೊಂಡ ಕನಸಿನಂತೆ ಇರುತ್ತಾರೆ. ಯೆಹೋವ ದೇವರೇ, ನಿಮ್ಮ ದೃಷ್ಟಿಯಲ್ಲಿ ಅವರು ಅಲ್ಪರಾಗಿರಲಿ.


ನನ್ನ ಪ್ರಾಣ ತೆಗೆಯಲು ಯತ್ನಿಸುವವರೆಲ್ಲರು ನಾಚಿಕೆಪಟ್ಟು ಗಲಿಬಿಲಿಯಾಗಲಿ. ನನ್ನ ಕೇಡಿನಲ್ಲಿ ಸಂತೋಷಪಡುವವರೆಲ್ಲರೂ ಹಿಂಜರಿದು ಅವಮಾನ ಹೊಂದಲಿ.


ನನ್ನ ಕೇಡಿನಲ್ಲಿ ಸಂತೋಷಪಡುವವರು ನಾಚಿಕೊಂಡು ಒಟ್ಟಿಗೆ ಕಳವಳಗೊಳ್ಳಲಿ; ನನಗೆ ವಿರೋಧವಾಗಿ ತಮ್ಮನ್ನು ಹೆಚ್ಚಿಸಿಕೊಳ್ಳುವವರು ನಾಚಿಕೆಯನ್ನೂ ಅವಮಾನವನ್ನೂ ಹೊಂದಲಿ.


ನನ್ನ ಪ್ರಾಣವನ್ನು ಹುಡುಕುವವರು ನಾಚಿಕೆಪಟ್ಟು ಅವಮಾನ ಹೊಂದಲಿ; ನನಗೆ ಕೇಡನ್ನು ಕಲ್ಪಿಸುವವರು ಹಿಂದಿರುಗಿ ಲಜ್ಜೆಪಡಲಿ.


ದೇವರು ನೀತಿವಂತರ ಸಹವಾಸದಲ್ಲಿ ಇರುವುದರಿಂದ, ದುಷ್ಟತ್ವವನ್ನು ನಡೆಸುವವರು ಅತ್ಯಂತ ಭಯಭ್ರಾಂತರಾಗುವರು.


ಪರಲೋಕದಲ್ಲಿ ಕೂತಿರುವ ದೇವರು ಅದಕ್ಕೆ ನಗುವರು, ಕರ್ತದೇವರು ಅವರನ್ನು ಕಂಡು ಅಪಹಾಸ್ಯ ಮಾಡುವರು.


ಅವರು ತನ್ನ ಗುಡಾರವನ್ನು ತೋಟದಂತೆ ಬಲಾತ್ಕಾರವಾಗಿ ತೆಗೆದುಹಾಕಿದ್ದಾರೆ. ಅವರು ತನ್ನ ಸಭಾ ಸ್ಥಾನಗಳನ್ನು ನಾಶಮಾಡಿದ್ದಾರೆ. ಯೆಹೋವ ದೇವರು ಚೀಯೋನಿಗೆ ಪವಿತ್ರ ಹಬ್ಬಗಳನ್ನೂ, ಸಬ್ಬತ್ ದಿನಗಳನ್ನೂ ಮರೆತುಬಿಡುವಂತೆ ಮಾಡಿದ್ದಾರೆ. ತನ್ನ ಕೋಪದ ಉರಿಯಲ್ಲಿ ಅರಸನನ್ನೂ, ಯಾಜಕನನ್ನೂ ತುಚ್ಛೀಕರಿಸಿದ್ದಾರೆ.


ಭಯಂಕರವಾದ ಸಂಗತಿಗಳು ಅವನ ಕಿವಿಗೆ ಬೀಳುತ್ತವೆ; ಎಲ್ಲವು ಸುಖವಾಗಿರುವಾಗ ಸುಲಿಗೆ ಮಾಡುವವನು ದುಷ್ಟನ ಮೇಲೆ ದಾಳಿ ಮಾಡುತ್ತಾನೆ.


“ಏಕೆಂದರೆ ಇಗೋ, ನಿನ್ನನ್ನು ಜನಾಂಗಗಳಲ್ಲಿ ಅತ್ಯಲ್ಪನನ್ನಾಗಿಯೂ, ಜನರ ತಿರಸ್ಕಾರಕ್ಕೆ ಈಡಾಗುವಂತೆಯೂ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು