Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 61:7 - ಕನ್ನಡ ಸಮಕಾಲಿಕ ಅನುವಾದ

7 ಆತನು ಎಂದೆಂದಿಗೂ ದೇವರ ಮುಂದೆ ಆಳಿಕೆಮಾಡಲಿ. ಆತನನ್ನು ಕಾಯುವ ಹಾಗೆ ನಿಮ್ಮ ಪ್ರೀತಿ, ಸತ್ಯವನ್ನು ನೇಮಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು, ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮ ಮತ್ತು ಸತ್ಯತೆಗಳು ಅವನನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ದೇವರ ಸಾನ್ನಿಧ್ಯದಲಿ ಆತನು ಸದಾ ಸಾಮ್ರಾಜ್ಯವಾಳಲಿ I ನಿನ್ನಯ ಪ್ರೀತಿ ಸತ್ಯತೆಗಳು ಆತನಿಗೆ ಬೆಂಗಾವಲಾಗಿರಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅವನು ನಿನ್ನ ಸಾನ್ನಿಧ್ಯವನ್ನು ಪಡೆದು ಸದಾಕಾಲವೂ ಸಿಂಹಾಸನಾರೂಢನಾಗಿರಲಿ; ನಿನ್ನ ಪ್ರೇಮಸತ್ಯತೆಗಳು ಅವನ ಬೆಂಗಾವಲಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅವನು ನಿನ್ನ ಸಾನಿಧ್ಯವನ್ನು ಪಡೆದು ಸದಾಕಾಲವೂ ರಾಜನಾಗಿರಲಿ! ನಿನ್ನ ನಿಜಪ್ರೀತಿಯಿಂದ ಅವನನ್ನು ಸಂರಕ್ಷಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 61:7
15 ತಿಳಿವುಗಳ ಹೋಲಿಕೆ  

ಯೆಹೋವ ದೇವರೇ, ನಿಮ್ಮ ಕರುಣೆಯನ್ನು ನನ್ನಿಂದ ಹಿಂತೆಗೆಯಬೇಡಿರಿ; ನಿಮ್ಮ ಪ್ರೀತಿಯೂ ನಿಮ್ಮ ಸತ್ಯವೂ ಯಾವಾಗಲೂ ನನ್ನನ್ನು ಕಾಯಲಿ.


ಇದಲ್ಲದೆ ಅವನು, “ನನ್ನ ಯಜಮಾನನಾದ ಅಬ್ರಹಾಮನ ದೇವರಾದ ಯೆಹೋವ ದೇವರು ಸ್ತುತಿಹೊಂದಲಿ. ಅವರು ನನ್ನ ಯಜಮಾನನನ್ನು ಕೈಬಿಡದೆ, ತಮ್ಮ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಿದ್ದಾರೆ. ನಾನು ಮಾರ್ಗದಲ್ಲಿರುವಾಗ ಯೆಹೋವ ದೇವರು ನನ್ನನ್ನು ನನ್ನ ಯಜಮಾನನ ಸಹೋದರನ ಮನೆಗೇ ನಡೆಸಿದ್ದಾರೆ,” ಎಂದನು.


ದೇವರು ಪರಲೋಕದಿಂದ ಸಹಾಯ ಕಳುಹಿಸಿ, ನನ್ನನ್ನು ನಿಂದಿಸುವವರನ್ನು ದಂಡಿಸಿ, ನನ್ನನ್ನು ರಕ್ಷಿಸುವರು. ದೇವರು ತಮ್ಮ ಒಡಂಬಡಿಕೆಯ ಪ್ರೀತಿಯನ್ನೂ ತಮ್ಮ ಸತ್ಯವನ್ನೂ ಕಳುಹಿಸುವರು.


ಆದರೆ ನೀವು ನನ್ನ ಪ್ರಾಮಾಣಿಕತೆಯ ಕಾರಣ ನನ್ನನ್ನು ಎತ್ತಿ ಹಿಡಿದಿರುವಿರಿ; ನೀವು ನನ್ನನ್ನು ನಿತ್ಯವಾಗಿ ನಿಮ್ಮ ಸಮ್ಮುಖದಲ್ಲಿ ಇರಿಸುವಿರಿ.


ಏಕೆಂದರೆ ಕ್ರಿಸ್ತ ಯೇಸು ನಿಜ ದೇವಾಲಯದ ಪ್ರತಿರೂಪದಂತಿರುವ, ಕೈಯಿಂದ ಕಟ್ಟಿದ ಪವಿತ್ರ ಸ್ಥಳವನ್ನು ಪ್ರವೇಶಿಸದೆ, ದೇವರ ಸನ್ನಿಧಿಯಲ್ಲಿ ನಮಗೋಸ್ಕರ ಈಗ ಕಾಣಿಸಿಕೊಳ್ಳುವಂತೆ ಪರಲೋಕದಲ್ಲಿಯೇ ಪ್ರವೇಶಿಸಿದರು.


ಅವರು ಯಾಕೋಬನ ವಂಶವನ್ನು ಸದಾಕಾಲ ಆಳುವರು; ಅವರ ರಾಜ್ಯಕ್ಕೆ ಅಂತ್ಯವೇ ಇರುವುದಿಲ್ಲ,” ಎಂದು ಹೇಳಿದನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ, ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ಪ್ರೀತಿಯೂ ನಂಬಿಗಸ್ತಿಕೆಯೂ ಅರಸನನ್ನು ಕಾಯುತ್ತವೆ; ಪ್ರೀತಿಯಿಂದಲೇ ಅವನ ಸಿಂಹಾಸನವು ಸ್ಥಿರಗೊಳ್ಳುತ್ತದೆ.


ನಿಮ್ಮ ಬೆಳಕನ್ನೂ ನಿಮ್ಮ ಸತ್ಯವನ್ನೂ ಕಳುಹಿಸಿರಿ; ಅವು ನನ್ನನ್ನು ನೀವು ವಾಸಿಸುವ ನಿಮ್ಮ ಪರಿಶುದ್ಧ ಪರ್ವತಕ್ಕೆ ನನ್ನನ್ನು ಬರಮಾಡಲಿ.


ನೀವು ನಿಮ್ಮ ದಾಸನಿಗೆ ತೋರಿಸಿದ ಎಲ್ಲಾ ಕರುಣೆಗಳಿಗೂ, ಎಲ್ಲಾ ಸತ್ಯಕ್ಕೂ ಅಯೋಗ್ಯನಾಗಿದ್ದೇನೆ. ಏಕೆಂದರೆ ನಾನು ಮೊದಲು ಈ ಯೊರ್ದನ್ ಹೊಳೆಯನ್ನು ದಾಟಿದಾಗ, ನನ್ನ ಕೈಯಲ್ಲಿ ಕೋಲು ಮಾತ್ರವೇ ಇತ್ತು, ಈಗ ನನಗೆ ಎರಡು ಗುಂಪುಗಳಿವೆ.


ಹೀಗೆ ನಿಮ್ಮ ಹೆಸರು ಎಂದೆಂದಿಗೂ ಶ್ರೇಷ್ಠವಾಗಿರುತ್ತದೆ. ಆಗ ಜನರು, ‘ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲರ ದೇವರು,’ ಎಂದು ಹೇಳುವರು. ಇದಲ್ಲದೆ ನಿಮ್ಮ ಸೇವಕನಾದ ದಾವೀದನ ಮನೆಯು ನಿಮ್ಮ ಮುಂದೆ ಸ್ಥಿರವಾಗಿರುವುದು.


ನೀವು ಕೊಟ್ಟ ಜಯಗಳ ಮೂಲಕ ಅರಸನ ಪ್ರಭಾವ ಹೆಚ್ಚಾಗಿದೆ; ಗೌರವವನ್ನೂ ಘನತೆಯನ್ನೂ ಆತನ ಮೇಲೆ ಇಟ್ಟಿರುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು