Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 59:7 - ಕನ್ನಡ ಸಮಕಾಲಿಕ ಅನುವಾದ

7 ಇಗೋ, ತಮ್ಮ ಬಾಯಿಂದ ಬೊಗಳುತ್ತಾರೆ. ಅವರ ತುಟಿಗಳಲ್ಲಿ ಖಡ್ಗಗಳು ಇವೆ. ಅವರು, “ನಮ್ಮನ್ನು ಕೇಳುವವರು ಯಾರು?” ಎಂದು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಹರಿತವಾದ ಕತ್ತಿಗಳಂತಿವೆ, ಅವರು, “ನಮ್ಮನ್ನು ಕೇಳುವವರು ಯಾರು?” ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅವರ ಬಾಯಿ ಬೊಗಳುವ ಮಾತುಗಳನು ಕೇಳು I ಅವರ ತುಟಿಗಳು ಹರಿತ ಕತ್ತಿಕಠಾರಿಗಳು I ನಮಗಾರು ಕಿವಿಗೊಡರೆಂಬುದೆ ಅವರ ಗೋಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಇಗೋ, ಅವರ ಬಾಯಿಗಳು ಎಷ್ಟೋ ಮಾತುಗಳನ್ನು ಕಕ್ಕುತ್ತವೆ; ಅವೆಲ್ಲಾ ಕತ್ತಿಗಳೇ. ನಮ್ಮನ್ನು ಕೇಳುವವರು ಯಾರು ಅಂದುಕೊಳ್ಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ತಮ್ಮ ನಾಲಿಗೆಗಳೇ ಆಯುಧಗಳೆಂಬಂತೆ ಅಪಮಾನಕರವಾದ ನುಡಿಗಳನ್ನು ಬೊಗಳುತ್ತಾರೆ. ಯಾರು ಕೇಳಿಸಿಕೊಂಡರೂ ಅವರಿಗೆ ಚಿಂತೆಯಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 59:7
16 ತಿಳಿವುಗಳ ಹೋಲಿಕೆ  

ನಾನು ಸಿಂಹಗಳಂಥವರ ಮಧ್ಯದಲ್ಲಿದ್ದೇನೆ. ಕ್ರೂರಮೃಗಗಳಂಥವರ ಮಧ್ಯದಲ್ಲಿ ಒತ್ತಾಯವಾಗಿ ವಾಸಮಾಡುತ್ತಿದ್ದೇನೆ. ಅವರ ಹಲ್ಲು, ಭಲ್ಲೆ, ಬಾಣಗಳೂ ಅವರ ನಾಲಿಗೆ ಹದವಾದ ಖಡ್ಗವೂ ಆಗಿವೆ.


ಜ್ಞಾನಿಯ ನಾಲಿಗೆಯು ಒಳ್ಳೆಯ ಪರಿಜ್ಞಾನವನ್ನು ಹರಡುತ್ತದೆ. ಆದರೆ ಬುದ್ಧಿಹೀನರ ಬಾಯಿಯು ಮೂರ್ಖತನವನ್ನು ಹೊರಗೆಡವುತ್ತದೆ.


“ದೇವರು ಮರೆತುಬಿಟ್ಟಿದ್ದಾರೆ; ತಮ್ಮ ಮುಖ ಮರೆ ಮಾಡಿಕೊಂಡಿದ್ದಾರೆ; ಇನ್ನೆಂದೂ ಕಾಣಲಾರರು,” ಎಂದು ತನಗೆ ತಾನೇ ಹೇಳಿಕೊಳ್ಳುತ್ತಾನೆ.


ಅವರು, “ದೇವರಿಗೆ ಹೇಗೆ ಗೊತ್ತಾಗುವುದು? ಮಹೋನ್ನತನಿಗೆ ಏನಾದರೂ ತಿಳಿಯಲು ಸಾಧ್ಯವೇ?” ಎನ್ನುತ್ತಾರೆ.


ನೀತಿವಂತರ ಹೃದಯವು ಹೇಗೆ ಉತ್ತರಿಸಬೇಕೆಂದು ಯೋಚಿಸುತ್ತದೆ. ಆದರೆ ದುಷ್ಟರ ಬಾಯಿಯು ಕೆಟ್ಟವುಗಳನ್ನು ಹೊರಗೆಡವುತ್ತದೆ.


ಅಜಾಗರೂಕತೆಯ ಮಾತುಗಳು ಖಡ್ಗಗಳಂತೆ ಚುಚ್ಚುತ್ತವೆ, ಆದರೆ ಜ್ಞಾನವಂತರ ನಾಲಿಗೆಯು ಸ್ವಸ್ಥತೆಯನ್ನು ತರುವುದು.


ಅವನ ಬಾಯಿಯ ಮಾತುಗಳು ಬೆಣ್ಣೆಗಿಂತ ನುಣ್ಣಗಾಗಿವೆ; ಆದರೆ ಅವನ ಹೃದಯದಲ್ಲಿ ಕಾಳಗವಿದೆ; ಅವನ ಮಾತುಗಳು ಎಣ್ಣೆಗಿಂತ ನಯವಾಗಿವೆ; ಆದರೆ ಅವು ಬಿಚ್ಚುಗತ್ತಿಗಳಾಗಿವೆ.


ದುಷ್ಟರು ದೇವರನ್ನು ಅಲಕ್ಷ್ಯ ಮಾಡುವುದು ಏಕೆ? “ದೇವರು ನನ್ನನ್ನು ಲೆಕ್ಕ ಕೇಳುವುದಿಲ್ಲ,” ಎಂದು ಅವನು ತನಗೆ ತಾನೇ ಹೇಳಿಕೊಳ್ಳುವುದು ಏಕೆ?


ಸರ್ಪಸಂತತಿಯವರೇ, ಕೆಟ್ಟವರಾಗಿರುವ ನೀವು ಒಳ್ಳೆಯದೇನನ್ನಾದರೂ ಮಾತನಾಡುವಿರೋ? ಹೃದಯದಲ್ಲಿ ತುಂಬಿರುವದನ್ನೇ ಅವನ ಬಾಯಿ ಮಾತನಾಡುತ್ತದೆ.


“ ‘ಯೆಹೋವ ದೇವರಾದ ನಾನು ಆರಿಸಿಕೊಂಡಿದ್ದ ಎರಡು ವಂಶಗಳನ್ನು ನಿರಾಕರಿಸಿಬಿಟ್ಟಿದ್ದೇನೆ, ಎಂದು ಜನರು ಆಡಿಕೊಳ್ಳುತ್ತಿದ್ದಾರೆ.’ ಈ ಮಾತನ್ನು ನೀನು ಗಮನಿಸಿರಬೇಕು. ನನ್ನ ಜನರು ಒಂದು ಜನಾಂಗವೇ ಅಲ್ಲ ಎನ್ನುವಷ್ಟರ ಮಟ್ಟಿಗೆ ಅವರು ಅಸಡ್ಡೆ ಮಾಡುತ್ತಿದ್ದಾರಲ್ಲವೇ?


ಕೆಡುಕರು ಉಬ್ಬಿಕೊಂಡು ಮಾತನಾಡುತ್ತಾರೆ. ಕೇಡು ಮಾಡುವವರೆಲ್ಲರೂ ಕೊಚ್ಚಿಕೊಳ್ಳುತ್ತಾರೆ.


ದಿನವಿಡೀ ನನಗೆ ವಿರುದ್ಧವಾದ ಅವರ ದುರಾಲೋಚನೆಯನ್ನೂ ಕೇಳಿರುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು