Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 55:23 - ಕನ್ನಡ ಸಮಕಾಲಿಕ ಅನುವಾದ

23 ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕರು. ನಾನಂತೂ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರೇ, ನೀನು ದುಷ್ಟರನ್ನು ಪಾತಾಳಕ್ಕೆ ದಬ್ಬಿಬಿಡುವೆ. ಕೊಲೆಪಾತಕರೂ ವಂಚಕರೂ ತಮ್ಮ ಅರ್ಧಾಯುಷ್ಯವಾದರೂ ಬದುಕರು. ನಾನಾದರೊ ನಿನ್ನನ್ನೇ ನಂಬಿಕೊಂಡಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 55:23
19 ತಿಳಿವುಗಳ ಹೋಲಿಕೆ  

ಯೆಹೋವ ದೇವರ ಭಯವು ಜೀವನದ ದಿನಗಳನ್ನು ಹೆಚ್ಚಿಸುತ್ತದೆ; ದುಷ್ಟರ ವರ್ಷಗಳು ಕಡಿಮೆ ಆಗುವವು.


ಸುಳ್ಳಾಡುವವರನ್ನು ನೀವು ದಂಡಿಸುತ್ತೀರಿ. ಕೊಲೆಗಾರರನ್ನೂ ಮೋಸಗಾರರನ್ನೂ ಯೆಹೋವ ದೇವರು ಅಸಹ್ಯಪಡುತ್ತಾರೆ.


ದುಷ್ಟನು ತನ್ನ ಸಮಯಕ್ಕಿಂತ ಮೊದಲು ಬತ್ತಿ ಹೋಗುವನು; ಅವನ ಕೊಂಬೆಯು ಹಸಿರಾಗಿರುವುದಿಲ್ಲ.


ಆ ಬಹು ವ್ಯಥೆಯು ನನ್ನ ಸಮಾಧಾನಕ್ಕಾಗಿಯೇ ಆಯಿತು. ಆದರೆ ನನ್ನ ಆತ್ಮವನ್ನು ನಾಶದಿಂದ ಬಿಡುಗಡೆ ಮಾಡಿದ್ದು ನಿಮ್ಮ ಪ್ರೀತಿಯೇ. ನನ್ನ ಪಾಪಗಳನ್ನೆಲ್ಲಾ ನಿನ್ನ ಬೆನ್ನಿನ ಹಿಂದೆ ಹಾಕಿಬಿಟ್ಟಿದ್ದೀ.


ನೀನು ದುಷ್ಟತನದಲ್ಲಿ ಸಾಗಬೇಡ, ಮೂರ್ಖತನದಲ್ಲಿಯೂ ಮುಂದುವರಿಯಬೇಡ. ನಿನ್ನ ಸಮಯಕ್ಕಿಂತ ಮೊದಲು ನೀನು ಏಕೆ ಸಾಯುವೆ?


ನಿಶ್ಚಯವಾಗಿ ನೀವು ಜಾರುವ ಸ್ಥಳಗಳಲ್ಲಿ ಅವರನ್ನು ಬಿಟ್ಟಿದ್ದೀರಿ. ಅವರನ್ನು ದಂಡಿಸಿಬಿಡು.


ಪಾತಾಳಕ್ಕೂ ವಿನಾಶಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ, ಮನುಷ್ಯನ ಕಣ್ಣುಗಳು ಎಂದಿಗೂ ತೃಪ್ತಿಹೊಂದುವುದಿಲ್ಲ.


ಮರಣವೂ ಪಾತಾಳವೂ ಯೆಹೋವ ದೇವರಿಗೆ ಕಾಣುತ್ತಿರುವಾಗ, ಮನುಷ್ಯರ ಹೃದಯಗಳು ಅವರಿಗೆ ಮುಚ್ಚುಮರೆಯೇ?


ಗಡಿಗೆಗಳು ಮುಳ್ಳಿನ ಬೆಂಕಿಯ ಶಾಖವನ್ನು ಇನ್ನೂ ಹಸಿಯಾಗಿ ಇಲ್ಲವೆ ಒಣಗಿರುವಾಗಲೇ, ಬಿರುಗಾಳಿ ಹಾರಿಸಿಬಿಡುವಂತೆ ಅವರಿಗೆ ಆಗಲಿ.


ನನ್ನ ದೇವರೇ, ನಾನು ನಿಮ್ಮಲ್ಲಿ ಭರವಸೆಯಿಟ್ಟಿದ್ದೇನೆ; ನಾನು ನಾಚಿಕೆಪಡದಂತೆ ಮಾಡಿರಿ; ನನ್ನ ಶತ್ರುಗಳು ನನ್ನ ಮೇಲೆ ಜಯೋತ್ಸಾಹ ಮಾಡದಿರಲಿ.


ಅಬ್ನೇರನು ಹೆಬ್ರೋನಿಗೆ ತಿರುಗಿ ಬಂದ ತರುವಾಯ ಯೋವಾಬನ ಬಾಗಿಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತನಾಡಿ, ಅವನನ್ನು ಒಂದು ಕಡೆ ಕರೆದುಕೊಂಡು ಹೋಗಿ, ತನ್ನ ತಮ್ಮ ಅಸಾಯೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಹೊಟ್ಟೆಯಲ್ಲಿ ಇರಿದು ಕೊಂದುಹಾಕಿದನು.


ದೇವರು ನಮ್ಮ ಜೀವನವನ್ನು ಕಾಪಾಡಿ, ನಮ್ಮ ಕಾಲು ಎಡವದಂತೆ ಮಾಡಿದ್ದಾರೆ.


ನಿಶ್ಚಯವಾಗಿ ನೀತಿವಂತರು ಎಂದೆಂದಿಗೂ ಕದಲರು; ನೀತಿವಂತರು ನಿತ್ಯವಾಗಿ ಜ್ಞಾಪಕದಲ್ಲಿ ಇರುವರು.


ದೇವರು ನಿಮ್ಮ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿಮ್ಮನ್ನು ಕಾಪಾಡುವ ದೇವರು ತೂಕಡಿಸುವುದೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು