Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:10 - ಕನ್ನಡ ಸಮಕಾಲಿಕ ಅನುವಾದ

10 ನೀತಿವಂತರು ದುಷ್ಟರಿಗಾಗುವ ಪ್ರತಿದಂಡನೆಯನ್ನು ಕಂಡು ಹಿಗ್ಗಿ ತಮ್ಮ ಪಾದಗಳನ್ನು ದುಷ್ಟನ ರಕ್ತದ ಮೇಲಿಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ, ಅವರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ನಲಿವರು ಸಜ್ಜನರು ಈ ಪ್ರತೀಕಾರ ನೋಟದಲಿ I ಕಾಲುತೊಳೆಯುವರವರು ಆ ದುರ್ಜನರ ನೆತ್ತರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ಭಕ್ತರು ನೋಡಿ ಹರ್ಷಿಸಿ ಅವರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ದುಷ್ಟರಿಗಾಗುವ ಪ್ರತಿದಂಡನೆಯನ್ನು ನೀತಿವಂತರು ಕಂಡು ಹರ್ಷಿಸುವರು; ಆ ದುಷ್ಟರ ರಕ್ತದಲ್ಲಿ ಕಾಲಾಡಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:10
16 ತಿಳಿವುಗಳ ಹೋಲಿಕೆ  

ಆಗ ನಿಮ್ಮ ಪಾದಗಳು ನಿಮ್ಮ ವೈರಿಗಳ ರಕ್ತದ ಮೇಲಿರಲಿ. ನಾಯಿಗಳು ಅದನ್ನು ನೆಕ್ಕಲಿ.”


ನಿನ್ನ ಕಣ್ಣುಗಳಿಂದ ಮಾತ್ರ ನೀನು ಗಮನಿಸುವೆ. ದುಷ್ಟರಿಗೆ ಪ್ರತಿದಂಡನೆ ಆಗುವುದನ್ನು ಸಹ ನೀನು ಕಾಣುವೆ.


ನೀತಿವಂತರು ಯೆಹೋವ ದೇವರಲ್ಲಿ ಆನಂದಪಟ್ಟು ದೇವರನ್ನೇ ಆಶ್ರಯಿಸಿಕೊಳ್ಳುವರು. ಸರಳ ಹೃದಯದವರೆಲ್ಲರೂ ದೇವರನ್ನು ಮಹಿಮೆಪಡಿಸುವರು.


ನೀತಿವಂತರು ಅಭಿವೃದ್ಧಿಹೊಂದಿದರೆ, ಪಟ್ಟಣವು ಉಲ್ಲಾಸಿಸುತ್ತದೆ; ದುಷ್ಟರು ನಾಶವಾದರೆ, ಜಯೋತ್ಸವ ಉಂಟಾಗುತ್ತದೆ.


ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.


ಎಲ್ಲಾ ಜನಾಂಗಗಳೇ, ದೇವಜನರ ಸಂಗಡ ಹರ್ಷಿಸಿರಿ. ಏಕೆಂದರೆ ದೇವರು ತಮ್ಮ ದಾಸರ ರಕ್ತಕ್ಕೋಸ್ಕರ ಮುಯ್ಯಿ ತೀರಿಸುವರು. ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸಿ, ತಮ್ಮ ದೇಶಕ್ಕೋಸ್ಕರವೂ, ತಮ್ಮ ಜನರಿಗೋಸ್ಕರವೂ ದೋಷಪರಿಹಾರ ಮಾಡುವರು.


“ಪರಲೋಕವೇ ಸಂಭ್ರಮಿಸಿರಿ, ಪರಿಶುದ್ಧರೇ, ಅಪೊಸ್ತಲರೇ ಹಾಗೂ ಪ್ರವಾದಿಗಳೇ ಆಕೆಯ ನಿಮಿತ್ತ ಹರ್ಷಗೊಳ್ಳಿರಿ! ಏಕೆಂದರೆ ಆಕೆ ನಿಮಗೆ ತೀರ್ಪುಮಾಡಿದ್ದಕ್ಕೆ ಸರಿಯಾಗಿ ದೇವರು ಆಕೆಗೆ ತೀರ್ಪುಮಾಡಿದ್ದಾರೆ!”


ನೀತಿವಂತರು ಇದನ್ನು ಕಂಡು ಭಯಪಡುವರು. ಅವರು ನಿನ್ನ ಬಗ್ಗೆ ನಗಾಡಿ ಹೀಗನ್ನುವರು,


ನನ್ನ ಹೆಜ್ಜೆಗಳನ್ನು ಮೊಸರಿನಿಂದ ತೊಳೆಯುತ್ತಾ ಇದ್ದೆನು; ಬಂಡೆಯಿಂದ ನನಗೆ ಓಲಿವ್ ಎಣ್ಣೆ ಪ್ರವಾಹವಾಗಿ ಸುರಿಸುತ್ತಿತ್ತು.


ನೀತಿವಂತರು ದುಷ್ಟರ ದುರ್ಗತಿಯನ್ನು ನೋಡಿ ಹಿಗ್ಗುವರು. ನಿರ್ದೋಷಿಗಳು ಹೀಗೆಂದು ದುಷ್ಟರನ್ನು ಅಣಕಿಸುವರು:


“ಯೆಹೋವ ದೇವರೇ, ಹೀಗೆಯೇ ನಿಮ್ಮ ಶತ್ರುಗಳೆಲ್ಲರೂ ನಾಶವಾಗಲಿ. ಆದರೆ ಅವರನ್ನು ಪ್ರೀತಿ ಮಾಡುವವರು ಪರಾಕ್ರಮದಿಂದ ಹೊರಡುವ ಸೂರ್ಯನ ಹಾಗೆಯೇ ಇರಲಿ.” ಅನಂತರ ದೇಶವು ನಲವತ್ತು ವರ್ಷ ವಿಶ್ರಾಂತಿಯಲ್ಲಿತ್ತು.


ಆಗ ಪಟ್ಟಣದ ಹೊರಗೆ ದ್ರಾಕ್ಷಿಯ ತೊಟ್ಟಿಯನ್ನು ತುಳಿಯಲಾಯಿತು. ಆ ತೊಟ್ಟಿಯೊಳಗಿಂದ ರಕ್ತವು ಹೊರಟು, ಕುದುರೆಗಳ ಕಡಿವಾಣವನ್ನು ಮುಟ್ಟುವಷ್ಟು ಮುನ್ನೂರು ಕಿಲೋಮೀಟರ್ ದೂರ ಹರಿಯಿತು.


ಬಿರುಗಾಳಿಯು ಬೀಸಿದರೆ, ದುಷ್ಟರು ಇಲ್ಲವಾಗುವರು; ಆದರೆ ನೀತಿವಂತರು ಶಾಶ್ವತವಾಗಿ ನಿಲ್ಲುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು