Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 57:5 - ಕನ್ನಡ ಸಮಕಾಲಿಕ ಅನುವಾದ

5 ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಮೇಲಣ ಲೋಕದಲಿ ಮೆರೆಯಲಿ ದೇವಾ, ನಿನ್ನ ಹಿರಿಮೆ I ಭೂಮಂಡಲದಲಿ ಹಬ್ಬಿ ಹರಡಲಿ ನಿನ್ನಾ ಮಹಿಮೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರೇ, ಮೇಲಣ ಲೋಕಗಳಲ್ಲಿ ನಿನ್ನ ಪ್ರಭಾವವು ಮೆರೆಯಲಿ; ಭೂಮಂಡಲದ ಮೇಲೆಲ್ಲಾ ನಿನ್ನ ಮಹತ್ವವು ಹಬ್ಬಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರೇ, ಪರಲೋಕದಲ್ಲಿ ನಿನ್ನ ಪ್ರಭಾವವು ಮೆರೆಯಲಿ. ನಿನ್ನ ಮಹಿಮೆಯು ಭೂಮಂಡಲವನ್ನೆಲ್ಲಾ ಆವರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 57:5
21 ತಿಳಿವುಗಳ ಹೋಲಿಕೆ  

ಸಮುದ್ರವು ನೀರಿನಿಂದ ತುಂಬಿಕೊಂಡಿರುವಂತೆ, ಯೆಹೋವ ದೇವರ ಮಹಿಮೆಯ ತಿಳುವಳಿಕೆಯು ಭೂಮಿಯಲ್ಲಿ ತುಂಬಿಕೊಂಡಿರುವುದು.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ, “ಸೇನಾಧೀಶ್ವರ ಯೆಹೋವ ದೇವರು ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು. ಭೂಮಂಡಲವೆಲ್ಲಾ ಅವರ ಮಹಿಮೆಯಿಂದ ತುಂಬಿದೆ,” ಎಂದು ಕೂಗಿ ಹೇಳಿದನು.


ದೇವರ ಘನವುಳ್ಳ ಹೆಸರಿಗೆ ಎಂದೆಂದಿಗೂ ಸ್ತೋತ್ರವಾಗಲಿ. ದೇವರ ತೇಜಸ್ಸು ಭೂಮಿಯಲ್ಲೆಲ್ಲಾ ತುಂಬಲಿ. ಆಮೆನ್, ಆಮೆನ್.


ಆದರೆ ನನ್ನ ಜೀವದಾಣೆ, ಭೂಮಿಯೆಲ್ಲಾ ಯೆಹೋವ ದೇವರ ಮಹಿಮೆಯಿಂದ ತುಂಬಿರುವುದು.


ಓ, ದೇವರೇ, ಆಕಾಶಗಳ ಮೇಲೆ ನಿಮ್ಮ ಘನವು ಮೆರೆಯಲಿ. ಭೂಮಿಯ ಮೇಲೆಲ್ಲಾ ನಿಮ್ಮ ಮಹಿಮೆಯು ಹರಡಲಿ.


ದೇವರು, ತೇಮಾನಿನಿಂದಲೂ; ಪರಿಶುದ್ಧರು, ಪಾರಾನ್ ಪರ್ವತದಿಂದಲೂ ಬಂದರು. ಅವರ ಮಹಿಮೆ ಆಕಾಶಗಳನ್ನು ಮುಚ್ಚಿತು. ಅವರ ಸ್ತೋತ್ರವು ಭೂಮಿಯನ್ನು ತುಂಬಿಸಿತು.


ಯೆಹೋವ ದೇವರ ಹೆಸರನ್ನು ಸ್ತುತಿಸಿರಿ; ಅವರ ಹೆಸರು ಮಾತ್ರ ಶ್ರೇಷ್ಠವಾಗಿದೆ; ಅವರ ಮಹಿಮೆಯು ಭೂಮ್ಯಾಕಾಶಗಳನ್ನು ಆವರಿಸಿದೆ.


ನಮ್ಮ ಕರ್ತ ಆಗಿರುವ ಯೆಹೋವ ದೇವರೇ, ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ! ನೀವು ನಿಮ್ಮ ಮಹಿಮೆಯನ್ನು ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.


ಮನುಷ್ಯನ ಅಹಂಭಾವದ ದೃಷ್ಟಿಯು ಕುಗ್ಗುವುದು. ಮನುಷ್ಯರ ಗರ್ವವು ತಗ್ಗುವುದು. ಆಗ ಯೆಹೋವ ದೇವರೊಬ್ಬರೇ ಆ ದಿನದಲ್ಲಿ ಉನ್ನತವಾಗಿರುವರು.


ಹೀಗಿರುವುದರಿಂದ, ಈಗ ನಮ್ಮ ದೇವರಾದ ಯೆಹೋವ ದೇವರೇ, ‘ನೀವೊಬ್ಬರೇ ದೇವರಾದ ಯೆಹೋವ ದೇವರಾಗಿದ್ದೀರಿ,’ ಎಂದು ಭೂಮಿಯ ಸಮಸ್ತ ರಾಜ್ಯಗಳೂ ತಿಳಿಯುವ ಹಾಗೆ ನಮ್ಮನ್ನು ಅವನ ಕೈಯಿಂದ ತಪ್ಪಿಸಿ ರಕ್ಷಿಸಿರಿ,” ಎಂದು ಹಿಜ್ಕೀಯನು ಯೆಹೋವ ದೇವರಿಗೆ ಪ್ರಾರ್ಥಿಸಿದನು.


ಆ ದಿನದಲ್ಲಿ ನೀವು ಹೀಗೆ ಹೇಳುವಿರಿ, “ಯೆಹೋವ ದೇವರನ್ನು ಕೊಂಡಾಡಿರಿ. ಅವರ ಹೆಸರನ್ನೆತ್ತಿ ಜನರ ಮಧ್ಯದಲ್ಲಿ ಅವರ ಕ್ರಿಯೆಗಳನ್ನು ಪ್ರಕಟಿಸಿರಿ. ಅವರ ನಾಮವನ್ನು ಉನ್ನತೋನ್ನತವೆಂದು ಎತ್ತಿ ಹೇಳಿರಿ.


ಜನರ ಅಟ್ಟಹಾಸವು ತಗ್ಗಿಹೋಗುವುದು. ಆ ದಿನದಲ್ಲಿ ಯೆಹೋವ ದೇವರೊಬ್ಬರೇ ಉನ್ನತವಾಗಿರುವರು.


ಯೆಹೋವ ದೇವರೇ, ನಿಮ್ಮ ಬಲದಲ್ಲಿ ಉನ್ನತರಾಗಿದ್ದೀರಿ, ನಾವು ನಿಮ್ಮ ಪರಾಕ್ರಮವನ್ನು ಹಾಡಿ ಕೀರ್ತಿಸುವೆವು.


ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,


ಆದರೆ ಯೆಹೋವ ದೇವರೇ, ನೀವು ಅವರನ್ನು ನೋಡಿ ನಗುವಿರಿ. ಇತರ ಜನಾಂಗವೆಲ್ಲ ಅಪಹಾಸ್ಯಕ್ಕಿಡಾಗಲಿ.


ನಿರ್ದೋಷಿಯ ಕಡೆಗೆ ಕಹಿಮಾತುಗಳನ್ನು ಬಾಣದಂತೆ ಗುರಿಯಿಟ್ಟಿದ್ದಾರೆ. ಅಂಜದೆ ಫಕ್ಕನೆ ಅವನ ಕಡೆಗೆ ಎಸೆಯುತ್ತಾರೆ.


ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.


ಖಡ್ಗಗಳಂತೆ ಹಲ್ಲುಗಳುಳ್ಳವರೂ ಚೂರಿಗಳಂತೆ ದವಡೆಗಳುಳ್ಳವರೂ ಬಡವರನ್ನು ಭೂಮಿಯಿಂದಲೂ ದಿಕ್ಕಿಲ್ಲದವರನ್ನು ಮಾನವಕುಲದಿಂದಲೂ ಕಬಳಿಸುವವರೂ ಆಗಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು