Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:20 - ಕನ್ನಡ ಸಮಕಾಲಿಕ ಅನುವಾದ

20 ನನ್ನ ಜೊತೆಗಾರನು ತನ್ನ ಸ್ನೇಹಿತನ ಮೇಲೆ ದಾಳಿಮಾಡಿದ್ದಾನೆ. ತಾನು ಮಾಡಿದ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರುದ್ಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಮಿತ್ರರ ಮೇಲೆ ಕೈಯೆತ್ತಿರುವನು ಆ ನನ್ನ ಗೆಳೆಯನು I ತಾನು ಮಾಡಿದ ಒಪ್ಪಂದವನು ತಾನೆ ಮೀರಿ ನಡೆದಿಹನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನನ್ನ ವೈರಿಗಳು ತಮ್ಮ ಸ್ನೇಹಿತರ ಮೇಲೆಯೇ ಆಕ್ರಮಣ ಮಾಡುವರು; ತಮ್ಮ ಒಡಂಬಡಿಕೆಗಳನ್ನು ತಾವೇ ಉಲ್ಲಂಘಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:20
20 ತಿಳಿವುಗಳ ಹೋಲಿಕೆ  

ಆ ದಿನಗಳಲ್ಲಿ ಅರಸನಾದ ಹೆರೋದನು ದೇವರ ಸಭೆಯ ಸದಸ್ಯರನ್ನು ಹಿಂಸಿಸುವ ಉದ್ದೇಶದಿಂದ ಕೆಲವರನ್ನು ಬಂಧಿಸಿದನು.


ನನ್ನ ಒಡಂಬಡಿಕೆಯನ್ನು ನಾನು ಮುರಿಯೆನು. ಇಲ್ಲವೆ ನನ್ನ ತುಟಿಗಳಿಂದ ಹೊರಟದ್ದನ್ನು ಬದಲಾಯಿಸೆನು.


ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡುಮಾಡಿದ್ದರೆ, ಕಾರಣವಿಲ್ಲದೆ ನನ್ನ ವೈರಿಯಿಂದ ಏನನ್ನಾದರೂ ಸುಲಿದುಕೊಂಡಿದ್ದರೆ,


ನನಗೆ ಉಪಕಾರಕ್ಕೆ ಬದಲಾಗಿ ಕೇಡನ್ನು ಮಾಡುತ್ತಿದ್ದಾರೆ, ನನ್ನ ಸ್ನೇಹಕ್ಕೆ ಬದಲಾಗಿ ನನ್ನ ಮೇಲೆ ದೂರು ಹೇಳುತ್ತಾರೆ.


ನೀವು ದೇವರ ಮುಂದೆ ಪ್ರಮಾಣ ಮಾಡಿದ್ದರಿಂದ, ಅರಸನ ಆಜ್ಞೆಯನ್ನು ಕೈಕೊಳ್ಳಿರಿ ಎಂದು ಹೇಳುತ್ತೇನೆ.


ಆದರೆ ನೀವು ತಿರಸ್ಕರಿಸಿ ಬಿಟ್ಟುಬಿಟ್ಟ, ನಿಮ್ಮ ಅಭಿಷಿಕ್ತನಿಗೆ ವಿರೋಧವಾಗಿ ಬೇಸರವಾದಿರಿ.


ಎಂದೆಂದಿಗೂ ಆತನಿಗೋಸ್ಕರ ನನ್ನ ಪ್ರೀತಿಯನ್ನು ಕಾದಿಡುವೆನು. ನನ್ನ ಒಡಂಬಡಿಕೆಯು ಆತನೊಂದಿಗೆ ದೃಢವಾಗಿರುವುದು.


ಆದರೆ ಆ ಮನುಷ್ಯನು ಯೋವಾಬನಿಗೆ, “ನೀನು ನನ್ನ ಕೈಯಲ್ಲಿ ಸಾವಿರ ಬೆಳ್ಳಿ ನಾಣ್ಯಗಳನ್ನು ಕೊಟ್ಟರೂ, ನಾನು ಅರಸನ ಮಗನ ಮೇಲೆ ನನ್ನ ಕೈಚಾಚುವುದಿಲ್ಲ. ಏಕೆಂದರೆ, ‘ಅಬ್ಷಾಲೋಮನೆಂಬ ಯುವಕನೊಡನೆ ಸೌಮ್ಯದಿಂದ ನಡೆದು ಕಾಪಾಡಿರಿ,’ ಎಂದು ಅರಸನು ನಮ್ಮೆಲ್ಲರಿಗೆ ಕೇಳಿಸುವಂತೆ ನಿನಗೂ, ಅಬೀಷೈಯನಿಗೂ, ಇತ್ತೈಗೂ ಸ್ಪಷ್ಟವಾಗಿ ಆಜ್ಞಾಪಿಸಿದ್ದನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಯೆಹೋವ ದೇವರು ಈ ಗವಿಯಲ್ಲಿ ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಟ್ಟರೆಂಬುದನ್ನು ಈ ದಿನ ನಿನ್ನ ಕಣ್ಣುಗಳು ಕಂಡವು. ಕೆಲವರು ನಿನ್ನನ್ನು ಕೊಂದುಹಾಕಲು ನನಗೆ ಒತ್ತಾಯಮಾಡಿದರು. ಆದರೆ ನಾನು ಅವರಿಗೆ, ‘ಅರಸನು ಯೆಹೋವ ದೇವರ ಅಭಿಷಿಕ್ತನು. ಆದುದರಿಂದ ನಾನು ನನ್ನ ಒಡೆಯನಿಗೆ ವಿರೋಧವಾಗಿ ಕೈಯೆತ್ತುವುದಿಲ್ಲ’ ಎಂದು ಹೇಳಿ ನಿನ್ನನ್ನು ಉಳಿಸಿದೆ.


ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆ, “ನೀವು ತಿರುಗಿಕೊಂಡು ಯೆಹೋವ ದೇವರ ಯಾಜಕರನ್ನು ಕೊಂದುಹಾಕಿರಿ. ಏಕೆಂದರೆ ಅವರ ಕೈ ದಾವೀದನಿಗೆ ಸಹಾಯಕವಾಗಿದೆ. ಅವನು ಓಡಿ ಹೋಗುವುದನ್ನು ಅವರು ತಿಳಿದಿದ್ದು, ಅದನ್ನು ನನಗೆ ತಿಳಿಸದೆ ಹೋದರು,” ಎಂದನು. ಆದರೆ ಅರಸನ ಸೇವಕರು ಯೆಹೋವ ದೇವರ ಯಾಜಕರ ಮೇಲೆ ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು.


ಈ ದಿವಸದವರೆಗೂ ಅವರು ತಮ್ಮ ಪೂರ್ವದ ಪದ್ಧತಿಯ ಪ್ರಕಾರ ಮಾಡುತ್ತಾರೆ. ಅವರು ಯೆಹೋವ ದೇವರಿಗೆ ಭಯಪಡದೆ, ತಮ್ಮ ಕಟ್ಟಳೆಗಳ ಪ್ರಕಾರವಾಗಿಯೂ, ತಮ್ಮ ನೀತಿಗಳ ಪ್ರಕಾರವಾಗಿಯೂ, ನಿಯಮದ ಪ್ರಕಾರವಾಗಿಯೂ ಯೆಹೋವ ದೇವರು ಇಸ್ರಾಯೇಲೆಂದು ಹೆಸರಿಟ್ಟ ಯಾಕೋಬನ ಮಕ್ಕಳಿಗೆ ಆಜ್ಞಾಪಿಸಿದ ಆಜ್ಞೆಯ ಪ್ರಕಾರವಾಗಿಯೂ ಮಾಡದೆ ಇದ್ದಾರೆ.


ನನ್ನ ಶತ್ರುಗಳೆಲ್ಲರೂ ನಾಚಿಕೆಪಟ್ಟು ತತ್ತರಿಸುವರು; ಕ್ಷಣಮಾತ್ರದಲ್ಲಿ ಅವರು ಅವಮಾನಗೊಂಡು ಹಿಂದಿರುಗಿ ಹೋಗುವರು.


ದೇವರೇ, ನಿಮ್ಮ ಸಿಂಹಾಸನವು ಪೂರ್ವಕಾಲದಿಂದ ಸ್ಥಿರವಾಗಿದೆ. ಯುಗಯುಗದಿಂದ ನೀವು ಇದ್ದೀರಿ.


ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು