Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:19 - ಕನ್ನಡ ಸಮಕಾಲಿಕ ಅನುವಾದ

19 ಆದಿಯಿಂದ ಸಿಂಹಾಸನಾರೂಢರಾಗಿರುವ ದೇವರು, ಅವರ ಮೊರೆಯನ್ನು ಕೇಳಿ ಅವರನ್ನು ತಗ್ಗಿಸುವರು, ಏಕೆಂದರೆ, ಅವರು ದೇವರಿಗೆ ಭಯಪಡುವುದಿಲ್ಲ. ದೇವರು ಬದಲಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಆದಿಯಿಂದಾಳುವ ದೇವನು ಅವರ ಸೊಕ್ಕಡಗಿಸದೆ ಬಿಡನು I ಪರಿವರ್ತಿಸಲಾಗದು ದೇವಭಯವಿಲ್ಲದವರ ಹೃದಯವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅನಾದಿಕಾಲದಿಂದ ಆಸನಾರೂಢನಾಗಿರುವ ದೇವರು ಲಕ್ಷ್ಯವಿಟ್ಟು ಅವರನ್ನು ತಗ್ಗಿಸಿಬಿಡುವನು. ಸೆಲಾ. ಅವರು ತಮ್ಮ ಸುಖವು ಕದಲದೆಂದುಕೊಂಡು ದೇವರಿಗೆ ಹೆದರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ನನಗೆ ಕಿವಿಗೊಡುವನು. ಅನಾದಿಕಾಲದ ರಾಜನು ನನಗೆ ಸಹಾಯ ಮಾಡುವನು. ನನ್ನ ವೈರಿಗಳು ತಮ್ಮ ಜೀವಿತಗಳನ್ನು ಪರಿವರ್ತಿಸಿಕೊಳ್ಳುವುದಿಲ್ಲ. ಅವರಿಗೆ ದೇವರಲ್ಲಿ ಭಯಭಕ್ತಿಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:19
15 ತಿಳಿವುಗಳ ಹೋಲಿಕೆ  

ನಿತ್ಯ ದೇವರು ನಿನ್ನ ಆಶ್ರಯವು. ದೇವರ ಶಾಶ್ವತ ತೋಳುಗಳು ನಿನಗೆ ಆಶ್ರಯ. ನಿನ್ನ ವೈರಿಗಳನ್ನು ನಿನ್ನ ಮುಂದೆ ಓಡಿಸಿ, ‘ಅವರನ್ನು ಸಂಹರಿಸಿರಿ,’ ಎಂದು ಆಜ್ಞಾಪಿಸುವರು.


ಆ ಕಾಲದಲ್ಲಿ, ನಾನು ಯೆರೂಸಲೇಮನ್ನು ದೀಪಗಳಿಂದ ಹುಡುಕಿಬಿಡುವೆನು. ‘ಯೆಹೋವ ದೇವರು ಒಳ್ಳೆಯದನ್ನಾದರೂ ಕೆಟ್ಟದ್ದನ್ನಾದರೂ ಮಾಡುವುದಿಲ್ಲ’ ಎಂದುಕೊಂಡು ಮಡ್ಡಿಯ ಮೇಲೆ ಮಂದವಾಗಿರುವ ದ್ರಾಕ್ಷಾರಸಕ್ಕೆ ಸಮಾನರಾದ ಜನರನ್ನೂ ದಂಡಿಸುವೆನು.


ಆದರೆ ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗೋತ್ರಗಳಲ್ಲಿ ಸಣ್ಣದಾಗಿದ್ದರೂ ಇಸ್ರಾಯೇಲಿನಲ್ಲಿ ದೊರೆತನ ಮಾಡತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು. ಆತನ ಮೂಲವು ಪೂರ್ವದಿಂದಲೂ ಅನಾದಿ ಕಾಲದಿಂದಲೂ ಆದದ್ದು.


“ಮೋವಾಬು ತನ್ನ ಚಿಕ್ಕಂದಿನಿಂದ ಸುಖವಾಗಿತ್ತು; ಅದು ತನ್ನ ಮಡ್ಡಿಯ ಮೇಲೆ ನಿಂತಿರುವ ದ್ರಾಕ್ಷಾರಸದಂತೆ ಸುಮ್ಮನೆ ಇತ್ತು; ಒಂದು ಪಾತ್ರೆಯೊಳಗಿಂದ ಮತ್ತೊಂದು ಪಾತ್ರೆಗೆ ಹೊಯ್ಯಲಾಗುವುದಿಲ್ಲ; ಸೆರೆಗೆ ಹೋಗಲಿಲ್ಲ; ಆದ್ದರಿಂದ ಅದರ ರುಚಿ ಅದರಲ್ಲಿ ಉಂಟು; ಅದರ ವಾಸನೆ ಬೇರೆ ಆಗಲಿಲ್ಲ.


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಕ್ರಿಸ್ತ ಯೇಸು ಎಲ್ಲದಕ್ಕೂ ಮೊದಲು ಇದ್ದವರು, ಇವರಲ್ಲಿಯೇ ಸಮಸ್ತವೂ ನೆಲೆಯಾಗಿದೆ.


ಈ ದೇಶಗಳ ಸಮಸ್ತ ದೇವರುಗಳಲ್ಲಿ ಯಾರೂ ತಮ್ಮ ದೇಶವನ್ನು ನನ್ನ ಕೈಯಿಂದ ಬಿಡಿಸಲಾರದ ಮೇಲೆ, ಯೆಹೋವ ದೇವರು ಯೆರೂಸಲೇಮನ್ನು ನನ್ನ ಕೈಗೆ ಸಿಗದಂತೆ ತಪ್ಪಿಸಿ ಕಾಪಾಡುವನೋ?” ಎಂದು ಹೇಳಿದನು.


ಮುಗ್ಧರ ದಾರಿತಪ್ಪುವಿಕೆಯು ಅವರನ್ನು ಕೊಲ್ಲುವುದು. ಜ್ಞಾನಹೀನರ ನಿಶ್ಚಿಂತೆಯು ಅವರನ್ನು ನಾಶಮಾಡುವುದು.


ನಿಮ್ಮ ಒಂಡಬಡಿಕೆಯ ಪ್ರೀತಿಯಿಂದ ನನ್ನ ಶತ್ರುಗಳನ್ನು ಸುಮ್ಮನಿರಿಸುವೆನು, ನನ್ನ ವೈರಿಗಳೆಲ್ಲರೂ ನಾಶವಾಗಲಿ, ನಾನು ನಿಮ್ಮ ಸೇವಕನಾಗಿದ್ದೇನೆ.


ದೇವರು ಇದನ್ನು ಕಂಡಾಗ, ಬೇಸರಗೊಂಡು ಇಸ್ರಾಯೇಲನ್ನು ಪರಿಪೂರ್ಣವಾಗಿ ತಿರಸ್ಕರಿಸಿಬಿಟ್ಟರು.


ಅತಿಶಯ ಹಾಗು ನೀತಿಯ ಕೃತ್ಯಗಳನ್ನು ನಡೆಸಿ, ನೀವು ನಮಗೆ ಉತ್ತರ ಕೊಡುವಿರಿ. ನಮ್ಮ ರಕ್ಷಣೆಯ ದೇವರೇ, ಭೂಮಿಯಲ್ಲಿರುವವರಿಗೂ, ಸಮುದ್ರದ ಆಚೆ ದೂರವಾಗಿರುವವರಿಗೂ ನೀವು ಭರವಸೆಯಾಗಿದ್ದೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು