Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:15 - ಕನ್ನಡ ಸಮಕಾಲಿಕ ಅನುವಾದ

15 ಮರಣ ನನ್ನ ವೈರಿಗಳನ್ನು ತಟ್ಟನೆ ಹಿಡಿಯಲಿ. ಜೀವಸಹಿತ ಪಾತಾಳಕ್ಕೆ ಅವರು ಇಳಿಯಲಿ, ಅವರ ಮನೆಯಲ್ಲಿ ದುಷ್ಟತನವು ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದುಹೋಗಲಿ. ಅವರ ಮನೆಯಲ್ಲಿಯೂ, ಮನಸ್ಸಿನಲ್ಲಿಯೂ ಕೆಟ್ಟತನವೇ ತುಂಬಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಮರಣ ತಟ್ಟನೆ ಆ ದುಷ್ಟರ ಮೇಲೆರಗಲಿ I ಜೀವಸಹಿತ ಪಾತಾಳಕ್ಕವರು ಇಳಿಯಲಿ I ಕೆಟ್ಟತನ ಮನೆಮಾಡಿದೆ ಅವರ ಮಧ್ಯದಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಆ ದುಷ್ಟರಿಗೆ ಮರಣವು ತಟ್ಟನೆ ಬರಲಿ; ಸಜೀವರಾಗಿಯೇ ಪಾತಾಳಕ್ಕೆ ಇಳಿದು ಹೋಗಲಿ. ಅವರ ಮನೆಯಲ್ಲಿಯೂ ಮನಸ್ಸಿನಲ್ಲಿಯೂ ಕೆಟ್ಟತನವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶತ್ರುಗಳಿಗೆ ಮರಣವು ಇದ್ದಕ್ಕಿದ್ದಂತೆ ಬರಲಿ! ಭೂಮಿಯು ಬಾಯ್ದೆರೆದು ಅವರನ್ನು ಜೀವಂತವಾಗಿ ನುಂಗಿಬಿಡಲಿ! ಯಾಕೆಂದರೆ ಅವರು ಒಟ್ಟಾಗಿ ಸೇರಿ ಅಂಥಾ ಭಯಂಕರವಾದವುಗಳನ್ನು ಆಲೋಚಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:15
13 ತಿಳಿವುಗಳ ಹೋಲಿಕೆ  

ಅವರು ದಂಡನೆಗೆ ತುತ್ತಾಗಲಿ. ಅವರು ನಿರ್ನಾಮವಾಗಿಬಿಡಲಿ. ಆಗ ಯಾಕೋಬರನ್ನು ಆಳುವವರು ದೇವರೇ ಎಂಬುದು ಇಡೀ ಲೋಕಕ್ಕೇ ಗೊತ್ತಾಗಲಿ.


ಆದರೆ ದೇವರು ಅವರ ಬಾಣದಿಂದಲೇ, ಫಕ್ಕನೆ ಅವರಿಗೆ ಗಾಯಗಳಾಗುವಂತೆ ಅನುಮತಿಸುವರು.


ದುಷ್ಟರು ಪಾತಾಳಕ್ಕೆ ತಿರುಗುವರು, ದೇವರನ್ನು ಮರೆಯುವ ರಾಷ್ಟ್ರಗಳ ಅಂತ್ಯವೂ ಹಾಗೇ ಇರುವುದು.


ಈ ಅಪೊಸ್ತಲರ ಸೇವೆಯನ್ನು ವಹಿಸಿಕೊಳ್ಳುವುದಕ್ಕಾಗಿ, ನೀವು ಈ ಇಬ್ಬರಲ್ಲಿ ಯಾರನ್ನು ಆಯ್ಕೆ ಮಾಡಿಕೊಂಡಿರುವಿರಿ ಎಂಬುದನ್ನು ನಮಗೆ ತೋರಿಸಿರಿ,” ಎಂದು ಪ್ರಾರ್ಥನೆ ಮಾಡಿದರು.


ಅವನು ಆ ಬೆಳ್ಳಿಯ ನಾಣ್ಯಗಳನ್ನು ದೇವಾಲಯದಲ್ಲಿ ಬಿಸಾಡಿಬಿಟ್ಟು ಹೊರಟುಹೋಗಿ ನೇಣು ಹಾಕಿಕೊಂಡನು.


ಮನುಷ್ಯಪುತ್ರನಾದ ನನ್ನ ವಿಷಯದಲ್ಲಿ ಬರೆದಿರುವ ಪ್ರಕಾರ ಹೊರಟುಹೋಗುತ್ತೇನೆ. ಆದರೆ ಮನುಷ್ಯಪುತ್ರನಾದ ನನಗೆ ಯಾವನು ದ್ರೋಹಬಗೆಯುತ್ತಾನೋ ಆ ಮನುಷ್ಯನಿಗೆ ಕಷ್ಟ! ಆ ಮನುಷ್ಯನು ಹುಟ್ಟದೆ ಹೋಗಿದ್ದರೆ ಅವನಿಗೆ ಎಷ್ಟೋ ಒಳ್ಳೆಯದಾಗುತ್ತಿತ್ತು,” ಎಂದರು.


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಆಗ ಅಬ್ಷಾಲೋಮನು ದಾವೀದನ ಸೇವಕರಿಗೆ ಎದುರಾಗಿ ಬಂದನು. ಅಬ್ಷಾಲೋಮನು ಹೇಸರಗತ್ತೆಯ ಮೇಲೆ ಏರಿದ್ದನು. ಆ ಹೇಸರಗತ್ತೆಯು ಒಂದು ದೊಡ್ಡ ಏಲಾ ಮರದ ಬಲವಾದ ಕೊಂಬೆಗಳ ಕೆಳಗೆ ಬಂದಾಗ, ಅವನ ತಲೆಯು ಆ ಮರದ ಕೊಂಬೆಯಲ್ಲಿ ಸಿಕ್ಕಿಕೊಂಡಿತು. ಆದ್ದರಿಂದ ಅವನು ಹತ್ತಿದ್ದ ಹೇಸರಗತ್ತೆಯು ಹೊರಟುಹೋಯಿತು. ಅವನು ಭೂಮಿಗೂ ಆಕಾಶಕ್ಕೂ ಮಧ್ಯದಲ್ಲಿ ನೇತಾಡುವವನಾದನು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು