Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 58:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಜನರು ಹೀಗೆ ಹೇಳಿಕೊಳ್ಳುವರು, “ನಿಶ್ಚಯವಾಗಿ ನೀತಿವಂತನಿಗೆ ಫಲವಿದೆ. ನಿಶ್ಚಯವಾಗಿ ಭೂಮಿಯಲ್ಲಿ ನ್ಯಾಯತೀರಿಸುವ ದೇವರು ಇದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ನೀತಿವಂತನಿಗೆ ಫಲವುಂಟೆಂತಲೂ, ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ನ್ಯಾಯ ನಿರ್ಣಯಿಸುವಂಥ ದೇವನಿಹನು ಜಗದಲಿ I ಸಜ್ಜನರಿಗೆ ಸತ್ಫಲ ಕಟ್ಟಿಟ್ಟ ಬುತ್ತಿ,” ಇದು ನಾಣ್ನುಡಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ನೀತಿವಂತನಿಗೆ ಫಲವುಂಟೆಂತಲೂ ಲೋಕದಲ್ಲಿ ನ್ಯಾಯಸ್ಥಾಪಕನಾದ ದೇವರು ಇದ್ದಾನೆಂತಲೂ ಸರ್ವರು ಒಪ್ಪಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆಗ ಜನರೆಲ್ಲರು, “ನೀತಿವಂತರಿಗೆ ಪ್ರತಿಫಲ ಸಿಕ್ಕೇಸಿಕ್ಕುವುದು; ಲೋಕಕ್ಕೆ ತೀರ್ಪು ನೀಡುವ ದೇವರಿರುವುದು ಸತ್ಯವೇ ಸರಿ” ಎಂದು ಹೇಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 58:11
20 ತಿಳಿವುಗಳ ಹೋಲಿಕೆ  

ಜನಾಂಗಗಳು ಸಂತೋಷಪಟ್ಟು ಉತ್ಸಾಹದಿಂದ ಹಾಡಲಿ. ಏಕೆಂದರೆ ನೀವು ಜನರನ್ನು ನೀತಿಯಿಂದ ನ್ಯಾಯತೀರಿಸಿ, ಜನಾಂಗಗಳನ್ನು ಭೂಮಿಯಲ್ಲಿ ಪರಿಪಾಲಿಸುತ್ತೀರಿ.


ಎಲ್ಲಾ ಮನುಷ್ಯರೂ ಭಯಪಟ್ಟು ದೇವರ ಕಾರ್ಯಗಳನ್ನು ಸಾರುವರು. ದೇವರು ಮಾಡಿದವುಗಳನ್ನು ಆಲೋಚಿಸಿಕೊಳ್ಳುವರು.


ನೀತಿವಂತರಿಗೆ ನೀವು, “ಅವರಿಗೆ ಒಳ್ಳೆಯದಾಗಲಿ!” ಎಂದು ಹೇಳಿರಿ. ಏಕೆಂದರೆ ಅವರು ತಮ್ಮ ಕ್ರಿಯೆಗಳ ಫಲವನ್ನು ತಿನ್ನುವರು.


ಯೆಹೋವ ದೇವರ ಕಣ್ಣು ತಮಗೆ ಭಯಪಡುವವರ ಮೇಲಿರುತ್ತದೆ, ಅವರ ಒಡಂಬಡಿಕೆಯ ಪ್ರೀತಿಯನ್ನು ಎದುರು ನೋಡುವವರ ಮೇಲೆಯೂ ಇರುತ್ತೆ.


ನೀನು ನಿನ್ನ ಕಠಿಣವಾದ ಮತ್ತು ಪಶ್ಚಾತ್ತಾಪ ಪಡದ ಹೃದಯದಿಂದ, ನಿನಗೋಸ್ಕರ ದೇವರ ನೀತಿಯುಳ್ಳ ತೀರ್ಪು ಪ್ರಕಟವಾಗುವ ಕೋಪದ ದಿನಕ್ಕಾಗಿ ದೇವರ ಕೋಪವನ್ನು ಸಂಗ್ರಹಿಸಿಕೊಳ್ಳುತ್ತಿದ್ದಿ.


“ನೀವು, ‘ದೇವರನ್ನು ಸೇವಿಸುವುದು ವ್ಯರ್ಥ, ನಾವು ಆತನ ನಿಯಮಗಳನ್ನು ಕೈಗೊಂಡು ಸೇನಾಧೀಶ್ವರ ಯೆಹೋವ ದೇವರ ಮುಂದೆ ದುಃಖಪಡುವುದರಿಂದ ಏನು ಪ್ರಯೋಜನವೆಂದೂ,


“ನಿಮ್ಮ ಮಾತುಗಳಿಂದ ಯೆಹೋವ ದೇವರಿಗೆ ಬೇಸರ ಮಾಡಿದ್ದೀರಿ. “ಆದರೂ, ನಾವು ಯಾವುದರಲ್ಲಿ ಆತನಿಗೆ ಬೇಸರ ಮಾಡಿದ್ದೇವೆ?” ಎಂದು ಕೇಳುತ್ತೀರಿ. “ಕೆಟ್ಟದ್ದನ್ನು ಮಾಡುವವರೆಲ್ಲರು, ಯೆಹೋವ ದೇವರ ದೃಷ್ಟಿಯಲ್ಲಿ ಒಳ್ಳೆಯವರು, ಅವರಲ್ಲಿ ಆತನು ಮೆಚ್ಚುತ್ತಾನೆ ಎಂದೂ, ನ್ಯಾಯದ ದೇವರು ಎಲ್ಲಿ? ಎಂದೂ ನೀವು ಹೇಳುವುದರಿಂದಲೇ.”


ಅವು ಯೆಹೋವ ದೇವರ ಮುಂದೆ ಹಾಡಲಿ, ಏಕೆಂದರೆ ಅವರು ಭೂಮಿಗೆ ನ್ಯಾಯತೀರಿಸಲು ಬರುತ್ತಾರೆ. ಅವರು ಲೋಕಕ್ಕೆ ನೀತಿಗನುಸಾರವಾಗಿಯೂ ಜನರಿಗೆ ನ್ಯಾಯಾನುಸಾರವಾಗಿಯೂ ತೀರ್ಪು ನೀಡುವರು.


ಸಮಸ್ತ ಸೃಷ್ಟಿಯು ಯೆಹೋವ ದೇವರ ಸನ್ನಿಧಿಯಲ್ಲಿ ಹಾಡಲಿ, ಏಕೆಂದರೆ ಅವರು ಲೋಕಕ್ಕೆ ನೀತಿಯಿಂದಲೂ; ಜನರಿಗೆ ತಮ್ಮ ಸತ್ಯದಿಂದಲೂ ನ್ಯಾಯತೀರಿಸಲು ಬರುತ್ತಾರೆ.


ಭೂಲೋಕದ ನ್ಯಾಯಾಧಿಪತಿಯೇ, ಗರ್ವಿಷ್ಠರಿಗೆ ತಕ್ಕ ಪ್ರತೀಕಾರವನ್ನು ಸಲ್ಲಿಸ ಬನ್ನಿರಿ.


“ಯೆಹೋವ ದೇವರು ಯಥಾರ್ಥವಂತರೂ ನನ್ನ ಬಂಡೆಯೂ ಆಗಿದ್ದಾರೆ. ಅವರಲ್ಲಿ ಅನೀತಿ ಇರುವುದಿಲ್ಲ,” ಎಂದು ನೀತಿವಂತರು ಘೋಷಿಸುವರು.


ಯೆಹೋವ ದೇವರು ನನ್ನ ನೀತಿಯ ಪ್ರಕಾರ ನನ್ನೊಂದಿಗೆ ವ್ಯವಹರಿಸಿದರು; ನನ್ನ ಕೈಗಳ ಶುದ್ಧತ್ವದ ಪ್ರಕಾರ ನನಗೆ ಪ್ರತಿಫಲಕೊಟ್ಟರು.


ಅವರು ನೀತಿಯಿಂದ ಲೋಕಕ್ಕೆ ನ್ಯಾಯತೀರಿಸುವರು; ಪ್ರಜೆಗಳಿಗೆ ಯಥಾರ್ಥವಾದ ತೀರ್ಪು ನೀಡುವರು.


ಯೆಹೋವ ದೇವರು ತಮ್ಮ ನ್ಯಾಯಕೃತ್ಯಗಳಲ್ಲಿ ಪ್ರಸಿದ್ಧರಾಗಿದ್ದಾರೆ; ದುಷ್ಟರು ತಮ್ಮ ಕೈಕೆಲಸದಲ್ಲಿ ಸಿಕ್ಕಿಕೊಂಡಿದ್ದಾರೆ.


ನಾನಾದರೋ ದೇವರ ಆಲಯದಲ್ಲಿರುವ ಅಭಿವರ್ದಿಸುವ ಓಲಿವ್ ಮರದ ಹಾಗೆ ಇರುವೆನು. ದೇವರ ಒಡಂಬಡಿಕೆಯ ಪ್ರೀತಿಯಲ್ಲಿ ಯುಗಯುಗಾಂತರವೂ ಭರವಸವಿಟ್ಟಿರುವೆನು.


ದೇವರೇ, ನಿಮ್ಮ ಮೆರವಣಿಗೆಯು ಪ್ರಕಟವಾಗಿದೆ. ನನ್ನ ಅರಸರಾಗಿರುವ ದೇವರ ಮೆರವಣಿಗೆಯು ಪರಿಶುದ್ಧ ಸ್ಥಳವನ್ನು ಪ್ರವೇಶಿಸುವುದು.


ನೀತಿವಂತರು ನೋಡಿ ಸಂತೋಷಪಡುವರು; ಆದರೆ ಎಲ್ಲಾ ಅಕ್ರಮಗಾರರು ಬಾಯಿ ಮುಚ್ಚಿಕೊಳ್ಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು