Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:12 - ಕನ್ನಡ ಸಮಕಾಲಿಕ ಅನುವಾದ

12 ಅವರ ಬಾಯಿಯ ಪಾಪಕ್ಕೂ, ಅವರ ತುಟಿಗಳ ಮಾತಿಗೂ, ಅವರು ನುಡಿಯುವ ಶಾಪಕ್ಕೂ ಅವರ ಗರ್ವವೇ ಅವರನ್ನು ಹಿಡಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಅವರ ಬಾಯಿಂದ ಬರುವುದೆಲ್ಲಾ ಪಾಪದ ಮಾತೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಪಾಪವಿದೆ ಬಾಯಲಿ, ದೋಷವಿದೆ ತುಟಿಯಲಿ I ಸುಳ್ಳಿದೆ ಮಾತಲಿ, ಶಾಪವಿದೆ ನುಡಿಯಲಿ I ಅವರ ಸೊಕ್ಕಿನಲಿ ಅವರೇ ಸಿಕ್ಕಬೀಳಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಅವರ ಬಾಯಿಂದ ಬರುವದೆಲ್ಲಾ ಪಾಪವೇ. ಅವರ ಅಹಂಕಾರದಿಂದಲೇ ಅವರು ಸಿಕ್ಕಿ ಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ದುಷ್ಟರು ಶಪಿಸುತ್ತಾರೆ, ಸುಳ್ಳಾಡುತ್ತಾರೆ. ಅವರ ಮಾತುಗಳ ನಿಮಿತ್ತವೇ ಅವರನ್ನು ದಂಡಿಸು. ಅವರು ತಮ್ಮ ಗರ್ವದಿಂದಲೇ ಸಿಕ್ಕಿಬೀಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:12
20 ತಿಳಿವುಗಳ ಹೋಲಿಕೆ  

ದುಷ್ಟನು ತನ್ನ ತಪ್ಪು ಮಾತುಗಳಿಂದ ಬಲೆಗೆ ಬೀಳುವನು, ಆದರೆ ನೀತಿವಂತರು ಇಕ್ಕಟ್ಟಿನೊಳಗಿಂದ ತಪ್ಪಿಸಿಕೊಳ್ಳುವರು.


ಬುದ್ಧಿಹೀನನ ಬಾಯಿಯು ಅವನ ನಾಶನ; ಅವನ ತುಟಿಗಳು ಅವನ ಪ್ರಾಣಕ್ಕೆ ಪಾಶ.


ಅವನ ಬಾಯಿ ಸುಳ್ಳಿನಿಂದಲೂ ಬೆದರಿಕೆಯಿಂದಲೂ ತುಂಬಿದೆ. ಕೇಡೂ ನಾಶನವೂ ಅವನ ನಾಲಿಗೆಯ ಕೆಳಗೆ ಇರುತ್ತವೆ.


ಶಪಿಸುವದೂ, ಸುಳ್ಳು ಹೇಳುವುದೂ, ಕೊಲ್ಲುವುದು, ಕದಿಯುವುದೂ, ವ್ಯಭಿಚಾರ ಮಾಡುವುದೂ ಹೆಚ್ಚಾಗಿ ಬಿಟ್ಟಿವೆ. ಅವರು ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ದೇಶವೆಲ್ಲಾ ರಕ್ತಮಯವಾಗಿದೆ.


ದುಷ್ಟನು ಗರ್ವದಿಂದ ದೀನನನ್ನು ಬೇಟೆಯಾಡುತ್ತಾನೆ, ಅವನು ಕಲ್ಪಿಸಿದ ಕುಯುಕ್ತಿಗಳಲ್ಲಿ ಅವನೇ ಸಿಕ್ಕಿಬೀಳುತ್ತಾನೆ.


ಅದಕ್ಕೆ ಅವರು, “ಈತನು ಗಲಿಲಾಯ ಪ್ರಾಂತ ಮೊದಲುಗೊಂಡು ಈ ಸ್ಥಳದವರೆಗೂ ಯೂದಾಯ ಪ್ರಾಂತದ ಎಲ್ಲಾ ಕಡೆಗೂ ಬೋಧಿಸುತ್ತಾ, ಜನರನ್ನು ಕ್ರಾಂತಿಗೆ ಪ್ರೇರೇಪಿಸುತ್ತಿದ್ದಾನೆ,” ಎಂದು ಒತ್ತಾಯ ಪೂರ್ವಕವಾಗಿ ಹೇಳಿದರು.


“ಅಯ್ಯಾ, ಆ ಮೋಸಗಾರನು ಇನ್ನೂ ಜೀವದಿಂದಿರುವಾಗ, ‘ಮೂರು ದಿನಗಳಾದ ಮೇಲೆ ನಾನು ತಿರುಗಿ ಏಳುವೆನು,’ ಎಂದು ಹೇಳಿದ್ದು ನಮಗೆ ನೆನಪಿದೆ.


ಅದಕ್ಕೆ ಜನರೆಲ್ಲರೂ ಉತ್ತರವಾಗಿ, “ಆತನ ರಕ್ತವು ನಮ್ಮ ಮೇಲೆಯೂ ನಮ್ಮ ಮಕ್ಕಳ ಮೇಲೆಯೂ ಇರಲಿ,” ಎಂದರು.


ಆ ದಿವಸದಲ್ಲಿ ನೀನು ನನಗೆ ವಿರೋಧವಾಗಿ ಮಾಡಿದ ದುಷ್ಕೃತ್ಯಗಳಿಗಾಗಿ ನಾಚಿಕೆಗೆ ಗುರಿಯಾಗುವುದಿಲ್ಲ; ಏಕೆಂದರೆ ಆಗ ಗರ್ವದಿಂದ ಹೊಗಳಿಕೊಳ್ಳುವವರನ್ನು ನಿನ್ನ ಮಧ್ಯದೊಳಗಿಂದ ತೆಗೆದುಹಾಕುವೆನು. ನನ್ನ ಪರಿಶುದ್ಧ ಪರ್ವತದಲ್ಲಿ ಇನ್ನು ಮೇಲೆ ನೀನು ಗರ್ವಪಡದೇ ಬಾಳುವೆ.


ಯಥಾರ್ಥವಂತರ ನೀತಿಯು ಅವರನ್ನು ಬಿಡಿಸುವುದು; ಆದರೆ ಅಪನಂಬಿಗಸ್ತರು ದುಷ್ಟ ಆಸೆಗಳಿಂದ ಸಿಕ್ಕಿಹಾಕಿಕೊಳ್ಳುತ್ತಾರೆ.


ನೀನು ನುಡಿದ ನಿನ್ನ ಬಾಯಿ ಮಾತುಗಳಿಂದಲೇ ಸಿಕ್ಕಿಕೊಂಡಿರುವೆ. ನಿನ್ನ ಬಾಯಿ ಮಾತುಗಳೇ ನಿನ್ನನ್ನು ಸೆರೆಹಿಡಿದಿದೆ.


ಯೆಹೋವ ದೇವರೇ, ನಿಮ್ಮನ್ನು ನಿಂದಿಸಿದ ನಮ್ಮ ನೆರೆಯವರಿಗೆ ಏಳರಷ್ಟು ಪ್ರತಿದಂಡನೆಯನ್ನು ಅವರ ಮಡಿಲಿಗೆ ಕೊಡಿರಿ.


ದೇವರು ಭೂಮಿಯ ಮುಖ್ಯಸ್ಥರ ವಿವೇಚನೆಯನ್ನು ತೆಗೆದುಬಿಡುತ್ತಾರೆ; ಅಂಥವರು ಮಾರ್ಗವಿಲ್ಲದ ಅಲೆಯ ಮಾಡುವುದೂ ದೇವರಿಗೆ ಸಾಧ್ಯ.


ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.


ಆದರೆ ಅವರು ಎಲ್ಲಿ ಹೋಗುವರೋ, ಆ ಜನಾಂಗಗಳೊಳಗೆ ಅವರ ಹೇಯ ಕಾರ್ಯಗಳನ್ನು ಇವರು ತಿಳಿದುಕೊಳ್ಳುವಂತೆ ಅವರಲ್ಲಿ ಕೆಲವರನ್ನು ಖಡ್ಗದಿಂದಲೂ ಬರಗಾಲದಿಂದಲೂ ವ್ಯಾಧಿಯಿಂದಲೂ ಉಳಿಸುವೆನು. ಆಗ ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು